Homeಕರ್ನಾಟಕನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

ನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

- Advertisement -
- Advertisement -

ಬೆಂಗಳೂರು: ಕರ್ನಾಟಕದ ನಕ್ಸಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಮತ್ತು ರಾಜ್ಯವನ್ನು ‘ನಕ್ಸಲ್‌ ಮುಕ್ತ’ವನ್ನಾಗಿಸಲು ಮಹತ್ತರ ಪಾತ್ರ ವಹಿಸಿದ ಕರ್ನಾಟಕದ ನಕ್ಸಲ್‌ ನಿಗ್ರಹ ಪಡೆ ಮತ್ತು ಗುಪ್ತಚರ ಘಟಕದ 22 ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕವನ್ನು ಘೋಷಿಸಲಾಗಿದ್ದು, ಇದನ್ನು ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೇದಿಕೆಯು, ಇವರೆಲ್ಲರನ್ನೂ  ಮತ್ತು  ಪ್ರಧಾನವಾಗಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯ ಗುಪ್ತವಾರ್ತೆಯ ನಿರ್ದೇಶಕ ಹೇಮಂತ್‌ ಎಂ ನಿಂಬಾಳ್ಕರ್‌ ಹಾಗೂ ಉಪನಿರ್ದೇಶಕ ಹರಿರಾಮ್‌ ಶಂಕರ್‌ ಅವರನ್ನು, ʼಶಾಂತಿಗಾಗಿ ನಾಗರಿಕರ ವೇದಿಕೆʼ ಅಭಿನಂದಿಸುತ್ತದೆ. ಇವರಿಬ್ಬರೂ ಈ ಕಾರ್ಯಾಚರಣೆಯ ಪ್ರಾರಂಭದಿಂದಲೂ ಹೆಚ್ಚುವರಿ ಅಸಕ್ತಿ ವಹಿಸಿ, ನಮ್ಮ ವೇದಿಕೆ ಜತೆ ಸಹಕರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ನಕ್ಸಲರನ್ನು ಘನತೆಯಿಂದ ನಡೆಸಿಕೊಳ್ಳುವ ಕುರಿತು, ಅವರನ್ನು ಕಾಡಿನಿಂದ ಮಾತ್ರವಲ್ಲ, ಜೈಲಿನಿಂದ ಹೊರತರುವಲ್ಲಿ ವಹಿಸಬೇಕಾದ ಮುತುವರ್ಜಿಗಳ ಕುರಿತು ಹಾಗೂ ಮುಖ್ಯವಾಹಿನಿಗೆ ಬಂದ ಮೇಲೆ ನೀಡಬೇಕಾದ ಅಗತ್ಯ ನೆರವಿನ ಕುರಿತು ನಾವು ಮುಂದಿಟ್ಟ ಎಲ್ಲಾ ಬೇಡಿಕೆಗಳಿಗಳನ್ನೂ ಪೂರೈಸುವ ಭರವಸೆ ನೀಡಿದ್ದರಿಂದಲೇ ಈ ಕೆಲಸವು ಸಾಂಗವಾಗಿ ನೆರವೇರಲು ಸಹಾಯವಾಯಿತು. ಇದರಲ್ಲಿ  ನಕ್ಸಲ್‌ ಪುನರ್‌ವಸತಿ ಸಮಿತಿಯ ಸದಸ್ಯರು ನೀಡಿದ ಸಹಕಾರವನ್ನೂ ಕೂಡ ನಮ್ಮ ವೇದಿಕೆ ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದಿದೆ.

ಶಾಂತಿಗಾಗಿ ನಾಗರಿಕರ ವೇದಿಕ ಬಹಳ ಕಾಲದಿಂದಲೂ “ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ಬಂದೂಕಿನಿಂದ ಅಲ್ಲ” ಎಂದು ನಕ್ಸಲರಿಗೂ ಮತ್ತು ಪ್ರಭುತ್ವಕ್ಕೂ ಮನವಿಮಾಡಿಕೊಂಡೇ ಬಂದಿದೆ. ಇಬ್ಬರೂ ಈ ಮನವಿಯ ಔಚಿತ್ಯವನ್ನು ಮನಗಂಡು ಮುಂದೆ ಬಂದ್ದರಿಂದಲೇ ಈ ಕಾರ್ಯವು ಸಫಲವಾಯಿತು. ಅಲ್ಲದೆ ಸರ್ಕಾರವು ನಾಗರಿಕರ ಜತೆ ನಡೆಸುವ ಅನುಸಂಧಾನಗಳು ಪ್ರಜಾತಂತ್ರದ ಹಿರಿಮೆಯನ್ನು ಎತ್ತಿಹಿಡಿಯುತ್ತವೆ ಎಂಬುದನ್ನು ಈ ಘಟನೆ ಎತ್ತಿತೋರಿಸುತ್ತದೆ. ಇದನ್ನು ಸ್ವಾಗತಿಸುತ್ತಾ, ಇದಕ್ಕೆ ಕಾರಣರಾದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಪೊಲೀಸು ಅಧಿಕಾರಿಗಳನ್ನು ನಾವು ಮತ್ತೊಮ್ಮೆ ಅಭಿನಂದಿಸುತ್ತೇವೆ ಎಂದು ವೇದಿಕೆಯ ನಗರಗೆರೆ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವುದು ಎಂದರೆ ಅವರನ್ನು ಕಾಡಿನಿಂದ ಜೈಲಿಗೆ ಕರೆತರುವುಷ್ಟೇ ಅಲ್ಲ, ಸಮಾಜದಲ್ಲಿ ಅವರು ಗೌರವಾನ್ವಿತವಾಗಿ ಬದುಕಲು ಬೇಕಾದ ಎಲ್ಲ ಸೌಕರ್ಯವನ್ನೂ ಒದಗಿಸಿ ನಾಡಿಗೆ ಕರೆತರುವುದು ಕೂಡ. ಇದು ಪ್ರಜಾತಂತ್ರ ಸರ್ಕಾರದ ಕರ್ತವ್ಯ ಹಾಗೂ ಅದು ಜಾರಿಯಾಗುವ ಹಾಗೆ ನೋಡಿಕೊಳ್ಳುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ನಾವು ಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ಕೆಲವು ಸ್ವಾಗತಾರ್ಹ ಹೆಜ್ಜೆಗಳನ್ನು ಇಟ್ಟಿದೆ. ಉದಾಹರಣೆಗೆ ಈ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಆಲಿಸಲೆಂದೇ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ; ಆರ್ಥಿಕ ನೆರವನ್ನು ಕೂಡಲೇ ಬಿಡುಗಡೆ ಮಾಡಿದೆ. ಈ ಹಿಂದೆ ಬಂದಿದ್ದವರ ಸರಿಯಾದ ಪುನರ್ವಸತಿಗೆ ಬೇಕಾದ ಕ್ರಮವಹಿಸಲು ಮುಂದಾಗಿದೆ. ಇದು ಸಹ ಅಭಿನಂದನಾರ್ಹ ವಿಚಾರ.  ಆದರೂ ಇನ್ನೂ ಹಲವಾರು ಕೆಲಸಗಳು ಆಗಬೇಕಿದೆ. ವಿಶೇಷ ನ್ಯಾಯಾಲಯ ಕೂಡಲೇ ಕಾರ್ಯರೂಪಕ್ಕೆ ಬಂದು, ಕನಿಷ್ಟ ಎಲ್ಲರೂ ಬೇಲ್‌ ಮೇಲೆ ಹೊರಬರುವಂತಾಗಬೇಕು, ಮತ್ತು ಅಗತ್ಯ ಕಾನೂನು ಮತ್ತು ವೈದ್ಯಕೀಯ ನೆರವು ಒದಗಿಸಬೇಕು. ಸಾರಾಂಶದಲ್ಲಿ ಹೇಳಬೇಕೆಂದರೆ ಆಗಿರುವ ಕೆಲಸ ಅಭಿನಂದನಾರ್ಹವಾದದ್ದೇ  ಆದರೂ ಆಗಬೇಕಿರುವ ಕೆಲಸಗಳು ಕೂಡ ಸಾಕಷ್ಟು ಇವೆ. ಇವುಗಳನ್ನು ಕೂಡ ಸರ್ಕಾರ ಮತ್ತು ಪೊಲೀಸು ಇಲಾಖೆ ತುರ್ತಿನ ಮೇಲೆ ಕೈಗೆತ್ತಿ ಕೊಳ್ಳುತ್ತದೆ ಎಂಬ ಭರವಸೆ ನಮಗಿದೆ ಎಂದು ವೇದಿಕೆಯ ಮತ್ತೋರ್ವ ಸದಸ್ಯೆ ತಾರಾ ರಾವ್ ಹೇಳಿದ್ದಾರೆ.

ಈ ಕಾರ್ಯಾಚರಣೆ ಮೂಲಕ ಕರ್ನಾಟಕ ರಾಜ್ಯವು ಇಡೀ ದೇಶಕ್ಕೆ ಒಂದು ಶಾಂತಿಯುತ ಹಾಗೂ ಪ್ರಜಾತಾಂತ್ರಿಕ ಮಾದರಿಯನ್ನು ಕಟ್ಟಿಕೊಟ್ಟಿದೆ. ಜನರ ಸಮಸ್ಯೆಗಳನ್ನು ಬಗೆಹರಿಸದೆ, ಅವರ ಬದಕಿನ ಹಕ್ಕನ್ನು ಕಸಿಯಲು ಹೋದರೆ [ನ್ಯಾಷನಲ್‌ ಪಾರ್ಕ್‌ ವಿಚಾರದಲ್ಲಿ ಆದಂತೆ] ಜನರು ಸಶಸ್ತ್ರ ಸಂಘರ್ಷದಂತಹ ತೀಕ್ಷ್ಣ ರೂಪಗಳ ಮೊರೆಹೋಗುತ್ತಾರೆ. ಈ ರೀತಿಯ ವಿದ್ಯಮಾನಗಳು ಮತ್ತೆ ಮರುಕಳಿಸಬಾರದೆಂದರೆ ಜನಪರ ಎಂದು ಕರೆದುಕೊಳ್ಳುವ ಸರ್ಕಾರಗಳು ಜನರನ್ನು ಮೂಲೆಗೊತ್ತದೆ, ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂಬ ಪಾಠವನ್ನೂ ಈ ಪ್ರಕ್ರಿಯೆ ನೀಡಿದೆ. ಸರ್ಕಾರ ಮತ್ತು ಪೋಲೀಸ್‌ ಯಂತ್ರಾಂಗ ಈ ಪಾಠದತ್ತವೂ ಗಮನಹರಿಸಬೇಕು ಮತ್ತು ನಕ್ಸಲ್‌ ಪ್ರಭಾವಿತ ಪ್ರದೇಶದ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ಹೇಳಿಕೆಯಲ್ಲಿ ವೇದಿಕೆಯ ವಿ.ಎಸ್. ಶ್ರೀಧರ್ ಮಾಹಿತಿ ನೀಡಿದ್ದಾರೆ.

‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...