Homeಕರ್ನಾಟಕನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

ನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

- Advertisement -
- Advertisement -

ಬೆಂಗಳೂರು: ಕರ್ನಾಟಕದ ನಕ್ಸಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಮತ್ತು ರಾಜ್ಯವನ್ನು ‘ನಕ್ಸಲ್‌ ಮುಕ್ತ’ವನ್ನಾಗಿಸಲು ಮಹತ್ತರ ಪಾತ್ರ ವಹಿಸಿದ ಕರ್ನಾಟಕದ ನಕ್ಸಲ್‌ ನಿಗ್ರಹ ಪಡೆ ಮತ್ತು ಗುಪ್ತಚರ ಘಟಕದ 22 ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕವನ್ನು ಘೋಷಿಸಲಾಗಿದ್ದು, ಇದನ್ನು ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೇದಿಕೆಯು, ಇವರೆಲ್ಲರನ್ನೂ  ಮತ್ತು  ಪ್ರಧಾನವಾಗಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯ ಗುಪ್ತವಾರ್ತೆಯ ನಿರ್ದೇಶಕ ಹೇಮಂತ್‌ ಎಂ ನಿಂಬಾಳ್ಕರ್‌ ಹಾಗೂ ಉಪನಿರ್ದೇಶಕ ಹರಿರಾಮ್‌ ಶಂಕರ್‌ ಅವರನ್ನು, ʼಶಾಂತಿಗಾಗಿ ನಾಗರಿಕರ ವೇದಿಕೆʼ ಅಭಿನಂದಿಸುತ್ತದೆ. ಇವರಿಬ್ಬರೂ ಈ ಕಾರ್ಯಾಚರಣೆಯ ಪ್ರಾರಂಭದಿಂದಲೂ ಹೆಚ್ಚುವರಿ ಅಸಕ್ತಿ ವಹಿಸಿ, ನಮ್ಮ ವೇದಿಕೆ ಜತೆ ಸಹಕರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ನಕ್ಸಲರನ್ನು ಘನತೆಯಿಂದ ನಡೆಸಿಕೊಳ್ಳುವ ಕುರಿತು, ಅವರನ್ನು ಕಾಡಿನಿಂದ ಮಾತ್ರವಲ್ಲ, ಜೈಲಿನಿಂದ ಹೊರತರುವಲ್ಲಿ ವಹಿಸಬೇಕಾದ ಮುತುವರ್ಜಿಗಳ ಕುರಿತು ಹಾಗೂ ಮುಖ್ಯವಾಹಿನಿಗೆ ಬಂದ ಮೇಲೆ ನೀಡಬೇಕಾದ ಅಗತ್ಯ ನೆರವಿನ ಕುರಿತು ನಾವು ಮುಂದಿಟ್ಟ ಎಲ್ಲಾ ಬೇಡಿಕೆಗಳಿಗಳನ್ನೂ ಪೂರೈಸುವ ಭರವಸೆ ನೀಡಿದ್ದರಿಂದಲೇ ಈ ಕೆಲಸವು ಸಾಂಗವಾಗಿ ನೆರವೇರಲು ಸಹಾಯವಾಯಿತು. ಇದರಲ್ಲಿ  ನಕ್ಸಲ್‌ ಪುನರ್‌ವಸತಿ ಸಮಿತಿಯ ಸದಸ್ಯರು ನೀಡಿದ ಸಹಕಾರವನ್ನೂ ಕೂಡ ನಮ್ಮ ವೇದಿಕೆ ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದಿದೆ.

ಶಾಂತಿಗಾಗಿ ನಾಗರಿಕರ ವೇದಿಕ ಬಹಳ ಕಾಲದಿಂದಲೂ “ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ಬಂದೂಕಿನಿಂದ ಅಲ್ಲ” ಎಂದು ನಕ್ಸಲರಿಗೂ ಮತ್ತು ಪ್ರಭುತ್ವಕ್ಕೂ ಮನವಿಮಾಡಿಕೊಂಡೇ ಬಂದಿದೆ. ಇಬ್ಬರೂ ಈ ಮನವಿಯ ಔಚಿತ್ಯವನ್ನು ಮನಗಂಡು ಮುಂದೆ ಬಂದ್ದರಿಂದಲೇ ಈ ಕಾರ್ಯವು ಸಫಲವಾಯಿತು. ಅಲ್ಲದೆ ಸರ್ಕಾರವು ನಾಗರಿಕರ ಜತೆ ನಡೆಸುವ ಅನುಸಂಧಾನಗಳು ಪ್ರಜಾತಂತ್ರದ ಹಿರಿಮೆಯನ್ನು ಎತ್ತಿಹಿಡಿಯುತ್ತವೆ ಎಂಬುದನ್ನು ಈ ಘಟನೆ ಎತ್ತಿತೋರಿಸುತ್ತದೆ. ಇದನ್ನು ಸ್ವಾಗತಿಸುತ್ತಾ, ಇದಕ್ಕೆ ಕಾರಣರಾದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಪೊಲೀಸು ಅಧಿಕಾರಿಗಳನ್ನು ನಾವು ಮತ್ತೊಮ್ಮೆ ಅಭಿನಂದಿಸುತ್ತೇವೆ ಎಂದು ವೇದಿಕೆಯ ನಗರಗೆರೆ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವುದು ಎಂದರೆ ಅವರನ್ನು ಕಾಡಿನಿಂದ ಜೈಲಿಗೆ ಕರೆತರುವುಷ್ಟೇ ಅಲ್ಲ, ಸಮಾಜದಲ್ಲಿ ಅವರು ಗೌರವಾನ್ವಿತವಾಗಿ ಬದುಕಲು ಬೇಕಾದ ಎಲ್ಲ ಸೌಕರ್ಯವನ್ನೂ ಒದಗಿಸಿ ನಾಡಿಗೆ ಕರೆತರುವುದು ಕೂಡ. ಇದು ಪ್ರಜಾತಂತ್ರ ಸರ್ಕಾರದ ಕರ್ತವ್ಯ ಹಾಗೂ ಅದು ಜಾರಿಯಾಗುವ ಹಾಗೆ ನೋಡಿಕೊಳ್ಳುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ನಾವು ಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ಕೆಲವು ಸ್ವಾಗತಾರ್ಹ ಹೆಜ್ಜೆಗಳನ್ನು ಇಟ್ಟಿದೆ. ಉದಾಹರಣೆಗೆ ಈ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಆಲಿಸಲೆಂದೇ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ; ಆರ್ಥಿಕ ನೆರವನ್ನು ಕೂಡಲೇ ಬಿಡುಗಡೆ ಮಾಡಿದೆ. ಈ ಹಿಂದೆ ಬಂದಿದ್ದವರ ಸರಿಯಾದ ಪುನರ್ವಸತಿಗೆ ಬೇಕಾದ ಕ್ರಮವಹಿಸಲು ಮುಂದಾಗಿದೆ. ಇದು ಸಹ ಅಭಿನಂದನಾರ್ಹ ವಿಚಾರ.  ಆದರೂ ಇನ್ನೂ ಹಲವಾರು ಕೆಲಸಗಳು ಆಗಬೇಕಿದೆ. ವಿಶೇಷ ನ್ಯಾಯಾಲಯ ಕೂಡಲೇ ಕಾರ್ಯರೂಪಕ್ಕೆ ಬಂದು, ಕನಿಷ್ಟ ಎಲ್ಲರೂ ಬೇಲ್‌ ಮೇಲೆ ಹೊರಬರುವಂತಾಗಬೇಕು, ಮತ್ತು ಅಗತ್ಯ ಕಾನೂನು ಮತ್ತು ವೈದ್ಯಕೀಯ ನೆರವು ಒದಗಿಸಬೇಕು. ಸಾರಾಂಶದಲ್ಲಿ ಹೇಳಬೇಕೆಂದರೆ ಆಗಿರುವ ಕೆಲಸ ಅಭಿನಂದನಾರ್ಹವಾದದ್ದೇ  ಆದರೂ ಆಗಬೇಕಿರುವ ಕೆಲಸಗಳು ಕೂಡ ಸಾಕಷ್ಟು ಇವೆ. ಇವುಗಳನ್ನು ಕೂಡ ಸರ್ಕಾರ ಮತ್ತು ಪೊಲೀಸು ಇಲಾಖೆ ತುರ್ತಿನ ಮೇಲೆ ಕೈಗೆತ್ತಿ ಕೊಳ್ಳುತ್ತದೆ ಎಂಬ ಭರವಸೆ ನಮಗಿದೆ ಎಂದು ವೇದಿಕೆಯ ಮತ್ತೋರ್ವ ಸದಸ್ಯೆ ತಾರಾ ರಾವ್ ಹೇಳಿದ್ದಾರೆ.

ಈ ಕಾರ್ಯಾಚರಣೆ ಮೂಲಕ ಕರ್ನಾಟಕ ರಾಜ್ಯವು ಇಡೀ ದೇಶಕ್ಕೆ ಒಂದು ಶಾಂತಿಯುತ ಹಾಗೂ ಪ್ರಜಾತಾಂತ್ರಿಕ ಮಾದರಿಯನ್ನು ಕಟ್ಟಿಕೊಟ್ಟಿದೆ. ಜನರ ಸಮಸ್ಯೆಗಳನ್ನು ಬಗೆಹರಿಸದೆ, ಅವರ ಬದಕಿನ ಹಕ್ಕನ್ನು ಕಸಿಯಲು ಹೋದರೆ [ನ್ಯಾಷನಲ್‌ ಪಾರ್ಕ್‌ ವಿಚಾರದಲ್ಲಿ ಆದಂತೆ] ಜನರು ಸಶಸ್ತ್ರ ಸಂಘರ್ಷದಂತಹ ತೀಕ್ಷ್ಣ ರೂಪಗಳ ಮೊರೆಹೋಗುತ್ತಾರೆ. ಈ ರೀತಿಯ ವಿದ್ಯಮಾನಗಳು ಮತ್ತೆ ಮರುಕಳಿಸಬಾರದೆಂದರೆ ಜನಪರ ಎಂದು ಕರೆದುಕೊಳ್ಳುವ ಸರ್ಕಾರಗಳು ಜನರನ್ನು ಮೂಲೆಗೊತ್ತದೆ, ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂಬ ಪಾಠವನ್ನೂ ಈ ಪ್ರಕ್ರಿಯೆ ನೀಡಿದೆ. ಸರ್ಕಾರ ಮತ್ತು ಪೋಲೀಸ್‌ ಯಂತ್ರಾಂಗ ಈ ಪಾಠದತ್ತವೂ ಗಮನಹರಿಸಬೇಕು ಮತ್ತು ನಕ್ಸಲ್‌ ಪ್ರಭಾವಿತ ಪ್ರದೇಶದ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ಹೇಳಿಕೆಯಲ್ಲಿ ವೇದಿಕೆಯ ವಿ.ಎಸ್. ಶ್ರೀಧರ್ ಮಾಹಿತಿ ನೀಡಿದ್ದಾರೆ.

‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...