Homeಕರ್ನಾಟಕನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

ನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

- Advertisement -
- Advertisement -

ಬೆಂಗಳೂರು: ಕರ್ನಾಟಕದ ನಕ್ಸಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಮತ್ತು ರಾಜ್ಯವನ್ನು ‘ನಕ್ಸಲ್‌ ಮುಕ್ತ’ವನ್ನಾಗಿಸಲು ಮಹತ್ತರ ಪಾತ್ರ ವಹಿಸಿದ ಕರ್ನಾಟಕದ ನಕ್ಸಲ್‌ ನಿಗ್ರಹ ಪಡೆ ಮತ್ತು ಗುಪ್ತಚರ ಘಟಕದ 22 ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕವನ್ನು ಘೋಷಿಸಲಾಗಿದ್ದು, ಇದನ್ನು ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೇದಿಕೆಯು, ಇವರೆಲ್ಲರನ್ನೂ  ಮತ್ತು  ಪ್ರಧಾನವಾಗಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯ ಗುಪ್ತವಾರ್ತೆಯ ನಿರ್ದೇಶಕ ಹೇಮಂತ್‌ ಎಂ ನಿಂಬಾಳ್ಕರ್‌ ಹಾಗೂ ಉಪನಿರ್ದೇಶಕ ಹರಿರಾಮ್‌ ಶಂಕರ್‌ ಅವರನ್ನು, ʼಶಾಂತಿಗಾಗಿ ನಾಗರಿಕರ ವೇದಿಕೆʼ ಅಭಿನಂದಿಸುತ್ತದೆ. ಇವರಿಬ್ಬರೂ ಈ ಕಾರ್ಯಾಚರಣೆಯ ಪ್ರಾರಂಭದಿಂದಲೂ ಹೆಚ್ಚುವರಿ ಅಸಕ್ತಿ ವಹಿಸಿ, ನಮ್ಮ ವೇದಿಕೆ ಜತೆ ಸಹಕರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ನಕ್ಸಲರನ್ನು ಘನತೆಯಿಂದ ನಡೆಸಿಕೊಳ್ಳುವ ಕುರಿತು, ಅವರನ್ನು ಕಾಡಿನಿಂದ ಮಾತ್ರವಲ್ಲ, ಜೈಲಿನಿಂದ ಹೊರತರುವಲ್ಲಿ ವಹಿಸಬೇಕಾದ ಮುತುವರ್ಜಿಗಳ ಕುರಿತು ಹಾಗೂ ಮುಖ್ಯವಾಹಿನಿಗೆ ಬಂದ ಮೇಲೆ ನೀಡಬೇಕಾದ ಅಗತ್ಯ ನೆರವಿನ ಕುರಿತು ನಾವು ಮುಂದಿಟ್ಟ ಎಲ್ಲಾ ಬೇಡಿಕೆಗಳಿಗಳನ್ನೂ ಪೂರೈಸುವ ಭರವಸೆ ನೀಡಿದ್ದರಿಂದಲೇ ಈ ಕೆಲಸವು ಸಾಂಗವಾಗಿ ನೆರವೇರಲು ಸಹಾಯವಾಯಿತು. ಇದರಲ್ಲಿ  ನಕ್ಸಲ್‌ ಪುನರ್‌ವಸತಿ ಸಮಿತಿಯ ಸದಸ್ಯರು ನೀಡಿದ ಸಹಕಾರವನ್ನೂ ಕೂಡ ನಮ್ಮ ವೇದಿಕೆ ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದಿದೆ.

ಶಾಂತಿಗಾಗಿ ನಾಗರಿಕರ ವೇದಿಕ ಬಹಳ ಕಾಲದಿಂದಲೂ “ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ಬಂದೂಕಿನಿಂದ ಅಲ್ಲ” ಎಂದು ನಕ್ಸಲರಿಗೂ ಮತ್ತು ಪ್ರಭುತ್ವಕ್ಕೂ ಮನವಿಮಾಡಿಕೊಂಡೇ ಬಂದಿದೆ. ಇಬ್ಬರೂ ಈ ಮನವಿಯ ಔಚಿತ್ಯವನ್ನು ಮನಗಂಡು ಮುಂದೆ ಬಂದ್ದರಿಂದಲೇ ಈ ಕಾರ್ಯವು ಸಫಲವಾಯಿತು. ಅಲ್ಲದೆ ಸರ್ಕಾರವು ನಾಗರಿಕರ ಜತೆ ನಡೆಸುವ ಅನುಸಂಧಾನಗಳು ಪ್ರಜಾತಂತ್ರದ ಹಿರಿಮೆಯನ್ನು ಎತ್ತಿಹಿಡಿಯುತ್ತವೆ ಎಂಬುದನ್ನು ಈ ಘಟನೆ ಎತ್ತಿತೋರಿಸುತ್ತದೆ. ಇದನ್ನು ಸ್ವಾಗತಿಸುತ್ತಾ, ಇದಕ್ಕೆ ಕಾರಣರಾದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಪೊಲೀಸು ಅಧಿಕಾರಿಗಳನ್ನು ನಾವು ಮತ್ತೊಮ್ಮೆ ಅಭಿನಂದಿಸುತ್ತೇವೆ ಎಂದು ವೇದಿಕೆಯ ನಗರಗೆರೆ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವುದು ಎಂದರೆ ಅವರನ್ನು ಕಾಡಿನಿಂದ ಜೈಲಿಗೆ ಕರೆತರುವುಷ್ಟೇ ಅಲ್ಲ, ಸಮಾಜದಲ್ಲಿ ಅವರು ಗೌರವಾನ್ವಿತವಾಗಿ ಬದುಕಲು ಬೇಕಾದ ಎಲ್ಲ ಸೌಕರ್ಯವನ್ನೂ ಒದಗಿಸಿ ನಾಡಿಗೆ ಕರೆತರುವುದು ಕೂಡ. ಇದು ಪ್ರಜಾತಂತ್ರ ಸರ್ಕಾರದ ಕರ್ತವ್ಯ ಹಾಗೂ ಅದು ಜಾರಿಯಾಗುವ ಹಾಗೆ ನೋಡಿಕೊಳ್ಳುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ನಾವು ಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ಕೆಲವು ಸ್ವಾಗತಾರ್ಹ ಹೆಜ್ಜೆಗಳನ್ನು ಇಟ್ಟಿದೆ. ಉದಾಹರಣೆಗೆ ಈ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಆಲಿಸಲೆಂದೇ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ; ಆರ್ಥಿಕ ನೆರವನ್ನು ಕೂಡಲೇ ಬಿಡುಗಡೆ ಮಾಡಿದೆ. ಈ ಹಿಂದೆ ಬಂದಿದ್ದವರ ಸರಿಯಾದ ಪುನರ್ವಸತಿಗೆ ಬೇಕಾದ ಕ್ರಮವಹಿಸಲು ಮುಂದಾಗಿದೆ. ಇದು ಸಹ ಅಭಿನಂದನಾರ್ಹ ವಿಚಾರ.  ಆದರೂ ಇನ್ನೂ ಹಲವಾರು ಕೆಲಸಗಳು ಆಗಬೇಕಿದೆ. ವಿಶೇಷ ನ್ಯಾಯಾಲಯ ಕೂಡಲೇ ಕಾರ್ಯರೂಪಕ್ಕೆ ಬಂದು, ಕನಿಷ್ಟ ಎಲ್ಲರೂ ಬೇಲ್‌ ಮೇಲೆ ಹೊರಬರುವಂತಾಗಬೇಕು, ಮತ್ತು ಅಗತ್ಯ ಕಾನೂನು ಮತ್ತು ವೈದ್ಯಕೀಯ ನೆರವು ಒದಗಿಸಬೇಕು. ಸಾರಾಂಶದಲ್ಲಿ ಹೇಳಬೇಕೆಂದರೆ ಆಗಿರುವ ಕೆಲಸ ಅಭಿನಂದನಾರ್ಹವಾದದ್ದೇ  ಆದರೂ ಆಗಬೇಕಿರುವ ಕೆಲಸಗಳು ಕೂಡ ಸಾಕಷ್ಟು ಇವೆ. ಇವುಗಳನ್ನು ಕೂಡ ಸರ್ಕಾರ ಮತ್ತು ಪೊಲೀಸು ಇಲಾಖೆ ತುರ್ತಿನ ಮೇಲೆ ಕೈಗೆತ್ತಿ ಕೊಳ್ಳುತ್ತದೆ ಎಂಬ ಭರವಸೆ ನಮಗಿದೆ ಎಂದು ವೇದಿಕೆಯ ಮತ್ತೋರ್ವ ಸದಸ್ಯೆ ತಾರಾ ರಾವ್ ಹೇಳಿದ್ದಾರೆ.

ಈ ಕಾರ್ಯಾಚರಣೆ ಮೂಲಕ ಕರ್ನಾಟಕ ರಾಜ್ಯವು ಇಡೀ ದೇಶಕ್ಕೆ ಒಂದು ಶಾಂತಿಯುತ ಹಾಗೂ ಪ್ರಜಾತಾಂತ್ರಿಕ ಮಾದರಿಯನ್ನು ಕಟ್ಟಿಕೊಟ್ಟಿದೆ. ಜನರ ಸಮಸ್ಯೆಗಳನ್ನು ಬಗೆಹರಿಸದೆ, ಅವರ ಬದಕಿನ ಹಕ್ಕನ್ನು ಕಸಿಯಲು ಹೋದರೆ [ನ್ಯಾಷನಲ್‌ ಪಾರ್ಕ್‌ ವಿಚಾರದಲ್ಲಿ ಆದಂತೆ] ಜನರು ಸಶಸ್ತ್ರ ಸಂಘರ್ಷದಂತಹ ತೀಕ್ಷ್ಣ ರೂಪಗಳ ಮೊರೆಹೋಗುತ್ತಾರೆ. ಈ ರೀತಿಯ ವಿದ್ಯಮಾನಗಳು ಮತ್ತೆ ಮರುಕಳಿಸಬಾರದೆಂದರೆ ಜನಪರ ಎಂದು ಕರೆದುಕೊಳ್ಳುವ ಸರ್ಕಾರಗಳು ಜನರನ್ನು ಮೂಲೆಗೊತ್ತದೆ, ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂಬ ಪಾಠವನ್ನೂ ಈ ಪ್ರಕ್ರಿಯೆ ನೀಡಿದೆ. ಸರ್ಕಾರ ಮತ್ತು ಪೋಲೀಸ್‌ ಯಂತ್ರಾಂಗ ಈ ಪಾಠದತ್ತವೂ ಗಮನಹರಿಸಬೇಕು ಮತ್ತು ನಕ್ಸಲ್‌ ಪ್ರಭಾವಿತ ಪ್ರದೇಶದ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ಹೇಳಿಕೆಯಲ್ಲಿ ವೇದಿಕೆಯ ವಿ.ಎಸ್. ಶ್ರೀಧರ್ ಮಾಹಿತಿ ನೀಡಿದ್ದಾರೆ.

‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...