Homeಅಂತರಾಷ್ಟ್ರೀಯನಾಜಿ ಶೈಲಿಯಲ್ಲಿ ಸೆಲ್ಯೂಟ್ ಮಾಡಿದ ಯುವ ಸ್ಪರ್ಧಿಯ ವಜಾ: ತನಿಖೆಗೆ ಆದೇಶ

ನಾಜಿ ಶೈಲಿಯಲ್ಲಿ ಸೆಲ್ಯೂಟ್ ಮಾಡಿದ ಯುವ ಸ್ಪರ್ಧಿಯ ವಜಾ: ತನಿಖೆಗೆ ಆದೇಶ

- Advertisement -
- Advertisement -

ಭಾನುವಾರ ನಡೆದ ಕಾರ್ಟಿಂಗ್ ಸ್ಪರ್ಧೆಯ (ಚಿಕ್ಕ ಕಾರು ಚಲಾಯಿಸುವ ರೇಸ್) ಯುರೋಪಿಯನ್ ಜೂನಿಯರ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಜಯಗಳಿಸಿದ 15 ವರ್ಷದ ಯುವಕನೊಬ್ಬ ಪ್ರಶಸ್ತಿ ಸ್ವೀಕರಿಸುವ ಸಂದರ್ಭದಲ್ಲಿ ನಾಜಿ ಶೈಲಿಯಲ್ಲಿ ಸೆಲ್ಯೂಟ್ ಮಾಡಿರುವ ಘಟನೆ ಸಂಭವಿಸಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಇಂಟರ್ನ್ಯಾಷನಲ್ ಆಟೋಮೊಬೈಲ್ ಫೆಡರೇಶನ್ (ಎಫ್‌ಐಎ) ತನಿಖೆ ನಡೆಸುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರಷ್ಯಾ ಆಟಗಾರರನ್ನು ಬ್ಯಾನ್ ಮಾಡಿರುವ ಕಾರಣ ರಷ್ಯಾದ ಯುವ ಸ್ಪರ್ಧಿ ಆರ್ಟೆಮ್ ಸೆವೆರಿಯುಖಿನ್ ಈ ಚಾಂಪಿಯನ್‌ಶಿಪ್‌ನಲ್ಲಿ ಇಟಲಿ ಪರವಾನಗಿ ಅಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಜಯ ಗಳಿಸಿದ್ದರು. ಪ್ರಶಸ್ತಿ ಸ್ವೀಕರಿಸುವ ವೇಳೆ ಮುಷ್ಟಿ ಬಿಗಿಹಿಡಿದು ಎದೆಗೆ ಗುದ್ದಿಕೊಂಡ ನಂತರ ಕೈ ಮುಂದೆ ಮಾಡಿ ನಾಜಿ ಶೈಲಿಯಲ್ಲಿ ಸೆಲ್ಯೂಟ್ ಮಾಡಿದ್ದ. ಅಲ್ಲದೆ ಎದುರಿಗಿರುವವನ್ನು ನೋಡುತ್ತ ನಗುತ್ತಿರುವ ದೃಶ್ಯಗಳು ವೈರಲ್ ಆಗಿವೆ. ಈ ಹಿನ್ನೆಲೆಯಲ್ಲಿ ಆತನನ್ನು ಸ್ಪರ್ಧೆಯಿಂದ ವಜಾಗೊಳಿಸಿದ್ದಲ್ಲದೆ, ಯಾವ ಪ್ರಚೋದನೆಗೆ ಒಳಗಾಗಿ ಆತ ನಾಜಿ ಶೈಲಿ ಸೆಲ್ಯೂಟ್ ಮಾಡಿದ ಎಂದು ತನಿಖೆ ನಡೆಸಲಾಗುತ್ತಿದೆ.

ಸೆವೆರಿಯುಖಿನ್ ಪ್ರತಿನಿಧಿಸುವ ವಾರ್ಡ್ ರೇಸಿಂಗ್ ತಂಡವು ಆತನನ್ನು ವಜಾಗೊಳಿಸಿದೆ ಎಂದು ತಿಳಿಸಿದೆ. “ಆ ಚಾಲಕನ ವರ್ತನೆಗೆ ವಾರ್ಡ್ ರೇಸಿಂಗ್ ತಂಡವು ನಾಚಿಕೆಪಡುತ್ತದೆ. ನಾವು ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ವಿರೋಧಿಸಿ ಪ್ರತಿ ಡ್ರೈವರ್‌ಗಳ ಹೆಲ್ಮೆಟ್ ಮೇಲೆ ಯುದ್ದ ಬೇಡ ಎಂಬ ಸ್ಟಿಕ್ಕರ್ ಅಂಟಿಸಿದ್ದೇವೆ. ಅಲ್ಲದೆ ನಮ್ಮ ತಂಡದೊಂದಿಗೆ ಉಕ್ರೇನ್‌ನ ಮೂರು ನಿರಾಶ್ರಿತ ಕುಟುಂಬಗಳು ಪ್ರಯಾಣ ಬೆಳೆಸಲು ಅನುವು ಮಾಡಿಕೊಟ್ಟಿದ್ದೇವೆ” ಎಂದು ಹೇಳಿಕೆ ನೀಡಿದೆ.

ವಿವಾದದ ಬಳಿಕ ವಿಡಿಯೋ ಮೂಲಕ ಕ್ಷಮೆ ಕೇಳಿರುವ ಯುವ ಸ್ಪರ್ಧಿ ಆರ್ಟೆಮ್ ಸೆವೆರಿಯುಖಿನ್, ಅದು ನಿಜವಾಗಿಯೂ ನಾಜಿ ಶೈಲಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. “ಬಹಳಷ್ಟು ಜನರು ಅದು ನಾಜಿ ಶೈಲಿ ಎಂಬು ಭಾವಿಸಿದ್ದಾರೆ, ಅದು ನಿಜವಲ್ಲ. ನಾನು ಎಂದಿಗೂ ನಾಜಿಸಂ ಅನ್ನು ಬೆಂಬಲಿಸುವುದಿಲ್ಲ. ನಾಜಿಸಂ ಮಾನವೀಯತೆಯ ವಿರುದ್ಧದ ಕೆಟ್ಟ ಅಪರಾಧಗಳಲ್ಲಿ ಒಂದು ಎಂದು ನಂಬಿದ್ದೇನೆ” ಎಂದಿದ್ದಾನೆ.

ನಾನು ಒಬ್ಬ ಮೂರ್ಖ ಎಂದು ನನಗೆ ಅರಿವಾಗಿದೆ. ಆ ಕೃತ್ಯಕ್ಕೆ ಶಿಕ್ಷ ಅನುಭವಿಸಲು ಸಿದ್ದನಿದ್ದೇನೆ. ಆದರೆ ನನ್ನ ಉದ್ದೇಶ ಕೆಟ್ಟದಾಗಿರಲಿಲ್ಲ ಎಂದು ಯುವ ಚಾಲಕ ತಿಳಿಸಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಎಲ್ಲವನ್ನೂ ಇಲ್ಲಿಗೆ ಬಿಡಿ, ಕೋಮು ಸಾಮರಸ್ಯ ಹಾಳು ಮಾಡಬೇಡಿ: ಬಿಎಸ್‌ವೈ ಖಡಕ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...