Homeಅಂತರಾಷ್ಟ್ರೀಯನಾಜಿ ಶೈಲಿಯಲ್ಲಿ ಸೆಲ್ಯೂಟ್ ಮಾಡಿದ ಯುವ ಸ್ಪರ್ಧಿಯ ವಜಾ: ತನಿಖೆಗೆ ಆದೇಶ

ನಾಜಿ ಶೈಲಿಯಲ್ಲಿ ಸೆಲ್ಯೂಟ್ ಮಾಡಿದ ಯುವ ಸ್ಪರ್ಧಿಯ ವಜಾ: ತನಿಖೆಗೆ ಆದೇಶ

- Advertisement -
- Advertisement -

ಭಾನುವಾರ ನಡೆದ ಕಾರ್ಟಿಂಗ್ ಸ್ಪರ್ಧೆಯ (ಚಿಕ್ಕ ಕಾರು ಚಲಾಯಿಸುವ ರೇಸ್) ಯುರೋಪಿಯನ್ ಜೂನಿಯರ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಜಯಗಳಿಸಿದ 15 ವರ್ಷದ ಯುವಕನೊಬ್ಬ ಪ್ರಶಸ್ತಿ ಸ್ವೀಕರಿಸುವ ಸಂದರ್ಭದಲ್ಲಿ ನಾಜಿ ಶೈಲಿಯಲ್ಲಿ ಸೆಲ್ಯೂಟ್ ಮಾಡಿರುವ ಘಟನೆ ಸಂಭವಿಸಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಇಂಟರ್ನ್ಯಾಷನಲ್ ಆಟೋಮೊಬೈಲ್ ಫೆಡರೇಶನ್ (ಎಫ್‌ಐಎ) ತನಿಖೆ ನಡೆಸುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರಷ್ಯಾ ಆಟಗಾರರನ್ನು ಬ್ಯಾನ್ ಮಾಡಿರುವ ಕಾರಣ ರಷ್ಯಾದ ಯುವ ಸ್ಪರ್ಧಿ ಆರ್ಟೆಮ್ ಸೆವೆರಿಯುಖಿನ್ ಈ ಚಾಂಪಿಯನ್‌ಶಿಪ್‌ನಲ್ಲಿ ಇಟಲಿ ಪರವಾನಗಿ ಅಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಜಯ ಗಳಿಸಿದ್ದರು. ಪ್ರಶಸ್ತಿ ಸ್ವೀಕರಿಸುವ ವೇಳೆ ಮುಷ್ಟಿ ಬಿಗಿಹಿಡಿದು ಎದೆಗೆ ಗುದ್ದಿಕೊಂಡ ನಂತರ ಕೈ ಮುಂದೆ ಮಾಡಿ ನಾಜಿ ಶೈಲಿಯಲ್ಲಿ ಸೆಲ್ಯೂಟ್ ಮಾಡಿದ್ದ. ಅಲ್ಲದೆ ಎದುರಿಗಿರುವವನ್ನು ನೋಡುತ್ತ ನಗುತ್ತಿರುವ ದೃಶ್ಯಗಳು ವೈರಲ್ ಆಗಿವೆ. ಈ ಹಿನ್ನೆಲೆಯಲ್ಲಿ ಆತನನ್ನು ಸ್ಪರ್ಧೆಯಿಂದ ವಜಾಗೊಳಿಸಿದ್ದಲ್ಲದೆ, ಯಾವ ಪ್ರಚೋದನೆಗೆ ಒಳಗಾಗಿ ಆತ ನಾಜಿ ಶೈಲಿ ಸೆಲ್ಯೂಟ್ ಮಾಡಿದ ಎಂದು ತನಿಖೆ ನಡೆಸಲಾಗುತ್ತಿದೆ.

ಸೆವೆರಿಯುಖಿನ್ ಪ್ರತಿನಿಧಿಸುವ ವಾರ್ಡ್ ರೇಸಿಂಗ್ ತಂಡವು ಆತನನ್ನು ವಜಾಗೊಳಿಸಿದೆ ಎಂದು ತಿಳಿಸಿದೆ. “ಆ ಚಾಲಕನ ವರ್ತನೆಗೆ ವಾರ್ಡ್ ರೇಸಿಂಗ್ ತಂಡವು ನಾಚಿಕೆಪಡುತ್ತದೆ. ನಾವು ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ವಿರೋಧಿಸಿ ಪ್ರತಿ ಡ್ರೈವರ್‌ಗಳ ಹೆಲ್ಮೆಟ್ ಮೇಲೆ ಯುದ್ದ ಬೇಡ ಎಂಬ ಸ್ಟಿಕ್ಕರ್ ಅಂಟಿಸಿದ್ದೇವೆ. ಅಲ್ಲದೆ ನಮ್ಮ ತಂಡದೊಂದಿಗೆ ಉಕ್ರೇನ್‌ನ ಮೂರು ನಿರಾಶ್ರಿತ ಕುಟುಂಬಗಳು ಪ್ರಯಾಣ ಬೆಳೆಸಲು ಅನುವು ಮಾಡಿಕೊಟ್ಟಿದ್ದೇವೆ” ಎಂದು ಹೇಳಿಕೆ ನೀಡಿದೆ.

ವಿವಾದದ ಬಳಿಕ ವಿಡಿಯೋ ಮೂಲಕ ಕ್ಷಮೆ ಕೇಳಿರುವ ಯುವ ಸ್ಪರ್ಧಿ ಆರ್ಟೆಮ್ ಸೆವೆರಿಯುಖಿನ್, ಅದು ನಿಜವಾಗಿಯೂ ನಾಜಿ ಶೈಲಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. “ಬಹಳಷ್ಟು ಜನರು ಅದು ನಾಜಿ ಶೈಲಿ ಎಂಬು ಭಾವಿಸಿದ್ದಾರೆ, ಅದು ನಿಜವಲ್ಲ. ನಾನು ಎಂದಿಗೂ ನಾಜಿಸಂ ಅನ್ನು ಬೆಂಬಲಿಸುವುದಿಲ್ಲ. ನಾಜಿಸಂ ಮಾನವೀಯತೆಯ ವಿರುದ್ಧದ ಕೆಟ್ಟ ಅಪರಾಧಗಳಲ್ಲಿ ಒಂದು ಎಂದು ನಂಬಿದ್ದೇನೆ” ಎಂದಿದ್ದಾನೆ.

ನಾನು ಒಬ್ಬ ಮೂರ್ಖ ಎಂದು ನನಗೆ ಅರಿವಾಗಿದೆ. ಆ ಕೃತ್ಯಕ್ಕೆ ಶಿಕ್ಷ ಅನುಭವಿಸಲು ಸಿದ್ದನಿದ್ದೇನೆ. ಆದರೆ ನನ್ನ ಉದ್ದೇಶ ಕೆಟ್ಟದಾಗಿರಲಿಲ್ಲ ಎಂದು ಯುವ ಚಾಲಕ ತಿಳಿಸಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಎಲ್ಲವನ್ನೂ ಇಲ್ಲಿಗೆ ಬಿಡಿ, ಕೋಮು ಸಾಮರಸ್ಯ ಹಾಳು ಮಾಡಬೇಡಿ: ಬಿಎಸ್‌ವೈ ಖಡಕ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....