Homeಮುಖಪುಟರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

ರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ‘ದರೋಡೆಕೋರ’ ಎಂದು ಬಿಂಬಿಸಿದ್ದ ಕಾಲ್ಪನಿಕ ವಿಡಿಯೋವನ್ನು ತೆಗೆದು ಹಾಕುವಂತೆ ಹಿಂದಿ ಸುದ್ದಿ ವಾಹಿನಿ ಆಜ್‌ತಕ್‌ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಗುರುವಾರ ನಿರ್ದೇಶನ ನೀಡಿದೆ.

ಕಾಲ್ಪನಿಕ ವಿಡಿಯೋ ಉತ್ತಮ ಅಭಿರುಚಿಯನ್ನು ಹೊಂದಿಲ್ಲ ಎಂದಿರುವ ಎನ್‌ಬಿಡಿಎಸ್‌ಎ, ತನ್ನ ಚಾನೆಲ್, ಯೂಟ್ಯೂಬ್ ಮತ್ತು ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋ ತೆಗೆದು ಹಾಕುವಂತೆ ಆಜ್‌ತಕ್‌ಗೆ ಆದೇಶಿಸಿದೆ.

ಮೋದಿ ಉಪನಾಮೆ ಹೇಳಿಕೆ ಕುರಿತ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2023ರ ಮಾರ್ಚ್ 23 ರಂದು ಗುಜರಾತ್‌ನ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ಆ ಬಳಿಕ ಮಾರ್ಚ್ 24, 2023ರಂದು ಪ್ರಸಾರವಾದ ‘ಬ್ಲ್ಯಾಕ್ ಅಂಡ್ ವೈಟ್’ ಎಂಬ ಶೋನಲ್ಲಿ ಆಜ್‌ತಕ್‌ ರಾಹುಲ್ ಗಾಂಧಿಯನ್ನು ದರೋಡೆಕೋರ ಎಂದು ಬಿಂಬಿಸಿತ್ತು.

ಮಾರ್ಚ್ 31,2023ರಂದು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅವರು ಆಜ್‌ತಕ್‌ ವಿರುದ್ಧ ಎನ್‌ಬಿಡಿಎಸ್‌ಎಗೆ ದೂರು ಸಲ್ಲಿಸಿದ್ದರು. ವಿವಾದಿತ ವಿಡಿಯೋವನ್ನು ಆಜ್‌ತಕ್‌ ಮೊದಲು ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿತ್ತು. ಬಳಿಕ ಬ್ಲ್ಯಾಕ್ ಅಂಡ್ ವೈಟ್ ಶೋನಲ್ಲಿ ಪ್ರಸಾರ ಮಾಡಿತ್ತು. ಈ ಕಾರ್ಯಕ್ರಮವನ್ನು ಆಜ್‌ತಕ್‌ನ ಸಲಹಾ ಸಂಪಾದಕ ಸುಧೀರ್ ಚೌಧರಿ ನಿರೂಪಿಸಿದ್ದರು ಎಂದು ಶ್ರೀನಿವಾಸ್ ಆರೋಪಿಸಿದ್ದರು.

ರಾಹುಲ್ ಗಾಂಧಿಯವರು ಮೋದಿ ಎಂಬ ಉಪನಾಮೆ ಬಳಸಿ ವಾಗ್ದಾಳಿ ನಡೆಸಿರುವುದು ನೀರವ್ ಮೋದಿಗೆ ಎಂಬುವುದು ಸುಧೀರ್ ಚೌಧರಿಗೆ ಚೆನ್ನಾಗಿ ಗೊತ್ತಿತ್ತು. ಆದರೂ, ದುರುದ್ದೇಶಪೂರ್ವಕವಾಗಿ ಯಾರೋ ದರೋಡೆ ಆರೋಪಿಗಳೊಂದಿಗೆ ರಾಹುಲ್ ಗಾಂಧಿಯವರನ್ನು ಹೋಲಿಕೆ ಮಾಡಿದ್ದರು. ಈ ಮೂಲಕ ರಾಹುಲ್ ಗಾಂಧಿ ಗಂಭೀರ ಅಪರಾಧ ಎಸಗಿದ್ದಾರೆ ಎಂಬ ಭಾವನೆಯನ್ನು ಜನರಲ್ಲಿ ಮೂಡಿಸಲು ಪ್ರಯತ್ನಿಸಲಾಗಿತ್ತು ಎಂದು ಶ್ರೀನಿವಾಸ್ ಹೇಳಿದ್ದರು.

ಆರೋಪಿಗಳು ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿಯವರ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ವಿಡಿಯೋ ಪ್ರಸಾರ ಮಾಡಿದ್ದರು. ನೇರವಾಗಿ ಕಾಂಗ್ರೆಸ್ ಪಕ್ಷ ಮತ್ತು ಭಾರತೀಯ ಯುವ ಕಾಂಗ್ರೆಸ್‌ನ ಪ್ರತಿಷ್ಠೆಯನ್ನು ಗುರಿಯಾಗಿಸಿಕೊಂಡು ಲಕ್ಷಾಂತರ ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದರು ಎಂದು ದೂರಿದ್ದರು.

ಈ ಸಂಬಂಧ ಆಜ್‌ತಕ್‌ ಚಾನೆಲ್‌ನಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಮತ್ತು ಟೆಲಿಕಾಸ್ಟ್ ಜೊತೆಗೆ ಇಂಟರ್‌ನೆಟ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಪೋಸ್ಟ್ ಮಾಡಿರುವ ಅವಹೇಳನಕಾರಿ ವಿಡಿಯೋವನ್ನು ತಕ್ಷಣವೇ ಡಿಲಿಟ್ ಮಾಡಿಸಲು ಶ್ರೀನಿವಾಸ್ ಆಗ್ರಹಿಸಿದ್ದರು.

ಶ್ರೀನಿವಾಸ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಆಜ್‌ತಕ್‌, ರಾಹುಲ್ ಗಾಂಧಿ ಕುರಿತು ನಾವು ಯಾವುದೇ ದುರುದ್ದೇಶಪೂರ್ವಕ ಹೇಳಿಕೆ ನೀಡಿಲ್ಲ. ಅವರನ್ನು ದರೋಡೆ ಆರೋಪಿಯನ್ನಾಗಿ ಬಿಂಬಿಸಿಲ್ಲ ಎಂದಿತ್ತು. ಚಾನೆಲ್‌ನಲ್ಲಿ ಪ್ರಸಾರವಾದ ವಿಡಿಯೋದ ಸಂಪೂರ್ಣ ಅಂಶವು ಪ್ರಿಯಾಂಕಾ ಗಾಂಧಿಯವರು ಎಕ್ಸ್‌ನಲ್ಲಿ ಮಾಡಿರುವ ಪೋಸ್ಟನ್ನು ಆಧರಿಸಿತ್ತು ಎಂದು ಚಾನೆಲ್ ವಾದಿಸಿತ್ತು.

ಚಾನೆಲ್ ನಿರೂಪಕ ಪ್ರಿಯಾಂಕಾ ಗಾಂಧಿಯವ ಎಕ್ಸ್‌ ಪೋಸ್ಟ್‌ಗೆ ವಿಭಿನ್ನ ನಿರೂಪಣೆ ನೀಡಿದ್ದರೂ, ಪ್ರಿಯಾಂಕಾ ಗಾಂಧಿ ಮಾಡಿದ್ದ ಪೋಸ್ಟ್‌ಗಳನ್ನು ನಿಖರವಾಗಿ ಪ್ರಸಾರ ಮಾಡಿದ್ದಾರೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದರು ಎಂದು ಎನ್‌ಬಿಡಿಎಸ್‌ಎ ಗಮನಿಸಿದೆ.

ಚಾನೆಲ್‌ನಲ್ಲಿ ಪ್ರಸಾರವಾದ ಕಾಲ್ಪನಿಕ ವಿಡಿಯೋದಲ್ಲಿ ಚಿತ್ರಿಸಲಾದ ದರೋಡೆಕೋರನ ಕಥೆ ರಾಹುಲ್ ಗಾಂಧಿ ಮೇಲಿನ ಅಪರಾಧಕ್ಕೆ ಸಂಬಂಧಿಸಿದೆ. ವಿಡಿಯೋದಲ್ಲಿ ಮಾಡಲಾದ ಆರೋಪಗಳು ಉತ್ತಮ ಅಭಿರುಚಿಯಲ್ಲಿಲ್ಲ. ಹಾಗಾಗಿ, ಈ ರೀತಿಯ ಕಾರ್ಯಕ್ರಮಗಳನ್ನು ಪುನರಾವರ್ತಿಸಬಾರದು ಎಂದು ಎನ್‌ಬಿಡಿಎಸ್‌ಎ ಆಜ್‌ತಕ್‌ಗೆ ಹೇಳಿದೆ.

ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋವನ್ನು ತೆಗೆದು ಹಾಕುವಂತೆ ಸೂಚಿಸಿದೆ. ಮುಂದಿನ ಪ್ರಸಾರಗಳಲ್ಲಿ ಅಂತಹ ಕಾಲ್ಪನಿಕ ವಿಡಿಯೋಗಳನ್ನು ಪ್ರಸಾರ ಮಾಡುವಾಗ ಜಾಗರೂಕರಾಗಿರಿ ಎಂದು ಆಜ್‌ತಕ್‌ ಚಾನೆಲ್‌ಗೆ ನಿರ್ದೇಶಿಸಿದೆ.

ದೂರುದಾರರ ಪರ ವಕೀಲ ಕಪಿಲ್ ಮದನ್ ವಾದ ಮಂಡಿಸಿದ್ದರು.

ಇದನ್ನೂ ಓದಿ : ಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ ನೀಡಿದ ಎನ್‌ಬಿಡಿಎಸ್‌ಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...