Homeಮುಖಪುಟರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

ರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ‘ದರೋಡೆಕೋರ’ ಎಂದು ಬಿಂಬಿಸಿದ್ದ ಕಾಲ್ಪನಿಕ ವಿಡಿಯೋವನ್ನು ತೆಗೆದು ಹಾಕುವಂತೆ ಹಿಂದಿ ಸುದ್ದಿ ವಾಹಿನಿ ಆಜ್‌ತಕ್‌ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಗುರುವಾರ ನಿರ್ದೇಶನ ನೀಡಿದೆ.

ಕಾಲ್ಪನಿಕ ವಿಡಿಯೋ ಉತ್ತಮ ಅಭಿರುಚಿಯನ್ನು ಹೊಂದಿಲ್ಲ ಎಂದಿರುವ ಎನ್‌ಬಿಡಿಎಸ್‌ಎ, ತನ್ನ ಚಾನೆಲ್, ಯೂಟ್ಯೂಬ್ ಮತ್ತು ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋ ತೆಗೆದು ಹಾಕುವಂತೆ ಆಜ್‌ತಕ್‌ಗೆ ಆದೇಶಿಸಿದೆ.

ಮೋದಿ ಉಪನಾಮೆ ಹೇಳಿಕೆ ಕುರಿತ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2023ರ ಮಾರ್ಚ್ 23 ರಂದು ಗುಜರಾತ್‌ನ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ಆ ಬಳಿಕ ಮಾರ್ಚ್ 24, 2023ರಂದು ಪ್ರಸಾರವಾದ ‘ಬ್ಲ್ಯಾಕ್ ಅಂಡ್ ವೈಟ್’ ಎಂಬ ಶೋನಲ್ಲಿ ಆಜ್‌ತಕ್‌ ರಾಹುಲ್ ಗಾಂಧಿಯನ್ನು ದರೋಡೆಕೋರ ಎಂದು ಬಿಂಬಿಸಿತ್ತು.

ಮಾರ್ಚ್ 31,2023ರಂದು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅವರು ಆಜ್‌ತಕ್‌ ವಿರುದ್ಧ ಎನ್‌ಬಿಡಿಎಸ್‌ಎಗೆ ದೂರು ಸಲ್ಲಿಸಿದ್ದರು. ವಿವಾದಿತ ವಿಡಿಯೋವನ್ನು ಆಜ್‌ತಕ್‌ ಮೊದಲು ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿತ್ತು. ಬಳಿಕ ಬ್ಲ್ಯಾಕ್ ಅಂಡ್ ವೈಟ್ ಶೋನಲ್ಲಿ ಪ್ರಸಾರ ಮಾಡಿತ್ತು. ಈ ಕಾರ್ಯಕ್ರಮವನ್ನು ಆಜ್‌ತಕ್‌ನ ಸಲಹಾ ಸಂಪಾದಕ ಸುಧೀರ್ ಚೌಧರಿ ನಿರೂಪಿಸಿದ್ದರು ಎಂದು ಶ್ರೀನಿವಾಸ್ ಆರೋಪಿಸಿದ್ದರು.

ರಾಹುಲ್ ಗಾಂಧಿಯವರು ಮೋದಿ ಎಂಬ ಉಪನಾಮೆ ಬಳಸಿ ವಾಗ್ದಾಳಿ ನಡೆಸಿರುವುದು ನೀರವ್ ಮೋದಿಗೆ ಎಂಬುವುದು ಸುಧೀರ್ ಚೌಧರಿಗೆ ಚೆನ್ನಾಗಿ ಗೊತ್ತಿತ್ತು. ಆದರೂ, ದುರುದ್ದೇಶಪೂರ್ವಕವಾಗಿ ಯಾರೋ ದರೋಡೆ ಆರೋಪಿಗಳೊಂದಿಗೆ ರಾಹುಲ್ ಗಾಂಧಿಯವರನ್ನು ಹೋಲಿಕೆ ಮಾಡಿದ್ದರು. ಈ ಮೂಲಕ ರಾಹುಲ್ ಗಾಂಧಿ ಗಂಭೀರ ಅಪರಾಧ ಎಸಗಿದ್ದಾರೆ ಎಂಬ ಭಾವನೆಯನ್ನು ಜನರಲ್ಲಿ ಮೂಡಿಸಲು ಪ್ರಯತ್ನಿಸಲಾಗಿತ್ತು ಎಂದು ಶ್ರೀನಿವಾಸ್ ಹೇಳಿದ್ದರು.

ಆರೋಪಿಗಳು ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿಯವರ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ವಿಡಿಯೋ ಪ್ರಸಾರ ಮಾಡಿದ್ದರು. ನೇರವಾಗಿ ಕಾಂಗ್ರೆಸ್ ಪಕ್ಷ ಮತ್ತು ಭಾರತೀಯ ಯುವ ಕಾಂಗ್ರೆಸ್‌ನ ಪ್ರತಿಷ್ಠೆಯನ್ನು ಗುರಿಯಾಗಿಸಿಕೊಂಡು ಲಕ್ಷಾಂತರ ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದರು ಎಂದು ದೂರಿದ್ದರು.

ಈ ಸಂಬಂಧ ಆಜ್‌ತಕ್‌ ಚಾನೆಲ್‌ನಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಮತ್ತು ಟೆಲಿಕಾಸ್ಟ್ ಜೊತೆಗೆ ಇಂಟರ್‌ನೆಟ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಪೋಸ್ಟ್ ಮಾಡಿರುವ ಅವಹೇಳನಕಾರಿ ವಿಡಿಯೋವನ್ನು ತಕ್ಷಣವೇ ಡಿಲಿಟ್ ಮಾಡಿಸಲು ಶ್ರೀನಿವಾಸ್ ಆಗ್ರಹಿಸಿದ್ದರು.

ಶ್ರೀನಿವಾಸ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಆಜ್‌ತಕ್‌, ರಾಹುಲ್ ಗಾಂಧಿ ಕುರಿತು ನಾವು ಯಾವುದೇ ದುರುದ್ದೇಶಪೂರ್ವಕ ಹೇಳಿಕೆ ನೀಡಿಲ್ಲ. ಅವರನ್ನು ದರೋಡೆ ಆರೋಪಿಯನ್ನಾಗಿ ಬಿಂಬಿಸಿಲ್ಲ ಎಂದಿತ್ತು. ಚಾನೆಲ್‌ನಲ್ಲಿ ಪ್ರಸಾರವಾದ ವಿಡಿಯೋದ ಸಂಪೂರ್ಣ ಅಂಶವು ಪ್ರಿಯಾಂಕಾ ಗಾಂಧಿಯವರು ಎಕ್ಸ್‌ನಲ್ಲಿ ಮಾಡಿರುವ ಪೋಸ್ಟನ್ನು ಆಧರಿಸಿತ್ತು ಎಂದು ಚಾನೆಲ್ ವಾದಿಸಿತ್ತು.

ಚಾನೆಲ್ ನಿರೂಪಕ ಪ್ರಿಯಾಂಕಾ ಗಾಂಧಿಯವ ಎಕ್ಸ್‌ ಪೋಸ್ಟ್‌ಗೆ ವಿಭಿನ್ನ ನಿರೂಪಣೆ ನೀಡಿದ್ದರೂ, ಪ್ರಿಯಾಂಕಾ ಗಾಂಧಿ ಮಾಡಿದ್ದ ಪೋಸ್ಟ್‌ಗಳನ್ನು ನಿಖರವಾಗಿ ಪ್ರಸಾರ ಮಾಡಿದ್ದಾರೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದರು ಎಂದು ಎನ್‌ಬಿಡಿಎಸ್‌ಎ ಗಮನಿಸಿದೆ.

ಚಾನೆಲ್‌ನಲ್ಲಿ ಪ್ರಸಾರವಾದ ಕಾಲ್ಪನಿಕ ವಿಡಿಯೋದಲ್ಲಿ ಚಿತ್ರಿಸಲಾದ ದರೋಡೆಕೋರನ ಕಥೆ ರಾಹುಲ್ ಗಾಂಧಿ ಮೇಲಿನ ಅಪರಾಧಕ್ಕೆ ಸಂಬಂಧಿಸಿದೆ. ವಿಡಿಯೋದಲ್ಲಿ ಮಾಡಲಾದ ಆರೋಪಗಳು ಉತ್ತಮ ಅಭಿರುಚಿಯಲ್ಲಿಲ್ಲ. ಹಾಗಾಗಿ, ಈ ರೀತಿಯ ಕಾರ್ಯಕ್ರಮಗಳನ್ನು ಪುನರಾವರ್ತಿಸಬಾರದು ಎಂದು ಎನ್‌ಬಿಡಿಎಸ್‌ಎ ಆಜ್‌ತಕ್‌ಗೆ ಹೇಳಿದೆ.

ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋವನ್ನು ತೆಗೆದು ಹಾಕುವಂತೆ ಸೂಚಿಸಿದೆ. ಮುಂದಿನ ಪ್ರಸಾರಗಳಲ್ಲಿ ಅಂತಹ ಕಾಲ್ಪನಿಕ ವಿಡಿಯೋಗಳನ್ನು ಪ್ರಸಾರ ಮಾಡುವಾಗ ಜಾಗರೂಕರಾಗಿರಿ ಎಂದು ಆಜ್‌ತಕ್‌ ಚಾನೆಲ್‌ಗೆ ನಿರ್ದೇಶಿಸಿದೆ.

ದೂರುದಾರರ ಪರ ವಕೀಲ ಕಪಿಲ್ ಮದನ್ ವಾದ ಮಂಡಿಸಿದ್ದರು.

ಇದನ್ನೂ ಓದಿ : ಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ ನೀಡಿದ ಎನ್‌ಬಿಡಿಎಸ್‌ಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...