Homeಮುಖಪುಟರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

ರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ‘ದರೋಡೆಕೋರ’ ಎಂದು ಬಿಂಬಿಸಿದ್ದ ಕಾಲ್ಪನಿಕ ವಿಡಿಯೋವನ್ನು ತೆಗೆದು ಹಾಕುವಂತೆ ಹಿಂದಿ ಸುದ್ದಿ ವಾಹಿನಿ ಆಜ್‌ತಕ್‌ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಗುರುವಾರ ನಿರ್ದೇಶನ ನೀಡಿದೆ.

ಕಾಲ್ಪನಿಕ ವಿಡಿಯೋ ಉತ್ತಮ ಅಭಿರುಚಿಯನ್ನು ಹೊಂದಿಲ್ಲ ಎಂದಿರುವ ಎನ್‌ಬಿಡಿಎಸ್‌ಎ, ತನ್ನ ಚಾನೆಲ್, ಯೂಟ್ಯೂಬ್ ಮತ್ತು ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋ ತೆಗೆದು ಹಾಕುವಂತೆ ಆಜ್‌ತಕ್‌ಗೆ ಆದೇಶಿಸಿದೆ.

ಮೋದಿ ಉಪನಾಮೆ ಹೇಳಿಕೆ ಕುರಿತ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2023ರ ಮಾರ್ಚ್ 23 ರಂದು ಗುಜರಾತ್‌ನ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ಆ ಬಳಿಕ ಮಾರ್ಚ್ 24, 2023ರಂದು ಪ್ರಸಾರವಾದ ‘ಬ್ಲ್ಯಾಕ್ ಅಂಡ್ ವೈಟ್’ ಎಂಬ ಶೋನಲ್ಲಿ ಆಜ್‌ತಕ್‌ ರಾಹುಲ್ ಗಾಂಧಿಯನ್ನು ದರೋಡೆಕೋರ ಎಂದು ಬಿಂಬಿಸಿತ್ತು.

ಮಾರ್ಚ್ 31,2023ರಂದು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅವರು ಆಜ್‌ತಕ್‌ ವಿರುದ್ಧ ಎನ್‌ಬಿಡಿಎಸ್‌ಎಗೆ ದೂರು ಸಲ್ಲಿಸಿದ್ದರು. ವಿವಾದಿತ ವಿಡಿಯೋವನ್ನು ಆಜ್‌ತಕ್‌ ಮೊದಲು ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿತ್ತು. ಬಳಿಕ ಬ್ಲ್ಯಾಕ್ ಅಂಡ್ ವೈಟ್ ಶೋನಲ್ಲಿ ಪ್ರಸಾರ ಮಾಡಿತ್ತು. ಈ ಕಾರ್ಯಕ್ರಮವನ್ನು ಆಜ್‌ತಕ್‌ನ ಸಲಹಾ ಸಂಪಾದಕ ಸುಧೀರ್ ಚೌಧರಿ ನಿರೂಪಿಸಿದ್ದರು ಎಂದು ಶ್ರೀನಿವಾಸ್ ಆರೋಪಿಸಿದ್ದರು.

ರಾಹುಲ್ ಗಾಂಧಿಯವರು ಮೋದಿ ಎಂಬ ಉಪನಾಮೆ ಬಳಸಿ ವಾಗ್ದಾಳಿ ನಡೆಸಿರುವುದು ನೀರವ್ ಮೋದಿಗೆ ಎಂಬುವುದು ಸುಧೀರ್ ಚೌಧರಿಗೆ ಚೆನ್ನಾಗಿ ಗೊತ್ತಿತ್ತು. ಆದರೂ, ದುರುದ್ದೇಶಪೂರ್ವಕವಾಗಿ ಯಾರೋ ದರೋಡೆ ಆರೋಪಿಗಳೊಂದಿಗೆ ರಾಹುಲ್ ಗಾಂಧಿಯವರನ್ನು ಹೋಲಿಕೆ ಮಾಡಿದ್ದರು. ಈ ಮೂಲಕ ರಾಹುಲ್ ಗಾಂಧಿ ಗಂಭೀರ ಅಪರಾಧ ಎಸಗಿದ್ದಾರೆ ಎಂಬ ಭಾವನೆಯನ್ನು ಜನರಲ್ಲಿ ಮೂಡಿಸಲು ಪ್ರಯತ್ನಿಸಲಾಗಿತ್ತು ಎಂದು ಶ್ರೀನಿವಾಸ್ ಹೇಳಿದ್ದರು.

ಆರೋಪಿಗಳು ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿಯವರ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ವಿಡಿಯೋ ಪ್ರಸಾರ ಮಾಡಿದ್ದರು. ನೇರವಾಗಿ ಕಾಂಗ್ರೆಸ್ ಪಕ್ಷ ಮತ್ತು ಭಾರತೀಯ ಯುವ ಕಾಂಗ್ರೆಸ್‌ನ ಪ್ರತಿಷ್ಠೆಯನ್ನು ಗುರಿಯಾಗಿಸಿಕೊಂಡು ಲಕ್ಷಾಂತರ ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದರು ಎಂದು ದೂರಿದ್ದರು.

ಈ ಸಂಬಂಧ ಆಜ್‌ತಕ್‌ ಚಾನೆಲ್‌ನಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಮತ್ತು ಟೆಲಿಕಾಸ್ಟ್ ಜೊತೆಗೆ ಇಂಟರ್‌ನೆಟ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಪೋಸ್ಟ್ ಮಾಡಿರುವ ಅವಹೇಳನಕಾರಿ ವಿಡಿಯೋವನ್ನು ತಕ್ಷಣವೇ ಡಿಲಿಟ್ ಮಾಡಿಸಲು ಶ್ರೀನಿವಾಸ್ ಆಗ್ರಹಿಸಿದ್ದರು.

ಶ್ರೀನಿವಾಸ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಆಜ್‌ತಕ್‌, ರಾಹುಲ್ ಗಾಂಧಿ ಕುರಿತು ನಾವು ಯಾವುದೇ ದುರುದ್ದೇಶಪೂರ್ವಕ ಹೇಳಿಕೆ ನೀಡಿಲ್ಲ. ಅವರನ್ನು ದರೋಡೆ ಆರೋಪಿಯನ್ನಾಗಿ ಬಿಂಬಿಸಿಲ್ಲ ಎಂದಿತ್ತು. ಚಾನೆಲ್‌ನಲ್ಲಿ ಪ್ರಸಾರವಾದ ವಿಡಿಯೋದ ಸಂಪೂರ್ಣ ಅಂಶವು ಪ್ರಿಯಾಂಕಾ ಗಾಂಧಿಯವರು ಎಕ್ಸ್‌ನಲ್ಲಿ ಮಾಡಿರುವ ಪೋಸ್ಟನ್ನು ಆಧರಿಸಿತ್ತು ಎಂದು ಚಾನೆಲ್ ವಾದಿಸಿತ್ತು.

ಚಾನೆಲ್ ನಿರೂಪಕ ಪ್ರಿಯಾಂಕಾ ಗಾಂಧಿಯವ ಎಕ್ಸ್‌ ಪೋಸ್ಟ್‌ಗೆ ವಿಭಿನ್ನ ನಿರೂಪಣೆ ನೀಡಿದ್ದರೂ, ಪ್ರಿಯಾಂಕಾ ಗಾಂಧಿ ಮಾಡಿದ್ದ ಪೋಸ್ಟ್‌ಗಳನ್ನು ನಿಖರವಾಗಿ ಪ್ರಸಾರ ಮಾಡಿದ್ದಾರೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದರು ಎಂದು ಎನ್‌ಬಿಡಿಎಸ್‌ಎ ಗಮನಿಸಿದೆ.

ಚಾನೆಲ್‌ನಲ್ಲಿ ಪ್ರಸಾರವಾದ ಕಾಲ್ಪನಿಕ ವಿಡಿಯೋದಲ್ಲಿ ಚಿತ್ರಿಸಲಾದ ದರೋಡೆಕೋರನ ಕಥೆ ರಾಹುಲ್ ಗಾಂಧಿ ಮೇಲಿನ ಅಪರಾಧಕ್ಕೆ ಸಂಬಂಧಿಸಿದೆ. ವಿಡಿಯೋದಲ್ಲಿ ಮಾಡಲಾದ ಆರೋಪಗಳು ಉತ್ತಮ ಅಭಿರುಚಿಯಲ್ಲಿಲ್ಲ. ಹಾಗಾಗಿ, ಈ ರೀತಿಯ ಕಾರ್ಯಕ್ರಮಗಳನ್ನು ಪುನರಾವರ್ತಿಸಬಾರದು ಎಂದು ಎನ್‌ಬಿಡಿಎಸ್‌ಎ ಆಜ್‌ತಕ್‌ಗೆ ಹೇಳಿದೆ.

ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋವನ್ನು ತೆಗೆದು ಹಾಕುವಂತೆ ಸೂಚಿಸಿದೆ. ಮುಂದಿನ ಪ್ರಸಾರಗಳಲ್ಲಿ ಅಂತಹ ಕಾಲ್ಪನಿಕ ವಿಡಿಯೋಗಳನ್ನು ಪ್ರಸಾರ ಮಾಡುವಾಗ ಜಾಗರೂಕರಾಗಿರಿ ಎಂದು ಆಜ್‌ತಕ್‌ ಚಾನೆಲ್‌ಗೆ ನಿರ್ದೇಶಿಸಿದೆ.

ದೂರುದಾರರ ಪರ ವಕೀಲ ಕಪಿಲ್ ಮದನ್ ವಾದ ಮಂಡಿಸಿದ್ದರು.

ಇದನ್ನೂ ಓದಿ : ಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ ನೀಡಿದ ಎನ್‌ಬಿಡಿಎಸ್‌ಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...