Homeಮುಖಪುಟರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

ರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ‘ದರೋಡೆಕೋರ’ ಎಂದು ಬಿಂಬಿಸಿದ್ದ ಕಾಲ್ಪನಿಕ ವಿಡಿಯೋವನ್ನು ತೆಗೆದು ಹಾಕುವಂತೆ ಹಿಂದಿ ಸುದ್ದಿ ವಾಹಿನಿ ಆಜ್‌ತಕ್‌ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಗುರುವಾರ ನಿರ್ದೇಶನ ನೀಡಿದೆ.

ಕಾಲ್ಪನಿಕ ವಿಡಿಯೋ ಉತ್ತಮ ಅಭಿರುಚಿಯನ್ನು ಹೊಂದಿಲ್ಲ ಎಂದಿರುವ ಎನ್‌ಬಿಡಿಎಸ್‌ಎ, ತನ್ನ ಚಾನೆಲ್, ಯೂಟ್ಯೂಬ್ ಮತ್ತು ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋ ತೆಗೆದು ಹಾಕುವಂತೆ ಆಜ್‌ತಕ್‌ಗೆ ಆದೇಶಿಸಿದೆ.

ಮೋದಿ ಉಪನಾಮೆ ಹೇಳಿಕೆ ಕುರಿತ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2023ರ ಮಾರ್ಚ್ 23 ರಂದು ಗುಜರಾತ್‌ನ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ಆ ಬಳಿಕ ಮಾರ್ಚ್ 24, 2023ರಂದು ಪ್ರಸಾರವಾದ ‘ಬ್ಲ್ಯಾಕ್ ಅಂಡ್ ವೈಟ್’ ಎಂಬ ಶೋನಲ್ಲಿ ಆಜ್‌ತಕ್‌ ರಾಹುಲ್ ಗಾಂಧಿಯನ್ನು ದರೋಡೆಕೋರ ಎಂದು ಬಿಂಬಿಸಿತ್ತು.

ಮಾರ್ಚ್ 31,2023ರಂದು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅವರು ಆಜ್‌ತಕ್‌ ವಿರುದ್ಧ ಎನ್‌ಬಿಡಿಎಸ್‌ಎಗೆ ದೂರು ಸಲ್ಲಿಸಿದ್ದರು. ವಿವಾದಿತ ವಿಡಿಯೋವನ್ನು ಆಜ್‌ತಕ್‌ ಮೊದಲು ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿತ್ತು. ಬಳಿಕ ಬ್ಲ್ಯಾಕ್ ಅಂಡ್ ವೈಟ್ ಶೋನಲ್ಲಿ ಪ್ರಸಾರ ಮಾಡಿತ್ತು. ಈ ಕಾರ್ಯಕ್ರಮವನ್ನು ಆಜ್‌ತಕ್‌ನ ಸಲಹಾ ಸಂಪಾದಕ ಸುಧೀರ್ ಚೌಧರಿ ನಿರೂಪಿಸಿದ್ದರು ಎಂದು ಶ್ರೀನಿವಾಸ್ ಆರೋಪಿಸಿದ್ದರು.

ರಾಹುಲ್ ಗಾಂಧಿಯವರು ಮೋದಿ ಎಂಬ ಉಪನಾಮೆ ಬಳಸಿ ವಾಗ್ದಾಳಿ ನಡೆಸಿರುವುದು ನೀರವ್ ಮೋದಿಗೆ ಎಂಬುವುದು ಸುಧೀರ್ ಚೌಧರಿಗೆ ಚೆನ್ನಾಗಿ ಗೊತ್ತಿತ್ತು. ಆದರೂ, ದುರುದ್ದೇಶಪೂರ್ವಕವಾಗಿ ಯಾರೋ ದರೋಡೆ ಆರೋಪಿಗಳೊಂದಿಗೆ ರಾಹುಲ್ ಗಾಂಧಿಯವರನ್ನು ಹೋಲಿಕೆ ಮಾಡಿದ್ದರು. ಈ ಮೂಲಕ ರಾಹುಲ್ ಗಾಂಧಿ ಗಂಭೀರ ಅಪರಾಧ ಎಸಗಿದ್ದಾರೆ ಎಂಬ ಭಾವನೆಯನ್ನು ಜನರಲ್ಲಿ ಮೂಡಿಸಲು ಪ್ರಯತ್ನಿಸಲಾಗಿತ್ತು ಎಂದು ಶ್ರೀನಿವಾಸ್ ಹೇಳಿದ್ದರು.

ಆರೋಪಿಗಳು ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿಯವರ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ವಿಡಿಯೋ ಪ್ರಸಾರ ಮಾಡಿದ್ದರು. ನೇರವಾಗಿ ಕಾಂಗ್ರೆಸ್ ಪಕ್ಷ ಮತ್ತು ಭಾರತೀಯ ಯುವ ಕಾಂಗ್ರೆಸ್‌ನ ಪ್ರತಿಷ್ಠೆಯನ್ನು ಗುರಿಯಾಗಿಸಿಕೊಂಡು ಲಕ್ಷಾಂತರ ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದರು ಎಂದು ದೂರಿದ್ದರು.

ಈ ಸಂಬಂಧ ಆಜ್‌ತಕ್‌ ಚಾನೆಲ್‌ನಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಮತ್ತು ಟೆಲಿಕಾಸ್ಟ್ ಜೊತೆಗೆ ಇಂಟರ್‌ನೆಟ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಪೋಸ್ಟ್ ಮಾಡಿರುವ ಅವಹೇಳನಕಾರಿ ವಿಡಿಯೋವನ್ನು ತಕ್ಷಣವೇ ಡಿಲಿಟ್ ಮಾಡಿಸಲು ಶ್ರೀನಿವಾಸ್ ಆಗ್ರಹಿಸಿದ್ದರು.

ಶ್ರೀನಿವಾಸ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಆಜ್‌ತಕ್‌, ರಾಹುಲ್ ಗಾಂಧಿ ಕುರಿತು ನಾವು ಯಾವುದೇ ದುರುದ್ದೇಶಪೂರ್ವಕ ಹೇಳಿಕೆ ನೀಡಿಲ್ಲ. ಅವರನ್ನು ದರೋಡೆ ಆರೋಪಿಯನ್ನಾಗಿ ಬಿಂಬಿಸಿಲ್ಲ ಎಂದಿತ್ತು. ಚಾನೆಲ್‌ನಲ್ಲಿ ಪ್ರಸಾರವಾದ ವಿಡಿಯೋದ ಸಂಪೂರ್ಣ ಅಂಶವು ಪ್ರಿಯಾಂಕಾ ಗಾಂಧಿಯವರು ಎಕ್ಸ್‌ನಲ್ಲಿ ಮಾಡಿರುವ ಪೋಸ್ಟನ್ನು ಆಧರಿಸಿತ್ತು ಎಂದು ಚಾನೆಲ್ ವಾದಿಸಿತ್ತು.

ಚಾನೆಲ್ ನಿರೂಪಕ ಪ್ರಿಯಾಂಕಾ ಗಾಂಧಿಯವ ಎಕ್ಸ್‌ ಪೋಸ್ಟ್‌ಗೆ ವಿಭಿನ್ನ ನಿರೂಪಣೆ ನೀಡಿದ್ದರೂ, ಪ್ರಿಯಾಂಕಾ ಗಾಂಧಿ ಮಾಡಿದ್ದ ಪೋಸ್ಟ್‌ಗಳನ್ನು ನಿಖರವಾಗಿ ಪ್ರಸಾರ ಮಾಡಿದ್ದಾರೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದರು ಎಂದು ಎನ್‌ಬಿಡಿಎಸ್‌ಎ ಗಮನಿಸಿದೆ.

ಚಾನೆಲ್‌ನಲ್ಲಿ ಪ್ರಸಾರವಾದ ಕಾಲ್ಪನಿಕ ವಿಡಿಯೋದಲ್ಲಿ ಚಿತ್ರಿಸಲಾದ ದರೋಡೆಕೋರನ ಕಥೆ ರಾಹುಲ್ ಗಾಂಧಿ ಮೇಲಿನ ಅಪರಾಧಕ್ಕೆ ಸಂಬಂಧಿಸಿದೆ. ವಿಡಿಯೋದಲ್ಲಿ ಮಾಡಲಾದ ಆರೋಪಗಳು ಉತ್ತಮ ಅಭಿರುಚಿಯಲ್ಲಿಲ್ಲ. ಹಾಗಾಗಿ, ಈ ರೀತಿಯ ಕಾರ್ಯಕ್ರಮಗಳನ್ನು ಪುನರಾವರ್ತಿಸಬಾರದು ಎಂದು ಎನ್‌ಬಿಡಿಎಸ್‌ಎ ಆಜ್‌ತಕ್‌ಗೆ ಹೇಳಿದೆ.

ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋವನ್ನು ತೆಗೆದು ಹಾಕುವಂತೆ ಸೂಚಿಸಿದೆ. ಮುಂದಿನ ಪ್ರಸಾರಗಳಲ್ಲಿ ಅಂತಹ ಕಾಲ್ಪನಿಕ ವಿಡಿಯೋಗಳನ್ನು ಪ್ರಸಾರ ಮಾಡುವಾಗ ಜಾಗರೂಕರಾಗಿರಿ ಎಂದು ಆಜ್‌ತಕ್‌ ಚಾನೆಲ್‌ಗೆ ನಿರ್ದೇಶಿಸಿದೆ.

ದೂರುದಾರರ ಪರ ವಕೀಲ ಕಪಿಲ್ ಮದನ್ ವಾದ ಮಂಡಿಸಿದ್ದರು.

ಇದನ್ನೂ ಓದಿ : ಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ ನೀಡಿದ ಎನ್‌ಬಿಡಿಎಸ್‌ಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...