Homeಮುಖಪುಟರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

ರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ‘ದರೋಡೆಕೋರ’ ಎಂದು ಬಿಂಬಿಸಿದ್ದ ಕಾಲ್ಪನಿಕ ವಿಡಿಯೋವನ್ನು ತೆಗೆದು ಹಾಕುವಂತೆ ಹಿಂದಿ ಸುದ್ದಿ ವಾಹಿನಿ ಆಜ್‌ತಕ್‌ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಗುರುವಾರ ನಿರ್ದೇಶನ ನೀಡಿದೆ.

ಕಾಲ್ಪನಿಕ ವಿಡಿಯೋ ಉತ್ತಮ ಅಭಿರುಚಿಯನ್ನು ಹೊಂದಿಲ್ಲ ಎಂದಿರುವ ಎನ್‌ಬಿಡಿಎಸ್‌ಎ, ತನ್ನ ಚಾನೆಲ್, ಯೂಟ್ಯೂಬ್ ಮತ್ತು ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋ ತೆಗೆದು ಹಾಕುವಂತೆ ಆಜ್‌ತಕ್‌ಗೆ ಆದೇಶಿಸಿದೆ.

ಮೋದಿ ಉಪನಾಮೆ ಹೇಳಿಕೆ ಕುರಿತ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2023ರ ಮಾರ್ಚ್ 23 ರಂದು ಗುಜರಾತ್‌ನ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ಆ ಬಳಿಕ ಮಾರ್ಚ್ 24, 2023ರಂದು ಪ್ರಸಾರವಾದ ‘ಬ್ಲ್ಯಾಕ್ ಅಂಡ್ ವೈಟ್’ ಎಂಬ ಶೋನಲ್ಲಿ ಆಜ್‌ತಕ್‌ ರಾಹುಲ್ ಗಾಂಧಿಯನ್ನು ದರೋಡೆಕೋರ ಎಂದು ಬಿಂಬಿಸಿತ್ತು.

ಮಾರ್ಚ್ 31,2023ರಂದು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅವರು ಆಜ್‌ತಕ್‌ ವಿರುದ್ಧ ಎನ್‌ಬಿಡಿಎಸ್‌ಎಗೆ ದೂರು ಸಲ್ಲಿಸಿದ್ದರು. ವಿವಾದಿತ ವಿಡಿಯೋವನ್ನು ಆಜ್‌ತಕ್‌ ಮೊದಲು ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿತ್ತು. ಬಳಿಕ ಬ್ಲ್ಯಾಕ್ ಅಂಡ್ ವೈಟ್ ಶೋನಲ್ಲಿ ಪ್ರಸಾರ ಮಾಡಿತ್ತು. ಈ ಕಾರ್ಯಕ್ರಮವನ್ನು ಆಜ್‌ತಕ್‌ನ ಸಲಹಾ ಸಂಪಾದಕ ಸುಧೀರ್ ಚೌಧರಿ ನಿರೂಪಿಸಿದ್ದರು ಎಂದು ಶ್ರೀನಿವಾಸ್ ಆರೋಪಿಸಿದ್ದರು.

ರಾಹುಲ್ ಗಾಂಧಿಯವರು ಮೋದಿ ಎಂಬ ಉಪನಾಮೆ ಬಳಸಿ ವಾಗ್ದಾಳಿ ನಡೆಸಿರುವುದು ನೀರವ್ ಮೋದಿಗೆ ಎಂಬುವುದು ಸುಧೀರ್ ಚೌಧರಿಗೆ ಚೆನ್ನಾಗಿ ಗೊತ್ತಿತ್ತು. ಆದರೂ, ದುರುದ್ದೇಶಪೂರ್ವಕವಾಗಿ ಯಾರೋ ದರೋಡೆ ಆರೋಪಿಗಳೊಂದಿಗೆ ರಾಹುಲ್ ಗಾಂಧಿಯವರನ್ನು ಹೋಲಿಕೆ ಮಾಡಿದ್ದರು. ಈ ಮೂಲಕ ರಾಹುಲ್ ಗಾಂಧಿ ಗಂಭೀರ ಅಪರಾಧ ಎಸಗಿದ್ದಾರೆ ಎಂಬ ಭಾವನೆಯನ್ನು ಜನರಲ್ಲಿ ಮೂಡಿಸಲು ಪ್ರಯತ್ನಿಸಲಾಗಿತ್ತು ಎಂದು ಶ್ರೀನಿವಾಸ್ ಹೇಳಿದ್ದರು.

ಆರೋಪಿಗಳು ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿಯವರ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ವಿಡಿಯೋ ಪ್ರಸಾರ ಮಾಡಿದ್ದರು. ನೇರವಾಗಿ ಕಾಂಗ್ರೆಸ್ ಪಕ್ಷ ಮತ್ತು ಭಾರತೀಯ ಯುವ ಕಾಂಗ್ರೆಸ್‌ನ ಪ್ರತಿಷ್ಠೆಯನ್ನು ಗುರಿಯಾಗಿಸಿಕೊಂಡು ಲಕ್ಷಾಂತರ ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದರು ಎಂದು ದೂರಿದ್ದರು.

ಈ ಸಂಬಂಧ ಆಜ್‌ತಕ್‌ ಚಾನೆಲ್‌ನಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಮತ್ತು ಟೆಲಿಕಾಸ್ಟ್ ಜೊತೆಗೆ ಇಂಟರ್‌ನೆಟ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಪೋಸ್ಟ್ ಮಾಡಿರುವ ಅವಹೇಳನಕಾರಿ ವಿಡಿಯೋವನ್ನು ತಕ್ಷಣವೇ ಡಿಲಿಟ್ ಮಾಡಿಸಲು ಶ್ರೀನಿವಾಸ್ ಆಗ್ರಹಿಸಿದ್ದರು.

ಶ್ರೀನಿವಾಸ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಆಜ್‌ತಕ್‌, ರಾಹುಲ್ ಗಾಂಧಿ ಕುರಿತು ನಾವು ಯಾವುದೇ ದುರುದ್ದೇಶಪೂರ್ವಕ ಹೇಳಿಕೆ ನೀಡಿಲ್ಲ. ಅವರನ್ನು ದರೋಡೆ ಆರೋಪಿಯನ್ನಾಗಿ ಬಿಂಬಿಸಿಲ್ಲ ಎಂದಿತ್ತು. ಚಾನೆಲ್‌ನಲ್ಲಿ ಪ್ರಸಾರವಾದ ವಿಡಿಯೋದ ಸಂಪೂರ್ಣ ಅಂಶವು ಪ್ರಿಯಾಂಕಾ ಗಾಂಧಿಯವರು ಎಕ್ಸ್‌ನಲ್ಲಿ ಮಾಡಿರುವ ಪೋಸ್ಟನ್ನು ಆಧರಿಸಿತ್ತು ಎಂದು ಚಾನೆಲ್ ವಾದಿಸಿತ್ತು.

ಚಾನೆಲ್ ನಿರೂಪಕ ಪ್ರಿಯಾಂಕಾ ಗಾಂಧಿಯವ ಎಕ್ಸ್‌ ಪೋಸ್ಟ್‌ಗೆ ವಿಭಿನ್ನ ನಿರೂಪಣೆ ನೀಡಿದ್ದರೂ, ಪ್ರಿಯಾಂಕಾ ಗಾಂಧಿ ಮಾಡಿದ್ದ ಪೋಸ್ಟ್‌ಗಳನ್ನು ನಿಖರವಾಗಿ ಪ್ರಸಾರ ಮಾಡಿದ್ದಾರೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದರು ಎಂದು ಎನ್‌ಬಿಡಿಎಸ್‌ಎ ಗಮನಿಸಿದೆ.

ಚಾನೆಲ್‌ನಲ್ಲಿ ಪ್ರಸಾರವಾದ ಕಾಲ್ಪನಿಕ ವಿಡಿಯೋದಲ್ಲಿ ಚಿತ್ರಿಸಲಾದ ದರೋಡೆಕೋರನ ಕಥೆ ರಾಹುಲ್ ಗಾಂಧಿ ಮೇಲಿನ ಅಪರಾಧಕ್ಕೆ ಸಂಬಂಧಿಸಿದೆ. ವಿಡಿಯೋದಲ್ಲಿ ಮಾಡಲಾದ ಆರೋಪಗಳು ಉತ್ತಮ ಅಭಿರುಚಿಯಲ್ಲಿಲ್ಲ. ಹಾಗಾಗಿ, ಈ ರೀತಿಯ ಕಾರ್ಯಕ್ರಮಗಳನ್ನು ಪುನರಾವರ್ತಿಸಬಾರದು ಎಂದು ಎನ್‌ಬಿಡಿಎಸ್‌ಎ ಆಜ್‌ತಕ್‌ಗೆ ಹೇಳಿದೆ.

ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋವನ್ನು ತೆಗೆದು ಹಾಕುವಂತೆ ಸೂಚಿಸಿದೆ. ಮುಂದಿನ ಪ್ರಸಾರಗಳಲ್ಲಿ ಅಂತಹ ಕಾಲ್ಪನಿಕ ವಿಡಿಯೋಗಳನ್ನು ಪ್ರಸಾರ ಮಾಡುವಾಗ ಜಾಗರೂಕರಾಗಿರಿ ಎಂದು ಆಜ್‌ತಕ್‌ ಚಾನೆಲ್‌ಗೆ ನಿರ್ದೇಶಿಸಿದೆ.

ದೂರುದಾರರ ಪರ ವಕೀಲ ಕಪಿಲ್ ಮದನ್ ವಾದ ಮಂಡಿಸಿದ್ದರು.

ಇದನ್ನೂ ಓದಿ : ಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ ನೀಡಿದ ಎನ್‌ಬಿಡಿಎಸ್‌ಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...