Homeಮುಖಪುಟರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

ರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ‘ದರೋಡೆಕೋರ’ ಎಂದು ಬಿಂಬಿಸಿದ್ದ ಕಾಲ್ಪನಿಕ ವಿಡಿಯೋವನ್ನು ತೆಗೆದು ಹಾಕುವಂತೆ ಹಿಂದಿ ಸುದ್ದಿ ವಾಹಿನಿ ಆಜ್‌ತಕ್‌ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಗುರುವಾರ ನಿರ್ದೇಶನ ನೀಡಿದೆ.

ಕಾಲ್ಪನಿಕ ವಿಡಿಯೋ ಉತ್ತಮ ಅಭಿರುಚಿಯನ್ನು ಹೊಂದಿಲ್ಲ ಎಂದಿರುವ ಎನ್‌ಬಿಡಿಎಸ್‌ಎ, ತನ್ನ ಚಾನೆಲ್, ಯೂಟ್ಯೂಬ್ ಮತ್ತು ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋ ತೆಗೆದು ಹಾಕುವಂತೆ ಆಜ್‌ತಕ್‌ಗೆ ಆದೇಶಿಸಿದೆ.

ಮೋದಿ ಉಪನಾಮೆ ಹೇಳಿಕೆ ಕುರಿತ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2023ರ ಮಾರ್ಚ್ 23 ರಂದು ಗುಜರಾತ್‌ನ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ಆ ಬಳಿಕ ಮಾರ್ಚ್ 24, 2023ರಂದು ಪ್ರಸಾರವಾದ ‘ಬ್ಲ್ಯಾಕ್ ಅಂಡ್ ವೈಟ್’ ಎಂಬ ಶೋನಲ್ಲಿ ಆಜ್‌ತಕ್‌ ರಾಹುಲ್ ಗಾಂಧಿಯನ್ನು ದರೋಡೆಕೋರ ಎಂದು ಬಿಂಬಿಸಿತ್ತು.

ಮಾರ್ಚ್ 31,2023ರಂದು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅವರು ಆಜ್‌ತಕ್‌ ವಿರುದ್ಧ ಎನ್‌ಬಿಡಿಎಸ್‌ಎಗೆ ದೂರು ಸಲ್ಲಿಸಿದ್ದರು. ವಿವಾದಿತ ವಿಡಿಯೋವನ್ನು ಆಜ್‌ತಕ್‌ ಮೊದಲು ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿತ್ತು. ಬಳಿಕ ಬ್ಲ್ಯಾಕ್ ಅಂಡ್ ವೈಟ್ ಶೋನಲ್ಲಿ ಪ್ರಸಾರ ಮಾಡಿತ್ತು. ಈ ಕಾರ್ಯಕ್ರಮವನ್ನು ಆಜ್‌ತಕ್‌ನ ಸಲಹಾ ಸಂಪಾದಕ ಸುಧೀರ್ ಚೌಧರಿ ನಿರೂಪಿಸಿದ್ದರು ಎಂದು ಶ್ರೀನಿವಾಸ್ ಆರೋಪಿಸಿದ್ದರು.

ರಾಹುಲ್ ಗಾಂಧಿಯವರು ಮೋದಿ ಎಂಬ ಉಪನಾಮೆ ಬಳಸಿ ವಾಗ್ದಾಳಿ ನಡೆಸಿರುವುದು ನೀರವ್ ಮೋದಿಗೆ ಎಂಬುವುದು ಸುಧೀರ್ ಚೌಧರಿಗೆ ಚೆನ್ನಾಗಿ ಗೊತ್ತಿತ್ತು. ಆದರೂ, ದುರುದ್ದೇಶಪೂರ್ವಕವಾಗಿ ಯಾರೋ ದರೋಡೆ ಆರೋಪಿಗಳೊಂದಿಗೆ ರಾಹುಲ್ ಗಾಂಧಿಯವರನ್ನು ಹೋಲಿಕೆ ಮಾಡಿದ್ದರು. ಈ ಮೂಲಕ ರಾಹುಲ್ ಗಾಂಧಿ ಗಂಭೀರ ಅಪರಾಧ ಎಸಗಿದ್ದಾರೆ ಎಂಬ ಭಾವನೆಯನ್ನು ಜನರಲ್ಲಿ ಮೂಡಿಸಲು ಪ್ರಯತ್ನಿಸಲಾಗಿತ್ತು ಎಂದು ಶ್ರೀನಿವಾಸ್ ಹೇಳಿದ್ದರು.

ಆರೋಪಿಗಳು ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿಯವರ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ವಿಡಿಯೋ ಪ್ರಸಾರ ಮಾಡಿದ್ದರು. ನೇರವಾಗಿ ಕಾಂಗ್ರೆಸ್ ಪಕ್ಷ ಮತ್ತು ಭಾರತೀಯ ಯುವ ಕಾಂಗ್ರೆಸ್‌ನ ಪ್ರತಿಷ್ಠೆಯನ್ನು ಗುರಿಯಾಗಿಸಿಕೊಂಡು ಲಕ್ಷಾಂತರ ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದರು ಎಂದು ದೂರಿದ್ದರು.

ಈ ಸಂಬಂಧ ಆಜ್‌ತಕ್‌ ಚಾನೆಲ್‌ನಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಮತ್ತು ಟೆಲಿಕಾಸ್ಟ್ ಜೊತೆಗೆ ಇಂಟರ್‌ನೆಟ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಪೋಸ್ಟ್ ಮಾಡಿರುವ ಅವಹೇಳನಕಾರಿ ವಿಡಿಯೋವನ್ನು ತಕ್ಷಣವೇ ಡಿಲಿಟ್ ಮಾಡಿಸಲು ಶ್ರೀನಿವಾಸ್ ಆಗ್ರಹಿಸಿದ್ದರು.

ಶ್ರೀನಿವಾಸ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಆಜ್‌ತಕ್‌, ರಾಹುಲ್ ಗಾಂಧಿ ಕುರಿತು ನಾವು ಯಾವುದೇ ದುರುದ್ದೇಶಪೂರ್ವಕ ಹೇಳಿಕೆ ನೀಡಿಲ್ಲ. ಅವರನ್ನು ದರೋಡೆ ಆರೋಪಿಯನ್ನಾಗಿ ಬಿಂಬಿಸಿಲ್ಲ ಎಂದಿತ್ತು. ಚಾನೆಲ್‌ನಲ್ಲಿ ಪ್ರಸಾರವಾದ ವಿಡಿಯೋದ ಸಂಪೂರ್ಣ ಅಂಶವು ಪ್ರಿಯಾಂಕಾ ಗಾಂಧಿಯವರು ಎಕ್ಸ್‌ನಲ್ಲಿ ಮಾಡಿರುವ ಪೋಸ್ಟನ್ನು ಆಧರಿಸಿತ್ತು ಎಂದು ಚಾನೆಲ್ ವಾದಿಸಿತ್ತು.

ಚಾನೆಲ್ ನಿರೂಪಕ ಪ್ರಿಯಾಂಕಾ ಗಾಂಧಿಯವ ಎಕ್ಸ್‌ ಪೋಸ್ಟ್‌ಗೆ ವಿಭಿನ್ನ ನಿರೂಪಣೆ ನೀಡಿದ್ದರೂ, ಪ್ರಿಯಾಂಕಾ ಗಾಂಧಿ ಮಾಡಿದ್ದ ಪೋಸ್ಟ್‌ಗಳನ್ನು ನಿಖರವಾಗಿ ಪ್ರಸಾರ ಮಾಡಿದ್ದಾರೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದರು ಎಂದು ಎನ್‌ಬಿಡಿಎಸ್‌ಎ ಗಮನಿಸಿದೆ.

ಚಾನೆಲ್‌ನಲ್ಲಿ ಪ್ರಸಾರವಾದ ಕಾಲ್ಪನಿಕ ವಿಡಿಯೋದಲ್ಲಿ ಚಿತ್ರಿಸಲಾದ ದರೋಡೆಕೋರನ ಕಥೆ ರಾಹುಲ್ ಗಾಂಧಿ ಮೇಲಿನ ಅಪರಾಧಕ್ಕೆ ಸಂಬಂಧಿಸಿದೆ. ವಿಡಿಯೋದಲ್ಲಿ ಮಾಡಲಾದ ಆರೋಪಗಳು ಉತ್ತಮ ಅಭಿರುಚಿಯಲ್ಲಿಲ್ಲ. ಹಾಗಾಗಿ, ಈ ರೀತಿಯ ಕಾರ್ಯಕ್ರಮಗಳನ್ನು ಪುನರಾವರ್ತಿಸಬಾರದು ಎಂದು ಎನ್‌ಬಿಡಿಎಸ್‌ಎ ಆಜ್‌ತಕ್‌ಗೆ ಹೇಳಿದೆ.

ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋವನ್ನು ತೆಗೆದು ಹಾಕುವಂತೆ ಸೂಚಿಸಿದೆ. ಮುಂದಿನ ಪ್ರಸಾರಗಳಲ್ಲಿ ಅಂತಹ ಕಾಲ್ಪನಿಕ ವಿಡಿಯೋಗಳನ್ನು ಪ್ರಸಾರ ಮಾಡುವಾಗ ಜಾಗರೂಕರಾಗಿರಿ ಎಂದು ಆಜ್‌ತಕ್‌ ಚಾನೆಲ್‌ಗೆ ನಿರ್ದೇಶಿಸಿದೆ.

ದೂರುದಾರರ ಪರ ವಕೀಲ ಕಪಿಲ್ ಮದನ್ ವಾದ ಮಂಡಿಸಿದ್ದರು.

ಇದನ್ನೂ ಓದಿ : ಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ ನೀಡಿದ ಎನ್‌ಬಿಡಿಎಸ್‌ಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...