Homeಮುಖಪುಟಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ...

ಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ ಎನ್‌ಬಿಡಿಎಸ್ಎ ಸೂಚನೆ

- Advertisement -
- Advertisement -

‘ಮೌಢ್ಯ ಬಿತ್ತುವ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ’ ತರುವ ಕಾರಣಕ್ಕೆ ಬಾಗೇಶ್ವರ್ ಬಾಬಾ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಶಾಸ್ತ್ರಿಯ ಸಂದರ್ಶನ ತೆಗೆದು ಹಾಕುವಂತೆ ಸುದ್ದಿವಾಹಿನಿ ನ್ಯೂಸ್ 18 ಇಂಡಿಯಾಗೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಬುಧವಾರ (ನ.6) ಸೂಚಿಸಿದೆ.

ಕಳೆದ ವರ್ಷ ಜುಲೈ 10 ರಂದು ಪ್ರಸಾರವಾದ ಸಂದರ್ಶನವನ್ನು ಎಲ್ಲಾ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ಒಂದು ವಾರದೊಳಗೆ ತೆಗೆದು ಹಾಕುವಂತೆ ಎನ್‌ಬಿಡಿಎಸ್‌ಎ ಸೂಚನೆ ನೀಡಿದೆ.

ಈ ಹಿಂದೆ ಸುದ್ದಿ ವಾಹಿನಿಗಳ ವಿರುದ್ಧ ಹಲವು ದೂರುಗಳನ್ನು ಸಲ್ಲಿಸಿರುವ ಪುಣೆ ಮೂಲದ ಟೆಕ್ಕಿ ಮತ್ತು ಹೋರಾಟಗಾರ ಇಂದ್ರಜೀತ್ ಘೋರ್ಪಡೆ ಅವರು ವಿಡಿಯೋ ವಿರುದ್ಧ ದೂರು ನೀಡಿದ್ದರು. ದೂರನ್ನು ಆಲಿಸಿದ ಎನ್‌ಬಿಡಿಎಸ್‌ಎ ​​ಈ ನಿರ್ಧಾರ ಕೈಗೊಂಡಿದೆ.

ದೂರಿನಲ್ಲಿ ನ್ಯೂಸ್‌ 18 ಮ್ಯಾನೇಜಿಂಗ್ ಎಡಿಟರ್ ಕಿಶೋರ್ ಅಜ್ವಾನಿ ಜೊತೆಗಿನ ಶಾಸ್ತ್ರಿ ಅವರ ಸಂದರ್ಶನವು ಹಿಂದೂ ರಾಷ್ಟ್ರದ ಕಲ್ಪನೆ, ಲವ್ ಜಿಹಾದ್ ಪಿತೂರಿ ಸಿದ್ಧಾಂತ ಮತ್ತು ಮೂಢನಂಬಿಕೆಯನ್ನು ಪ್ರಚಾರ ಮಾಡಿದೆ. ಅಲ್ಲದೆ, “ನಾನು ವಜ್ರ ಹುಡುಕುತ್ತೇನೆ, ಚುನಾವಣಾ ಸಮೀಕ್ಷೆಗಳನ್ನು ಊಹಿಸುತ್ತೇನೆ ಮತ್ತು ಅಲೌಕಿಕ ಶಕ್ತಿಗಳ ಮೂಲಕ ಜನರನ್ನು ಗುಣಪಡಿಸುತ್ತೇನೆ” ಎಂದು ಹೇಳುವ ಮೂಲಕ ಧೀರೇಂದ್ರ ಶಾಸ್ತ್ರಿ ಮೌಢ್ಯ ಬಿತ್ತಿದ್ದಾರೆ” ಎಂದು ಆರೋಪಿಸಲಾಗಿತ್ತು.

ಧೀರೇಂದ್ರ ಶಾಸ್ತ್ರಿಯ ಹೇಳಿಕೆಗಳಿಗೆ ತಾನು ಜವಾಬ್ದಾರನಲ್ಲ ಎಂದು ಸುದ್ದಿವಾಹಿನಿ ಹೇಳಿದೆ. ಆದರೆ, ಎನ್‌ಬಿಡಿಎಸ್‌ಎ ಮಾರ್ಗಸೂಚಿ ಮತ್ತು ಬಾಂಬೆ ಹೈಕೋರ್ಟ್ ತೀರ್ಪಿನ ಪ್ರಕಾರ ಕಾರ್ಯಕ್ರಮ ಆಹ್ವಾನಿತರು ನೀಡುವ ಹೇಳಿಕೆಗಳಿಗೆ ಸುದ್ದಿವಾಹಿನಿಗಳು ಜವಾಬ್ದಾರಿಯಾಗಿರುತ್ತದೆ. ಆದ್ದರಿಂದ ಕೋಮು ದಳ್ಳುರಿಗೆ ಕಾರಣವಾಗುವ ಹೇಳಿಕೆ ನೀಡುವಂತಹವರನ್ನು ಆಹ್ವಾನಿಸುವುದನ್ನು ತಪ್ಪಿಸಬೇಕು. ಪ್ರಸಾರಕರೇ ಇಂತಹ ಹೇಳಿಕೆಗಳಿಗೆ ಜವಾಬ್ದಾರಿ ಎಂಬುವುದನ್ನು ಸಾರಲು ಪ್ರಸಾರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿತ್ತು.

ಸಂದರ್ಶನದಲ್ಲಿ ಮೌಢ್ಯವನ್ನು ಉತ್ತೇಜಿಸುವಂತಹ ಹಲವು ನಿಲುವುಗಳನ್ನು ಧೀರೇಂದ್ರ ಶಾಸ್ತ್ರಿ ಮಾಡಿದ್ದು, ಹಿಂದೂ ರಾಷ್ಟ್ರ ಮತ್ತು ಧರ್ಮದ ಬಗ್ಗೆ ಹಲವಾರು ಹೇಳಿಕೆಗಳನ್ನು ನೀಡಲಾಗಿದೆ. ಇದು ಸ್ವಭಾವತಃ ವಿಭಜನಕಾರಿಯಾಗಿದ್ದು, ಭಾರತದಲ್ಲಿ ವಾಸಿಸಲು “ಸೀತಾ ರಾಮ್” ಎಂದು ಹೇಳುವುದು ಕಡ್ಡಾಯ. ಅಲ್ಲದೆ, ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿಯರನ್ನು ಸಿಲುಕಿಸಿ ನಂತರ ಅವರನ್ನು ಕೊಲ್ಲುವಂತೆ ಇಸ್ಲಾಂ ಧರ್ಮ ಹೇಳುತ್ತದೆ ಎಂಬುವುದಾಗಿ ಅವರು ಹೇಳಿದ್ದರು ಎಂದು ಎನ್‌ಬಿಡಿಎಸ್‌ಎ ಅಧ್ಯಕ್ಷ (ನಿವೃತ್ತ) ನ್ಯಾಯಮೂರ್ತಿ ಎ ಕೆ ಸಿಕ್ರಿ ತಿಳಿಸಿದ್ದಾರೆ.

ಅಂತಹ ವ್ಯಕ್ತಿಯನ್ನು ಸಂದರ್ಶನಕ್ಕೆ ಆಹ್ವಾನಿಸಿದ್ದೇಕೆ? ಎಂದು ಎನ್‌ಬಿಡಿಎಸ್‌ಎ ನ್ಯೂಸ್‌ 18 ಅನ್ನು ಪ್ರಶ್ನಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯೂಸ್‌ 18, ಶಾಸ್ತ್ರಿ ಅವರು ತಿಂಗಳುಗಳ ಕಾಲ ಪ್ರಮುಖ ಸುದ್ದಿ ವ್ಯಕ್ತಿಯಾಗಿದ್ದರು. ಬಿಹಾರದ ರಾಜಕಾರಣಿ ತೇಜ್ ಪ್ರತಾಪ್ ಯಾದವ್ ಅವರಿಂದ ಬೆದರಿಕೆ ಎದುರಿಸಿದ್ದರು. ಅವರ ಪ್ರಸಾರಕ್ಕೆ ಗಮನಾರ್ಹ ಸುದ್ದಿ ಮೌಲ್ಯವನ್ನು ಒದಗಿಸಿದ್ದರು. ಕಾರ್ಯಕ್ರಮ ನಿರೂಪಕರು ಕೋಮುವಾದಿ ಹೇಳಿಕೆಗಳನ್ನು ತಡೆಯಲು ಯತ್ನಿಸಿದ್ದರು ಎಂದು ಸಮಜಾಯಿಸಿ ನೀಡಿತ್ತು.

ಇದನ್ನೂ ಓದಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...