Homeಮುಖಪುಟಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ...

ಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ ಎನ್‌ಬಿಡಿಎಸ್ಎ ಸೂಚನೆ

- Advertisement -
- Advertisement -

‘ಮೌಢ್ಯ ಬಿತ್ತುವ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ’ ತರುವ ಕಾರಣಕ್ಕೆ ಬಾಗೇಶ್ವರ್ ಬಾಬಾ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಶಾಸ್ತ್ರಿಯ ಸಂದರ್ಶನ ತೆಗೆದು ಹಾಕುವಂತೆ ಸುದ್ದಿವಾಹಿನಿ ನ್ಯೂಸ್ 18 ಇಂಡಿಯಾಗೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಬುಧವಾರ (ನ.6) ಸೂಚಿಸಿದೆ.

ಕಳೆದ ವರ್ಷ ಜುಲೈ 10 ರಂದು ಪ್ರಸಾರವಾದ ಸಂದರ್ಶನವನ್ನು ಎಲ್ಲಾ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ಒಂದು ವಾರದೊಳಗೆ ತೆಗೆದು ಹಾಕುವಂತೆ ಎನ್‌ಬಿಡಿಎಸ್‌ಎ ಸೂಚನೆ ನೀಡಿದೆ.

ಈ ಹಿಂದೆ ಸುದ್ದಿ ವಾಹಿನಿಗಳ ವಿರುದ್ಧ ಹಲವು ದೂರುಗಳನ್ನು ಸಲ್ಲಿಸಿರುವ ಪುಣೆ ಮೂಲದ ಟೆಕ್ಕಿ ಮತ್ತು ಹೋರಾಟಗಾರ ಇಂದ್ರಜೀತ್ ಘೋರ್ಪಡೆ ಅವರು ವಿಡಿಯೋ ವಿರುದ್ಧ ದೂರು ನೀಡಿದ್ದರು. ದೂರನ್ನು ಆಲಿಸಿದ ಎನ್‌ಬಿಡಿಎಸ್‌ಎ ​​ಈ ನಿರ್ಧಾರ ಕೈಗೊಂಡಿದೆ.

ದೂರಿನಲ್ಲಿ ನ್ಯೂಸ್‌ 18 ಮ್ಯಾನೇಜಿಂಗ್ ಎಡಿಟರ್ ಕಿಶೋರ್ ಅಜ್ವಾನಿ ಜೊತೆಗಿನ ಶಾಸ್ತ್ರಿ ಅವರ ಸಂದರ್ಶನವು ಹಿಂದೂ ರಾಷ್ಟ್ರದ ಕಲ್ಪನೆ, ಲವ್ ಜಿಹಾದ್ ಪಿತೂರಿ ಸಿದ್ಧಾಂತ ಮತ್ತು ಮೂಢನಂಬಿಕೆಯನ್ನು ಪ್ರಚಾರ ಮಾಡಿದೆ. ಅಲ್ಲದೆ, “ನಾನು ವಜ್ರ ಹುಡುಕುತ್ತೇನೆ, ಚುನಾವಣಾ ಸಮೀಕ್ಷೆಗಳನ್ನು ಊಹಿಸುತ್ತೇನೆ ಮತ್ತು ಅಲೌಕಿಕ ಶಕ್ತಿಗಳ ಮೂಲಕ ಜನರನ್ನು ಗುಣಪಡಿಸುತ್ತೇನೆ” ಎಂದು ಹೇಳುವ ಮೂಲಕ ಧೀರೇಂದ್ರ ಶಾಸ್ತ್ರಿ ಮೌಢ್ಯ ಬಿತ್ತಿದ್ದಾರೆ” ಎಂದು ಆರೋಪಿಸಲಾಗಿತ್ತು.

ಧೀರೇಂದ್ರ ಶಾಸ್ತ್ರಿಯ ಹೇಳಿಕೆಗಳಿಗೆ ತಾನು ಜವಾಬ್ದಾರನಲ್ಲ ಎಂದು ಸುದ್ದಿವಾಹಿನಿ ಹೇಳಿದೆ. ಆದರೆ, ಎನ್‌ಬಿಡಿಎಸ್‌ಎ ಮಾರ್ಗಸೂಚಿ ಮತ್ತು ಬಾಂಬೆ ಹೈಕೋರ್ಟ್ ತೀರ್ಪಿನ ಪ್ರಕಾರ ಕಾರ್ಯಕ್ರಮ ಆಹ್ವಾನಿತರು ನೀಡುವ ಹೇಳಿಕೆಗಳಿಗೆ ಸುದ್ದಿವಾಹಿನಿಗಳು ಜವಾಬ್ದಾರಿಯಾಗಿರುತ್ತದೆ. ಆದ್ದರಿಂದ ಕೋಮು ದಳ್ಳುರಿಗೆ ಕಾರಣವಾಗುವ ಹೇಳಿಕೆ ನೀಡುವಂತಹವರನ್ನು ಆಹ್ವಾನಿಸುವುದನ್ನು ತಪ್ಪಿಸಬೇಕು. ಪ್ರಸಾರಕರೇ ಇಂತಹ ಹೇಳಿಕೆಗಳಿಗೆ ಜವಾಬ್ದಾರಿ ಎಂಬುವುದನ್ನು ಸಾರಲು ಪ್ರಸಾರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿತ್ತು.

ಸಂದರ್ಶನದಲ್ಲಿ ಮೌಢ್ಯವನ್ನು ಉತ್ತೇಜಿಸುವಂತಹ ಹಲವು ನಿಲುವುಗಳನ್ನು ಧೀರೇಂದ್ರ ಶಾಸ್ತ್ರಿ ಮಾಡಿದ್ದು, ಹಿಂದೂ ರಾಷ್ಟ್ರ ಮತ್ತು ಧರ್ಮದ ಬಗ್ಗೆ ಹಲವಾರು ಹೇಳಿಕೆಗಳನ್ನು ನೀಡಲಾಗಿದೆ. ಇದು ಸ್ವಭಾವತಃ ವಿಭಜನಕಾರಿಯಾಗಿದ್ದು, ಭಾರತದಲ್ಲಿ ವಾಸಿಸಲು “ಸೀತಾ ರಾಮ್” ಎಂದು ಹೇಳುವುದು ಕಡ್ಡಾಯ. ಅಲ್ಲದೆ, ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿಯರನ್ನು ಸಿಲುಕಿಸಿ ನಂತರ ಅವರನ್ನು ಕೊಲ್ಲುವಂತೆ ಇಸ್ಲಾಂ ಧರ್ಮ ಹೇಳುತ್ತದೆ ಎಂಬುವುದಾಗಿ ಅವರು ಹೇಳಿದ್ದರು ಎಂದು ಎನ್‌ಬಿಡಿಎಸ್‌ಎ ಅಧ್ಯಕ್ಷ (ನಿವೃತ್ತ) ನ್ಯಾಯಮೂರ್ತಿ ಎ ಕೆ ಸಿಕ್ರಿ ತಿಳಿಸಿದ್ದಾರೆ.

ಅಂತಹ ವ್ಯಕ್ತಿಯನ್ನು ಸಂದರ್ಶನಕ್ಕೆ ಆಹ್ವಾನಿಸಿದ್ದೇಕೆ? ಎಂದು ಎನ್‌ಬಿಡಿಎಸ್‌ಎ ನ್ಯೂಸ್‌ 18 ಅನ್ನು ಪ್ರಶ್ನಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯೂಸ್‌ 18, ಶಾಸ್ತ್ರಿ ಅವರು ತಿಂಗಳುಗಳ ಕಾಲ ಪ್ರಮುಖ ಸುದ್ದಿ ವ್ಯಕ್ತಿಯಾಗಿದ್ದರು. ಬಿಹಾರದ ರಾಜಕಾರಣಿ ತೇಜ್ ಪ್ರತಾಪ್ ಯಾದವ್ ಅವರಿಂದ ಬೆದರಿಕೆ ಎದುರಿಸಿದ್ದರು. ಅವರ ಪ್ರಸಾರಕ್ಕೆ ಗಮನಾರ್ಹ ಸುದ್ದಿ ಮೌಲ್ಯವನ್ನು ಒದಗಿಸಿದ್ದರು. ಕಾರ್ಯಕ್ರಮ ನಿರೂಪಕರು ಕೋಮುವಾದಿ ಹೇಳಿಕೆಗಳನ್ನು ತಡೆಯಲು ಯತ್ನಿಸಿದ್ದರು ಎಂದು ಸಮಜಾಯಿಸಿ ನೀಡಿತ್ತು.

ಇದನ್ನೂ ಓದಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...