Homeಮುಖಪುಟಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ...

ಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ ಎನ್‌ಬಿಡಿಎಸ್ಎ ಸೂಚನೆ

- Advertisement -
- Advertisement -

‘ಮೌಢ್ಯ ಬಿತ್ತುವ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ’ ತರುವ ಕಾರಣಕ್ಕೆ ಬಾಗೇಶ್ವರ್ ಬಾಬಾ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಶಾಸ್ತ್ರಿಯ ಸಂದರ್ಶನ ತೆಗೆದು ಹಾಕುವಂತೆ ಸುದ್ದಿವಾಹಿನಿ ನ್ಯೂಸ್ 18 ಇಂಡಿಯಾಗೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಬುಧವಾರ (ನ.6) ಸೂಚಿಸಿದೆ.

ಕಳೆದ ವರ್ಷ ಜುಲೈ 10 ರಂದು ಪ್ರಸಾರವಾದ ಸಂದರ್ಶನವನ್ನು ಎಲ್ಲಾ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ಒಂದು ವಾರದೊಳಗೆ ತೆಗೆದು ಹಾಕುವಂತೆ ಎನ್‌ಬಿಡಿಎಸ್‌ಎ ಸೂಚನೆ ನೀಡಿದೆ.

ಈ ಹಿಂದೆ ಸುದ್ದಿ ವಾಹಿನಿಗಳ ವಿರುದ್ಧ ಹಲವು ದೂರುಗಳನ್ನು ಸಲ್ಲಿಸಿರುವ ಪುಣೆ ಮೂಲದ ಟೆಕ್ಕಿ ಮತ್ತು ಹೋರಾಟಗಾರ ಇಂದ್ರಜೀತ್ ಘೋರ್ಪಡೆ ಅವರು ವಿಡಿಯೋ ವಿರುದ್ಧ ದೂರು ನೀಡಿದ್ದರು. ದೂರನ್ನು ಆಲಿಸಿದ ಎನ್‌ಬಿಡಿಎಸ್‌ಎ ​​ಈ ನಿರ್ಧಾರ ಕೈಗೊಂಡಿದೆ.

ದೂರಿನಲ್ಲಿ ನ್ಯೂಸ್‌ 18 ಮ್ಯಾನೇಜಿಂಗ್ ಎಡಿಟರ್ ಕಿಶೋರ್ ಅಜ್ವಾನಿ ಜೊತೆಗಿನ ಶಾಸ್ತ್ರಿ ಅವರ ಸಂದರ್ಶನವು ಹಿಂದೂ ರಾಷ್ಟ್ರದ ಕಲ್ಪನೆ, ಲವ್ ಜಿಹಾದ್ ಪಿತೂರಿ ಸಿದ್ಧಾಂತ ಮತ್ತು ಮೂಢನಂಬಿಕೆಯನ್ನು ಪ್ರಚಾರ ಮಾಡಿದೆ. ಅಲ್ಲದೆ, “ನಾನು ವಜ್ರ ಹುಡುಕುತ್ತೇನೆ, ಚುನಾವಣಾ ಸಮೀಕ್ಷೆಗಳನ್ನು ಊಹಿಸುತ್ತೇನೆ ಮತ್ತು ಅಲೌಕಿಕ ಶಕ್ತಿಗಳ ಮೂಲಕ ಜನರನ್ನು ಗುಣಪಡಿಸುತ್ತೇನೆ” ಎಂದು ಹೇಳುವ ಮೂಲಕ ಧೀರೇಂದ್ರ ಶಾಸ್ತ್ರಿ ಮೌಢ್ಯ ಬಿತ್ತಿದ್ದಾರೆ” ಎಂದು ಆರೋಪಿಸಲಾಗಿತ್ತು.

ಧೀರೇಂದ್ರ ಶಾಸ್ತ್ರಿಯ ಹೇಳಿಕೆಗಳಿಗೆ ತಾನು ಜವಾಬ್ದಾರನಲ್ಲ ಎಂದು ಸುದ್ದಿವಾಹಿನಿ ಹೇಳಿದೆ. ಆದರೆ, ಎನ್‌ಬಿಡಿಎಸ್‌ಎ ಮಾರ್ಗಸೂಚಿ ಮತ್ತು ಬಾಂಬೆ ಹೈಕೋರ್ಟ್ ತೀರ್ಪಿನ ಪ್ರಕಾರ ಕಾರ್ಯಕ್ರಮ ಆಹ್ವಾನಿತರು ನೀಡುವ ಹೇಳಿಕೆಗಳಿಗೆ ಸುದ್ದಿವಾಹಿನಿಗಳು ಜವಾಬ್ದಾರಿಯಾಗಿರುತ್ತದೆ. ಆದ್ದರಿಂದ ಕೋಮು ದಳ್ಳುರಿಗೆ ಕಾರಣವಾಗುವ ಹೇಳಿಕೆ ನೀಡುವಂತಹವರನ್ನು ಆಹ್ವಾನಿಸುವುದನ್ನು ತಪ್ಪಿಸಬೇಕು. ಪ್ರಸಾರಕರೇ ಇಂತಹ ಹೇಳಿಕೆಗಳಿಗೆ ಜವಾಬ್ದಾರಿ ಎಂಬುವುದನ್ನು ಸಾರಲು ಪ್ರಸಾರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿತ್ತು.

ಸಂದರ್ಶನದಲ್ಲಿ ಮೌಢ್ಯವನ್ನು ಉತ್ತೇಜಿಸುವಂತಹ ಹಲವು ನಿಲುವುಗಳನ್ನು ಧೀರೇಂದ್ರ ಶಾಸ್ತ್ರಿ ಮಾಡಿದ್ದು, ಹಿಂದೂ ರಾಷ್ಟ್ರ ಮತ್ತು ಧರ್ಮದ ಬಗ್ಗೆ ಹಲವಾರು ಹೇಳಿಕೆಗಳನ್ನು ನೀಡಲಾಗಿದೆ. ಇದು ಸ್ವಭಾವತಃ ವಿಭಜನಕಾರಿಯಾಗಿದ್ದು, ಭಾರತದಲ್ಲಿ ವಾಸಿಸಲು “ಸೀತಾ ರಾಮ್” ಎಂದು ಹೇಳುವುದು ಕಡ್ಡಾಯ. ಅಲ್ಲದೆ, ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿಯರನ್ನು ಸಿಲುಕಿಸಿ ನಂತರ ಅವರನ್ನು ಕೊಲ್ಲುವಂತೆ ಇಸ್ಲಾಂ ಧರ್ಮ ಹೇಳುತ್ತದೆ ಎಂಬುವುದಾಗಿ ಅವರು ಹೇಳಿದ್ದರು ಎಂದು ಎನ್‌ಬಿಡಿಎಸ್‌ಎ ಅಧ್ಯಕ್ಷ (ನಿವೃತ್ತ) ನ್ಯಾಯಮೂರ್ತಿ ಎ ಕೆ ಸಿಕ್ರಿ ತಿಳಿಸಿದ್ದಾರೆ.

ಅಂತಹ ವ್ಯಕ್ತಿಯನ್ನು ಸಂದರ್ಶನಕ್ಕೆ ಆಹ್ವಾನಿಸಿದ್ದೇಕೆ? ಎಂದು ಎನ್‌ಬಿಡಿಎಸ್‌ಎ ನ್ಯೂಸ್‌ 18 ಅನ್ನು ಪ್ರಶ್ನಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯೂಸ್‌ 18, ಶಾಸ್ತ್ರಿ ಅವರು ತಿಂಗಳುಗಳ ಕಾಲ ಪ್ರಮುಖ ಸುದ್ದಿ ವ್ಯಕ್ತಿಯಾಗಿದ್ದರು. ಬಿಹಾರದ ರಾಜಕಾರಣಿ ತೇಜ್ ಪ್ರತಾಪ್ ಯಾದವ್ ಅವರಿಂದ ಬೆದರಿಕೆ ಎದುರಿಸಿದ್ದರು. ಅವರ ಪ್ರಸಾರಕ್ಕೆ ಗಮನಾರ್ಹ ಸುದ್ದಿ ಮೌಲ್ಯವನ್ನು ಒದಗಿಸಿದ್ದರು. ಕಾರ್ಯಕ್ರಮ ನಿರೂಪಕರು ಕೋಮುವಾದಿ ಹೇಳಿಕೆಗಳನ್ನು ತಡೆಯಲು ಯತ್ನಿಸಿದ್ದರು ಎಂದು ಸಮಜಾಯಿಸಿ ನೀಡಿತ್ತು.

ಇದನ್ನೂ ಓದಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...