Homeಮುಖಪುಟಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ...

ಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ ಎನ್‌ಬಿಡಿಎಸ್ಎ ಸೂಚನೆ

- Advertisement -
- Advertisement -

‘ಮೌಢ್ಯ ಬಿತ್ತುವ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ’ ತರುವ ಕಾರಣಕ್ಕೆ ಬಾಗೇಶ್ವರ್ ಬಾಬಾ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಶಾಸ್ತ್ರಿಯ ಸಂದರ್ಶನ ತೆಗೆದು ಹಾಕುವಂತೆ ಸುದ್ದಿವಾಹಿನಿ ನ್ಯೂಸ್ 18 ಇಂಡಿಯಾಗೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಬುಧವಾರ (ನ.6) ಸೂಚಿಸಿದೆ.

ಕಳೆದ ವರ್ಷ ಜುಲೈ 10 ರಂದು ಪ್ರಸಾರವಾದ ಸಂದರ್ಶನವನ್ನು ಎಲ್ಲಾ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ಒಂದು ವಾರದೊಳಗೆ ತೆಗೆದು ಹಾಕುವಂತೆ ಎನ್‌ಬಿಡಿಎಸ್‌ಎ ಸೂಚನೆ ನೀಡಿದೆ.

ಈ ಹಿಂದೆ ಸುದ್ದಿ ವಾಹಿನಿಗಳ ವಿರುದ್ಧ ಹಲವು ದೂರುಗಳನ್ನು ಸಲ್ಲಿಸಿರುವ ಪುಣೆ ಮೂಲದ ಟೆಕ್ಕಿ ಮತ್ತು ಹೋರಾಟಗಾರ ಇಂದ್ರಜೀತ್ ಘೋರ್ಪಡೆ ಅವರು ವಿಡಿಯೋ ವಿರುದ್ಧ ದೂರು ನೀಡಿದ್ದರು. ದೂರನ್ನು ಆಲಿಸಿದ ಎನ್‌ಬಿಡಿಎಸ್‌ಎ ​​ಈ ನಿರ್ಧಾರ ಕೈಗೊಂಡಿದೆ.

ದೂರಿನಲ್ಲಿ ನ್ಯೂಸ್‌ 18 ಮ್ಯಾನೇಜಿಂಗ್ ಎಡಿಟರ್ ಕಿಶೋರ್ ಅಜ್ವಾನಿ ಜೊತೆಗಿನ ಶಾಸ್ತ್ರಿ ಅವರ ಸಂದರ್ಶನವು ಹಿಂದೂ ರಾಷ್ಟ್ರದ ಕಲ್ಪನೆ, ಲವ್ ಜಿಹಾದ್ ಪಿತೂರಿ ಸಿದ್ಧಾಂತ ಮತ್ತು ಮೂಢನಂಬಿಕೆಯನ್ನು ಪ್ರಚಾರ ಮಾಡಿದೆ. ಅಲ್ಲದೆ, “ನಾನು ವಜ್ರ ಹುಡುಕುತ್ತೇನೆ, ಚುನಾವಣಾ ಸಮೀಕ್ಷೆಗಳನ್ನು ಊಹಿಸುತ್ತೇನೆ ಮತ್ತು ಅಲೌಕಿಕ ಶಕ್ತಿಗಳ ಮೂಲಕ ಜನರನ್ನು ಗುಣಪಡಿಸುತ್ತೇನೆ” ಎಂದು ಹೇಳುವ ಮೂಲಕ ಧೀರೇಂದ್ರ ಶಾಸ್ತ್ರಿ ಮೌಢ್ಯ ಬಿತ್ತಿದ್ದಾರೆ” ಎಂದು ಆರೋಪಿಸಲಾಗಿತ್ತು.

ಧೀರೇಂದ್ರ ಶಾಸ್ತ್ರಿಯ ಹೇಳಿಕೆಗಳಿಗೆ ತಾನು ಜವಾಬ್ದಾರನಲ್ಲ ಎಂದು ಸುದ್ದಿವಾಹಿನಿ ಹೇಳಿದೆ. ಆದರೆ, ಎನ್‌ಬಿಡಿಎಸ್‌ಎ ಮಾರ್ಗಸೂಚಿ ಮತ್ತು ಬಾಂಬೆ ಹೈಕೋರ್ಟ್ ತೀರ್ಪಿನ ಪ್ರಕಾರ ಕಾರ್ಯಕ್ರಮ ಆಹ್ವಾನಿತರು ನೀಡುವ ಹೇಳಿಕೆಗಳಿಗೆ ಸುದ್ದಿವಾಹಿನಿಗಳು ಜವಾಬ್ದಾರಿಯಾಗಿರುತ್ತದೆ. ಆದ್ದರಿಂದ ಕೋಮು ದಳ್ಳುರಿಗೆ ಕಾರಣವಾಗುವ ಹೇಳಿಕೆ ನೀಡುವಂತಹವರನ್ನು ಆಹ್ವಾನಿಸುವುದನ್ನು ತಪ್ಪಿಸಬೇಕು. ಪ್ರಸಾರಕರೇ ಇಂತಹ ಹೇಳಿಕೆಗಳಿಗೆ ಜವಾಬ್ದಾರಿ ಎಂಬುವುದನ್ನು ಸಾರಲು ಪ್ರಸಾರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿತ್ತು.

ಸಂದರ್ಶನದಲ್ಲಿ ಮೌಢ್ಯವನ್ನು ಉತ್ತೇಜಿಸುವಂತಹ ಹಲವು ನಿಲುವುಗಳನ್ನು ಧೀರೇಂದ್ರ ಶಾಸ್ತ್ರಿ ಮಾಡಿದ್ದು, ಹಿಂದೂ ರಾಷ್ಟ್ರ ಮತ್ತು ಧರ್ಮದ ಬಗ್ಗೆ ಹಲವಾರು ಹೇಳಿಕೆಗಳನ್ನು ನೀಡಲಾಗಿದೆ. ಇದು ಸ್ವಭಾವತಃ ವಿಭಜನಕಾರಿಯಾಗಿದ್ದು, ಭಾರತದಲ್ಲಿ ವಾಸಿಸಲು “ಸೀತಾ ರಾಮ್” ಎಂದು ಹೇಳುವುದು ಕಡ್ಡಾಯ. ಅಲ್ಲದೆ, ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿಯರನ್ನು ಸಿಲುಕಿಸಿ ನಂತರ ಅವರನ್ನು ಕೊಲ್ಲುವಂತೆ ಇಸ್ಲಾಂ ಧರ್ಮ ಹೇಳುತ್ತದೆ ಎಂಬುವುದಾಗಿ ಅವರು ಹೇಳಿದ್ದರು ಎಂದು ಎನ್‌ಬಿಡಿಎಸ್‌ಎ ಅಧ್ಯಕ್ಷ (ನಿವೃತ್ತ) ನ್ಯಾಯಮೂರ್ತಿ ಎ ಕೆ ಸಿಕ್ರಿ ತಿಳಿಸಿದ್ದಾರೆ.

ಅಂತಹ ವ್ಯಕ್ತಿಯನ್ನು ಸಂದರ್ಶನಕ್ಕೆ ಆಹ್ವಾನಿಸಿದ್ದೇಕೆ? ಎಂದು ಎನ್‌ಬಿಡಿಎಸ್‌ಎ ನ್ಯೂಸ್‌ 18 ಅನ್ನು ಪ್ರಶ್ನಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯೂಸ್‌ 18, ಶಾಸ್ತ್ರಿ ಅವರು ತಿಂಗಳುಗಳ ಕಾಲ ಪ್ರಮುಖ ಸುದ್ದಿ ವ್ಯಕ್ತಿಯಾಗಿದ್ದರು. ಬಿಹಾರದ ರಾಜಕಾರಣಿ ತೇಜ್ ಪ್ರತಾಪ್ ಯಾದವ್ ಅವರಿಂದ ಬೆದರಿಕೆ ಎದುರಿಸಿದ್ದರು. ಅವರ ಪ್ರಸಾರಕ್ಕೆ ಗಮನಾರ್ಹ ಸುದ್ದಿ ಮೌಲ್ಯವನ್ನು ಒದಗಿಸಿದ್ದರು. ಕಾರ್ಯಕ್ರಮ ನಿರೂಪಕರು ಕೋಮುವಾದಿ ಹೇಳಿಕೆಗಳನ್ನು ತಡೆಯಲು ಯತ್ನಿಸಿದ್ದರು ಎಂದು ಸಮಜಾಯಿಸಿ ನೀಡಿತ್ತು.

ಇದನ್ನೂ ಓದಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...