Homeಮುಖಪುಟಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ...

ಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ ಎನ್‌ಬಿಡಿಎಸ್ಎ ಸೂಚನೆ

- Advertisement -
- Advertisement -

‘ಮೌಢ್ಯ ಬಿತ್ತುವ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ’ ತರುವ ಕಾರಣಕ್ಕೆ ಬಾಗೇಶ್ವರ್ ಬಾಬಾ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಶಾಸ್ತ್ರಿಯ ಸಂದರ್ಶನ ತೆಗೆದು ಹಾಕುವಂತೆ ಸುದ್ದಿವಾಹಿನಿ ನ್ಯೂಸ್ 18 ಇಂಡಿಯಾಗೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಬುಧವಾರ (ನ.6) ಸೂಚಿಸಿದೆ.

ಕಳೆದ ವರ್ಷ ಜುಲೈ 10 ರಂದು ಪ್ರಸಾರವಾದ ಸಂದರ್ಶನವನ್ನು ಎಲ್ಲಾ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ಒಂದು ವಾರದೊಳಗೆ ತೆಗೆದು ಹಾಕುವಂತೆ ಎನ್‌ಬಿಡಿಎಸ್‌ಎ ಸೂಚನೆ ನೀಡಿದೆ.

ಈ ಹಿಂದೆ ಸುದ್ದಿ ವಾಹಿನಿಗಳ ವಿರುದ್ಧ ಹಲವು ದೂರುಗಳನ್ನು ಸಲ್ಲಿಸಿರುವ ಪುಣೆ ಮೂಲದ ಟೆಕ್ಕಿ ಮತ್ತು ಹೋರಾಟಗಾರ ಇಂದ್ರಜೀತ್ ಘೋರ್ಪಡೆ ಅವರು ವಿಡಿಯೋ ವಿರುದ್ಧ ದೂರು ನೀಡಿದ್ದರು. ದೂರನ್ನು ಆಲಿಸಿದ ಎನ್‌ಬಿಡಿಎಸ್‌ಎ ​​ಈ ನಿರ್ಧಾರ ಕೈಗೊಂಡಿದೆ.

ದೂರಿನಲ್ಲಿ ನ್ಯೂಸ್‌ 18 ಮ್ಯಾನೇಜಿಂಗ್ ಎಡಿಟರ್ ಕಿಶೋರ್ ಅಜ್ವಾನಿ ಜೊತೆಗಿನ ಶಾಸ್ತ್ರಿ ಅವರ ಸಂದರ್ಶನವು ಹಿಂದೂ ರಾಷ್ಟ್ರದ ಕಲ್ಪನೆ, ಲವ್ ಜಿಹಾದ್ ಪಿತೂರಿ ಸಿದ್ಧಾಂತ ಮತ್ತು ಮೂಢನಂಬಿಕೆಯನ್ನು ಪ್ರಚಾರ ಮಾಡಿದೆ. ಅಲ್ಲದೆ, “ನಾನು ವಜ್ರ ಹುಡುಕುತ್ತೇನೆ, ಚುನಾವಣಾ ಸಮೀಕ್ಷೆಗಳನ್ನು ಊಹಿಸುತ್ತೇನೆ ಮತ್ತು ಅಲೌಕಿಕ ಶಕ್ತಿಗಳ ಮೂಲಕ ಜನರನ್ನು ಗುಣಪಡಿಸುತ್ತೇನೆ” ಎಂದು ಹೇಳುವ ಮೂಲಕ ಧೀರೇಂದ್ರ ಶಾಸ್ತ್ರಿ ಮೌಢ್ಯ ಬಿತ್ತಿದ್ದಾರೆ” ಎಂದು ಆರೋಪಿಸಲಾಗಿತ್ತು.

ಧೀರೇಂದ್ರ ಶಾಸ್ತ್ರಿಯ ಹೇಳಿಕೆಗಳಿಗೆ ತಾನು ಜವಾಬ್ದಾರನಲ್ಲ ಎಂದು ಸುದ್ದಿವಾಹಿನಿ ಹೇಳಿದೆ. ಆದರೆ, ಎನ್‌ಬಿಡಿಎಸ್‌ಎ ಮಾರ್ಗಸೂಚಿ ಮತ್ತು ಬಾಂಬೆ ಹೈಕೋರ್ಟ್ ತೀರ್ಪಿನ ಪ್ರಕಾರ ಕಾರ್ಯಕ್ರಮ ಆಹ್ವಾನಿತರು ನೀಡುವ ಹೇಳಿಕೆಗಳಿಗೆ ಸುದ್ದಿವಾಹಿನಿಗಳು ಜವಾಬ್ದಾರಿಯಾಗಿರುತ್ತದೆ. ಆದ್ದರಿಂದ ಕೋಮು ದಳ್ಳುರಿಗೆ ಕಾರಣವಾಗುವ ಹೇಳಿಕೆ ನೀಡುವಂತಹವರನ್ನು ಆಹ್ವಾನಿಸುವುದನ್ನು ತಪ್ಪಿಸಬೇಕು. ಪ್ರಸಾರಕರೇ ಇಂತಹ ಹೇಳಿಕೆಗಳಿಗೆ ಜವಾಬ್ದಾರಿ ಎಂಬುವುದನ್ನು ಸಾರಲು ಪ್ರಸಾರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿತ್ತು.

ಸಂದರ್ಶನದಲ್ಲಿ ಮೌಢ್ಯವನ್ನು ಉತ್ತೇಜಿಸುವಂತಹ ಹಲವು ನಿಲುವುಗಳನ್ನು ಧೀರೇಂದ್ರ ಶಾಸ್ತ್ರಿ ಮಾಡಿದ್ದು, ಹಿಂದೂ ರಾಷ್ಟ್ರ ಮತ್ತು ಧರ್ಮದ ಬಗ್ಗೆ ಹಲವಾರು ಹೇಳಿಕೆಗಳನ್ನು ನೀಡಲಾಗಿದೆ. ಇದು ಸ್ವಭಾವತಃ ವಿಭಜನಕಾರಿಯಾಗಿದ್ದು, ಭಾರತದಲ್ಲಿ ವಾಸಿಸಲು “ಸೀತಾ ರಾಮ್” ಎಂದು ಹೇಳುವುದು ಕಡ್ಡಾಯ. ಅಲ್ಲದೆ, ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿಯರನ್ನು ಸಿಲುಕಿಸಿ ನಂತರ ಅವರನ್ನು ಕೊಲ್ಲುವಂತೆ ಇಸ್ಲಾಂ ಧರ್ಮ ಹೇಳುತ್ತದೆ ಎಂಬುವುದಾಗಿ ಅವರು ಹೇಳಿದ್ದರು ಎಂದು ಎನ್‌ಬಿಡಿಎಸ್‌ಎ ಅಧ್ಯಕ್ಷ (ನಿವೃತ್ತ) ನ್ಯಾಯಮೂರ್ತಿ ಎ ಕೆ ಸಿಕ್ರಿ ತಿಳಿಸಿದ್ದಾರೆ.

ಅಂತಹ ವ್ಯಕ್ತಿಯನ್ನು ಸಂದರ್ಶನಕ್ಕೆ ಆಹ್ವಾನಿಸಿದ್ದೇಕೆ? ಎಂದು ಎನ್‌ಬಿಡಿಎಸ್‌ಎ ನ್ಯೂಸ್‌ 18 ಅನ್ನು ಪ್ರಶ್ನಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯೂಸ್‌ 18, ಶಾಸ್ತ್ರಿ ಅವರು ತಿಂಗಳುಗಳ ಕಾಲ ಪ್ರಮುಖ ಸುದ್ದಿ ವ್ಯಕ್ತಿಯಾಗಿದ್ದರು. ಬಿಹಾರದ ರಾಜಕಾರಣಿ ತೇಜ್ ಪ್ರತಾಪ್ ಯಾದವ್ ಅವರಿಂದ ಬೆದರಿಕೆ ಎದುರಿಸಿದ್ದರು. ಅವರ ಪ್ರಸಾರಕ್ಕೆ ಗಮನಾರ್ಹ ಸುದ್ದಿ ಮೌಲ್ಯವನ್ನು ಒದಗಿಸಿದ್ದರು. ಕಾರ್ಯಕ್ರಮ ನಿರೂಪಕರು ಕೋಮುವಾದಿ ಹೇಳಿಕೆಗಳನ್ನು ತಡೆಯಲು ಯತ್ನಿಸಿದ್ದರು ಎಂದು ಸಮಜಾಯಿಸಿ ನೀಡಿತ್ತು.

ಇದನ್ನೂ ಓದಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....