Homeಮುಖಪುಟಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ...

ಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ ಎನ್‌ಬಿಡಿಎಸ್ಎ ಸೂಚನೆ

- Advertisement -
- Advertisement -

‘ಮೌಢ್ಯ ಬಿತ್ತುವ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ’ ತರುವ ಕಾರಣಕ್ಕೆ ಬಾಗೇಶ್ವರ್ ಬಾಬಾ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಶಾಸ್ತ್ರಿಯ ಸಂದರ್ಶನ ತೆಗೆದು ಹಾಕುವಂತೆ ಸುದ್ದಿವಾಹಿನಿ ನ್ಯೂಸ್ 18 ಇಂಡಿಯಾಗೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಬುಧವಾರ (ನ.6) ಸೂಚಿಸಿದೆ.

ಕಳೆದ ವರ್ಷ ಜುಲೈ 10 ರಂದು ಪ್ರಸಾರವಾದ ಸಂದರ್ಶನವನ್ನು ಎಲ್ಲಾ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ಒಂದು ವಾರದೊಳಗೆ ತೆಗೆದು ಹಾಕುವಂತೆ ಎನ್‌ಬಿಡಿಎಸ್‌ಎ ಸೂಚನೆ ನೀಡಿದೆ.

ಈ ಹಿಂದೆ ಸುದ್ದಿ ವಾಹಿನಿಗಳ ವಿರುದ್ಧ ಹಲವು ದೂರುಗಳನ್ನು ಸಲ್ಲಿಸಿರುವ ಪುಣೆ ಮೂಲದ ಟೆಕ್ಕಿ ಮತ್ತು ಹೋರಾಟಗಾರ ಇಂದ್ರಜೀತ್ ಘೋರ್ಪಡೆ ಅವರು ವಿಡಿಯೋ ವಿರುದ್ಧ ದೂರು ನೀಡಿದ್ದರು. ದೂರನ್ನು ಆಲಿಸಿದ ಎನ್‌ಬಿಡಿಎಸ್‌ಎ ​​ಈ ನಿರ್ಧಾರ ಕೈಗೊಂಡಿದೆ.

ದೂರಿನಲ್ಲಿ ನ್ಯೂಸ್‌ 18 ಮ್ಯಾನೇಜಿಂಗ್ ಎಡಿಟರ್ ಕಿಶೋರ್ ಅಜ್ವಾನಿ ಜೊತೆಗಿನ ಶಾಸ್ತ್ರಿ ಅವರ ಸಂದರ್ಶನವು ಹಿಂದೂ ರಾಷ್ಟ್ರದ ಕಲ್ಪನೆ, ಲವ್ ಜಿಹಾದ್ ಪಿತೂರಿ ಸಿದ್ಧಾಂತ ಮತ್ತು ಮೂಢನಂಬಿಕೆಯನ್ನು ಪ್ರಚಾರ ಮಾಡಿದೆ. ಅಲ್ಲದೆ, “ನಾನು ವಜ್ರ ಹುಡುಕುತ್ತೇನೆ, ಚುನಾವಣಾ ಸಮೀಕ್ಷೆಗಳನ್ನು ಊಹಿಸುತ್ತೇನೆ ಮತ್ತು ಅಲೌಕಿಕ ಶಕ್ತಿಗಳ ಮೂಲಕ ಜನರನ್ನು ಗುಣಪಡಿಸುತ್ತೇನೆ” ಎಂದು ಹೇಳುವ ಮೂಲಕ ಧೀರೇಂದ್ರ ಶಾಸ್ತ್ರಿ ಮೌಢ್ಯ ಬಿತ್ತಿದ್ದಾರೆ” ಎಂದು ಆರೋಪಿಸಲಾಗಿತ್ತು.

ಧೀರೇಂದ್ರ ಶಾಸ್ತ್ರಿಯ ಹೇಳಿಕೆಗಳಿಗೆ ತಾನು ಜವಾಬ್ದಾರನಲ್ಲ ಎಂದು ಸುದ್ದಿವಾಹಿನಿ ಹೇಳಿದೆ. ಆದರೆ, ಎನ್‌ಬಿಡಿಎಸ್‌ಎ ಮಾರ್ಗಸೂಚಿ ಮತ್ತು ಬಾಂಬೆ ಹೈಕೋರ್ಟ್ ತೀರ್ಪಿನ ಪ್ರಕಾರ ಕಾರ್ಯಕ್ರಮ ಆಹ್ವಾನಿತರು ನೀಡುವ ಹೇಳಿಕೆಗಳಿಗೆ ಸುದ್ದಿವಾಹಿನಿಗಳು ಜವಾಬ್ದಾರಿಯಾಗಿರುತ್ತದೆ. ಆದ್ದರಿಂದ ಕೋಮು ದಳ್ಳುರಿಗೆ ಕಾರಣವಾಗುವ ಹೇಳಿಕೆ ನೀಡುವಂತಹವರನ್ನು ಆಹ್ವಾನಿಸುವುದನ್ನು ತಪ್ಪಿಸಬೇಕು. ಪ್ರಸಾರಕರೇ ಇಂತಹ ಹೇಳಿಕೆಗಳಿಗೆ ಜವಾಬ್ದಾರಿ ಎಂಬುವುದನ್ನು ಸಾರಲು ಪ್ರಸಾರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿತ್ತು.

ಸಂದರ್ಶನದಲ್ಲಿ ಮೌಢ್ಯವನ್ನು ಉತ್ತೇಜಿಸುವಂತಹ ಹಲವು ನಿಲುವುಗಳನ್ನು ಧೀರೇಂದ್ರ ಶಾಸ್ತ್ರಿ ಮಾಡಿದ್ದು, ಹಿಂದೂ ರಾಷ್ಟ್ರ ಮತ್ತು ಧರ್ಮದ ಬಗ್ಗೆ ಹಲವಾರು ಹೇಳಿಕೆಗಳನ್ನು ನೀಡಲಾಗಿದೆ. ಇದು ಸ್ವಭಾವತಃ ವಿಭಜನಕಾರಿಯಾಗಿದ್ದು, ಭಾರತದಲ್ಲಿ ವಾಸಿಸಲು “ಸೀತಾ ರಾಮ್” ಎಂದು ಹೇಳುವುದು ಕಡ್ಡಾಯ. ಅಲ್ಲದೆ, ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿಯರನ್ನು ಸಿಲುಕಿಸಿ ನಂತರ ಅವರನ್ನು ಕೊಲ್ಲುವಂತೆ ಇಸ್ಲಾಂ ಧರ್ಮ ಹೇಳುತ್ತದೆ ಎಂಬುವುದಾಗಿ ಅವರು ಹೇಳಿದ್ದರು ಎಂದು ಎನ್‌ಬಿಡಿಎಸ್‌ಎ ಅಧ್ಯಕ್ಷ (ನಿವೃತ್ತ) ನ್ಯಾಯಮೂರ್ತಿ ಎ ಕೆ ಸಿಕ್ರಿ ತಿಳಿಸಿದ್ದಾರೆ.

ಅಂತಹ ವ್ಯಕ್ತಿಯನ್ನು ಸಂದರ್ಶನಕ್ಕೆ ಆಹ್ವಾನಿಸಿದ್ದೇಕೆ? ಎಂದು ಎನ್‌ಬಿಡಿಎಸ್‌ಎ ನ್ಯೂಸ್‌ 18 ಅನ್ನು ಪ್ರಶ್ನಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯೂಸ್‌ 18, ಶಾಸ್ತ್ರಿ ಅವರು ತಿಂಗಳುಗಳ ಕಾಲ ಪ್ರಮುಖ ಸುದ್ದಿ ವ್ಯಕ್ತಿಯಾಗಿದ್ದರು. ಬಿಹಾರದ ರಾಜಕಾರಣಿ ತೇಜ್ ಪ್ರತಾಪ್ ಯಾದವ್ ಅವರಿಂದ ಬೆದರಿಕೆ ಎದುರಿಸಿದ್ದರು. ಅವರ ಪ್ರಸಾರಕ್ಕೆ ಗಮನಾರ್ಹ ಸುದ್ದಿ ಮೌಲ್ಯವನ್ನು ಒದಗಿಸಿದ್ದರು. ಕಾರ್ಯಕ್ರಮ ನಿರೂಪಕರು ಕೋಮುವಾದಿ ಹೇಳಿಕೆಗಳನ್ನು ತಡೆಯಲು ಯತ್ನಿಸಿದ್ದರು ಎಂದು ಸಮಜಾಯಿಸಿ ನೀಡಿತ್ತು.

ಇದನ್ನೂ ಓದಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...