Homeಮುಖಪುಟಹಿಜಾಬ್ ಪರ ಪ್ಯಾನಲಿಸ್ಟ್‌‌ಗಳನ್ನು ಅಲ್ ಖೈದಾಕ್ಕೆ ಲಿಂಕ್ ಮಾಡಿದ್ದ ನ್ಯೂಸ್‌‌18 ಗೆ 50 ಸಾವಿರ ದಂಡ...

ಹಿಜಾಬ್ ಪರ ಪ್ಯಾನಲಿಸ್ಟ್‌‌ಗಳನ್ನು ಅಲ್ ಖೈದಾಕ್ಕೆ ಲಿಂಕ್ ಮಾಡಿದ್ದ ನ್ಯೂಸ್‌‌18 ಗೆ 50 ಸಾವಿರ ದಂಡ ವಿಧಿಸಿದ NBDSA

- Advertisement -
- Advertisement -

ರಾಜ್ಯದಲ್ಲಿ ಹಿಜಾಬ್ ನಿಷೇಧದ ಬಗ್ಗೆ ತಪ್ಪಾಗಿ ಪ್ರಸಾರ ಮಾಡಿದ್ದಕ್ಕಾಗಿ ಸಿಎನ್‌ಎನ್‌ ನ್ಯೂಸ್ 18 ಗೆ ವಾರ್ತಾ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (NBDSA) ಬುಧವಾರ 50 ಸಾವಿರ ದಂಡ ವಿಧಿಸಿದೆ.

ನಿರೂಪಕ ಅಮನ್ ಚೋಪ್ರಾ ಅವರು ತಮ್ಮ ಕಾರ್ಯಕ್ರಮಕ್ಕೆ ಕೋಮು ಬಣ್ಣವನ್ನು ನೀಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಮತ್ತು ಹಿಜಾಬ್ ಅನ್ನು ಬೆಂಬಲಿಸುವ ಪ್ಯಾನೆಲಿಸ್ಟ್‌ಗಳನ್ನು ಅಲ್-ಖೈದಾಗೆ ಲಿಂಕ್ ಮಾಡಿದ್ದಾರೆ ಎಂದು ಸಂಸ್ಥೆ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭವಿಷ್ಯದಲ್ಲಿ ಇಂತಹ ಉಲ್ಲಂಘನೆಗಳು ಪುನರಾವರ್ತಿತವಾದರೆ, ಸಂಸ್ಥೆಯ ಮುಂದೆ ನಿರೂಪಕ ಅಮನ್ ಚೋಪ್ರಾ ಅವರ ವೈಯಕ್ತಿಕ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಬೇಕಾಗಬಹುದು ಎಂದು NBDSA ನ್ಯೂಸ್ 18ಗೆ ಎಚ್ಚರಿಸಿದೆ ಎಂದು ಬಾರ್ ಆಂಡ್‌‌‌ ಬೆಂಚ್‌ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

ವೆಬ್‌ಸೈಟ್ ಸೇರಿದಂತೆ ತಮ್ಮ ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ಆಕ್ಷೇಪಾರ್ಹ ಕಾರ್ಯಕ್ರಮದ ವೀಡಿಯೊವನ್ನು 7 ದಿನಗಳಲ್ಲಿ ತೆಗೆದುಹಾಕುವಂತೆ ಸಂಸ್ಥೆಯು ನ್ಯೂಸ್ 18 ಗೆ ನಿರ್ದೇಶಿಸಿದೆ.

“ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದರ ಪರವಾಗಿದ್ದ ಪ್ಯಾನೆಲಿಸ್ಟ್‌ಗಳನ್ನು ‘ಜವಾಹಿರಿ ಗ್ಯಾಂಗ್ ಸದಸ್ಯ’, ‘ಜವಾಹಿರಿಯ ರಾಯಭಾರಿ’, ‘ಜವಾಹಿರಿ ನಿಮ್ಮ ದೇವರಾಗಿದ್ದು, ನೀವು ಅವರ ಅಭಿಮಾನಿ’ ಎಂದು ಅವರನ್ನು ಜವಾಹಿರಿಗೆ ಲಿಂಕ್‌ ಮಾಡುವ ನಿರೂಪಕನ ಪ್ರವೃತ್ತಿಯನ್ನು NBDSA ಬಲವಾಗಿ ನಿರಾಕರಿಸಿದೆ” ಎಂದು NBDSA ತನ್ನ ಆದೇಶದಲ್ಲಿ ಹೇಳಿದೆ.

“ ‘ಅಲ್‌ಕಾಯಿದಾ ಎಕ್ಸ್‌ಪೋಸ್‌ಡ್‌, ‘ಅಲ್‌ಕಾಯಿದಾ ಗ್ಯಾಂಗ್‌ ಎಕ್ಸ್‌ಪೋಸ್‌ಡ್‌‌’, ‘ಹಿಜಾಬ್‌‌ ಕ ಫಟಾ ಪೋಸ್ಟರ್‌‌’, ‘ನಿಕ್ಲಾ ಅಲ್‌ಕಾಯಿದಾ’, ‘ಹಿಜಾಬ್ ಹಿಂದೆ ಅಲ್‌ ಜವಾಹಿರಿ ಕಂಡು ಬಂದಿದ್ದಾನೆ’, ‘ಹಿಜಾಬ್ ವಿವಾದವನ್ನು ಅಲ್ ಕಾಯಿದಾ ಯೋಜಿಸಿದೆ’ ಎಂಬ ವಾಕ್ಯಗಳನ್ನು ಪ್ರಸಾರ ಮಾಡುವ ಮೂಲಕ ಅಲ್ ಖೈದಾದೊಂದಿಗೆ ಹಿಜಾಬ್ ಅನ್ನು ಬೆಂಬಲಿಸುವ ಪ್ಯಾನೆಲಿಸ್ಟ್‌ಗಳು ಮತ್ತು ವ್ಯಕ್ತಿಗಳನ್ನು ಲಿಂಕ್ ಮಾಡುವ ವಿಚಾರದಲ್ಲಿ ಯಾವುದೆ ಸತ್ಯವಿಲ್ಲ” ಎಂದು NBDSA ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ನಿರೂಪಕ ಅಮನ್ ಚೋಪ್ರಾ ಅವರು ಲೈವ್‌ ನ್ಯೂಸ್ ಚರ್ಚೆಯನ್ನು ಇಟ್ಟು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ನಿಂದಿಸುತ್ತಿದ್ದಾರೆ. ಈ ಮೂಲಕ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಬಹಿರಂಗವಾಗಿ ದ್ವೇಷ ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಧ್ಯಮ ವಿಮರ್ಶಕರು ಮತ್ತು ಮುಸ್ಲಿಂ ಹೋರಾಟಗಾರರು ಟೀಕಿಸಿದ್ದರು.

2022 ರಲ್ಲಿ ಉತ್ತರ ಪ್ರದೇಶ ಚುನಾವಣೆಯ ಸಮಯದಲ್ಲಿ, ಚೋಪ್ರಾ ಅವರು ತಮ್ಮ ಪ್ರೈಮ್‌ಟೈಮ್ ಶೋ “ದೇಶ್ ನಹಿ ಜುಕ್ನೆ ದೇಂಗೆ” ಯಲ್ಲಿ ಸುಮಾರು 36 ಮುಸ್ಲಿಂ ವಿರೋಧಿ ಚರ್ಚೆಗಳನ್ನು ನಡೆಸಿದ್ದಾರೆ ಎಂದು ‘ಮಕ್ತೂಬ್ ಸುದ್ದಿ ಮಾಧ್ಯಮ’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...