Homeಮುಖಪುಟಹಿಜಾಬ್ ಪರ ಪ್ಯಾನಲಿಸ್ಟ್‌‌ಗಳನ್ನು ಅಲ್ ಖೈದಾಕ್ಕೆ ಲಿಂಕ್ ಮಾಡಿದ್ದ ನ್ಯೂಸ್‌‌18 ಗೆ 50 ಸಾವಿರ ದಂಡ...

ಹಿಜಾಬ್ ಪರ ಪ್ಯಾನಲಿಸ್ಟ್‌‌ಗಳನ್ನು ಅಲ್ ಖೈದಾಕ್ಕೆ ಲಿಂಕ್ ಮಾಡಿದ್ದ ನ್ಯೂಸ್‌‌18 ಗೆ 50 ಸಾವಿರ ದಂಡ ವಿಧಿಸಿದ NBDSA

- Advertisement -
- Advertisement -

ರಾಜ್ಯದಲ್ಲಿ ಹಿಜಾಬ್ ನಿಷೇಧದ ಬಗ್ಗೆ ತಪ್ಪಾಗಿ ಪ್ರಸಾರ ಮಾಡಿದ್ದಕ್ಕಾಗಿ ಸಿಎನ್‌ಎನ್‌ ನ್ಯೂಸ್ 18 ಗೆ ವಾರ್ತಾ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (NBDSA) ಬುಧವಾರ 50 ಸಾವಿರ ದಂಡ ವಿಧಿಸಿದೆ.

ನಿರೂಪಕ ಅಮನ್ ಚೋಪ್ರಾ ಅವರು ತಮ್ಮ ಕಾರ್ಯಕ್ರಮಕ್ಕೆ ಕೋಮು ಬಣ್ಣವನ್ನು ನೀಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಮತ್ತು ಹಿಜಾಬ್ ಅನ್ನು ಬೆಂಬಲಿಸುವ ಪ್ಯಾನೆಲಿಸ್ಟ್‌ಗಳನ್ನು ಅಲ್-ಖೈದಾಗೆ ಲಿಂಕ್ ಮಾಡಿದ್ದಾರೆ ಎಂದು ಸಂಸ್ಥೆ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭವಿಷ್ಯದಲ್ಲಿ ಇಂತಹ ಉಲ್ಲಂಘನೆಗಳು ಪುನರಾವರ್ತಿತವಾದರೆ, ಸಂಸ್ಥೆಯ ಮುಂದೆ ನಿರೂಪಕ ಅಮನ್ ಚೋಪ್ರಾ ಅವರ ವೈಯಕ್ತಿಕ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಬೇಕಾಗಬಹುದು ಎಂದು NBDSA ನ್ಯೂಸ್ 18ಗೆ ಎಚ್ಚರಿಸಿದೆ ಎಂದು ಬಾರ್ ಆಂಡ್‌‌‌ ಬೆಂಚ್‌ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

ವೆಬ್‌ಸೈಟ್ ಸೇರಿದಂತೆ ತಮ್ಮ ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ಆಕ್ಷೇಪಾರ್ಹ ಕಾರ್ಯಕ್ರಮದ ವೀಡಿಯೊವನ್ನು 7 ದಿನಗಳಲ್ಲಿ ತೆಗೆದುಹಾಕುವಂತೆ ಸಂಸ್ಥೆಯು ನ್ಯೂಸ್ 18 ಗೆ ನಿರ್ದೇಶಿಸಿದೆ.

“ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದರ ಪರವಾಗಿದ್ದ ಪ್ಯಾನೆಲಿಸ್ಟ್‌ಗಳನ್ನು ‘ಜವಾಹಿರಿ ಗ್ಯಾಂಗ್ ಸದಸ್ಯ’, ‘ಜವಾಹಿರಿಯ ರಾಯಭಾರಿ’, ‘ಜವಾಹಿರಿ ನಿಮ್ಮ ದೇವರಾಗಿದ್ದು, ನೀವು ಅವರ ಅಭಿಮಾನಿ’ ಎಂದು ಅವರನ್ನು ಜವಾಹಿರಿಗೆ ಲಿಂಕ್‌ ಮಾಡುವ ನಿರೂಪಕನ ಪ್ರವೃತ್ತಿಯನ್ನು NBDSA ಬಲವಾಗಿ ನಿರಾಕರಿಸಿದೆ” ಎಂದು NBDSA ತನ್ನ ಆದೇಶದಲ್ಲಿ ಹೇಳಿದೆ.

“ ‘ಅಲ್‌ಕಾಯಿದಾ ಎಕ್ಸ್‌ಪೋಸ್‌ಡ್‌, ‘ಅಲ್‌ಕಾಯಿದಾ ಗ್ಯಾಂಗ್‌ ಎಕ್ಸ್‌ಪೋಸ್‌ಡ್‌‌’, ‘ಹಿಜಾಬ್‌‌ ಕ ಫಟಾ ಪೋಸ್ಟರ್‌‌’, ‘ನಿಕ್ಲಾ ಅಲ್‌ಕಾಯಿದಾ’, ‘ಹಿಜಾಬ್ ಹಿಂದೆ ಅಲ್‌ ಜವಾಹಿರಿ ಕಂಡು ಬಂದಿದ್ದಾನೆ’, ‘ಹಿಜಾಬ್ ವಿವಾದವನ್ನು ಅಲ್ ಕಾಯಿದಾ ಯೋಜಿಸಿದೆ’ ಎಂಬ ವಾಕ್ಯಗಳನ್ನು ಪ್ರಸಾರ ಮಾಡುವ ಮೂಲಕ ಅಲ್ ಖೈದಾದೊಂದಿಗೆ ಹಿಜಾಬ್ ಅನ್ನು ಬೆಂಬಲಿಸುವ ಪ್ಯಾನೆಲಿಸ್ಟ್‌ಗಳು ಮತ್ತು ವ್ಯಕ್ತಿಗಳನ್ನು ಲಿಂಕ್ ಮಾಡುವ ವಿಚಾರದಲ್ಲಿ ಯಾವುದೆ ಸತ್ಯವಿಲ್ಲ” ಎಂದು NBDSA ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ನಿರೂಪಕ ಅಮನ್ ಚೋಪ್ರಾ ಅವರು ಲೈವ್‌ ನ್ಯೂಸ್ ಚರ್ಚೆಯನ್ನು ಇಟ್ಟು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ನಿಂದಿಸುತ್ತಿದ್ದಾರೆ. ಈ ಮೂಲಕ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಬಹಿರಂಗವಾಗಿ ದ್ವೇಷ ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಧ್ಯಮ ವಿಮರ್ಶಕರು ಮತ್ತು ಮುಸ್ಲಿಂ ಹೋರಾಟಗಾರರು ಟೀಕಿಸಿದ್ದರು.

2022 ರಲ್ಲಿ ಉತ್ತರ ಪ್ರದೇಶ ಚುನಾವಣೆಯ ಸಮಯದಲ್ಲಿ, ಚೋಪ್ರಾ ಅವರು ತಮ್ಮ ಪ್ರೈಮ್‌ಟೈಮ್ ಶೋ “ದೇಶ್ ನಹಿ ಜುಕ್ನೆ ದೇಂಗೆ” ಯಲ್ಲಿ ಸುಮಾರು 36 ಮುಸ್ಲಿಂ ವಿರೋಧಿ ಚರ್ಚೆಗಳನ್ನು ನಡೆಸಿದ್ದಾರೆ ಎಂದು ‘ಮಕ್ತೂಬ್ ಸುದ್ದಿ ಮಾಧ್ಯಮ’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...