Homeಮುಖಪುಟಹಿಜಾಬ್ ಪರ ಪ್ಯಾನಲಿಸ್ಟ್‌‌ಗಳನ್ನು ಅಲ್ ಖೈದಾಕ್ಕೆ ಲಿಂಕ್ ಮಾಡಿದ್ದ ನ್ಯೂಸ್‌‌18 ಗೆ 50 ಸಾವಿರ ದಂಡ...

ಹಿಜಾಬ್ ಪರ ಪ್ಯಾನಲಿಸ್ಟ್‌‌ಗಳನ್ನು ಅಲ್ ಖೈದಾಕ್ಕೆ ಲಿಂಕ್ ಮಾಡಿದ್ದ ನ್ಯೂಸ್‌‌18 ಗೆ 50 ಸಾವಿರ ದಂಡ ವಿಧಿಸಿದ NBDSA

- Advertisement -
- Advertisement -

ರಾಜ್ಯದಲ್ಲಿ ಹಿಜಾಬ್ ನಿಷೇಧದ ಬಗ್ಗೆ ತಪ್ಪಾಗಿ ಪ್ರಸಾರ ಮಾಡಿದ್ದಕ್ಕಾಗಿ ಸಿಎನ್‌ಎನ್‌ ನ್ಯೂಸ್ 18 ಗೆ ವಾರ್ತಾ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (NBDSA) ಬುಧವಾರ 50 ಸಾವಿರ ದಂಡ ವಿಧಿಸಿದೆ.

ನಿರೂಪಕ ಅಮನ್ ಚೋಪ್ರಾ ಅವರು ತಮ್ಮ ಕಾರ್ಯಕ್ರಮಕ್ಕೆ ಕೋಮು ಬಣ್ಣವನ್ನು ನೀಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಮತ್ತು ಹಿಜಾಬ್ ಅನ್ನು ಬೆಂಬಲಿಸುವ ಪ್ಯಾನೆಲಿಸ್ಟ್‌ಗಳನ್ನು ಅಲ್-ಖೈದಾಗೆ ಲಿಂಕ್ ಮಾಡಿದ್ದಾರೆ ಎಂದು ಸಂಸ್ಥೆ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭವಿಷ್ಯದಲ್ಲಿ ಇಂತಹ ಉಲ್ಲಂಘನೆಗಳು ಪುನರಾವರ್ತಿತವಾದರೆ, ಸಂಸ್ಥೆಯ ಮುಂದೆ ನಿರೂಪಕ ಅಮನ್ ಚೋಪ್ರಾ ಅವರ ವೈಯಕ್ತಿಕ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಬೇಕಾಗಬಹುದು ಎಂದು NBDSA ನ್ಯೂಸ್ 18ಗೆ ಎಚ್ಚರಿಸಿದೆ ಎಂದು ಬಾರ್ ಆಂಡ್‌‌‌ ಬೆಂಚ್‌ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

ವೆಬ್‌ಸೈಟ್ ಸೇರಿದಂತೆ ತಮ್ಮ ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ಆಕ್ಷೇಪಾರ್ಹ ಕಾರ್ಯಕ್ರಮದ ವೀಡಿಯೊವನ್ನು 7 ದಿನಗಳಲ್ಲಿ ತೆಗೆದುಹಾಕುವಂತೆ ಸಂಸ್ಥೆಯು ನ್ಯೂಸ್ 18 ಗೆ ನಿರ್ದೇಶಿಸಿದೆ.

“ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದರ ಪರವಾಗಿದ್ದ ಪ್ಯಾನೆಲಿಸ್ಟ್‌ಗಳನ್ನು ‘ಜವಾಹಿರಿ ಗ್ಯಾಂಗ್ ಸದಸ್ಯ’, ‘ಜವಾಹಿರಿಯ ರಾಯಭಾರಿ’, ‘ಜವಾಹಿರಿ ನಿಮ್ಮ ದೇವರಾಗಿದ್ದು, ನೀವು ಅವರ ಅಭಿಮಾನಿ’ ಎಂದು ಅವರನ್ನು ಜವಾಹಿರಿಗೆ ಲಿಂಕ್‌ ಮಾಡುವ ನಿರೂಪಕನ ಪ್ರವೃತ್ತಿಯನ್ನು NBDSA ಬಲವಾಗಿ ನಿರಾಕರಿಸಿದೆ” ಎಂದು NBDSA ತನ್ನ ಆದೇಶದಲ್ಲಿ ಹೇಳಿದೆ.

“ ‘ಅಲ್‌ಕಾಯಿದಾ ಎಕ್ಸ್‌ಪೋಸ್‌ಡ್‌, ‘ಅಲ್‌ಕಾಯಿದಾ ಗ್ಯಾಂಗ್‌ ಎಕ್ಸ್‌ಪೋಸ್‌ಡ್‌‌’, ‘ಹಿಜಾಬ್‌‌ ಕ ಫಟಾ ಪೋಸ್ಟರ್‌‌’, ‘ನಿಕ್ಲಾ ಅಲ್‌ಕಾಯಿದಾ’, ‘ಹಿಜಾಬ್ ಹಿಂದೆ ಅಲ್‌ ಜವಾಹಿರಿ ಕಂಡು ಬಂದಿದ್ದಾನೆ’, ‘ಹಿಜಾಬ್ ವಿವಾದವನ್ನು ಅಲ್ ಕಾಯಿದಾ ಯೋಜಿಸಿದೆ’ ಎಂಬ ವಾಕ್ಯಗಳನ್ನು ಪ್ರಸಾರ ಮಾಡುವ ಮೂಲಕ ಅಲ್ ಖೈದಾದೊಂದಿಗೆ ಹಿಜಾಬ್ ಅನ್ನು ಬೆಂಬಲಿಸುವ ಪ್ಯಾನೆಲಿಸ್ಟ್‌ಗಳು ಮತ್ತು ವ್ಯಕ್ತಿಗಳನ್ನು ಲಿಂಕ್ ಮಾಡುವ ವಿಚಾರದಲ್ಲಿ ಯಾವುದೆ ಸತ್ಯವಿಲ್ಲ” ಎಂದು NBDSA ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ನಿರೂಪಕ ಅಮನ್ ಚೋಪ್ರಾ ಅವರು ಲೈವ್‌ ನ್ಯೂಸ್ ಚರ್ಚೆಯನ್ನು ಇಟ್ಟು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ನಿಂದಿಸುತ್ತಿದ್ದಾರೆ. ಈ ಮೂಲಕ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಬಹಿರಂಗವಾಗಿ ದ್ವೇಷ ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಧ್ಯಮ ವಿಮರ್ಶಕರು ಮತ್ತು ಮುಸ್ಲಿಂ ಹೋರಾಟಗಾರರು ಟೀಕಿಸಿದ್ದರು.

2022 ರಲ್ಲಿ ಉತ್ತರ ಪ್ರದೇಶ ಚುನಾವಣೆಯ ಸಮಯದಲ್ಲಿ, ಚೋಪ್ರಾ ಅವರು ತಮ್ಮ ಪ್ರೈಮ್‌ಟೈಮ್ ಶೋ “ದೇಶ್ ನಹಿ ಜುಕ್ನೆ ದೇಂಗೆ” ಯಲ್ಲಿ ಸುಮಾರು 36 ಮುಸ್ಲಿಂ ವಿರೋಧಿ ಚರ್ಚೆಗಳನ್ನು ನಡೆಸಿದ್ದಾರೆ ಎಂದು ‘ಮಕ್ತೂಬ್ ಸುದ್ದಿ ಮಾಧ್ಯಮ’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...