Homeಮುಖಪುಟಹಿಜಾಬ್ ಪರ ಪ್ಯಾನಲಿಸ್ಟ್‌‌ಗಳನ್ನು ಅಲ್ ಖೈದಾಕ್ಕೆ ಲಿಂಕ್ ಮಾಡಿದ್ದ ನ್ಯೂಸ್‌‌18 ಗೆ 50 ಸಾವಿರ ದಂಡ...

ಹಿಜಾಬ್ ಪರ ಪ್ಯಾನಲಿಸ್ಟ್‌‌ಗಳನ್ನು ಅಲ್ ಖೈದಾಕ್ಕೆ ಲಿಂಕ್ ಮಾಡಿದ್ದ ನ್ಯೂಸ್‌‌18 ಗೆ 50 ಸಾವಿರ ದಂಡ ವಿಧಿಸಿದ NBDSA

- Advertisement -
- Advertisement -

ರಾಜ್ಯದಲ್ಲಿ ಹಿಜಾಬ್ ನಿಷೇಧದ ಬಗ್ಗೆ ತಪ್ಪಾಗಿ ಪ್ರಸಾರ ಮಾಡಿದ್ದಕ್ಕಾಗಿ ಸಿಎನ್‌ಎನ್‌ ನ್ಯೂಸ್ 18 ಗೆ ವಾರ್ತಾ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (NBDSA) ಬುಧವಾರ 50 ಸಾವಿರ ದಂಡ ವಿಧಿಸಿದೆ.

ನಿರೂಪಕ ಅಮನ್ ಚೋಪ್ರಾ ಅವರು ತಮ್ಮ ಕಾರ್ಯಕ್ರಮಕ್ಕೆ ಕೋಮು ಬಣ್ಣವನ್ನು ನೀಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಮತ್ತು ಹಿಜಾಬ್ ಅನ್ನು ಬೆಂಬಲಿಸುವ ಪ್ಯಾನೆಲಿಸ್ಟ್‌ಗಳನ್ನು ಅಲ್-ಖೈದಾಗೆ ಲಿಂಕ್ ಮಾಡಿದ್ದಾರೆ ಎಂದು ಸಂಸ್ಥೆ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭವಿಷ್ಯದಲ್ಲಿ ಇಂತಹ ಉಲ್ಲಂಘನೆಗಳು ಪುನರಾವರ್ತಿತವಾದರೆ, ಸಂಸ್ಥೆಯ ಮುಂದೆ ನಿರೂಪಕ ಅಮನ್ ಚೋಪ್ರಾ ಅವರ ವೈಯಕ್ತಿಕ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಬೇಕಾಗಬಹುದು ಎಂದು NBDSA ನ್ಯೂಸ್ 18ಗೆ ಎಚ್ಚರಿಸಿದೆ ಎಂದು ಬಾರ್ ಆಂಡ್‌‌‌ ಬೆಂಚ್‌ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

ವೆಬ್‌ಸೈಟ್ ಸೇರಿದಂತೆ ತಮ್ಮ ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ಆಕ್ಷೇಪಾರ್ಹ ಕಾರ್ಯಕ್ರಮದ ವೀಡಿಯೊವನ್ನು 7 ದಿನಗಳಲ್ಲಿ ತೆಗೆದುಹಾಕುವಂತೆ ಸಂಸ್ಥೆಯು ನ್ಯೂಸ್ 18 ಗೆ ನಿರ್ದೇಶಿಸಿದೆ.

“ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದರ ಪರವಾಗಿದ್ದ ಪ್ಯಾನೆಲಿಸ್ಟ್‌ಗಳನ್ನು ‘ಜವಾಹಿರಿ ಗ್ಯಾಂಗ್ ಸದಸ್ಯ’, ‘ಜವಾಹಿರಿಯ ರಾಯಭಾರಿ’, ‘ಜವಾಹಿರಿ ನಿಮ್ಮ ದೇವರಾಗಿದ್ದು, ನೀವು ಅವರ ಅಭಿಮಾನಿ’ ಎಂದು ಅವರನ್ನು ಜವಾಹಿರಿಗೆ ಲಿಂಕ್‌ ಮಾಡುವ ನಿರೂಪಕನ ಪ್ರವೃತ್ತಿಯನ್ನು NBDSA ಬಲವಾಗಿ ನಿರಾಕರಿಸಿದೆ” ಎಂದು NBDSA ತನ್ನ ಆದೇಶದಲ್ಲಿ ಹೇಳಿದೆ.

“ ‘ಅಲ್‌ಕಾಯಿದಾ ಎಕ್ಸ್‌ಪೋಸ್‌ಡ್‌, ‘ಅಲ್‌ಕಾಯಿದಾ ಗ್ಯಾಂಗ್‌ ಎಕ್ಸ್‌ಪೋಸ್‌ಡ್‌‌’, ‘ಹಿಜಾಬ್‌‌ ಕ ಫಟಾ ಪೋಸ್ಟರ್‌‌’, ‘ನಿಕ್ಲಾ ಅಲ್‌ಕಾಯಿದಾ’, ‘ಹಿಜಾಬ್ ಹಿಂದೆ ಅಲ್‌ ಜವಾಹಿರಿ ಕಂಡು ಬಂದಿದ್ದಾನೆ’, ‘ಹಿಜಾಬ್ ವಿವಾದವನ್ನು ಅಲ್ ಕಾಯಿದಾ ಯೋಜಿಸಿದೆ’ ಎಂಬ ವಾಕ್ಯಗಳನ್ನು ಪ್ರಸಾರ ಮಾಡುವ ಮೂಲಕ ಅಲ್ ಖೈದಾದೊಂದಿಗೆ ಹಿಜಾಬ್ ಅನ್ನು ಬೆಂಬಲಿಸುವ ಪ್ಯಾನೆಲಿಸ್ಟ್‌ಗಳು ಮತ್ತು ವ್ಯಕ್ತಿಗಳನ್ನು ಲಿಂಕ್ ಮಾಡುವ ವಿಚಾರದಲ್ಲಿ ಯಾವುದೆ ಸತ್ಯವಿಲ್ಲ” ಎಂದು NBDSA ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ನಿರೂಪಕ ಅಮನ್ ಚೋಪ್ರಾ ಅವರು ಲೈವ್‌ ನ್ಯೂಸ್ ಚರ್ಚೆಯನ್ನು ಇಟ್ಟು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ನಿಂದಿಸುತ್ತಿದ್ದಾರೆ. ಈ ಮೂಲಕ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಬಹಿರಂಗವಾಗಿ ದ್ವೇಷ ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಧ್ಯಮ ವಿಮರ್ಶಕರು ಮತ್ತು ಮುಸ್ಲಿಂ ಹೋರಾಟಗಾರರು ಟೀಕಿಸಿದ್ದರು.

2022 ರಲ್ಲಿ ಉತ್ತರ ಪ್ರದೇಶ ಚುನಾವಣೆಯ ಸಮಯದಲ್ಲಿ, ಚೋಪ್ರಾ ಅವರು ತಮ್ಮ ಪ್ರೈಮ್‌ಟೈಮ್ ಶೋ “ದೇಶ್ ನಹಿ ಜುಕ್ನೆ ದೇಂಗೆ” ಯಲ್ಲಿ ಸುಮಾರು 36 ಮುಸ್ಲಿಂ ವಿರೋಧಿ ಚರ್ಚೆಗಳನ್ನು ನಡೆಸಿದ್ದಾರೆ ಎಂದು ‘ಮಕ್ತೂಬ್ ಸುದ್ದಿ ಮಾಧ್ಯಮ’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...