Homeಮುಖಪುಟ'ಲವ್ ಜಿಹಾದ್' ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಆರ್‌ಟಿ) ಪಠ್ಯಪುಸ್ತಕವನ್ನು ‘ಲವ್ ಜಿಹಾದ್’ ಪಿತೂರಿಯೊಂದಿಗೆ ಜೋಡಿಸುವ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಮಂಗಳವಾರ (ಡಿಸೆಂಬರ್ 2) ಐದು ಸುದ್ದಿ ವಾಹಿನಿಗಳಿಗೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

ಎನ್‌ಸಿಇಆರ್‌ಟಿಯ 3ನೇ ತರಗತಿಯ ಪರಿಸರ ಅಧ್ಯಯನದ ಹಳೆಯ ಅಧ್ಯಾಯವಾದ ‘ಚಿಟ್ಟಿ ಆಯಿ ಹೈ’ ನಲ್ಲಿ ಕಾಲ್ಪನಿಕ ಪತ್ರವೊಂದನ್ನು ತಪ್ಪಾಗಿ ನಿರೂಪಿಸಿರುವ ಬಗ್ಗೆ ದೂರು ದಾಖಲಾಗಿತ್ತು. ರೀನಾ ಎಂಬ ಪಾತ್ರಧಾರಿ ಅಹ್ಮದ್ ಎಂಬ ಮತ್ತೊಂದು ಪಾತ್ರಕ್ಕೆ ಬರೆದ ಪತ್ರವನ್ನು ದೂರದರ್ಶನ ವಾಹಿನಿಗಳು ಲವ್ ಜಿಹಾದ್ ಪಿತೂರಿಯ ಪುರಾವೆಯಾಗಿ ತಪ್ಪಾಗಿ ಬಿಂಬಿಸಿವೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇಂಡಿಯಾ ಟಿವಿ, ನ್ಯೂಸ್ 18 ಎಂಪಿ/ಛತ್ತೀಸ್‌ಗಢ, ಝೀ ಎಂಪಿ/ಛತ್ತೀಸ್‌ಗಢ, ಜೀ ನ್ಯೂಸ್ ಮತ್ತು ಎಬಿಪಿ ನ್ಯೂಸ್‌ನಲ್ಲಿ ಪ್ರಸಾರ ಮಾಡಲಾಗಿದ್ದ ಕಾರ್ಯಕ್ರಮಗಳ ವಿರುದ್ಧ ಇಂದ್ರಜೀತ್ ಘೋರ್ಪಡೆ ಮತ್ತು ಉತ್ಕರ್ಷ್ ಮಿಶ್ರಾ ಎಂಬವರು ದೂರು ನೀಡಿದ್ದರು.

ಪಠ್ಯಪುಸ್ತಕದಲ್ಲಿ ಕೇವಲ ಒಬ್ಬ ಹುಡುಗಿ ಬೇರೆ ಧರ್ಮದ ಹುಡುಗನಿಗೆ ಪತ್ರ ಬರೆದಿದ್ದಾರೆ ಎಂಬ ಕಾರಣಕ್ಕಾಗಿ ಅದನ್ನು ಲವ್ ಜಿಹಾದ್ ಎಂದು ಪ್ರಚಾರ ಮಾಡಿ ವಿಡಿಯೋಗಳನ್ನು ಹಾಕುವುದು ಸರಿಯಲ್ಲ ಎಂದು ಎನ್‌ಬಿಡಿಎಸ್‌ಎ ಡಿಸೆಂಬರ್ 2ರಂದು ನೀಡಿರುವ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಆದ್ದರಿಂದ ಅಂತಹ ವಿಡಿಯೋಗಳನ್ನು ತೆಗೆದುಹಾಕಬೇಕಲು ಸೂಚಿಸಿದೆ ಎಂದು scroll.in ವರದಿ ಮಾಡಿದೆ.

ಎನ್‌ಬಿಡಿಎ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು, “ಭಾರತವು ಜಾತ್ಯತೀತ ರಾಷ್ಟ್ರವಾಗಿದೆ, ಇದು ಸಂವಿಧಾನದ ಆದೇಶವೂ ಹೌದು. ಆದ್ದರಿಂದ ಪ್ರಸಾರಕರು (ಚಾನೆಲ್‌ಗಳು) ಎನ್‌ಸಿಇಆರ್‌ಟಿ ಪುಸ್ತಕದ ಒಂದು ಅಧ್ಯಾಯದಲ್ಲಿ ಇರುವ ವಿಷಯವನ್ನು ನಿಜವಾದ ಅರ್ಥದಿಂದ ಬೇರೆ ರೀತಿಗೆ ತಂದು, ಪಕ್ಷಪಾತಿಯಾಗಿರುವಂತೆ ತೋರಿಸಿದರೆ, ಅದು ನಿಯಮಗಳಿಗೆ ವಿರುದ್ಧವಾಗುತ್ತದೆ ಎಂದು ಆದೇಶ ಪ್ರತಿಯಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.

ಕಪೋಲಕಲ್ಪಿತ ಲವ್ ಜಿಹಾದ್ ವಿಷಯಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಈ ಹಿಂದೆ ಟೀಕೆಗೆ ಗುರಿಯಾಗಿದ್ದರೂ, ವೈಯಕ್ತಿಕ ಅಭಿಪ್ರಾಯ ಆಧಾರಿತ, ಜನರನ್ನು ವಿಭಜಿಸುವ ಮತ್ತು ಗಮನ ಸೆಳೆಯಲು ಕೆಲವು ಗುಂಪುಗಳು ರಚಿಸಿದ ವಿಷಯವನ್ನು ಮುಖ್ಯ ಸುದ್ದಿಯಾಗಿ ಚಾನೆಲ್‌ಗಳು ತೋರಿಸಿವೆ ಎಂದು ದೂರುದಾರರು ಆರೋಪಿಸಿದ್ದರು.

ಚಾನೆಲ್‌ಗಳು ಆ ವಿಷಯವನ್ನು (ಲವ್ ಜಿಹಾದ್) ಪ್ರಚಾರ ಮಾಡುವವರಿಗೆ ಅವಕಾಶ ಕೊಟ್ಟಿದ್ದು ಮಾತ್ರವಲ್ಲ, ಕೆಲವು ನಿರೂಪಕರು ಕೂಡ ಪರೋಕ್ಷ ಸಂಕೇತಗಳು (dog-whistling) ಮತ್ತು ಪರದೆಯಲ್ಲಿನ ಬರಹಗಳ ಮೂಲಕ ಆ ಹೇಳಿಕೆಗಳನ್ನು ಬೆಂಬಲಿಸುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಹೇಳಿದ್ದರು.

“ನ್ಯೂಸ್18 ಮಧ್ಯಪ್ರದೇಶ/ಛತ್ತೀಸ್‌ಗಢ ಚಾನೆಲ್‌ನ ಕಾರ್ಯಕ್ರಮದಲ್ಲಿ ಸಂಪೂರ್ಣ ಚರ್ಚೆ ಭಾಗೇಶ್ವರಧಾಮದ ಧೀರೆಂದ್ರ ಶಾಸ್ತ್ರಿಯವರ ಮಾತುಗಳನ್ನೇ ಕೇಂದ್ರವಾಗಿಸಿಕೊಂಡಿತ್ತು. ಅವರು ಲವ್ ಜಿಹಾದ್ ಮೂಲಕ ಮುಸ್ಲಿಂ ಜನಸಂಖ್ಯೆ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಮತ್ತು ಇದರಿಂದ ಹಿಂದೂ ಮಹಿಳೆಯರು ಅಪಾಯಕ್ಕೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದರು”

“ಕಾರ್ಯಕ್ರಮ ಟಿಕ್ಕರ್‌ಗಳು, ಗ್ರಾಫಿಕ್‌ಗಳು ಮತ್ತು ದೃಶ್ಯಗಳ ಮೂಲಕ ಶಾಸ್ತ್ರಿಯವರ ಮಾತುಗಳನ್ನು ಇನ್ನೂ ಗಟ್ಟಿ ಮಾಡಿತ್ತು, ಆದರೆ ಆ ಹೇಳಿಕೆಗಳು ತಪ್ಪು ಕಲಹ ಉಂಟುಮಾಡುವಂತಿವೆಯೇ ಎಂದು ಯಾವುದೇ ಪ್ರಶ್ನೆ ಅಥವಾ ಪರಿಶೀಲನೆ ಮಾಡಿಲ್ಲ”

“ಝೀ ನ್ಯೂಸ್ ಹಾಗೂ ಝೀ ಮಧ್ಯಪ್ರದೇಶ/ಛತ್ತೀಸ್‌ಗಢ ಚಾನೆಲ್‌ಗಳು ಶಿಕ್ಷಕರ ಮಾತುಗಳನ್ನು ಪ್ರಸಾರ ಮಾಡಿದರೂ, ಕಾರ್ಯಕ್ರಮದ ಒಟ್ಟು ರೂಪ ಮತ್ತು ವಿಷಯವು ಆ ಅಧ್ಯಾಯದಲ್ಲಿ ಏನೋ ಅನುಮಾನಾಸ್ಪದ ವಿಷಯ ಇದೆ ಎಂದು ಜನರಿಗೆ ಭಾಸವಾಗುವಂತೆ ಮಾಡಿತ್ತು”

“ವರದಿಗಾರರು ಆ ಅಧ್ಯಾಯವನ್ನು ಯಾಕೆ ಸೇರಿಸಲಾಗಿದೆ ಎಂಬುದನ್ನು ನೇರವಾಗಿ ಪ್ರಶ್ನಿಸಿ, ರೀನಾ ಮತ್ತು ಅಹಮದ್ ಎಂಬ ಹೆಸರಿನ ಪಾತ್ರಗಳಿರುವ ಪತ್ರವನ್ನು ಸೇರಿಸಿರುವುದೇ ಸಮಸ್ಯೆ ಎಂಬಂತೆ ತೋರಿಸಿದ್ದಾರೆ. ಕಾರ್ಯಕ್ರಮದಲ್ಲಿ ವರದಿಗಾರನ ವರ್ತನೆ, ಮಾತು ಹಾಗೂ ತೋರಿಸಿರುವ ದೃಶ್ಯಗಳು, ಆ ಅಧ್ಯಾಯವನ್ನು ಅವನು ಒಪ್ಪುತ್ತಿಲ್ಲ ಮತ್ತು ಅದಕ್ಕೆ ವಿರೋಧಿಯಾಗಿ ನಿಲ್ಲುತ್ತಿದ್ದಾನೆ ಎಂಬ ಸಂದೇಶ ನೀಡಿವೆ” ಎಂದು ದೂರುದಾರರು ಆರೋಪಿಸಿದ್ದರು.

ಇಂಡಿಯಾ ಟಿವಿಯಲ್ಲಿ, ಪಠ್ಯಪುಸ್ತಕಕ್ಕೆ ‘ಕಪ್ಪು ಬಣ್ಣ ಬಳಿಯುವ’ ವ್ಯಕ್ತಿಯ ಪ್ರತಿಕ್ರಿಯೆಯೂ ಸೇರಿದಂತೆ ತೀವ್ರ ಅತಿರೇಕಗಳನ್ನು ತೋರಿಸಿದೆ. ಚಾನೆಲ್ ಅದನ್ನು ತಪ್ಪು ಎಂದು ಹೇಳಿಲ್ಲ. ಇದರಿಂದ ಆತನ ವರ್ತನೆಗೆ ಮತ್ತಷ್ಟು ಪ್ರೋತ್ಸಾಹ ಸಿಕ್ಕಂತಾಗಿದೆ ಎಂದು ಘೋರ್ಪಡೆ ಮತ್ತು ಮಿಶ್ರಾ ಹೇಳಿದ್ದರು.

ಬಹುತೇಕ ಎಲ್ಲಾ ಚಾನೆಲ್‌ಗಳು ಹೇಳಿಕೆಗಳನ್ನು ತಟಸ್ಥವಾಗಿ ಪರಿಶೀಲಿಸದೆ, ವಿಮರ್ಶಾತ್ಮಕ ಪ್ರಶ್ನೆಗಳು ಕೇಳದೆ ಪ್ರಸಾರ ಮಾಡುತ್ತಿದ್ದವು. ಆದರೆ ನ್ಯೂಸ್18 ಎಂ.ಪಿ/ಛತ್ತೀಸ್‌ಗಢ ಮತ್ತು ಎಬಿಪಿ ನ್ಯೂಸ್ ಮಾತ್ರ ಶಾಸ್ತ್ರಿಯವರ ಆರೋಪಗಳನ್ನು ಪ್ರಶ್ನಿಸುವ ಅಥವಾ ಅವುಗಳನ್ನು ಪರಿಶೀಲಿಸುವ ಕೆಲಸ ಮಾಡಿದ್ದವು ಎಂದಿದ್ದರು.

ಯಾವುದೇ ಚಾನೆಲ್‌ಗಳು ಎನ್‌ಸಿಇಆರ್‌ಟಿ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...