Homeಮುಖಪುಟ'ಲವ್ ಜಿಹಾದ್' ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಆರ್‌ಟಿ) ಪಠ್ಯಪುಸ್ತಕವನ್ನು ‘ಲವ್ ಜಿಹಾದ್’ ಪಿತೂರಿಯೊಂದಿಗೆ ಜೋಡಿಸುವ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಮಂಗಳವಾರ (ಡಿಸೆಂಬರ್ 2) ಐದು ಸುದ್ದಿ ವಾಹಿನಿಗಳಿಗೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

ಎನ್‌ಸಿಇಆರ್‌ಟಿಯ 3ನೇ ತರಗತಿಯ ಪರಿಸರ ಅಧ್ಯಯನದ ಹಳೆಯ ಅಧ್ಯಾಯವಾದ ‘ಚಿಟ್ಟಿ ಆಯಿ ಹೈ’ ನಲ್ಲಿ ಕಾಲ್ಪನಿಕ ಪತ್ರವೊಂದನ್ನು ತಪ್ಪಾಗಿ ನಿರೂಪಿಸಿರುವ ಬಗ್ಗೆ ದೂರು ದಾಖಲಾಗಿತ್ತು. ರೀನಾ ಎಂಬ ಪಾತ್ರಧಾರಿ ಅಹ್ಮದ್ ಎಂಬ ಮತ್ತೊಂದು ಪಾತ್ರಕ್ಕೆ ಬರೆದ ಪತ್ರವನ್ನು ದೂರದರ್ಶನ ವಾಹಿನಿಗಳು ಲವ್ ಜಿಹಾದ್ ಪಿತೂರಿಯ ಪುರಾವೆಯಾಗಿ ತಪ್ಪಾಗಿ ಬಿಂಬಿಸಿವೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇಂಡಿಯಾ ಟಿವಿ, ನ್ಯೂಸ್ 18 ಎಂಪಿ/ಛತ್ತೀಸ್‌ಗಢ, ಝೀ ಎಂಪಿ/ಛತ್ತೀಸ್‌ಗಢ, ಜೀ ನ್ಯೂಸ್ ಮತ್ತು ಎಬಿಪಿ ನ್ಯೂಸ್‌ನಲ್ಲಿ ಪ್ರಸಾರ ಮಾಡಲಾಗಿದ್ದ ಕಾರ್ಯಕ್ರಮಗಳ ವಿರುದ್ಧ ಇಂದ್ರಜೀತ್ ಘೋರ್ಪಡೆ ಮತ್ತು ಉತ್ಕರ್ಷ್ ಮಿಶ್ರಾ ಎಂಬವರು ದೂರು ನೀಡಿದ್ದರು.

ಪಠ್ಯಪುಸ್ತಕದಲ್ಲಿ ಕೇವಲ ಒಬ್ಬ ಹುಡುಗಿ ಬೇರೆ ಧರ್ಮದ ಹುಡುಗನಿಗೆ ಪತ್ರ ಬರೆದಿದ್ದಾರೆ ಎಂಬ ಕಾರಣಕ್ಕಾಗಿ ಅದನ್ನು ಲವ್ ಜಿಹಾದ್ ಎಂದು ಪ್ರಚಾರ ಮಾಡಿ ವಿಡಿಯೋಗಳನ್ನು ಹಾಕುವುದು ಸರಿಯಲ್ಲ ಎಂದು ಎನ್‌ಬಿಡಿಎಸ್‌ಎ ಡಿಸೆಂಬರ್ 2ರಂದು ನೀಡಿರುವ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಆದ್ದರಿಂದ ಅಂತಹ ವಿಡಿಯೋಗಳನ್ನು ತೆಗೆದುಹಾಕಬೇಕಲು ಸೂಚಿಸಿದೆ ಎಂದು scroll.in ವರದಿ ಮಾಡಿದೆ.

ಎನ್‌ಬಿಡಿಎ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು, “ಭಾರತವು ಜಾತ್ಯತೀತ ರಾಷ್ಟ್ರವಾಗಿದೆ, ಇದು ಸಂವಿಧಾನದ ಆದೇಶವೂ ಹೌದು. ಆದ್ದರಿಂದ ಪ್ರಸಾರಕರು (ಚಾನೆಲ್‌ಗಳು) ಎನ್‌ಸಿಇಆರ್‌ಟಿ ಪುಸ್ತಕದ ಒಂದು ಅಧ್ಯಾಯದಲ್ಲಿ ಇರುವ ವಿಷಯವನ್ನು ನಿಜವಾದ ಅರ್ಥದಿಂದ ಬೇರೆ ರೀತಿಗೆ ತಂದು, ಪಕ್ಷಪಾತಿಯಾಗಿರುವಂತೆ ತೋರಿಸಿದರೆ, ಅದು ನಿಯಮಗಳಿಗೆ ವಿರುದ್ಧವಾಗುತ್ತದೆ ಎಂದು ಆದೇಶ ಪ್ರತಿಯಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.

ಕಪೋಲಕಲ್ಪಿತ ಲವ್ ಜಿಹಾದ್ ವಿಷಯಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಈ ಹಿಂದೆ ಟೀಕೆಗೆ ಗುರಿಯಾಗಿದ್ದರೂ, ವೈಯಕ್ತಿಕ ಅಭಿಪ್ರಾಯ ಆಧಾರಿತ, ಜನರನ್ನು ವಿಭಜಿಸುವ ಮತ್ತು ಗಮನ ಸೆಳೆಯಲು ಕೆಲವು ಗುಂಪುಗಳು ರಚಿಸಿದ ವಿಷಯವನ್ನು ಮುಖ್ಯ ಸುದ್ದಿಯಾಗಿ ಚಾನೆಲ್‌ಗಳು ತೋರಿಸಿವೆ ಎಂದು ದೂರುದಾರರು ಆರೋಪಿಸಿದ್ದರು.

ಚಾನೆಲ್‌ಗಳು ಆ ವಿಷಯವನ್ನು (ಲವ್ ಜಿಹಾದ್) ಪ್ರಚಾರ ಮಾಡುವವರಿಗೆ ಅವಕಾಶ ಕೊಟ್ಟಿದ್ದು ಮಾತ್ರವಲ್ಲ, ಕೆಲವು ನಿರೂಪಕರು ಕೂಡ ಪರೋಕ್ಷ ಸಂಕೇತಗಳು (dog-whistling) ಮತ್ತು ಪರದೆಯಲ್ಲಿನ ಬರಹಗಳ ಮೂಲಕ ಆ ಹೇಳಿಕೆಗಳನ್ನು ಬೆಂಬಲಿಸುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಹೇಳಿದ್ದರು.

“ನ್ಯೂಸ್18 ಮಧ್ಯಪ್ರದೇಶ/ಛತ್ತೀಸ್‌ಗಢ ಚಾನೆಲ್‌ನ ಕಾರ್ಯಕ್ರಮದಲ್ಲಿ ಸಂಪೂರ್ಣ ಚರ್ಚೆ ಭಾಗೇಶ್ವರಧಾಮದ ಧೀರೆಂದ್ರ ಶಾಸ್ತ್ರಿಯವರ ಮಾತುಗಳನ್ನೇ ಕೇಂದ್ರವಾಗಿಸಿಕೊಂಡಿತ್ತು. ಅವರು ಲವ್ ಜಿಹಾದ್ ಮೂಲಕ ಮುಸ್ಲಿಂ ಜನಸಂಖ್ಯೆ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಮತ್ತು ಇದರಿಂದ ಹಿಂದೂ ಮಹಿಳೆಯರು ಅಪಾಯಕ್ಕೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದರು”

“ಕಾರ್ಯಕ್ರಮ ಟಿಕ್ಕರ್‌ಗಳು, ಗ್ರಾಫಿಕ್‌ಗಳು ಮತ್ತು ದೃಶ್ಯಗಳ ಮೂಲಕ ಶಾಸ್ತ್ರಿಯವರ ಮಾತುಗಳನ್ನು ಇನ್ನೂ ಗಟ್ಟಿ ಮಾಡಿತ್ತು, ಆದರೆ ಆ ಹೇಳಿಕೆಗಳು ತಪ್ಪು ಕಲಹ ಉಂಟುಮಾಡುವಂತಿವೆಯೇ ಎಂದು ಯಾವುದೇ ಪ್ರಶ್ನೆ ಅಥವಾ ಪರಿಶೀಲನೆ ಮಾಡಿಲ್ಲ”

“ಝೀ ನ್ಯೂಸ್ ಹಾಗೂ ಝೀ ಮಧ್ಯಪ್ರದೇಶ/ಛತ್ತೀಸ್‌ಗಢ ಚಾನೆಲ್‌ಗಳು ಶಿಕ್ಷಕರ ಮಾತುಗಳನ್ನು ಪ್ರಸಾರ ಮಾಡಿದರೂ, ಕಾರ್ಯಕ್ರಮದ ಒಟ್ಟು ರೂಪ ಮತ್ತು ವಿಷಯವು ಆ ಅಧ್ಯಾಯದಲ್ಲಿ ಏನೋ ಅನುಮಾನಾಸ್ಪದ ವಿಷಯ ಇದೆ ಎಂದು ಜನರಿಗೆ ಭಾಸವಾಗುವಂತೆ ಮಾಡಿತ್ತು”

“ವರದಿಗಾರರು ಆ ಅಧ್ಯಾಯವನ್ನು ಯಾಕೆ ಸೇರಿಸಲಾಗಿದೆ ಎಂಬುದನ್ನು ನೇರವಾಗಿ ಪ್ರಶ್ನಿಸಿ, ರೀನಾ ಮತ್ತು ಅಹಮದ್ ಎಂಬ ಹೆಸರಿನ ಪಾತ್ರಗಳಿರುವ ಪತ್ರವನ್ನು ಸೇರಿಸಿರುವುದೇ ಸಮಸ್ಯೆ ಎಂಬಂತೆ ತೋರಿಸಿದ್ದಾರೆ. ಕಾರ್ಯಕ್ರಮದಲ್ಲಿ ವರದಿಗಾರನ ವರ್ತನೆ, ಮಾತು ಹಾಗೂ ತೋರಿಸಿರುವ ದೃಶ್ಯಗಳು, ಆ ಅಧ್ಯಾಯವನ್ನು ಅವನು ಒಪ್ಪುತ್ತಿಲ್ಲ ಮತ್ತು ಅದಕ್ಕೆ ವಿರೋಧಿಯಾಗಿ ನಿಲ್ಲುತ್ತಿದ್ದಾನೆ ಎಂಬ ಸಂದೇಶ ನೀಡಿವೆ” ಎಂದು ದೂರುದಾರರು ಆರೋಪಿಸಿದ್ದರು.

ಇಂಡಿಯಾ ಟಿವಿಯಲ್ಲಿ, ಪಠ್ಯಪುಸ್ತಕಕ್ಕೆ ‘ಕಪ್ಪು ಬಣ್ಣ ಬಳಿಯುವ’ ವ್ಯಕ್ತಿಯ ಪ್ರತಿಕ್ರಿಯೆಯೂ ಸೇರಿದಂತೆ ತೀವ್ರ ಅತಿರೇಕಗಳನ್ನು ತೋರಿಸಿದೆ. ಚಾನೆಲ್ ಅದನ್ನು ತಪ್ಪು ಎಂದು ಹೇಳಿಲ್ಲ. ಇದರಿಂದ ಆತನ ವರ್ತನೆಗೆ ಮತ್ತಷ್ಟು ಪ್ರೋತ್ಸಾಹ ಸಿಕ್ಕಂತಾಗಿದೆ ಎಂದು ಘೋರ್ಪಡೆ ಮತ್ತು ಮಿಶ್ರಾ ಹೇಳಿದ್ದರು.

ಬಹುತೇಕ ಎಲ್ಲಾ ಚಾನೆಲ್‌ಗಳು ಹೇಳಿಕೆಗಳನ್ನು ತಟಸ್ಥವಾಗಿ ಪರಿಶೀಲಿಸದೆ, ವಿಮರ್ಶಾತ್ಮಕ ಪ್ರಶ್ನೆಗಳು ಕೇಳದೆ ಪ್ರಸಾರ ಮಾಡುತ್ತಿದ್ದವು. ಆದರೆ ನ್ಯೂಸ್18 ಎಂ.ಪಿ/ಛತ್ತೀಸ್‌ಗಢ ಮತ್ತು ಎಬಿಪಿ ನ್ಯೂಸ್ ಮಾತ್ರ ಶಾಸ್ತ್ರಿಯವರ ಆರೋಪಗಳನ್ನು ಪ್ರಶ್ನಿಸುವ ಅಥವಾ ಅವುಗಳನ್ನು ಪರಿಶೀಲಿಸುವ ಕೆಲಸ ಮಾಡಿದ್ದವು ಎಂದಿದ್ದರು.

ಯಾವುದೇ ಚಾನೆಲ್‌ಗಳು ಎನ್‌ಸಿಇಆರ್‌ಟಿ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...