Homeಮುಖಪುಟ'ಲವ್ ಜಿಹಾದ್' ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಆರ್‌ಟಿ) ಪಠ್ಯಪುಸ್ತಕವನ್ನು ‘ಲವ್ ಜಿಹಾದ್’ ಪಿತೂರಿಯೊಂದಿಗೆ ಜೋಡಿಸುವ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಮಂಗಳವಾರ (ಡಿಸೆಂಬರ್ 2) ಐದು ಸುದ್ದಿ ವಾಹಿನಿಗಳಿಗೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

ಎನ್‌ಸಿಇಆರ್‌ಟಿಯ 3ನೇ ತರಗತಿಯ ಪರಿಸರ ಅಧ್ಯಯನದ ಹಳೆಯ ಅಧ್ಯಾಯವಾದ ‘ಚಿಟ್ಟಿ ಆಯಿ ಹೈ’ ನಲ್ಲಿ ಕಾಲ್ಪನಿಕ ಪತ್ರವೊಂದನ್ನು ತಪ್ಪಾಗಿ ನಿರೂಪಿಸಿರುವ ಬಗ್ಗೆ ದೂರು ದಾಖಲಾಗಿತ್ತು. ರೀನಾ ಎಂಬ ಪಾತ್ರಧಾರಿ ಅಹ್ಮದ್ ಎಂಬ ಮತ್ತೊಂದು ಪಾತ್ರಕ್ಕೆ ಬರೆದ ಪತ್ರವನ್ನು ದೂರದರ್ಶನ ವಾಹಿನಿಗಳು ಲವ್ ಜಿಹಾದ್ ಪಿತೂರಿಯ ಪುರಾವೆಯಾಗಿ ತಪ್ಪಾಗಿ ಬಿಂಬಿಸಿವೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇಂಡಿಯಾ ಟಿವಿ, ನ್ಯೂಸ್ 18 ಎಂಪಿ/ಛತ್ತೀಸ್‌ಗಢ, ಝೀ ಎಂಪಿ/ಛತ್ತೀಸ್‌ಗಢ, ಜೀ ನ್ಯೂಸ್ ಮತ್ತು ಎಬಿಪಿ ನ್ಯೂಸ್‌ನಲ್ಲಿ ಪ್ರಸಾರ ಮಾಡಲಾಗಿದ್ದ ಕಾರ್ಯಕ್ರಮಗಳ ವಿರುದ್ಧ ಇಂದ್ರಜೀತ್ ಘೋರ್ಪಡೆ ಮತ್ತು ಉತ್ಕರ್ಷ್ ಮಿಶ್ರಾ ಎಂಬವರು ದೂರು ನೀಡಿದ್ದರು.

ಪಠ್ಯಪುಸ್ತಕದಲ್ಲಿ ಕೇವಲ ಒಬ್ಬ ಹುಡುಗಿ ಬೇರೆ ಧರ್ಮದ ಹುಡುಗನಿಗೆ ಪತ್ರ ಬರೆದಿದ್ದಾರೆ ಎಂಬ ಕಾರಣಕ್ಕಾಗಿ ಅದನ್ನು ಲವ್ ಜಿಹಾದ್ ಎಂದು ಪ್ರಚಾರ ಮಾಡಿ ವಿಡಿಯೋಗಳನ್ನು ಹಾಕುವುದು ಸರಿಯಲ್ಲ ಎಂದು ಎನ್‌ಬಿಡಿಎಸ್‌ಎ ಡಿಸೆಂಬರ್ 2ರಂದು ನೀಡಿರುವ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಆದ್ದರಿಂದ ಅಂತಹ ವಿಡಿಯೋಗಳನ್ನು ತೆಗೆದುಹಾಕಬೇಕಲು ಸೂಚಿಸಿದೆ ಎಂದು scroll.in ವರದಿ ಮಾಡಿದೆ.

ಎನ್‌ಬಿಡಿಎ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು, “ಭಾರತವು ಜಾತ್ಯತೀತ ರಾಷ್ಟ್ರವಾಗಿದೆ, ಇದು ಸಂವಿಧಾನದ ಆದೇಶವೂ ಹೌದು. ಆದ್ದರಿಂದ ಪ್ರಸಾರಕರು (ಚಾನೆಲ್‌ಗಳು) ಎನ್‌ಸಿಇಆರ್‌ಟಿ ಪುಸ್ತಕದ ಒಂದು ಅಧ್ಯಾಯದಲ್ಲಿ ಇರುವ ವಿಷಯವನ್ನು ನಿಜವಾದ ಅರ್ಥದಿಂದ ಬೇರೆ ರೀತಿಗೆ ತಂದು, ಪಕ್ಷಪಾತಿಯಾಗಿರುವಂತೆ ತೋರಿಸಿದರೆ, ಅದು ನಿಯಮಗಳಿಗೆ ವಿರುದ್ಧವಾಗುತ್ತದೆ ಎಂದು ಆದೇಶ ಪ್ರತಿಯಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.

ಕಪೋಲಕಲ್ಪಿತ ಲವ್ ಜಿಹಾದ್ ವಿಷಯಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಈ ಹಿಂದೆ ಟೀಕೆಗೆ ಗುರಿಯಾಗಿದ್ದರೂ, ವೈಯಕ್ತಿಕ ಅಭಿಪ್ರಾಯ ಆಧಾರಿತ, ಜನರನ್ನು ವಿಭಜಿಸುವ ಮತ್ತು ಗಮನ ಸೆಳೆಯಲು ಕೆಲವು ಗುಂಪುಗಳು ರಚಿಸಿದ ವಿಷಯವನ್ನು ಮುಖ್ಯ ಸುದ್ದಿಯಾಗಿ ಚಾನೆಲ್‌ಗಳು ತೋರಿಸಿವೆ ಎಂದು ದೂರುದಾರರು ಆರೋಪಿಸಿದ್ದರು.

ಚಾನೆಲ್‌ಗಳು ಆ ವಿಷಯವನ್ನು (ಲವ್ ಜಿಹಾದ್) ಪ್ರಚಾರ ಮಾಡುವವರಿಗೆ ಅವಕಾಶ ಕೊಟ್ಟಿದ್ದು ಮಾತ್ರವಲ್ಲ, ಕೆಲವು ನಿರೂಪಕರು ಕೂಡ ಪರೋಕ್ಷ ಸಂಕೇತಗಳು (dog-whistling) ಮತ್ತು ಪರದೆಯಲ್ಲಿನ ಬರಹಗಳ ಮೂಲಕ ಆ ಹೇಳಿಕೆಗಳನ್ನು ಬೆಂಬಲಿಸುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಹೇಳಿದ್ದರು.

“ನ್ಯೂಸ್18 ಮಧ್ಯಪ್ರದೇಶ/ಛತ್ತೀಸ್‌ಗಢ ಚಾನೆಲ್‌ನ ಕಾರ್ಯಕ್ರಮದಲ್ಲಿ ಸಂಪೂರ್ಣ ಚರ್ಚೆ ಭಾಗೇಶ್ವರಧಾಮದ ಧೀರೆಂದ್ರ ಶಾಸ್ತ್ರಿಯವರ ಮಾತುಗಳನ್ನೇ ಕೇಂದ್ರವಾಗಿಸಿಕೊಂಡಿತ್ತು. ಅವರು ಲವ್ ಜಿಹಾದ್ ಮೂಲಕ ಮುಸ್ಲಿಂ ಜನಸಂಖ್ಯೆ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಮತ್ತು ಇದರಿಂದ ಹಿಂದೂ ಮಹಿಳೆಯರು ಅಪಾಯಕ್ಕೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದರು”

“ಕಾರ್ಯಕ್ರಮ ಟಿಕ್ಕರ್‌ಗಳು, ಗ್ರಾಫಿಕ್‌ಗಳು ಮತ್ತು ದೃಶ್ಯಗಳ ಮೂಲಕ ಶಾಸ್ತ್ರಿಯವರ ಮಾತುಗಳನ್ನು ಇನ್ನೂ ಗಟ್ಟಿ ಮಾಡಿತ್ತು, ಆದರೆ ಆ ಹೇಳಿಕೆಗಳು ತಪ್ಪು ಕಲಹ ಉಂಟುಮಾಡುವಂತಿವೆಯೇ ಎಂದು ಯಾವುದೇ ಪ್ರಶ್ನೆ ಅಥವಾ ಪರಿಶೀಲನೆ ಮಾಡಿಲ್ಲ”

“ಝೀ ನ್ಯೂಸ್ ಹಾಗೂ ಝೀ ಮಧ್ಯಪ್ರದೇಶ/ಛತ್ತೀಸ್‌ಗಢ ಚಾನೆಲ್‌ಗಳು ಶಿಕ್ಷಕರ ಮಾತುಗಳನ್ನು ಪ್ರಸಾರ ಮಾಡಿದರೂ, ಕಾರ್ಯಕ್ರಮದ ಒಟ್ಟು ರೂಪ ಮತ್ತು ವಿಷಯವು ಆ ಅಧ್ಯಾಯದಲ್ಲಿ ಏನೋ ಅನುಮಾನಾಸ್ಪದ ವಿಷಯ ಇದೆ ಎಂದು ಜನರಿಗೆ ಭಾಸವಾಗುವಂತೆ ಮಾಡಿತ್ತು”

“ವರದಿಗಾರರು ಆ ಅಧ್ಯಾಯವನ್ನು ಯಾಕೆ ಸೇರಿಸಲಾಗಿದೆ ಎಂಬುದನ್ನು ನೇರವಾಗಿ ಪ್ರಶ್ನಿಸಿ, ರೀನಾ ಮತ್ತು ಅಹಮದ್ ಎಂಬ ಹೆಸರಿನ ಪಾತ್ರಗಳಿರುವ ಪತ್ರವನ್ನು ಸೇರಿಸಿರುವುದೇ ಸಮಸ್ಯೆ ಎಂಬಂತೆ ತೋರಿಸಿದ್ದಾರೆ. ಕಾರ್ಯಕ್ರಮದಲ್ಲಿ ವರದಿಗಾರನ ವರ್ತನೆ, ಮಾತು ಹಾಗೂ ತೋರಿಸಿರುವ ದೃಶ್ಯಗಳು, ಆ ಅಧ್ಯಾಯವನ್ನು ಅವನು ಒಪ್ಪುತ್ತಿಲ್ಲ ಮತ್ತು ಅದಕ್ಕೆ ವಿರೋಧಿಯಾಗಿ ನಿಲ್ಲುತ್ತಿದ್ದಾನೆ ಎಂಬ ಸಂದೇಶ ನೀಡಿವೆ” ಎಂದು ದೂರುದಾರರು ಆರೋಪಿಸಿದ್ದರು.

ಇಂಡಿಯಾ ಟಿವಿಯಲ್ಲಿ, ಪಠ್ಯಪುಸ್ತಕಕ್ಕೆ ‘ಕಪ್ಪು ಬಣ್ಣ ಬಳಿಯುವ’ ವ್ಯಕ್ತಿಯ ಪ್ರತಿಕ್ರಿಯೆಯೂ ಸೇರಿದಂತೆ ತೀವ್ರ ಅತಿರೇಕಗಳನ್ನು ತೋರಿಸಿದೆ. ಚಾನೆಲ್ ಅದನ್ನು ತಪ್ಪು ಎಂದು ಹೇಳಿಲ್ಲ. ಇದರಿಂದ ಆತನ ವರ್ತನೆಗೆ ಮತ್ತಷ್ಟು ಪ್ರೋತ್ಸಾಹ ಸಿಕ್ಕಂತಾಗಿದೆ ಎಂದು ಘೋರ್ಪಡೆ ಮತ್ತು ಮಿಶ್ರಾ ಹೇಳಿದ್ದರು.

ಬಹುತೇಕ ಎಲ್ಲಾ ಚಾನೆಲ್‌ಗಳು ಹೇಳಿಕೆಗಳನ್ನು ತಟಸ್ಥವಾಗಿ ಪರಿಶೀಲಿಸದೆ, ವಿಮರ್ಶಾತ್ಮಕ ಪ್ರಶ್ನೆಗಳು ಕೇಳದೆ ಪ್ರಸಾರ ಮಾಡುತ್ತಿದ್ದವು. ಆದರೆ ನ್ಯೂಸ್18 ಎಂ.ಪಿ/ಛತ್ತೀಸ್‌ಗಢ ಮತ್ತು ಎಬಿಪಿ ನ್ಯೂಸ್ ಮಾತ್ರ ಶಾಸ್ತ್ರಿಯವರ ಆರೋಪಗಳನ್ನು ಪ್ರಶ್ನಿಸುವ ಅಥವಾ ಅವುಗಳನ್ನು ಪರಿಶೀಲಿಸುವ ಕೆಲಸ ಮಾಡಿದ್ದವು ಎಂದಿದ್ದರು.

ಯಾವುದೇ ಚಾನೆಲ್‌ಗಳು ಎನ್‌ಸಿಇಆರ್‌ಟಿ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...