Homeಮುಖಪುಟ'ಲವ್ ಜಿಹಾದ್' ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಆರ್‌ಟಿ) ಪಠ್ಯಪುಸ್ತಕವನ್ನು ‘ಲವ್ ಜಿಹಾದ್’ ಪಿತೂರಿಯೊಂದಿಗೆ ಜೋಡಿಸುವ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಮಂಗಳವಾರ (ಡಿಸೆಂಬರ್ 2) ಐದು ಸುದ್ದಿ ವಾಹಿನಿಗಳಿಗೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

ಎನ್‌ಸಿಇಆರ್‌ಟಿಯ 3ನೇ ತರಗತಿಯ ಪರಿಸರ ಅಧ್ಯಯನದ ಹಳೆಯ ಅಧ್ಯಾಯವಾದ ‘ಚಿಟ್ಟಿ ಆಯಿ ಹೈ’ ನಲ್ಲಿ ಕಾಲ್ಪನಿಕ ಪತ್ರವೊಂದನ್ನು ತಪ್ಪಾಗಿ ನಿರೂಪಿಸಿರುವ ಬಗ್ಗೆ ದೂರು ದಾಖಲಾಗಿತ್ತು. ರೀನಾ ಎಂಬ ಪಾತ್ರಧಾರಿ ಅಹ್ಮದ್ ಎಂಬ ಮತ್ತೊಂದು ಪಾತ್ರಕ್ಕೆ ಬರೆದ ಪತ್ರವನ್ನು ದೂರದರ್ಶನ ವಾಹಿನಿಗಳು ಲವ್ ಜಿಹಾದ್ ಪಿತೂರಿಯ ಪುರಾವೆಯಾಗಿ ತಪ್ಪಾಗಿ ಬಿಂಬಿಸಿವೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇಂಡಿಯಾ ಟಿವಿ, ನ್ಯೂಸ್ 18 ಎಂಪಿ/ಛತ್ತೀಸ್‌ಗಢ, ಝೀ ಎಂಪಿ/ಛತ್ತೀಸ್‌ಗಢ, ಜೀ ನ್ಯೂಸ್ ಮತ್ತು ಎಬಿಪಿ ನ್ಯೂಸ್‌ನಲ್ಲಿ ಪ್ರಸಾರ ಮಾಡಲಾಗಿದ್ದ ಕಾರ್ಯಕ್ರಮಗಳ ವಿರುದ್ಧ ಇಂದ್ರಜೀತ್ ಘೋರ್ಪಡೆ ಮತ್ತು ಉತ್ಕರ್ಷ್ ಮಿಶ್ರಾ ಎಂಬವರು ದೂರು ನೀಡಿದ್ದರು.

ಪಠ್ಯಪುಸ್ತಕದಲ್ಲಿ ಕೇವಲ ಒಬ್ಬ ಹುಡುಗಿ ಬೇರೆ ಧರ್ಮದ ಹುಡುಗನಿಗೆ ಪತ್ರ ಬರೆದಿದ್ದಾರೆ ಎಂಬ ಕಾರಣಕ್ಕಾಗಿ ಅದನ್ನು ಲವ್ ಜಿಹಾದ್ ಎಂದು ಪ್ರಚಾರ ಮಾಡಿ ವಿಡಿಯೋಗಳನ್ನು ಹಾಕುವುದು ಸರಿಯಲ್ಲ ಎಂದು ಎನ್‌ಬಿಡಿಎಸ್‌ಎ ಡಿಸೆಂಬರ್ 2ರಂದು ನೀಡಿರುವ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಆದ್ದರಿಂದ ಅಂತಹ ವಿಡಿಯೋಗಳನ್ನು ತೆಗೆದುಹಾಕಬೇಕಲು ಸೂಚಿಸಿದೆ ಎಂದು scroll.in ವರದಿ ಮಾಡಿದೆ.

ಎನ್‌ಬಿಡಿಎ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು, “ಭಾರತವು ಜಾತ್ಯತೀತ ರಾಷ್ಟ್ರವಾಗಿದೆ, ಇದು ಸಂವಿಧಾನದ ಆದೇಶವೂ ಹೌದು. ಆದ್ದರಿಂದ ಪ್ರಸಾರಕರು (ಚಾನೆಲ್‌ಗಳು) ಎನ್‌ಸಿಇಆರ್‌ಟಿ ಪುಸ್ತಕದ ಒಂದು ಅಧ್ಯಾಯದಲ್ಲಿ ಇರುವ ವಿಷಯವನ್ನು ನಿಜವಾದ ಅರ್ಥದಿಂದ ಬೇರೆ ರೀತಿಗೆ ತಂದು, ಪಕ್ಷಪಾತಿಯಾಗಿರುವಂತೆ ತೋರಿಸಿದರೆ, ಅದು ನಿಯಮಗಳಿಗೆ ವಿರುದ್ಧವಾಗುತ್ತದೆ ಎಂದು ಆದೇಶ ಪ್ರತಿಯಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.

ಕಪೋಲಕಲ್ಪಿತ ಲವ್ ಜಿಹಾದ್ ವಿಷಯಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಈ ಹಿಂದೆ ಟೀಕೆಗೆ ಗುರಿಯಾಗಿದ್ದರೂ, ವೈಯಕ್ತಿಕ ಅಭಿಪ್ರಾಯ ಆಧಾರಿತ, ಜನರನ್ನು ವಿಭಜಿಸುವ ಮತ್ತು ಗಮನ ಸೆಳೆಯಲು ಕೆಲವು ಗುಂಪುಗಳು ರಚಿಸಿದ ವಿಷಯವನ್ನು ಮುಖ್ಯ ಸುದ್ದಿಯಾಗಿ ಚಾನೆಲ್‌ಗಳು ತೋರಿಸಿವೆ ಎಂದು ದೂರುದಾರರು ಆರೋಪಿಸಿದ್ದರು.

ಚಾನೆಲ್‌ಗಳು ಆ ವಿಷಯವನ್ನು (ಲವ್ ಜಿಹಾದ್) ಪ್ರಚಾರ ಮಾಡುವವರಿಗೆ ಅವಕಾಶ ಕೊಟ್ಟಿದ್ದು ಮಾತ್ರವಲ್ಲ, ಕೆಲವು ನಿರೂಪಕರು ಕೂಡ ಪರೋಕ್ಷ ಸಂಕೇತಗಳು (dog-whistling) ಮತ್ತು ಪರದೆಯಲ್ಲಿನ ಬರಹಗಳ ಮೂಲಕ ಆ ಹೇಳಿಕೆಗಳನ್ನು ಬೆಂಬಲಿಸುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಹೇಳಿದ್ದರು.

“ನ್ಯೂಸ್18 ಮಧ್ಯಪ್ರದೇಶ/ಛತ್ತೀಸ್‌ಗಢ ಚಾನೆಲ್‌ನ ಕಾರ್ಯಕ್ರಮದಲ್ಲಿ ಸಂಪೂರ್ಣ ಚರ್ಚೆ ಭಾಗೇಶ್ವರಧಾಮದ ಧೀರೆಂದ್ರ ಶಾಸ್ತ್ರಿಯವರ ಮಾತುಗಳನ್ನೇ ಕೇಂದ್ರವಾಗಿಸಿಕೊಂಡಿತ್ತು. ಅವರು ಲವ್ ಜಿಹಾದ್ ಮೂಲಕ ಮುಸ್ಲಿಂ ಜನಸಂಖ್ಯೆ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಮತ್ತು ಇದರಿಂದ ಹಿಂದೂ ಮಹಿಳೆಯರು ಅಪಾಯಕ್ಕೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದರು”

“ಕಾರ್ಯಕ್ರಮ ಟಿಕ್ಕರ್‌ಗಳು, ಗ್ರಾಫಿಕ್‌ಗಳು ಮತ್ತು ದೃಶ್ಯಗಳ ಮೂಲಕ ಶಾಸ್ತ್ರಿಯವರ ಮಾತುಗಳನ್ನು ಇನ್ನೂ ಗಟ್ಟಿ ಮಾಡಿತ್ತು, ಆದರೆ ಆ ಹೇಳಿಕೆಗಳು ತಪ್ಪು ಕಲಹ ಉಂಟುಮಾಡುವಂತಿವೆಯೇ ಎಂದು ಯಾವುದೇ ಪ್ರಶ್ನೆ ಅಥವಾ ಪರಿಶೀಲನೆ ಮಾಡಿಲ್ಲ”

“ಝೀ ನ್ಯೂಸ್ ಹಾಗೂ ಝೀ ಮಧ್ಯಪ್ರದೇಶ/ಛತ್ತೀಸ್‌ಗಢ ಚಾನೆಲ್‌ಗಳು ಶಿಕ್ಷಕರ ಮಾತುಗಳನ್ನು ಪ್ರಸಾರ ಮಾಡಿದರೂ, ಕಾರ್ಯಕ್ರಮದ ಒಟ್ಟು ರೂಪ ಮತ್ತು ವಿಷಯವು ಆ ಅಧ್ಯಾಯದಲ್ಲಿ ಏನೋ ಅನುಮಾನಾಸ್ಪದ ವಿಷಯ ಇದೆ ಎಂದು ಜನರಿಗೆ ಭಾಸವಾಗುವಂತೆ ಮಾಡಿತ್ತು”

“ವರದಿಗಾರರು ಆ ಅಧ್ಯಾಯವನ್ನು ಯಾಕೆ ಸೇರಿಸಲಾಗಿದೆ ಎಂಬುದನ್ನು ನೇರವಾಗಿ ಪ್ರಶ್ನಿಸಿ, ರೀನಾ ಮತ್ತು ಅಹಮದ್ ಎಂಬ ಹೆಸರಿನ ಪಾತ್ರಗಳಿರುವ ಪತ್ರವನ್ನು ಸೇರಿಸಿರುವುದೇ ಸಮಸ್ಯೆ ಎಂಬಂತೆ ತೋರಿಸಿದ್ದಾರೆ. ಕಾರ್ಯಕ್ರಮದಲ್ಲಿ ವರದಿಗಾರನ ವರ್ತನೆ, ಮಾತು ಹಾಗೂ ತೋರಿಸಿರುವ ದೃಶ್ಯಗಳು, ಆ ಅಧ್ಯಾಯವನ್ನು ಅವನು ಒಪ್ಪುತ್ತಿಲ್ಲ ಮತ್ತು ಅದಕ್ಕೆ ವಿರೋಧಿಯಾಗಿ ನಿಲ್ಲುತ್ತಿದ್ದಾನೆ ಎಂಬ ಸಂದೇಶ ನೀಡಿವೆ” ಎಂದು ದೂರುದಾರರು ಆರೋಪಿಸಿದ್ದರು.

ಇಂಡಿಯಾ ಟಿವಿಯಲ್ಲಿ, ಪಠ್ಯಪುಸ್ತಕಕ್ಕೆ ‘ಕಪ್ಪು ಬಣ್ಣ ಬಳಿಯುವ’ ವ್ಯಕ್ತಿಯ ಪ್ರತಿಕ್ರಿಯೆಯೂ ಸೇರಿದಂತೆ ತೀವ್ರ ಅತಿರೇಕಗಳನ್ನು ತೋರಿಸಿದೆ. ಚಾನೆಲ್ ಅದನ್ನು ತಪ್ಪು ಎಂದು ಹೇಳಿಲ್ಲ. ಇದರಿಂದ ಆತನ ವರ್ತನೆಗೆ ಮತ್ತಷ್ಟು ಪ್ರೋತ್ಸಾಹ ಸಿಕ್ಕಂತಾಗಿದೆ ಎಂದು ಘೋರ್ಪಡೆ ಮತ್ತು ಮಿಶ್ರಾ ಹೇಳಿದ್ದರು.

ಬಹುತೇಕ ಎಲ್ಲಾ ಚಾನೆಲ್‌ಗಳು ಹೇಳಿಕೆಗಳನ್ನು ತಟಸ್ಥವಾಗಿ ಪರಿಶೀಲಿಸದೆ, ವಿಮರ್ಶಾತ್ಮಕ ಪ್ರಶ್ನೆಗಳು ಕೇಳದೆ ಪ್ರಸಾರ ಮಾಡುತ್ತಿದ್ದವು. ಆದರೆ ನ್ಯೂಸ್18 ಎಂ.ಪಿ/ಛತ್ತೀಸ್‌ಗಢ ಮತ್ತು ಎಬಿಪಿ ನ್ಯೂಸ್ ಮಾತ್ರ ಶಾಸ್ತ್ರಿಯವರ ಆರೋಪಗಳನ್ನು ಪ್ರಶ್ನಿಸುವ ಅಥವಾ ಅವುಗಳನ್ನು ಪರಿಶೀಲಿಸುವ ಕೆಲಸ ಮಾಡಿದ್ದವು ಎಂದಿದ್ದರು.

ಯಾವುದೇ ಚಾನೆಲ್‌ಗಳು ಎನ್‌ಸಿಇಆರ್‌ಟಿ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...