Homeಮುಖಪುಟ'ಲವ್ ಜಿಹಾದ್' ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಆರ್‌ಟಿ) ಪಠ್ಯಪುಸ್ತಕವನ್ನು ‘ಲವ್ ಜಿಹಾದ್’ ಪಿತೂರಿಯೊಂದಿಗೆ ಜೋಡಿಸುವ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಮಂಗಳವಾರ (ಡಿಸೆಂಬರ್ 2) ಐದು ಸುದ್ದಿ ವಾಹಿನಿಗಳಿಗೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

ಎನ್‌ಸಿಇಆರ್‌ಟಿಯ 3ನೇ ತರಗತಿಯ ಪರಿಸರ ಅಧ್ಯಯನದ ಹಳೆಯ ಅಧ್ಯಾಯವಾದ ‘ಚಿಟ್ಟಿ ಆಯಿ ಹೈ’ ನಲ್ಲಿ ಕಾಲ್ಪನಿಕ ಪತ್ರವೊಂದನ್ನು ತಪ್ಪಾಗಿ ನಿರೂಪಿಸಿರುವ ಬಗ್ಗೆ ದೂರು ದಾಖಲಾಗಿತ್ತು. ರೀನಾ ಎಂಬ ಪಾತ್ರಧಾರಿ ಅಹ್ಮದ್ ಎಂಬ ಮತ್ತೊಂದು ಪಾತ್ರಕ್ಕೆ ಬರೆದ ಪತ್ರವನ್ನು ದೂರದರ್ಶನ ವಾಹಿನಿಗಳು ಲವ್ ಜಿಹಾದ್ ಪಿತೂರಿಯ ಪುರಾವೆಯಾಗಿ ತಪ್ಪಾಗಿ ಬಿಂಬಿಸಿವೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇಂಡಿಯಾ ಟಿವಿ, ನ್ಯೂಸ್ 18 ಎಂಪಿ/ಛತ್ತೀಸ್‌ಗಢ, ಝೀ ಎಂಪಿ/ಛತ್ತೀಸ್‌ಗಢ, ಜೀ ನ್ಯೂಸ್ ಮತ್ತು ಎಬಿಪಿ ನ್ಯೂಸ್‌ನಲ್ಲಿ ಪ್ರಸಾರ ಮಾಡಲಾಗಿದ್ದ ಕಾರ್ಯಕ್ರಮಗಳ ವಿರುದ್ಧ ಇಂದ್ರಜೀತ್ ಘೋರ್ಪಡೆ ಮತ್ತು ಉತ್ಕರ್ಷ್ ಮಿಶ್ರಾ ಎಂಬವರು ದೂರು ನೀಡಿದ್ದರು.

ಪಠ್ಯಪುಸ್ತಕದಲ್ಲಿ ಕೇವಲ ಒಬ್ಬ ಹುಡುಗಿ ಬೇರೆ ಧರ್ಮದ ಹುಡುಗನಿಗೆ ಪತ್ರ ಬರೆದಿದ್ದಾರೆ ಎಂಬ ಕಾರಣಕ್ಕಾಗಿ ಅದನ್ನು ಲವ್ ಜಿಹಾದ್ ಎಂದು ಪ್ರಚಾರ ಮಾಡಿ ವಿಡಿಯೋಗಳನ್ನು ಹಾಕುವುದು ಸರಿಯಲ್ಲ ಎಂದು ಎನ್‌ಬಿಡಿಎಸ್‌ಎ ಡಿಸೆಂಬರ್ 2ರಂದು ನೀಡಿರುವ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಆದ್ದರಿಂದ ಅಂತಹ ವಿಡಿಯೋಗಳನ್ನು ತೆಗೆದುಹಾಕಬೇಕಲು ಸೂಚಿಸಿದೆ ಎಂದು scroll.in ವರದಿ ಮಾಡಿದೆ.

ಎನ್‌ಬಿಡಿಎ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು, “ಭಾರತವು ಜಾತ್ಯತೀತ ರಾಷ್ಟ್ರವಾಗಿದೆ, ಇದು ಸಂವಿಧಾನದ ಆದೇಶವೂ ಹೌದು. ಆದ್ದರಿಂದ ಪ್ರಸಾರಕರು (ಚಾನೆಲ್‌ಗಳು) ಎನ್‌ಸಿಇಆರ್‌ಟಿ ಪುಸ್ತಕದ ಒಂದು ಅಧ್ಯಾಯದಲ್ಲಿ ಇರುವ ವಿಷಯವನ್ನು ನಿಜವಾದ ಅರ್ಥದಿಂದ ಬೇರೆ ರೀತಿಗೆ ತಂದು, ಪಕ್ಷಪಾತಿಯಾಗಿರುವಂತೆ ತೋರಿಸಿದರೆ, ಅದು ನಿಯಮಗಳಿಗೆ ವಿರುದ್ಧವಾಗುತ್ತದೆ ಎಂದು ಆದೇಶ ಪ್ರತಿಯಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.

ಕಪೋಲಕಲ್ಪಿತ ಲವ್ ಜಿಹಾದ್ ವಿಷಯಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಈ ಹಿಂದೆ ಟೀಕೆಗೆ ಗುರಿಯಾಗಿದ್ದರೂ, ವೈಯಕ್ತಿಕ ಅಭಿಪ್ರಾಯ ಆಧಾರಿತ, ಜನರನ್ನು ವಿಭಜಿಸುವ ಮತ್ತು ಗಮನ ಸೆಳೆಯಲು ಕೆಲವು ಗುಂಪುಗಳು ರಚಿಸಿದ ವಿಷಯವನ್ನು ಮುಖ್ಯ ಸುದ್ದಿಯಾಗಿ ಚಾನೆಲ್‌ಗಳು ತೋರಿಸಿವೆ ಎಂದು ದೂರುದಾರರು ಆರೋಪಿಸಿದ್ದರು.

ಚಾನೆಲ್‌ಗಳು ಆ ವಿಷಯವನ್ನು (ಲವ್ ಜಿಹಾದ್) ಪ್ರಚಾರ ಮಾಡುವವರಿಗೆ ಅವಕಾಶ ಕೊಟ್ಟಿದ್ದು ಮಾತ್ರವಲ್ಲ, ಕೆಲವು ನಿರೂಪಕರು ಕೂಡ ಪರೋಕ್ಷ ಸಂಕೇತಗಳು (dog-whistling) ಮತ್ತು ಪರದೆಯಲ್ಲಿನ ಬರಹಗಳ ಮೂಲಕ ಆ ಹೇಳಿಕೆಗಳನ್ನು ಬೆಂಬಲಿಸುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಹೇಳಿದ್ದರು.

“ನ್ಯೂಸ್18 ಮಧ್ಯಪ್ರದೇಶ/ಛತ್ತೀಸ್‌ಗಢ ಚಾನೆಲ್‌ನ ಕಾರ್ಯಕ್ರಮದಲ್ಲಿ ಸಂಪೂರ್ಣ ಚರ್ಚೆ ಭಾಗೇಶ್ವರಧಾಮದ ಧೀರೆಂದ್ರ ಶಾಸ್ತ್ರಿಯವರ ಮಾತುಗಳನ್ನೇ ಕೇಂದ್ರವಾಗಿಸಿಕೊಂಡಿತ್ತು. ಅವರು ಲವ್ ಜಿಹಾದ್ ಮೂಲಕ ಮುಸ್ಲಿಂ ಜನಸಂಖ್ಯೆ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಮತ್ತು ಇದರಿಂದ ಹಿಂದೂ ಮಹಿಳೆಯರು ಅಪಾಯಕ್ಕೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದರು”

“ಕಾರ್ಯಕ್ರಮ ಟಿಕ್ಕರ್‌ಗಳು, ಗ್ರಾಫಿಕ್‌ಗಳು ಮತ್ತು ದೃಶ್ಯಗಳ ಮೂಲಕ ಶಾಸ್ತ್ರಿಯವರ ಮಾತುಗಳನ್ನು ಇನ್ನೂ ಗಟ್ಟಿ ಮಾಡಿತ್ತು, ಆದರೆ ಆ ಹೇಳಿಕೆಗಳು ತಪ್ಪು ಕಲಹ ಉಂಟುಮಾಡುವಂತಿವೆಯೇ ಎಂದು ಯಾವುದೇ ಪ್ರಶ್ನೆ ಅಥವಾ ಪರಿಶೀಲನೆ ಮಾಡಿಲ್ಲ”

“ಝೀ ನ್ಯೂಸ್ ಹಾಗೂ ಝೀ ಮಧ್ಯಪ್ರದೇಶ/ಛತ್ತೀಸ್‌ಗಢ ಚಾನೆಲ್‌ಗಳು ಶಿಕ್ಷಕರ ಮಾತುಗಳನ್ನು ಪ್ರಸಾರ ಮಾಡಿದರೂ, ಕಾರ್ಯಕ್ರಮದ ಒಟ್ಟು ರೂಪ ಮತ್ತು ವಿಷಯವು ಆ ಅಧ್ಯಾಯದಲ್ಲಿ ಏನೋ ಅನುಮಾನಾಸ್ಪದ ವಿಷಯ ಇದೆ ಎಂದು ಜನರಿಗೆ ಭಾಸವಾಗುವಂತೆ ಮಾಡಿತ್ತು”

“ವರದಿಗಾರರು ಆ ಅಧ್ಯಾಯವನ್ನು ಯಾಕೆ ಸೇರಿಸಲಾಗಿದೆ ಎಂಬುದನ್ನು ನೇರವಾಗಿ ಪ್ರಶ್ನಿಸಿ, ರೀನಾ ಮತ್ತು ಅಹಮದ್ ಎಂಬ ಹೆಸರಿನ ಪಾತ್ರಗಳಿರುವ ಪತ್ರವನ್ನು ಸೇರಿಸಿರುವುದೇ ಸಮಸ್ಯೆ ಎಂಬಂತೆ ತೋರಿಸಿದ್ದಾರೆ. ಕಾರ್ಯಕ್ರಮದಲ್ಲಿ ವರದಿಗಾರನ ವರ್ತನೆ, ಮಾತು ಹಾಗೂ ತೋರಿಸಿರುವ ದೃಶ್ಯಗಳು, ಆ ಅಧ್ಯಾಯವನ್ನು ಅವನು ಒಪ್ಪುತ್ತಿಲ್ಲ ಮತ್ತು ಅದಕ್ಕೆ ವಿರೋಧಿಯಾಗಿ ನಿಲ್ಲುತ್ತಿದ್ದಾನೆ ಎಂಬ ಸಂದೇಶ ನೀಡಿವೆ” ಎಂದು ದೂರುದಾರರು ಆರೋಪಿಸಿದ್ದರು.

ಇಂಡಿಯಾ ಟಿವಿಯಲ್ಲಿ, ಪಠ್ಯಪುಸ್ತಕಕ್ಕೆ ‘ಕಪ್ಪು ಬಣ್ಣ ಬಳಿಯುವ’ ವ್ಯಕ್ತಿಯ ಪ್ರತಿಕ್ರಿಯೆಯೂ ಸೇರಿದಂತೆ ತೀವ್ರ ಅತಿರೇಕಗಳನ್ನು ತೋರಿಸಿದೆ. ಚಾನೆಲ್ ಅದನ್ನು ತಪ್ಪು ಎಂದು ಹೇಳಿಲ್ಲ. ಇದರಿಂದ ಆತನ ವರ್ತನೆಗೆ ಮತ್ತಷ್ಟು ಪ್ರೋತ್ಸಾಹ ಸಿಕ್ಕಂತಾಗಿದೆ ಎಂದು ಘೋರ್ಪಡೆ ಮತ್ತು ಮಿಶ್ರಾ ಹೇಳಿದ್ದರು.

ಬಹುತೇಕ ಎಲ್ಲಾ ಚಾನೆಲ್‌ಗಳು ಹೇಳಿಕೆಗಳನ್ನು ತಟಸ್ಥವಾಗಿ ಪರಿಶೀಲಿಸದೆ, ವಿಮರ್ಶಾತ್ಮಕ ಪ್ರಶ್ನೆಗಳು ಕೇಳದೆ ಪ್ರಸಾರ ಮಾಡುತ್ತಿದ್ದವು. ಆದರೆ ನ್ಯೂಸ್18 ಎಂ.ಪಿ/ಛತ್ತೀಸ್‌ಗಢ ಮತ್ತು ಎಬಿಪಿ ನ್ಯೂಸ್ ಮಾತ್ರ ಶಾಸ್ತ್ರಿಯವರ ಆರೋಪಗಳನ್ನು ಪ್ರಶ್ನಿಸುವ ಅಥವಾ ಅವುಗಳನ್ನು ಪರಿಶೀಲಿಸುವ ಕೆಲಸ ಮಾಡಿದ್ದವು ಎಂದಿದ್ದರು.

ಯಾವುದೇ ಚಾನೆಲ್‌ಗಳು ಎನ್‌ಸಿಇಆರ್‌ಟಿ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...