Homeಮುಖಪುಟಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

- Advertisement -
- Advertisement -

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ.

ಡಿಸೆಂಬರ್ 2ರಂದು ಹೊರಡಿಸಿದ ತನ್ನ ಆದೇಶದಲ್ಲಿ, ಸುದ್ದಿ ನಿಯಂತ್ರಣ ಸಂಸ್ಥೆಯು ಬಂಧನದ ವರದಿ ಮಾಡುವಾಗ ಸುದ್ದಿ ನಿರೂಪಕ ‘ಒಂದು ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿದಂತೆ ಪೂರ್ವಾಗ್ರಹ ಪೀಡಿತ ವಿಷಯವನ್ನು ಹೇಳಿದ್ದಾರೆ. ಪೂರ್ವನಿರ್ಧರಿತ ಕಾರ್ಯಸೂಚಿಯೊಂದಿಗೆ ವರದಿ ಮಾಡಿದ್ದಾರೆ ಎಂದು ಹೇಳಿದೆ.

ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎಂಬ ಮಾನವ ಹಕ್ಕುಗಳ ಸಂಘಟನೆಯ ದೂರಿನ ಮೇರೆಗೆ ಎನ್‌ಬಿಡಿಎಸ್‌ಎ ಕ್ರಮ ಕೈಗೊಂಡಿದೆ.

ಹಾಡಿನ ಮೂಲಕ ರಾಜ್ಯದ ಜನಾಂಗೀಯ ಸಮುದಾಯಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಿದ್ದಾರೆ ಎಂಬ ಆರೋಪದ ಮೇಲೆ ಹುಸೇನ್ ಅವರನ್ನು ಆಗಸ್ಟ್ 31, 2024ರಂದು ಅಸ್ಸಾಂ ಪೊಲೀಸರು ಬಂಧಿಸಿದ್ದರು.

ಹಾಡಿನಲ್ಲಿ ಹುಸೇನ್ ಅವರು, “ಅಸ್ಸಾಂ ನಿಮ್ಮಪ್ಪನ ಆಸ್ತಿಯಾ? ಅದಕ್ಕೆ ಅವರನ್ನು (ಮಿಯಾ ಮುಸ್ಲಿಮರು) ಹೊರಗಟ್ಟಲು ನೋಡುತ್ತಿದ್ದೀರಾ? ಎಂದು ಸರ್ಕಾರವನ್ನು ಕೇಳಿದ್ದರು.

“ಎಲ್ಲಾ ಸಮುದಾಯದವರೂ ತಪ್ಪು ಮಾಡುತ್ತಾರೆ. ಆದರೆ ಕೇವಲ ‘ಮಿಯಾ’ಗಳ ಮೇಲೆಯೇ (ಅಂದರೆ ಅಸ್ಸಾಮಿನಲ್ಲಿ ವಾಸಿಸುತ್ತಿರುವ ಬಂಗಾಳಿ ಮೂಲದ ಮುಸ್ಲಿಮರ ಮೇಲೆಯೇ) ದಾಳಿ ಮಾಡಲಾಗುತ್ತಿದೆ. ಆಗಾಗ ಅವರು ‘ಅಕ್ರಮ ವಲಸಿಗರು’ ಎಂದು ಸುಳ್ಳಾರೋಪ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಹುಸೇನ್ ಬಂಧನದ ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಬಿಹು ಹಾಡುಗಳನ್ನು ಬದಲಾಯಿಸುವ ಪ್ರಯತ್ನಗಳನ್ನು ರಾಜ್ಯದ ಜನರು ಸಹಿಸುವುದಿಲ್ಲ ಎಂದು ಹೇಳಿದ್ದರು.

“ಕೆಲವರು ‘ಮಿಯಾ ಬಿಹು’ವನ್ನು ಜನಪ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅಂತಹ ಒಬ್ಬ ಗಾಯಕ ಅಲ್ತಾಫ್ ಹುಸೇನ್ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ” ಎಂದಿದ್ದರು.

ಸೆಪ್ಟೆಂಬರ್ 2, 2024 ರಂದು ಟೈಮ್ಸ್ ನೌ ನವಭಾರತ್ ಪ್ರಸಾರ ಮಾಡಿದ ಹುಸೇನ್ ಬಂಧನದ ವರದಿಯಲ್ಲಿ ಪ್ರತಿಭಟನಾ ಹಾಡನ್ನು ಒಂದು ಸಮುದಾಯದ ವಿರುದ್ದ ದ್ವೇಷ ಹರಡಲು ಬಳಸಿಕೊಳ್ಳಲಾಗಿದೆ ಎಂದು ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎನ್‌ಬಿಡಿಎಸ್‌ಎಗೆ ನೀಡಿದ ದೂರಿನಲ್ಲಿ ತಿಳಿಸಿತ್ತು.

ಚಾನೆಲ್‌ನ ನಿರೂಪಕ ಪರಸ್ಪರ ಸಂಬಂಧವಿಲ್ಲದ ಹಲವು ಘಟನೆಗಳನ್ನು ಒಟ್ಟಾಗಿ ಜೋಡಿಸಿ, ಅವೆಲ್ಲವೂ ಒಂದು ದೊಡ್ಡ ಷಡ್ಯಂತ್ರದ ಭಾಗ ಎಂಬಂತೆ ತೋರಿಸಿದ್ದಾರೆ ಎಂದು ಹೇಳಿತ್ತು.

ನಿರೂಪಕ ಹುಸೇನ್ ಅವರ ಹಾಡನ್ನು ಹಿಂದೂ ಸಂಸ್ಕೃತಿಯ ವಿರುದ್ಧ ನಡೆಯುತ್ತಿರುವ ದೇಶವ್ಯಾಪಿ ಷಡ್ಯಂತ್ರದ ಒಂದು ಭಾಗ ಎಂದು ತೋರಿಸಿದ್ದಾರೆ. ಅದಕ್ಕಾಗಿ ಅಸ್ಸಾಂ, ಕೇರಳ ಮತ್ತು ಕಾಶ್ಮೀರದಲ್ಲಿ ನಡೆದ ಬೇರೆ ಬೇರೆ ಘಟನೆಗಳನ್ನು ಜೋಡಿಸಿದ್ದಾರೆ. ಇಡೀ ದೇಶದಲ್ಲಿ ಹಿಂದೂಗಳ ಮೇಲೆ ಒಂದು ಯುದ್ಧದಂತೆ ದಾಳಿ ನಡೆಯುತ್ತಿದೆ ಎಂಬ ಸಂಪೂರ್ಣ ಕೃತಕವಾದ, ಭಯ ಹುಟ್ಟಿಸುವ ಕಥೆಯನ್ನು ನಿರ್ಮಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

‘ಮಿಯಾ’ ಎಂಬ ಪದವನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರೊಂದಿಗೆ ಸಮೀಕರಿಸಿ, ನಿರೂಪಕ ಇಡೀ ಸಮುದಾಯವನ್ನು ತಪ್ಪಾಗಿ ಬಿಂಬಿಸಿದ್ದಾರೆ ಎಂದು ಆರೋಪಿಸಿತ್ತು.

ಚಾನೆಲ್ ತನ್ನ ವಿರುದ್ದದ ಎಲ್ಲಾ ಆರೋಪಗಳನ್ನು ನಿರಾಕರಿಸಿತ್ತು. ತಾನು ಬಂಧನ ಮತ್ತು ಮುಖ್ಯಮಂತ್ರಿಯ ಹೇಳಿಕೆಗಳನ್ನು ಮಾತ್ರ ವರದಿ ಮಾಡಿದ್ದೇನೆ. ವರದಿಯಲ್ಲಿ ಹೇಳಿದ ವಿಷಯಗಳೆಲ್ಲವೂ ವಾಸ್ತವಿಕ ಎಂದು ವಾದಿಸಿತ್ತು.

ಹುಸೇನ್ ಅವರ ಬಂಧನ ಸುದ್ದಿಯನ್ನು ವರದಿ ಮಾಡುವುದು ‘ಸುದ್ದಿ ಪ್ರಸಾರಕರ ಹಕ್ಕಿನ ಭಾಗ’ ಎಂಬುವುದನ್ನು ಎನ್‌ಬಿಡಿಎಸ್‌ಎ ಒಪ್ಪಿಕೊಂಡಿದೆ. ಆದರೆ, ಸುದ್ದಿ ನಿರೂಪಕ ಹುಸೇನ್ ಅವರ ಹಾಡನ್ನು ಒಂದು ದೈಹಿಕ ಹಲ್ಲೆ ಅಥವಾ ಬಲಾತ್ಕಾರದ ಘಟನೆಯೊಂದಿಗೆ ಜೋಡಿಸಿದ್ದಾರೆ. ಆ ಘಟನೆಗೂ ಹಾಡಿಗೂ ಸಂಬಂಧವೇ ಇಲ್ಲ ಎಂದು ಹೇಳಿದೆ.

ನಿರೂಪಕ ನಿಷ್ಪಕ್ಷಪಾತವಾಗಿ ಸುದ್ದಿ ಮಾಡಲು ಬಂದವರಲ್ಲ; ಬದಲಿಗೆ ತಾನು ಮೊದಲೇ ರೂಪಿಸಿಟ್ಟಿದ್ದ ದ್ವೇಷದ ಕಥೆಗೆ ಈ ಘಟನೆಯನ್ನು ಒಂದು ಸಾಧನವನ್ನಾಗಿ ಮಾತ್ರ ಬಳಸಿಕೊಂಡಿದ್ದಾರೆ. ಈ ರೀತಿಯ ವರದಿಯು ಸುದ್ದಿ ಪ್ರಸಾರದ ನೈತಿಕ ನಿಯಮ ಸಂಹಿತೆ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ.

ಪ್ರಸಾರ ಮಾಡಲಾದ ಕಾರ್ಯಕ್ರಮದ ಆಕ್ಷೇಪಾರ್ಹವಾದ ಎಲ್ಲಾ ಭಾಗಗಳನ್ನು (ವಿಡಿಯೋ, ಟೈಟಲ್, ನಿರೂಪಕರ ಹೇಳಿಕೆ ಇತ್ಯಾದಿ) ತಕ್ಷಣ ತೆಗೆದುಹಾಕಬೇಕು. ನಂತರ ತಿದ್ದುಪಡಿ ಮಾಡಿದ ಕಾರ್ಯಕ್ರಮದ ಆವೃತ್ತಿಯನ್ನು ಏಳು ದಿನಗಳ ಒಳಗೆ ಸಂಸ್ಥೆಗೆ ಸಲ್ಲಿಸಬೇಕು ಎಂದು ಎನ್‌ಬಿಡಿಎಸ್‌ಎ ಟೈಮ್ಸ್ ನೌ ನವಭಾರತ್ ಚಾನೆಲ್‌ಗೆ ಆದೇಶಿಸಿದೆ. ಇದನ್ನು ಮಾಡದಿದ್ದರೆ ಮುಂದಿನ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...