Homeಮುಖಪುಟಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

- Advertisement -
- Advertisement -

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ.

ಡಿಸೆಂಬರ್ 2ರಂದು ಹೊರಡಿಸಿದ ತನ್ನ ಆದೇಶದಲ್ಲಿ, ಸುದ್ದಿ ನಿಯಂತ್ರಣ ಸಂಸ್ಥೆಯು ಬಂಧನದ ವರದಿ ಮಾಡುವಾಗ ಸುದ್ದಿ ನಿರೂಪಕ ‘ಒಂದು ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿದಂತೆ ಪೂರ್ವಾಗ್ರಹ ಪೀಡಿತ ವಿಷಯವನ್ನು ಹೇಳಿದ್ದಾರೆ. ಪೂರ್ವನಿರ್ಧರಿತ ಕಾರ್ಯಸೂಚಿಯೊಂದಿಗೆ ವರದಿ ಮಾಡಿದ್ದಾರೆ ಎಂದು ಹೇಳಿದೆ.

ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎಂಬ ಮಾನವ ಹಕ್ಕುಗಳ ಸಂಘಟನೆಯ ದೂರಿನ ಮೇರೆಗೆ ಎನ್‌ಬಿಡಿಎಸ್‌ಎ ಕ್ರಮ ಕೈಗೊಂಡಿದೆ.

ಹಾಡಿನ ಮೂಲಕ ರಾಜ್ಯದ ಜನಾಂಗೀಯ ಸಮುದಾಯಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಿದ್ದಾರೆ ಎಂಬ ಆರೋಪದ ಮೇಲೆ ಹುಸೇನ್ ಅವರನ್ನು ಆಗಸ್ಟ್ 31, 2024ರಂದು ಅಸ್ಸಾಂ ಪೊಲೀಸರು ಬಂಧಿಸಿದ್ದರು.

ಹಾಡಿನಲ್ಲಿ ಹುಸೇನ್ ಅವರು, “ಅಸ್ಸಾಂ ನಿಮ್ಮಪ್ಪನ ಆಸ್ತಿಯಾ? ಅದಕ್ಕೆ ಅವರನ್ನು (ಮಿಯಾ ಮುಸ್ಲಿಮರು) ಹೊರಗಟ್ಟಲು ನೋಡುತ್ತಿದ್ದೀರಾ? ಎಂದು ಸರ್ಕಾರವನ್ನು ಕೇಳಿದ್ದರು.

“ಎಲ್ಲಾ ಸಮುದಾಯದವರೂ ತಪ್ಪು ಮಾಡುತ್ತಾರೆ. ಆದರೆ ಕೇವಲ ‘ಮಿಯಾ’ಗಳ ಮೇಲೆಯೇ (ಅಂದರೆ ಅಸ್ಸಾಮಿನಲ್ಲಿ ವಾಸಿಸುತ್ತಿರುವ ಬಂಗಾಳಿ ಮೂಲದ ಮುಸ್ಲಿಮರ ಮೇಲೆಯೇ) ದಾಳಿ ಮಾಡಲಾಗುತ್ತಿದೆ. ಆಗಾಗ ಅವರು ‘ಅಕ್ರಮ ವಲಸಿಗರು’ ಎಂದು ಸುಳ್ಳಾರೋಪ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಹುಸೇನ್ ಬಂಧನದ ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಬಿಹು ಹಾಡುಗಳನ್ನು ಬದಲಾಯಿಸುವ ಪ್ರಯತ್ನಗಳನ್ನು ರಾಜ್ಯದ ಜನರು ಸಹಿಸುವುದಿಲ್ಲ ಎಂದು ಹೇಳಿದ್ದರು.

“ಕೆಲವರು ‘ಮಿಯಾ ಬಿಹು’ವನ್ನು ಜನಪ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅಂತಹ ಒಬ್ಬ ಗಾಯಕ ಅಲ್ತಾಫ್ ಹುಸೇನ್ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ” ಎಂದಿದ್ದರು.

ಸೆಪ್ಟೆಂಬರ್ 2, 2024 ರಂದು ಟೈಮ್ಸ್ ನೌ ನವಭಾರತ್ ಪ್ರಸಾರ ಮಾಡಿದ ಹುಸೇನ್ ಬಂಧನದ ವರದಿಯಲ್ಲಿ ಪ್ರತಿಭಟನಾ ಹಾಡನ್ನು ಒಂದು ಸಮುದಾಯದ ವಿರುದ್ದ ದ್ವೇಷ ಹರಡಲು ಬಳಸಿಕೊಳ್ಳಲಾಗಿದೆ ಎಂದು ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎನ್‌ಬಿಡಿಎಸ್‌ಎಗೆ ನೀಡಿದ ದೂರಿನಲ್ಲಿ ತಿಳಿಸಿತ್ತು.

ಚಾನೆಲ್‌ನ ನಿರೂಪಕ ಪರಸ್ಪರ ಸಂಬಂಧವಿಲ್ಲದ ಹಲವು ಘಟನೆಗಳನ್ನು ಒಟ್ಟಾಗಿ ಜೋಡಿಸಿ, ಅವೆಲ್ಲವೂ ಒಂದು ದೊಡ್ಡ ಷಡ್ಯಂತ್ರದ ಭಾಗ ಎಂಬಂತೆ ತೋರಿಸಿದ್ದಾರೆ ಎಂದು ಹೇಳಿತ್ತು.

ನಿರೂಪಕ ಹುಸೇನ್ ಅವರ ಹಾಡನ್ನು ಹಿಂದೂ ಸಂಸ್ಕೃತಿಯ ವಿರುದ್ಧ ನಡೆಯುತ್ತಿರುವ ದೇಶವ್ಯಾಪಿ ಷಡ್ಯಂತ್ರದ ಒಂದು ಭಾಗ ಎಂದು ತೋರಿಸಿದ್ದಾರೆ. ಅದಕ್ಕಾಗಿ ಅಸ್ಸಾಂ, ಕೇರಳ ಮತ್ತು ಕಾಶ್ಮೀರದಲ್ಲಿ ನಡೆದ ಬೇರೆ ಬೇರೆ ಘಟನೆಗಳನ್ನು ಜೋಡಿಸಿದ್ದಾರೆ. ಇಡೀ ದೇಶದಲ್ಲಿ ಹಿಂದೂಗಳ ಮೇಲೆ ಒಂದು ಯುದ್ಧದಂತೆ ದಾಳಿ ನಡೆಯುತ್ತಿದೆ ಎಂಬ ಸಂಪೂರ್ಣ ಕೃತಕವಾದ, ಭಯ ಹುಟ್ಟಿಸುವ ಕಥೆಯನ್ನು ನಿರ್ಮಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

‘ಮಿಯಾ’ ಎಂಬ ಪದವನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರೊಂದಿಗೆ ಸಮೀಕರಿಸಿ, ನಿರೂಪಕ ಇಡೀ ಸಮುದಾಯವನ್ನು ತಪ್ಪಾಗಿ ಬಿಂಬಿಸಿದ್ದಾರೆ ಎಂದು ಆರೋಪಿಸಿತ್ತು.

ಚಾನೆಲ್ ತನ್ನ ವಿರುದ್ದದ ಎಲ್ಲಾ ಆರೋಪಗಳನ್ನು ನಿರಾಕರಿಸಿತ್ತು. ತಾನು ಬಂಧನ ಮತ್ತು ಮುಖ್ಯಮಂತ್ರಿಯ ಹೇಳಿಕೆಗಳನ್ನು ಮಾತ್ರ ವರದಿ ಮಾಡಿದ್ದೇನೆ. ವರದಿಯಲ್ಲಿ ಹೇಳಿದ ವಿಷಯಗಳೆಲ್ಲವೂ ವಾಸ್ತವಿಕ ಎಂದು ವಾದಿಸಿತ್ತು.

ಹುಸೇನ್ ಅವರ ಬಂಧನ ಸುದ್ದಿಯನ್ನು ವರದಿ ಮಾಡುವುದು ‘ಸುದ್ದಿ ಪ್ರಸಾರಕರ ಹಕ್ಕಿನ ಭಾಗ’ ಎಂಬುವುದನ್ನು ಎನ್‌ಬಿಡಿಎಸ್‌ಎ ಒಪ್ಪಿಕೊಂಡಿದೆ. ಆದರೆ, ಸುದ್ದಿ ನಿರೂಪಕ ಹುಸೇನ್ ಅವರ ಹಾಡನ್ನು ಒಂದು ದೈಹಿಕ ಹಲ್ಲೆ ಅಥವಾ ಬಲಾತ್ಕಾರದ ಘಟನೆಯೊಂದಿಗೆ ಜೋಡಿಸಿದ್ದಾರೆ. ಆ ಘಟನೆಗೂ ಹಾಡಿಗೂ ಸಂಬಂಧವೇ ಇಲ್ಲ ಎಂದು ಹೇಳಿದೆ.

ನಿರೂಪಕ ನಿಷ್ಪಕ್ಷಪಾತವಾಗಿ ಸುದ್ದಿ ಮಾಡಲು ಬಂದವರಲ್ಲ; ಬದಲಿಗೆ ತಾನು ಮೊದಲೇ ರೂಪಿಸಿಟ್ಟಿದ್ದ ದ್ವೇಷದ ಕಥೆಗೆ ಈ ಘಟನೆಯನ್ನು ಒಂದು ಸಾಧನವನ್ನಾಗಿ ಮಾತ್ರ ಬಳಸಿಕೊಂಡಿದ್ದಾರೆ. ಈ ರೀತಿಯ ವರದಿಯು ಸುದ್ದಿ ಪ್ರಸಾರದ ನೈತಿಕ ನಿಯಮ ಸಂಹಿತೆ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ.

ಪ್ರಸಾರ ಮಾಡಲಾದ ಕಾರ್ಯಕ್ರಮದ ಆಕ್ಷೇಪಾರ್ಹವಾದ ಎಲ್ಲಾ ಭಾಗಗಳನ್ನು (ವಿಡಿಯೋ, ಟೈಟಲ್, ನಿರೂಪಕರ ಹೇಳಿಕೆ ಇತ್ಯಾದಿ) ತಕ್ಷಣ ತೆಗೆದುಹಾಕಬೇಕು. ನಂತರ ತಿದ್ದುಪಡಿ ಮಾಡಿದ ಕಾರ್ಯಕ್ರಮದ ಆವೃತ್ತಿಯನ್ನು ಏಳು ದಿನಗಳ ಒಳಗೆ ಸಂಸ್ಥೆಗೆ ಸಲ್ಲಿಸಬೇಕು ಎಂದು ಎನ್‌ಬಿಡಿಎಸ್‌ಎ ಟೈಮ್ಸ್ ನೌ ನವಭಾರತ್ ಚಾನೆಲ್‌ಗೆ ಆದೇಶಿಸಿದೆ. ಇದನ್ನು ಮಾಡದಿದ್ದರೆ ಮುಂದಿನ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...