Homeಮುಖಪುಟಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

- Advertisement -
- Advertisement -

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ.

ಡಿಸೆಂಬರ್ 2ರಂದು ಹೊರಡಿಸಿದ ತನ್ನ ಆದೇಶದಲ್ಲಿ, ಸುದ್ದಿ ನಿಯಂತ್ರಣ ಸಂಸ್ಥೆಯು ಬಂಧನದ ವರದಿ ಮಾಡುವಾಗ ಸುದ್ದಿ ನಿರೂಪಕ ‘ಒಂದು ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿದಂತೆ ಪೂರ್ವಾಗ್ರಹ ಪೀಡಿತ ವಿಷಯವನ್ನು ಹೇಳಿದ್ದಾರೆ. ಪೂರ್ವನಿರ್ಧರಿತ ಕಾರ್ಯಸೂಚಿಯೊಂದಿಗೆ ವರದಿ ಮಾಡಿದ್ದಾರೆ ಎಂದು ಹೇಳಿದೆ.

ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎಂಬ ಮಾನವ ಹಕ್ಕುಗಳ ಸಂಘಟನೆಯ ದೂರಿನ ಮೇರೆಗೆ ಎನ್‌ಬಿಡಿಎಸ್‌ಎ ಕ್ರಮ ಕೈಗೊಂಡಿದೆ.

ಹಾಡಿನ ಮೂಲಕ ರಾಜ್ಯದ ಜನಾಂಗೀಯ ಸಮುದಾಯಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಿದ್ದಾರೆ ಎಂಬ ಆರೋಪದ ಮೇಲೆ ಹುಸೇನ್ ಅವರನ್ನು ಆಗಸ್ಟ್ 31, 2024ರಂದು ಅಸ್ಸಾಂ ಪೊಲೀಸರು ಬಂಧಿಸಿದ್ದರು.

ಹಾಡಿನಲ್ಲಿ ಹುಸೇನ್ ಅವರು, “ಅಸ್ಸಾಂ ನಿಮ್ಮಪ್ಪನ ಆಸ್ತಿಯಾ? ಅದಕ್ಕೆ ಅವರನ್ನು (ಮಿಯಾ ಮುಸ್ಲಿಮರು) ಹೊರಗಟ್ಟಲು ನೋಡುತ್ತಿದ್ದೀರಾ? ಎಂದು ಸರ್ಕಾರವನ್ನು ಕೇಳಿದ್ದರು.

“ಎಲ್ಲಾ ಸಮುದಾಯದವರೂ ತಪ್ಪು ಮಾಡುತ್ತಾರೆ. ಆದರೆ ಕೇವಲ ‘ಮಿಯಾ’ಗಳ ಮೇಲೆಯೇ (ಅಂದರೆ ಅಸ್ಸಾಮಿನಲ್ಲಿ ವಾಸಿಸುತ್ತಿರುವ ಬಂಗಾಳಿ ಮೂಲದ ಮುಸ್ಲಿಮರ ಮೇಲೆಯೇ) ದಾಳಿ ಮಾಡಲಾಗುತ್ತಿದೆ. ಆಗಾಗ ಅವರು ‘ಅಕ್ರಮ ವಲಸಿಗರು’ ಎಂದು ಸುಳ್ಳಾರೋಪ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಹುಸೇನ್ ಬಂಧನದ ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಬಿಹು ಹಾಡುಗಳನ್ನು ಬದಲಾಯಿಸುವ ಪ್ರಯತ್ನಗಳನ್ನು ರಾಜ್ಯದ ಜನರು ಸಹಿಸುವುದಿಲ್ಲ ಎಂದು ಹೇಳಿದ್ದರು.

“ಕೆಲವರು ‘ಮಿಯಾ ಬಿಹು’ವನ್ನು ಜನಪ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅಂತಹ ಒಬ್ಬ ಗಾಯಕ ಅಲ್ತಾಫ್ ಹುಸೇನ್ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ” ಎಂದಿದ್ದರು.

ಸೆಪ್ಟೆಂಬರ್ 2, 2024 ರಂದು ಟೈಮ್ಸ್ ನೌ ನವಭಾರತ್ ಪ್ರಸಾರ ಮಾಡಿದ ಹುಸೇನ್ ಬಂಧನದ ವರದಿಯಲ್ಲಿ ಪ್ರತಿಭಟನಾ ಹಾಡನ್ನು ಒಂದು ಸಮುದಾಯದ ವಿರುದ್ದ ದ್ವೇಷ ಹರಡಲು ಬಳಸಿಕೊಳ್ಳಲಾಗಿದೆ ಎಂದು ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎನ್‌ಬಿಡಿಎಸ್‌ಎಗೆ ನೀಡಿದ ದೂರಿನಲ್ಲಿ ತಿಳಿಸಿತ್ತು.

ಚಾನೆಲ್‌ನ ನಿರೂಪಕ ಪರಸ್ಪರ ಸಂಬಂಧವಿಲ್ಲದ ಹಲವು ಘಟನೆಗಳನ್ನು ಒಟ್ಟಾಗಿ ಜೋಡಿಸಿ, ಅವೆಲ್ಲವೂ ಒಂದು ದೊಡ್ಡ ಷಡ್ಯಂತ್ರದ ಭಾಗ ಎಂಬಂತೆ ತೋರಿಸಿದ್ದಾರೆ ಎಂದು ಹೇಳಿತ್ತು.

ನಿರೂಪಕ ಹುಸೇನ್ ಅವರ ಹಾಡನ್ನು ಹಿಂದೂ ಸಂಸ್ಕೃತಿಯ ವಿರುದ್ಧ ನಡೆಯುತ್ತಿರುವ ದೇಶವ್ಯಾಪಿ ಷಡ್ಯಂತ್ರದ ಒಂದು ಭಾಗ ಎಂದು ತೋರಿಸಿದ್ದಾರೆ. ಅದಕ್ಕಾಗಿ ಅಸ್ಸಾಂ, ಕೇರಳ ಮತ್ತು ಕಾಶ್ಮೀರದಲ್ಲಿ ನಡೆದ ಬೇರೆ ಬೇರೆ ಘಟನೆಗಳನ್ನು ಜೋಡಿಸಿದ್ದಾರೆ. ಇಡೀ ದೇಶದಲ್ಲಿ ಹಿಂದೂಗಳ ಮೇಲೆ ಒಂದು ಯುದ್ಧದಂತೆ ದಾಳಿ ನಡೆಯುತ್ತಿದೆ ಎಂಬ ಸಂಪೂರ್ಣ ಕೃತಕವಾದ, ಭಯ ಹುಟ್ಟಿಸುವ ಕಥೆಯನ್ನು ನಿರ್ಮಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

‘ಮಿಯಾ’ ಎಂಬ ಪದವನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರೊಂದಿಗೆ ಸಮೀಕರಿಸಿ, ನಿರೂಪಕ ಇಡೀ ಸಮುದಾಯವನ್ನು ತಪ್ಪಾಗಿ ಬಿಂಬಿಸಿದ್ದಾರೆ ಎಂದು ಆರೋಪಿಸಿತ್ತು.

ಚಾನೆಲ್ ತನ್ನ ವಿರುದ್ದದ ಎಲ್ಲಾ ಆರೋಪಗಳನ್ನು ನಿರಾಕರಿಸಿತ್ತು. ತಾನು ಬಂಧನ ಮತ್ತು ಮುಖ್ಯಮಂತ್ರಿಯ ಹೇಳಿಕೆಗಳನ್ನು ಮಾತ್ರ ವರದಿ ಮಾಡಿದ್ದೇನೆ. ವರದಿಯಲ್ಲಿ ಹೇಳಿದ ವಿಷಯಗಳೆಲ್ಲವೂ ವಾಸ್ತವಿಕ ಎಂದು ವಾದಿಸಿತ್ತು.

ಹುಸೇನ್ ಅವರ ಬಂಧನ ಸುದ್ದಿಯನ್ನು ವರದಿ ಮಾಡುವುದು ‘ಸುದ್ದಿ ಪ್ರಸಾರಕರ ಹಕ್ಕಿನ ಭಾಗ’ ಎಂಬುವುದನ್ನು ಎನ್‌ಬಿಡಿಎಸ್‌ಎ ಒಪ್ಪಿಕೊಂಡಿದೆ. ಆದರೆ, ಸುದ್ದಿ ನಿರೂಪಕ ಹುಸೇನ್ ಅವರ ಹಾಡನ್ನು ಒಂದು ದೈಹಿಕ ಹಲ್ಲೆ ಅಥವಾ ಬಲಾತ್ಕಾರದ ಘಟನೆಯೊಂದಿಗೆ ಜೋಡಿಸಿದ್ದಾರೆ. ಆ ಘಟನೆಗೂ ಹಾಡಿಗೂ ಸಂಬಂಧವೇ ಇಲ್ಲ ಎಂದು ಹೇಳಿದೆ.

ನಿರೂಪಕ ನಿಷ್ಪಕ್ಷಪಾತವಾಗಿ ಸುದ್ದಿ ಮಾಡಲು ಬಂದವರಲ್ಲ; ಬದಲಿಗೆ ತಾನು ಮೊದಲೇ ರೂಪಿಸಿಟ್ಟಿದ್ದ ದ್ವೇಷದ ಕಥೆಗೆ ಈ ಘಟನೆಯನ್ನು ಒಂದು ಸಾಧನವನ್ನಾಗಿ ಮಾತ್ರ ಬಳಸಿಕೊಂಡಿದ್ದಾರೆ. ಈ ರೀತಿಯ ವರದಿಯು ಸುದ್ದಿ ಪ್ರಸಾರದ ನೈತಿಕ ನಿಯಮ ಸಂಹಿತೆ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ.

ಪ್ರಸಾರ ಮಾಡಲಾದ ಕಾರ್ಯಕ್ರಮದ ಆಕ್ಷೇಪಾರ್ಹವಾದ ಎಲ್ಲಾ ಭಾಗಗಳನ್ನು (ವಿಡಿಯೋ, ಟೈಟಲ್, ನಿರೂಪಕರ ಹೇಳಿಕೆ ಇತ್ಯಾದಿ) ತಕ್ಷಣ ತೆಗೆದುಹಾಕಬೇಕು. ನಂತರ ತಿದ್ದುಪಡಿ ಮಾಡಿದ ಕಾರ್ಯಕ್ರಮದ ಆವೃತ್ತಿಯನ್ನು ಏಳು ದಿನಗಳ ಒಳಗೆ ಸಂಸ್ಥೆಗೆ ಸಲ್ಲಿಸಬೇಕು ಎಂದು ಎನ್‌ಬಿಡಿಎಸ್‌ಎ ಟೈಮ್ಸ್ ನೌ ನವಭಾರತ್ ಚಾನೆಲ್‌ಗೆ ಆದೇಶಿಸಿದೆ. ಇದನ್ನು ಮಾಡದಿದ್ದರೆ ಮುಂದಿನ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...