Homeಮುಖಪುಟ'ಲವ್ ಜಿಹಾದ್, ಮೆಹಂದಿ ಜಿಹಾದ್' ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ...

‘ಲವ್ ಜಿಹಾದ್, ಮೆಹಂದಿ ಜಿಹಾದ್’ ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ ಎನ್‌ಬಿಡಿಎಸ್‌ಎ ತರಾಟೆ

ವಿಡಿಯೋ, ತಲೆಬರಹಗಳನ್ನು ತೆಗೆದುಹಾಕಲು ಸೂಚನೆ

- Advertisement -
- Advertisement -

ನಿವೃತ್ತ ನ್ಯಾಯಮೂರ್ತಿ ಎ.ಕೆ ಸಿಕ್ರಿ ನೇತೃತ್ವದ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ‘ಮೆಹಂದಿ ಜಿಹಾದ್’ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದ ಝೀ ನ್ಯೂಸ್‌ಗೆ ಎಚ್ಚರಿಕೆ ನೀಡಿದ್ದು, ನೀತಿ ಸಂಹಿತೆಯ ಉಲ್ಲಂಘನೆ ಹಿನ್ನೆಲೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಅಂತಹ ಕಾರ್ಯಕ್ರಮಗಳ ವಿಡಿಯೋಗಳನ್ನು ತೆಗೆದುಹಾಕುವಂತೆ ನಿರ್ದೇಶಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ಪ್ರತ್ಯೇಕ ಆದೇಶದಲ್ಲಿ, ಕಾನೂನುಬಾಹಿರ ಮತಾಂತರ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪನ್ನು ವರದಿ ಮಾಡುವಾಗ ‘ಲವ್ ಜಿಹಾದ್’ ಕುರಿತು ಕೆಲವು ಪ್ರಚೋದನಕಾರಿ ತಲೆಬರಹಗಳನ್ನು ಬಳಸಿದ್ದಕ್ಕಾಗಿ ಎನ್‌ಬಿಡಿಎಸ್‌ಎ ‘ಟೈಮ್ಸ್ ನೌ ನವಭಾರತ್’ ವಾಹಿನಿಯನ್ನು ತರಾಟೆಗೆ ತೆಗೆದುಕೊಂಡಿದೆ. ವಾಹಿನಿಯು ತಲೆಬರಹಗಳಲ್ಲಿ ತೀರ್ಪಿನ ಭಾಗವಲ್ಲದ ಕೆಲವು ಅಂಶಗಳನ್ನು ಪರಿಚಯಿಸಿರುವ ಹಿನ್ನೆಲೆ ಅವುಗಳನ್ನು ತೆಗೆದುಹಾಕಲು ಆದೇಶಿಸಿದೆ ಎಂದು ವರದಿ ವಿವರಿಸಿದೆ.

ಚಾನೆಲ್‌ಗಳು ತಪ್ಪು ಮಾಹಿತಿಗಳನ್ನು ಹರಡುತ್ತಿವೆ ಮತ್ತು ಜನರನ್ನು ವಿಭಜಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಪ್ರಸಾರ ಮಾಡುತ್ತಿವೆ ಎಂದು ಆರೋಪಿಸಿ ಹೋರಾಟಗಾರ ಇಂದ್ರಜೀತ್ ಘೋರ್ಪಡೆ ಅವರು ಅಕ್ಟೋಬರ್ 2024ರಲ್ಲಿ ಸಲ್ಲಿಸಿದ್ದ ದೂರುಗಳ ಮೇರೆಗೆ ಎನ್‌ಬಿಡಿಎಸ್‌ಎ ಆದೇಶ ನೀಡಿದೆ.

ಝೀ ನ್ಯೂಸ್ – ‘ಮೆಹಂದಿ ಜಿಹಾದ್’ ಕಾರ್ಯಕ್ರಮಗಳು

‘ಮೆಹಂದಿ ಜಿಹಾದ್’ ಎಂಬ ಕಾಲ್ಪನಿಕ ವಿಷಯದ ಅಡಿ, ಮುಸ್ಲಿಂ ಮೆಹಂದಿ ಕಲಾವಿದರು ಹಿಂದೂ ಮಹಿಳೆಯರಿಗೆ ಮೆಹಂದಿ ಹಚ್ಚುವ ಮುನ್ನ ಅದಕ್ಕೆ ಉಗುಳುತ್ತಾರೆ. ಮುಸ್ಲಿಂ ಪುರುಷರು ಮೆಹಂದಿ ಕಲಾವಿದರಾಗಿ ಕೆಲಸ ಮಾಡಿ, ಹಿಂದೂ ಮಹಿಳೆಯರ ಫೋನ್ ನಂಬರ್‌ಗಳನ್ನು ತೆಗೆದುಕೊಳ್ಳುತ್ತಾರೆ. ಅದರ ಮೂಲಕ ಅವರನ್ನು ಬಲೆಗೆ ಬೀಳಿಸಿ ಮದುವೆಯಾಗುತ್ತಾರೆ. ಬಳಿಕ ಅವರ ಧರ್ಮ ಬದಲಾಯಿಸುವ ಗುಪ್ತ ಯೋಜನೆ ಇದೆ ಎಂಬ ಕಪೋಲಕಲ್ಪಿತ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದ್ದ ಆರೋಪಗಳನ್ನು ಝೀ ನ್ಯೂಸ್ ವಿರುದ್ದ ಮಾಡಲಾಗಿತ್ತು.

ಅಲ್ಲದೆ, ಈ ಕಾರ್ಯಕ್ರಮಗಳ ಪ್ರಸಾರದ ಬಳಿಕ, ಕೆಲವು ಗುಂಪುಗಳು ಮುಸ್ಲಿಂ ಮೆಹಂದಿ ಕಲಾವಿದರ ವಿರುದ್ಧ ಹಿಂಸಾತ್ಮಕ ಮಾತುಗಳನ್ನು ಆಡಿತ್ತು, ಅವರನ್ನು ಬಹಿಷ್ಕರಿಸಬೇಕು ಎಂದು ಕರೆ ಕೊಟ್ಟಿತ್ತು. ಇವುಗಳನ್ನು ಝೀ ನ್ಯೂಸ್ ಹೆಚ್ಚು ಹೆಚ್ಚು ಪ್ರಸಾರ ಮಾಡಿದೆ ಎಂದು ದೂರಲಾಗಿತ್ತು. ಝೀ ನ್ಯೂಸ್ ಮಾಡಿದ ಆರೋಪಗಳು ಮತ್ತು ಪ್ರಸಾರ ಮಾಡಿದ ಕಾರ್ಯಕ್ರಮಗಳು ಸತ್ಯವನ್ನು ತಿರುಚುವಂತಿದ್ದವು. ಜನರಲ್ಲಿ ತಪ್ಪು ಭಾವನೆಗಳನ್ನು ಹುಟ್ಟಿಸುವಂತಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

“1. ಮೆಹೆಂದಿ ಜಿಹಾದ್ ಪರ್ ದೇ ದನಾ-ದನ್, 2. ಆವೇದನ್ ನಿವೇದನ್ ನಹಿ ಮಾನೆ ತೋ ದೇ ದನಾ-ದನ್, 3. ಮೆಹಂದಿ ಜಿಹಾದ್ ಕೆ ಖಿಲಾಫ್ ಲಾಟ್ ಮಾಡೆಲ್ ಲಾಂಚ್, 4. ಲಾಠಿ ಸೆ ಲೈಸ್ ರಹೇಂಗೆ ಜಿಹಾದಿಯೋಂಕೊ ರೊಕೇಂಗೆ, 5. ಪಕಡೆ ಜಾನೆ ಪರ್ ಸಬಕ್ ಸಿಕಾಯ ಜಾಯೆಗ” ಈ ರೀತಿಯ ತಲೆಬರಹಗಳನ್ನು ಝೀ ನ್ಯೂಸ್ ತನ್ನ ಕಾರ್ಯಕ್ರಮಗಳಿಗೆ ಕೊಟ್ಟಿತ್ತು ಎಂದು ದೂರಿನಲ್ಲಿ ವಿವರಿಸಲಾಗಿತ್ತು.

ಝೀ ನ್ಯೂಸ್ ಮುಸ್ಲಿಂ ಮೆಹಂದಿ ಕಲಾವಿದರರ ವಿರುದ್ದದ ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಿರಲಿಲ್ಲ. ಮುಸ್ಲಿಂ ಕಲಾವಿದರ ವಿರುದ್ಧದ ಬೆದರಿಕೆಗಳನ್ನು ಮತ್ತು ಅವಮಾನಗಳನ್ನು ಖಂಡಿಸಿರಲಿಲ್ಲ. ವಿರೋಧಿ ದೃಷ್ಟಿಕೋನಗಳನ್ನು ನಿರ್ಲಕ್ಷಿಸಿತ್ತು ಮತ್ತು ತನ್ನ ಥಂಬ್‌ನೇಲ್‌ಗಳು, ತಲೆ ಬರಹಗಳು ಮತ್ತು ಶೀರ್ಷಿಕೆಗಳ ಮೂಲಕ ಸಾಮುದಾಯಿಕ ಭಯ ಮತ್ತು ದ್ವೇಷವನ್ನು ಹರಡಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಝೀ ನ್ಯೂಸ್ ಎನ್‌ಬಿಡಿಎಸ್‌ಎ ಮುಂದೆ ತಾವು ಕೇವಲ ಕೆಲವು ಸಂಘಟನೆಗಳ ಹೇಳಿಕೆಗಳನ್ನು ವರದಿ ಮಾಡಿದ್ದೇವೆ ಎಂದು ವಾದಿಸಿತ್ತು. ಆದರೆ, ಎನ್‌ಬಿಡಿಎಸ್‌ಎ ತಲೆ ಬರಹಗಳು ಮತ್ತು ಕಾರ್ಯಕ್ರಮದ ಪ್ರಸ್ತುತಿಯ ರೀತಿಯಿಂದ ಚಾನೆಲ್ ಸ್ವತಃ ಈ ಆರೋಪಗಳನ್ನು ಬೆಂಬಲಿಸುತ್ತಿರುವಂತೆ ಭಾಸವಾಗಿದೆ ಎಂದಿದೆ. ಆದ್ದರಿಂದ, ಝೀ ನ್ಯೂಸ್‌ಗೆ ಆ ಕಾರ್ಯಕ್ರಮಗಳನ್ನು ತೆಗೆದುಹಾಕಲು ಆದೇಶಿಸಿದೆ. ಭವಿಷ್ಯದಲ್ಲಿ ಎಚ್ಚರಿಕೆಯಿಂದ ವಿರೋಧಿ ದೃಷ್ಟಿಕೋನಗಳನ್ನು ಸೇರಿಸಿಕೊಂಡು ವರದಿ ಮಾಡುವಂತೆ ಎಚ್ಚರಿಕೆ ನೀಡಿದೆ ಎಂದು ಲೈವ್ ಲಾ ವರದಿ ಹೇಳಿದೆ.

“ತಲೆಬರಹಗಳನ್ನು ಕೊಡುವಾಗ ಪ್ರಸಾರಕರು ಇವು ಮೂರನೇ ವ್ಯಕ್ತಿಗಳು ನೀಡಿದ ಹೇಳಿಕೆಗಳು ಎಂದು ಯಾವುದೇ ಸ್ಪಷ್ಟೀಕರಣವನ್ನು ನೀಡಿಲ್ಲ ಅಥವಾ ಈ ತಲೆಬರಹಗಳು ಪ್ರಸಾರಕರ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ ಎಂಬುದಕ್ಕೆ ಯಾವುದೇ ಸ್ಪಷ್ಟನೆಯನ್ನೂ ನೀಡಿಲ್ಲ” ಎಂದು ಎನ್‌ಬಿಡಿಎಸ್‌ಎ ಹೇಳಿದೆ.

“ಸಂಪಾದಕೀಯ ವಿವೇಚನೆಯ ಭಾಗವಾಗಿರುವ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ರಕ್ಷಿಸಲ್ಪಟ್ಟಿರುವ ಪ್ರಸಾರದ ವಿಷಯದ ಬಗ್ಗೆ ತಾನು ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಎನ್‌ಬಿಡಿಎಸ್‌ಎ ಸ್ಪಷ್ಟಪಡಿಸಿದೆ. ಆದರೆ, ಈ ಹಂತದಲ್ಲಿ ಸಾರ್ವಜನಿಕ ಸಂವಾದವನ್ನು ರೂಪಿಸುವಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿ ಮಾಧ್ಯಮವು ವಹಿಸುವ ಪಾತ್ರವನ್ನು ನೆನಪಿಸುವುದು ಅಗತ್ಯವಾಗಿದೆ. ಸಂಭಾವ್ಯ ಸೂಕ್ಷ್ಮ ವಿಷಯಗಳೊಂದಿಗೆ ವ್ಯವಹರಿಸುವಾಗ, ಪ್ರಸಾರಕರು ತಾವು ಪ್ರಸಾರ ಮಾಡುವ ವಿಷಯವನ್ನು ವಿಮರ್ಶಾತ್ಮಕವಾಗಿ ಪರಿಶೀಲಿಸಬೇಕು. ಅದು ನೀತಿ ಸಂಹಿತೆಯಲ್ಲಿ ವಿವರಿಸಿರುವ ಪತ್ರಿಕೋದ್ಯಮ ಮಾನದಂಡಗಳಿಗೆ ಹೊಂದಿಕೆಯಾಗುತ್ತದೆ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಎನ್‌ಡಿಬಿಎಸ್‌ಎ ತಿಳಿಸಿದೆ.

ಟೈಮ್ಸ್ ನೌ ನವಭಾರತ್: ‘ಲವ್ ಜಿಹಾದ್’ ವರದಿ

ಟೈಮ್ಸ್ ನೌ ನವಭಾರತ್ ಚಾನೆಲ್‌ ವಿರುದ್ಧದ ದೂರು, ಹಿಂದೂ ಮಹಿಳೆಯನ್ನು ಧಾರ್ಮಿಕ ಮತಾಂತರದ ನಂತರ ಮದುವೆಗೆ ಒತ್ತಾಯಿಸಿದ್ದಕ್ಕಾಗಿ ಮುಸ್ಲಿಂ ಪುರುಷನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬರೇಲಿ ಸೆಷನ್ಸ್ ನ್ಯಾಯಾಲಯದ ತೀರ್ಪಿನ ವರದಿಗೆ ಸಂಬಂಧಿಸಿದೆ.

ದೂರಿನ ಪ್ರಕಾರ, ಟೈಮ್ಸ್ ನೌ ನವಭಾರತ್ ಪತ್ರಿಕೋದ್ಯಮದ ಪರಿಶೀಲನೆಯಿಲ್ಲದೆ ನ್ಯಾಯಾಧೀಶರ ಮಾತುಗಳನ್ನು ಪ್ರಸಾರ ಮಾಡಿದೆ. ಮಹಿಳೆಯ ಸಾಕ್ಷ್ಯವನ್ನು ಬಿಟ್ಟುಬಿಟ್ಟಿದೆ ಮತ್ತು ‘ಲವ್ ಜಿಹಾದ್’ ನಿರೂಪಣೆಯನ್ನು ಬಲಪಡಿಸುವ ಬಿಜೆಪಿ ರಾಜಕಾರಣಿಗಳ ಹೇಳಿಕೆಗಳನ್ನು ಮತ್ತಷ್ಟು ಪ್ರಸಾರ ಮಾಡಿದೆ. “ಪ್ಯಾರ್ ಕೆ ಜಹಾಝ್ ಮೇ ಜಿಹಾದ್ ಕಾ ತೂಫಾನ್,” “ಲವ್ ಜಿಹಾದ್ ಪರ್ ಕೋರ್ಟ್ ಕಾ ಸಖ್ತ್ ಫೈಸ್ಲಾ,” “ಜಿಹಾದಿಯೋನ್ ಕಿ ಮೊಹಬ್ಬತ್ ಕಾ ಸಚ್,” ಮತ್ತು “ಜಿಹಾದಿಯೋಂ ಕೆ ಇರಾದಾನ್ ಪರ್ ಲಗೀ ಮೊಹರ್” ಮುಂತಾದ ತಲೆಬರಹಗಳನ್ನು ಪ್ರಸಾರ ಮಾಡಿದೆ.

ನ್ಯಾಯಾಲಯದ ತೀರ್ಪನ್ನು ವರದಿ ಮಾಡುವ ಮೊದಲು ಚಾನೆಲ್ ಸ್ವತಂತ್ರ ಸತ್ಯ ಪರಿಶೀಲನೆ ಮಾಡಬೇಕಿತ್ತು ಎಂಬ ದೂರುದಾರರ ವಾದದಿಂದ ಎನ್‌ಬಿಡಿಎಸ್‌ಎ ಪ್ರಭಾವಿತ ಆಗಿಲ್ಲ.

ನ್ಯಾಯಾಲಯದ ತೀರ್ಪಿನ ಕುರಿತು ಚಾನೆಲ್ ವರದಿ ಮಾಡಿದೆ ಅದು ಆಕ್ಷೇಪಾರ್ಹವಲ್ಲ ಎಂದು ಎನ್‌ಬಿಡಿಎಸ್‌ಎ ಹೇಳಿದೆ. ಆದರೆ, ಟೈಮ್ಸ್ ನೌ ನವಭಾರತ್ ತೀರ್ಪಿನ ನಿರೂಪಣೆಯನ್ನು ಮೀರಿ ಸಂವೇದನಾಶೀಲ ತಲೆಬರಹಗಳ ಮೂಲಕ ಹೆಚ್ಚುವರಿ ಅಂಶಗಳನ್ನು ಪರಿಚಯಿಸಿದೆ ಎಂದು ಅದು ಹೇಳಿದೆ. “ಯುಪಿ ಮೇ ಲವ್ ಜಿಹಾದ್… ಟೂಲ್‌ಕಿಟ್ ಪಾಕಿಸ್ತಾನಿ” ಮತ್ತು “ಝುತೇ ನಾಮ್ ಕಾ ಅಫ್ಸಾನಾ, ಮಕ್ಸದ್ ಮುಸಲ್ಮಾನ್ ಬನಾನ” ಮುಂತಾದ ಶೀರ್ಷಿಕೆಗಳ ಬಳಕೆಯನ್ನು ಎಮ್‌ಡಿಬಿಎಸ್‌ಎ ನಿರ್ದಿಷ್ಟವಾಗಿ ಸೂಚಿಸಿದೆ. ಇದು ವರದಿಯ ಉದ್ದೇಶಿತ ವಿಷಯಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ಹೇಳಿದೆ.

ಕಾರ್ಯಕ್ರಮ ಪ್ರಸಾರ ಮಾಡುವಾಗ, ಪ್ರಸಾರಕರು ನ್ಯಾಯಾಲಯದ ತೀರ್ಪಿನ ನಿರೂಪಣೆಯನ್ನು ಮೀರಿ, ತೀರ್ಪಿನ ಭಾಗವಲ್ಲದ ಕೆಲವು ಅಂಶಗಳನ್ನು ಪರಿಚಯಿಸಿದ್ದಾರೆ. ಅವುಗಳಿಗೆ ವರದಿಯ ಉದ್ದೇಶಿತ ವಿಷಯಕ್ಕೆ ಹೊಂದಿಕೆಯಾಗದ ತಲೆಬರಹಗಳನ್ನು ಬಳಸಲಾಗಿದೆ. ಆದ್ದರಿಂದ ಆಕ್ಷೇಪಾರ್ಹ ತಲೆಬರಹಗಳನ್ನು ತೆಗೆದುಹಾಕುವಂತೆ ಎನ್‌ಡಿಬಿಎಸ್‌ಎ ಚಾನೆಲ್‌ಗೆ ನಿರ್ದೇಶಿಸಿದೆ. ಇದೇ ವೇಳೆ, ಈ ಶೀರ್ಷಿಕೆಗಳನ್ನು ಹೊರತುಪಡಿಸಿ, ತೀರ್ಪಿನ ನಿರೂಪಣೆಯು ನೀತಿಸಂಹಿತೆ ಮತ್ತು ಪ್ರಸಾರ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂದು ಎನ್‌ಡಿಬಿಎಸ್‌ಎ ತಿಳಿಸಿದೆ.

Courtesy : livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...