Homeಮುಖಪುಟ'ಲವ್ ಜಿಹಾದ್, ಮೆಹಂದಿ ಜಿಹಾದ್' ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ...

‘ಲವ್ ಜಿಹಾದ್, ಮೆಹಂದಿ ಜಿಹಾದ್’ ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ ಎನ್‌ಬಿಡಿಎಸ್‌ಎ ತರಾಟೆ

ವಿಡಿಯೋ, ತಲೆಬರಹಗಳನ್ನು ತೆಗೆದುಹಾಕಲು ಸೂಚನೆ

- Advertisement -
- Advertisement -

ನಿವೃತ್ತ ನ್ಯಾಯಮೂರ್ತಿ ಎ.ಕೆ ಸಿಕ್ರಿ ನೇತೃತ್ವದ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ‘ಮೆಹಂದಿ ಜಿಹಾದ್’ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದ ಝೀ ನ್ಯೂಸ್‌ಗೆ ಎಚ್ಚರಿಕೆ ನೀಡಿದ್ದು, ನೀತಿ ಸಂಹಿತೆಯ ಉಲ್ಲಂಘನೆ ಹಿನ್ನೆಲೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಅಂತಹ ಕಾರ್ಯಕ್ರಮಗಳ ವಿಡಿಯೋಗಳನ್ನು ತೆಗೆದುಹಾಕುವಂತೆ ನಿರ್ದೇಶಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ಪ್ರತ್ಯೇಕ ಆದೇಶದಲ್ಲಿ, ಕಾನೂನುಬಾಹಿರ ಮತಾಂತರ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪನ್ನು ವರದಿ ಮಾಡುವಾಗ ‘ಲವ್ ಜಿಹಾದ್’ ಕುರಿತು ಕೆಲವು ಪ್ರಚೋದನಕಾರಿ ತಲೆಬರಹಗಳನ್ನು ಬಳಸಿದ್ದಕ್ಕಾಗಿ ಎನ್‌ಬಿಡಿಎಸ್‌ಎ ‘ಟೈಮ್ಸ್ ನೌ ನವಭಾರತ್’ ವಾಹಿನಿಯನ್ನು ತರಾಟೆಗೆ ತೆಗೆದುಕೊಂಡಿದೆ. ವಾಹಿನಿಯು ತಲೆಬರಹಗಳಲ್ಲಿ ತೀರ್ಪಿನ ಭಾಗವಲ್ಲದ ಕೆಲವು ಅಂಶಗಳನ್ನು ಪರಿಚಯಿಸಿರುವ ಹಿನ್ನೆಲೆ ಅವುಗಳನ್ನು ತೆಗೆದುಹಾಕಲು ಆದೇಶಿಸಿದೆ ಎಂದು ವರದಿ ವಿವರಿಸಿದೆ.

ಚಾನೆಲ್‌ಗಳು ತಪ್ಪು ಮಾಹಿತಿಗಳನ್ನು ಹರಡುತ್ತಿವೆ ಮತ್ತು ಜನರನ್ನು ವಿಭಜಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಪ್ರಸಾರ ಮಾಡುತ್ತಿವೆ ಎಂದು ಆರೋಪಿಸಿ ಹೋರಾಟಗಾರ ಇಂದ್ರಜೀತ್ ಘೋರ್ಪಡೆ ಅವರು ಅಕ್ಟೋಬರ್ 2024ರಲ್ಲಿ ಸಲ್ಲಿಸಿದ್ದ ದೂರುಗಳ ಮೇರೆಗೆ ಎನ್‌ಬಿಡಿಎಸ್‌ಎ ಆದೇಶ ನೀಡಿದೆ.

ಝೀ ನ್ಯೂಸ್ – ‘ಮೆಹಂದಿ ಜಿಹಾದ್’ ಕಾರ್ಯಕ್ರಮಗಳು

‘ಮೆಹಂದಿ ಜಿಹಾದ್’ ಎಂಬ ಕಾಲ್ಪನಿಕ ವಿಷಯದ ಅಡಿ, ಮುಸ್ಲಿಂ ಮೆಹಂದಿ ಕಲಾವಿದರು ಹಿಂದೂ ಮಹಿಳೆಯರಿಗೆ ಮೆಹಂದಿ ಹಚ್ಚುವ ಮುನ್ನ ಅದಕ್ಕೆ ಉಗುಳುತ್ತಾರೆ. ಮುಸ್ಲಿಂ ಪುರುಷರು ಮೆಹಂದಿ ಕಲಾವಿದರಾಗಿ ಕೆಲಸ ಮಾಡಿ, ಹಿಂದೂ ಮಹಿಳೆಯರ ಫೋನ್ ನಂಬರ್‌ಗಳನ್ನು ತೆಗೆದುಕೊಳ್ಳುತ್ತಾರೆ. ಅದರ ಮೂಲಕ ಅವರನ್ನು ಬಲೆಗೆ ಬೀಳಿಸಿ ಮದುವೆಯಾಗುತ್ತಾರೆ. ಬಳಿಕ ಅವರ ಧರ್ಮ ಬದಲಾಯಿಸುವ ಗುಪ್ತ ಯೋಜನೆ ಇದೆ ಎಂಬ ಕಪೋಲಕಲ್ಪಿತ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದ್ದ ಆರೋಪಗಳನ್ನು ಝೀ ನ್ಯೂಸ್ ವಿರುದ್ದ ಮಾಡಲಾಗಿತ್ತು.

ಅಲ್ಲದೆ, ಈ ಕಾರ್ಯಕ್ರಮಗಳ ಪ್ರಸಾರದ ಬಳಿಕ, ಕೆಲವು ಗುಂಪುಗಳು ಮುಸ್ಲಿಂ ಮೆಹಂದಿ ಕಲಾವಿದರ ವಿರುದ್ಧ ಹಿಂಸಾತ್ಮಕ ಮಾತುಗಳನ್ನು ಆಡಿತ್ತು, ಅವರನ್ನು ಬಹಿಷ್ಕರಿಸಬೇಕು ಎಂದು ಕರೆ ಕೊಟ್ಟಿತ್ತು. ಇವುಗಳನ್ನು ಝೀ ನ್ಯೂಸ್ ಹೆಚ್ಚು ಹೆಚ್ಚು ಪ್ರಸಾರ ಮಾಡಿದೆ ಎಂದು ದೂರಲಾಗಿತ್ತು. ಝೀ ನ್ಯೂಸ್ ಮಾಡಿದ ಆರೋಪಗಳು ಮತ್ತು ಪ್ರಸಾರ ಮಾಡಿದ ಕಾರ್ಯಕ್ರಮಗಳು ಸತ್ಯವನ್ನು ತಿರುಚುವಂತಿದ್ದವು. ಜನರಲ್ಲಿ ತಪ್ಪು ಭಾವನೆಗಳನ್ನು ಹುಟ್ಟಿಸುವಂತಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

“1. ಮೆಹೆಂದಿ ಜಿಹಾದ್ ಪರ್ ದೇ ದನಾ-ದನ್, 2. ಆವೇದನ್ ನಿವೇದನ್ ನಹಿ ಮಾನೆ ತೋ ದೇ ದನಾ-ದನ್, 3. ಮೆಹಂದಿ ಜಿಹಾದ್ ಕೆ ಖಿಲಾಫ್ ಲಾಟ್ ಮಾಡೆಲ್ ಲಾಂಚ್, 4. ಲಾಠಿ ಸೆ ಲೈಸ್ ರಹೇಂಗೆ ಜಿಹಾದಿಯೋಂಕೊ ರೊಕೇಂಗೆ, 5. ಪಕಡೆ ಜಾನೆ ಪರ್ ಸಬಕ್ ಸಿಕಾಯ ಜಾಯೆಗ” ಈ ರೀತಿಯ ತಲೆಬರಹಗಳನ್ನು ಝೀ ನ್ಯೂಸ್ ತನ್ನ ಕಾರ್ಯಕ್ರಮಗಳಿಗೆ ಕೊಟ್ಟಿತ್ತು ಎಂದು ದೂರಿನಲ್ಲಿ ವಿವರಿಸಲಾಗಿತ್ತು.

ಝೀ ನ್ಯೂಸ್ ಮುಸ್ಲಿಂ ಮೆಹಂದಿ ಕಲಾವಿದರರ ವಿರುದ್ದದ ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಿರಲಿಲ್ಲ. ಮುಸ್ಲಿಂ ಕಲಾವಿದರ ವಿರುದ್ಧದ ಬೆದರಿಕೆಗಳನ್ನು ಮತ್ತು ಅವಮಾನಗಳನ್ನು ಖಂಡಿಸಿರಲಿಲ್ಲ. ವಿರೋಧಿ ದೃಷ್ಟಿಕೋನಗಳನ್ನು ನಿರ್ಲಕ್ಷಿಸಿತ್ತು ಮತ್ತು ತನ್ನ ಥಂಬ್‌ನೇಲ್‌ಗಳು, ತಲೆ ಬರಹಗಳು ಮತ್ತು ಶೀರ್ಷಿಕೆಗಳ ಮೂಲಕ ಸಾಮುದಾಯಿಕ ಭಯ ಮತ್ತು ದ್ವೇಷವನ್ನು ಹರಡಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಝೀ ನ್ಯೂಸ್ ಎನ್‌ಬಿಡಿಎಸ್‌ಎ ಮುಂದೆ ತಾವು ಕೇವಲ ಕೆಲವು ಸಂಘಟನೆಗಳ ಹೇಳಿಕೆಗಳನ್ನು ವರದಿ ಮಾಡಿದ್ದೇವೆ ಎಂದು ವಾದಿಸಿತ್ತು. ಆದರೆ, ಎನ್‌ಬಿಡಿಎಸ್‌ಎ ತಲೆ ಬರಹಗಳು ಮತ್ತು ಕಾರ್ಯಕ್ರಮದ ಪ್ರಸ್ತುತಿಯ ರೀತಿಯಿಂದ ಚಾನೆಲ್ ಸ್ವತಃ ಈ ಆರೋಪಗಳನ್ನು ಬೆಂಬಲಿಸುತ್ತಿರುವಂತೆ ಭಾಸವಾಗಿದೆ ಎಂದಿದೆ. ಆದ್ದರಿಂದ, ಝೀ ನ್ಯೂಸ್‌ಗೆ ಆ ಕಾರ್ಯಕ್ರಮಗಳನ್ನು ತೆಗೆದುಹಾಕಲು ಆದೇಶಿಸಿದೆ. ಭವಿಷ್ಯದಲ್ಲಿ ಎಚ್ಚರಿಕೆಯಿಂದ ವಿರೋಧಿ ದೃಷ್ಟಿಕೋನಗಳನ್ನು ಸೇರಿಸಿಕೊಂಡು ವರದಿ ಮಾಡುವಂತೆ ಎಚ್ಚರಿಕೆ ನೀಡಿದೆ ಎಂದು ಲೈವ್ ಲಾ ವರದಿ ಹೇಳಿದೆ.

“ತಲೆಬರಹಗಳನ್ನು ಕೊಡುವಾಗ ಪ್ರಸಾರಕರು ಇವು ಮೂರನೇ ವ್ಯಕ್ತಿಗಳು ನೀಡಿದ ಹೇಳಿಕೆಗಳು ಎಂದು ಯಾವುದೇ ಸ್ಪಷ್ಟೀಕರಣವನ್ನು ನೀಡಿಲ್ಲ ಅಥವಾ ಈ ತಲೆಬರಹಗಳು ಪ್ರಸಾರಕರ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ ಎಂಬುದಕ್ಕೆ ಯಾವುದೇ ಸ್ಪಷ್ಟನೆಯನ್ನೂ ನೀಡಿಲ್ಲ” ಎಂದು ಎನ್‌ಬಿಡಿಎಸ್‌ಎ ಹೇಳಿದೆ.

“ಸಂಪಾದಕೀಯ ವಿವೇಚನೆಯ ಭಾಗವಾಗಿರುವ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ರಕ್ಷಿಸಲ್ಪಟ್ಟಿರುವ ಪ್ರಸಾರದ ವಿಷಯದ ಬಗ್ಗೆ ತಾನು ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಎನ್‌ಬಿಡಿಎಸ್‌ಎ ಸ್ಪಷ್ಟಪಡಿಸಿದೆ. ಆದರೆ, ಈ ಹಂತದಲ್ಲಿ ಸಾರ್ವಜನಿಕ ಸಂವಾದವನ್ನು ರೂಪಿಸುವಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿ ಮಾಧ್ಯಮವು ವಹಿಸುವ ಪಾತ್ರವನ್ನು ನೆನಪಿಸುವುದು ಅಗತ್ಯವಾಗಿದೆ. ಸಂಭಾವ್ಯ ಸೂಕ್ಷ್ಮ ವಿಷಯಗಳೊಂದಿಗೆ ವ್ಯವಹರಿಸುವಾಗ, ಪ್ರಸಾರಕರು ತಾವು ಪ್ರಸಾರ ಮಾಡುವ ವಿಷಯವನ್ನು ವಿಮರ್ಶಾತ್ಮಕವಾಗಿ ಪರಿಶೀಲಿಸಬೇಕು. ಅದು ನೀತಿ ಸಂಹಿತೆಯಲ್ಲಿ ವಿವರಿಸಿರುವ ಪತ್ರಿಕೋದ್ಯಮ ಮಾನದಂಡಗಳಿಗೆ ಹೊಂದಿಕೆಯಾಗುತ್ತದೆ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಎನ್‌ಡಿಬಿಎಸ್‌ಎ ತಿಳಿಸಿದೆ.

ಟೈಮ್ಸ್ ನೌ ನವಭಾರತ್: ‘ಲವ್ ಜಿಹಾದ್’ ವರದಿ

ಟೈಮ್ಸ್ ನೌ ನವಭಾರತ್ ಚಾನೆಲ್‌ ವಿರುದ್ಧದ ದೂರು, ಹಿಂದೂ ಮಹಿಳೆಯನ್ನು ಧಾರ್ಮಿಕ ಮತಾಂತರದ ನಂತರ ಮದುವೆಗೆ ಒತ್ತಾಯಿಸಿದ್ದಕ್ಕಾಗಿ ಮುಸ್ಲಿಂ ಪುರುಷನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬರೇಲಿ ಸೆಷನ್ಸ್ ನ್ಯಾಯಾಲಯದ ತೀರ್ಪಿನ ವರದಿಗೆ ಸಂಬಂಧಿಸಿದೆ.

ದೂರಿನ ಪ್ರಕಾರ, ಟೈಮ್ಸ್ ನೌ ನವಭಾರತ್ ಪತ್ರಿಕೋದ್ಯಮದ ಪರಿಶೀಲನೆಯಿಲ್ಲದೆ ನ್ಯಾಯಾಧೀಶರ ಮಾತುಗಳನ್ನು ಪ್ರಸಾರ ಮಾಡಿದೆ. ಮಹಿಳೆಯ ಸಾಕ್ಷ್ಯವನ್ನು ಬಿಟ್ಟುಬಿಟ್ಟಿದೆ ಮತ್ತು ‘ಲವ್ ಜಿಹಾದ್’ ನಿರೂಪಣೆಯನ್ನು ಬಲಪಡಿಸುವ ಬಿಜೆಪಿ ರಾಜಕಾರಣಿಗಳ ಹೇಳಿಕೆಗಳನ್ನು ಮತ್ತಷ್ಟು ಪ್ರಸಾರ ಮಾಡಿದೆ. “ಪ್ಯಾರ್ ಕೆ ಜಹಾಝ್ ಮೇ ಜಿಹಾದ್ ಕಾ ತೂಫಾನ್,” “ಲವ್ ಜಿಹಾದ್ ಪರ್ ಕೋರ್ಟ್ ಕಾ ಸಖ್ತ್ ಫೈಸ್ಲಾ,” “ಜಿಹಾದಿಯೋನ್ ಕಿ ಮೊಹಬ್ಬತ್ ಕಾ ಸಚ್,” ಮತ್ತು “ಜಿಹಾದಿಯೋಂ ಕೆ ಇರಾದಾನ್ ಪರ್ ಲಗೀ ಮೊಹರ್” ಮುಂತಾದ ತಲೆಬರಹಗಳನ್ನು ಪ್ರಸಾರ ಮಾಡಿದೆ.

ನ್ಯಾಯಾಲಯದ ತೀರ್ಪನ್ನು ವರದಿ ಮಾಡುವ ಮೊದಲು ಚಾನೆಲ್ ಸ್ವತಂತ್ರ ಸತ್ಯ ಪರಿಶೀಲನೆ ಮಾಡಬೇಕಿತ್ತು ಎಂಬ ದೂರುದಾರರ ವಾದದಿಂದ ಎನ್‌ಬಿಡಿಎಸ್‌ಎ ಪ್ರಭಾವಿತ ಆಗಿಲ್ಲ.

ನ್ಯಾಯಾಲಯದ ತೀರ್ಪಿನ ಕುರಿತು ಚಾನೆಲ್ ವರದಿ ಮಾಡಿದೆ ಅದು ಆಕ್ಷೇಪಾರ್ಹವಲ್ಲ ಎಂದು ಎನ್‌ಬಿಡಿಎಸ್‌ಎ ಹೇಳಿದೆ. ಆದರೆ, ಟೈಮ್ಸ್ ನೌ ನವಭಾರತ್ ತೀರ್ಪಿನ ನಿರೂಪಣೆಯನ್ನು ಮೀರಿ ಸಂವೇದನಾಶೀಲ ತಲೆಬರಹಗಳ ಮೂಲಕ ಹೆಚ್ಚುವರಿ ಅಂಶಗಳನ್ನು ಪರಿಚಯಿಸಿದೆ ಎಂದು ಅದು ಹೇಳಿದೆ. “ಯುಪಿ ಮೇ ಲವ್ ಜಿಹಾದ್… ಟೂಲ್‌ಕಿಟ್ ಪಾಕಿಸ್ತಾನಿ” ಮತ್ತು “ಝುತೇ ನಾಮ್ ಕಾ ಅಫ್ಸಾನಾ, ಮಕ್ಸದ್ ಮುಸಲ್ಮಾನ್ ಬನಾನ” ಮುಂತಾದ ಶೀರ್ಷಿಕೆಗಳ ಬಳಕೆಯನ್ನು ಎಮ್‌ಡಿಬಿಎಸ್‌ಎ ನಿರ್ದಿಷ್ಟವಾಗಿ ಸೂಚಿಸಿದೆ. ಇದು ವರದಿಯ ಉದ್ದೇಶಿತ ವಿಷಯಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ಹೇಳಿದೆ.

ಕಾರ್ಯಕ್ರಮ ಪ್ರಸಾರ ಮಾಡುವಾಗ, ಪ್ರಸಾರಕರು ನ್ಯಾಯಾಲಯದ ತೀರ್ಪಿನ ನಿರೂಪಣೆಯನ್ನು ಮೀರಿ, ತೀರ್ಪಿನ ಭಾಗವಲ್ಲದ ಕೆಲವು ಅಂಶಗಳನ್ನು ಪರಿಚಯಿಸಿದ್ದಾರೆ. ಅವುಗಳಿಗೆ ವರದಿಯ ಉದ್ದೇಶಿತ ವಿಷಯಕ್ಕೆ ಹೊಂದಿಕೆಯಾಗದ ತಲೆಬರಹಗಳನ್ನು ಬಳಸಲಾಗಿದೆ. ಆದ್ದರಿಂದ ಆಕ್ಷೇಪಾರ್ಹ ತಲೆಬರಹಗಳನ್ನು ತೆಗೆದುಹಾಕುವಂತೆ ಎನ್‌ಡಿಬಿಎಸ್‌ಎ ಚಾನೆಲ್‌ಗೆ ನಿರ್ದೇಶಿಸಿದೆ. ಇದೇ ವೇಳೆ, ಈ ಶೀರ್ಷಿಕೆಗಳನ್ನು ಹೊರತುಪಡಿಸಿ, ತೀರ್ಪಿನ ನಿರೂಪಣೆಯು ನೀತಿಸಂಹಿತೆ ಮತ್ತು ಪ್ರಸಾರ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂದು ಎನ್‌ಡಿಬಿಎಸ್‌ಎ ತಿಳಿಸಿದೆ.

Courtesy : livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...