Homeಮುಖಪುಟಹೋರಾಟಗಾರ್ತಿ ಕುರಿತು ಆಕ್ಷೇಪಾರ್ಹ ಟೀಕೆ: ಬೇಷರತ್ ಕ್ಷಮೆ ಕೇಳುವಂತೆ ಟೈಮ್ಸ್‌‌ನೌಗೆ NBSA ಆದೇಶ

ಹೋರಾಟಗಾರ್ತಿ ಕುರಿತು ಆಕ್ಷೇಪಾರ್ಹ ಟೀಕೆ: ಬೇಷರತ್ ಕ್ಷಮೆ ಕೇಳುವಂತೆ ಟೈಮ್ಸ್‌‌ನೌಗೆ NBSA ಆದೇಶ

ಪೂರ್ಣ ಪರದೆಯಲ್ಲಿ ದೊಡ್ಡ ಫಾಂಟ್ ಗಾತ್ರದಲ್ಲಿ ಸ್ಪಷ್ಟವಾಗಿ ಕೇಳಬಲ್ಲ ಧ್ವನಿಯ (ನಿಧಾನಗತಿಯಲ್ಲಿ) ಮೂಲಕ ಬೇಷರತ್ತಾಗಿ NBSA ಆದೇಶದಲ್ಲಿರುವಂತೆ TIMES NOW ಕ್ಷಮೆಯಾಚಿಸಬೇಕಾಗಿದೆ.

- Advertisement -
- Advertisement -

ಲೇಖಕಿ ಮತ್ತು ಸಾಮಾಜಿಕ ಕಾರ್ಯಕರ್ತೆ ಸಂಜುಕ್ತ ಬಸು ಅವರ ಬಗ್ಗೆ 2018 ರ ಏಪ್ರಿಲ್‌‌ನಲ್ಲಿ ನಡೆದ ಚರ್ಚೆಯ ಸಂದರ್ಭ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸುವಂತೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA)ಯು ಟೈಮ್ಸ್ ನೌ ಸುದ್ದಿ ವಾಹಿನಿಗೆ ನಿರ್ದೇಶಿಸಿದೆ.

ಟೈಮ್ಸ್ ನೌ ವಾಹಿನಿಯೂ 2018 ರ ಏಪ್ರಿಲ್ 6 ರಂದು ಸಂಜುಕ್ತ ಬಗ್ಗೆ ಮಾನಹಾನಿಕರ ಕಾರ್ಯಕ್ರಮವನ್ನು ನಡೆಸಿತ್ತು. ಚಾನೆಲ್ ತನ್ನ ಕಾರ್ಯಕ್ರಮದಲ್ಲಿ ಅವರನ್ನು “ಹಿಂದೂ ದ್ವೇಷಿ”, “ದುಷ್ಟ ಟ್ರೋಲರ್‌” ಎಂದು ಉಲ್ಲೇಖಿಸಿತ್ತು. ಅಷ್ಟೇ ಅಲ್ಲದೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ “ಟ್ರೋಲ್ ಸೇನೆಯ”ಯ ಭಾಗವೆಂದು ಹೇಳಿಕೊಂಡಿತ್ತು. ಮಾತ್ರವಲ್ಲದೆ ವಾಹಿನಿಯು ಸಂಜುಕ್ತಾ ಅವರ ಹೇಳಿಕೆಯನ್ನು ಪಡೆದಿಲ್ಲ ಮತ್ತು ಸುದ್ದಿಯನ್ನು ಪ್ರಸಾರ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಲಿಲ್ಲ ಎಂದು NBSA ಯ ಆದೇಶ ಹೇಳಿದ್ದು, ಆ ಮೂಲಕ ಸಂಘದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಹೇಳಿದೆ.

ಇದನ್ನೂ ಓದಿ: ಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

NBSA ಆದೇಶದ ಪ್ರಕಾರ, ಟೈಮ್ಸ್ ನೌ ಅಕ್ಟೋಬರ್ 27, 2020 ರಂದು ರಾತ್ರಿ 9 ಗಂಟೆಗೆ ಕ್ಷಮೆಯಾಚನೆ ಪ್ರಸಾರ ಮಾಡಬೇಕಿದ್ದು ಅದು ಕೆಳಗಿನ ಪಠ್ಯವನ್ನು ಪೂರ್ಣ ಪರದೆಯಲ್ಲಿ ದೊಡ್ಡ ಫಾಂಟ್ ಗಾತ್ರದಲ್ಲಿ ಸ್ಪಷ್ಟವಾಗಿ ಕೇಳಬಲ್ಲ ಧ್ವನಿಯ (ನಿಧಾನಗತಿಯಲ್ಲಿ) ಮೂಲಕ ಬೇಷರತ್ತಾಗಿ ಕ್ಷಮೆಯಾಚಿಸಬೇಕಾಗಿದೆ.

“ನಾವು 6.4.2018 ರಂದು ಪ್ರಸಾರವಾದ ’ಇಂಡಿಯಾ ಅಪ್‌ಫ್ರಂಟ್ @pm 8’ ಮತ್ತು ‘ದಿ ನ್ಯೂಶೋರ್ ಡಿಬೇಟ್ @ 9’ ಕಾರ್ಯಕ್ರಮದಲ್ಲಿ ಸಂಜುಕ್ತ ಬಸು ಅವರ ಹೇಳಿಕೆಯನ್ನು ತೆಗೆದುಕೊಂಡಿಲ್ಲ, ಇದರಿಂದಾಗಿ ನಿಷ್ಪಕ್ಷಪಾತ, ವಸ್ತುನಿಷ್ಠತೆ, ವರದಿ ಮಾಡುವಲ್ಲಿ ತಟಸ್ಥತೆ ಮತ್ತು ನ್ಯಾಯಸಮ್ಮತತೆಯನ್ನು ಖಾತರಿಪಡಿಸುವುದು ಸೇರಿದಂತೆ ಸಂಬಂಧಿಸಿದ ತತ್ವಗಳನ್ನು ಉಲ್ಲಂಘಿಸಿದ್ದೇವೆ. ಶ್ರೀಮತಿ ಸಂಜುಕ್ತ ಬಸು ಅವರಿಗೆ ಅಪಖ್ಯಾತಿ ತರುವ ಉದ್ದೇಶವಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ”

ಅಷ್ಟೇ ಅಲ್ಲದೆ ತನ್ನ ವೆಬ್‌ಸೈಟ್, ಯೂಟ್ಯೂಬ್ ಅಥವಾ ಇನ್ನಾವುದೇ ಲಿಂಕ್‌ಗಳಿಂದ ಪ್ರಸಾರದ ವೀಡಿಯೊವನ್ನು ತೆಗೆದುಹಾಕಿ ಅದನ್ನು ಲಿಖಿತವಾಗಿ NBSA ಗೆ ಸಲ್ಲಿಸುವಂತೆ ಪ್ರಾಧಿಕಾರವು ಚಾನೆಲ್‌ಗೆ ಸೂಚಿಸಿದೆ.

ಈ ಆದೇಶದ ಅನುಸರಣೆಯ ಸಂಕೇತವಾಗಿ ಪ್ರಸಾರವಾದ ಒಂದು ವಾರದೊಳಗೆ ದಿನಾಂಕ ಮತ್ತು ಸಮಯದೊಂದಿಗೆ ಕ್ಷಮೆಯಾಚನೆ ಪ್ರಸಾರವನ್ನು ಒಳಗೊಂಡಿರುವ ಕಾಂಪ್ಯಾಕ್ಟ್ ಡಿಸ್ಕ್ ಅಥವಾ ಸಿಡಿಯನ್ನು ಸಲ್ಲಿಸಲು ಸುದ್ದಿ ವಾಹಿನಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

ಇದಲ್ಲದೆ, ಟೈಮ್ಸ್ ನೌ ಈ ಆದೇಶವನ್ನು ಮಾಧ್ಯಮಗಳು, ನ್ಯೂಸ್ ಬ್ರಾಡ್ಕಾಸ್ಟರ್ಸ್ ಅಸೋಸಿಯೇಶನ್ ಸದಸ್ಯರೊಂದಿಗೆ ಹಂಚಿಕೊಳ್ಳಬೇಕು ಮತ್ತು ಅದನ್ನು ತನ್ನ ವೆಬ್‌ಸೈಟ್‌ನಲ್ಲಿ ಇರಿಸಿ ಅದನ್ನು ತನ್ನ ವಾರ್ಷಿಕ ವರದಿಯಲ್ಲಿ ಸೇರಿಸಿಕೊಳ್ಳಬೇಕು ಎಂದೂ ಹೇಳಿದೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ಸಂಜುಕ್ತ ಬಸು ಟ್ವಿಟ್ಟರ್‌ನಲ್ಲಿ, “ಇಂದು ಟೈಮ್ಸ್ ನೌಗೆ ಸರಿಯಾದ ಶಿಕ್ಷೆಯಾಗಿದೆ. ನಾವು ಗೆದ್ದಿದ್ದೇವೆ” ಎಂದು ಬರೆದ್ದಾರೆ.

ಇದನ್ನೂ ಓದಿ: ಕಟ್ಟಬೇಕಿರುವುದು ಪರ್ಯಾಯ ಮಾಧ್ಯಮವನ್ನಲ್ಲ; ಹೊಸ ಮುಖ್ಯವಾಹಿನಿ ಮಾಧ್ಯಮವನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...