Homeಮುಖಪುಟಹೋರಾಟಗಾರ್ತಿ ಕುರಿತು ಆಕ್ಷೇಪಾರ್ಹ ಟೀಕೆ: ಬೇಷರತ್ ಕ್ಷಮೆ ಕೇಳುವಂತೆ ಟೈಮ್ಸ್‌‌ನೌಗೆ NBSA ಆದೇಶ

ಹೋರಾಟಗಾರ್ತಿ ಕುರಿತು ಆಕ್ಷೇಪಾರ್ಹ ಟೀಕೆ: ಬೇಷರತ್ ಕ್ಷಮೆ ಕೇಳುವಂತೆ ಟೈಮ್ಸ್‌‌ನೌಗೆ NBSA ಆದೇಶ

ಪೂರ್ಣ ಪರದೆಯಲ್ಲಿ ದೊಡ್ಡ ಫಾಂಟ್ ಗಾತ್ರದಲ್ಲಿ ಸ್ಪಷ್ಟವಾಗಿ ಕೇಳಬಲ್ಲ ಧ್ವನಿಯ (ನಿಧಾನಗತಿಯಲ್ಲಿ) ಮೂಲಕ ಬೇಷರತ್ತಾಗಿ NBSA ಆದೇಶದಲ್ಲಿರುವಂತೆ TIMES NOW ಕ್ಷಮೆಯಾಚಿಸಬೇಕಾಗಿದೆ.

- Advertisement -
- Advertisement -

ಲೇಖಕಿ ಮತ್ತು ಸಾಮಾಜಿಕ ಕಾರ್ಯಕರ್ತೆ ಸಂಜುಕ್ತ ಬಸು ಅವರ ಬಗ್ಗೆ 2018 ರ ಏಪ್ರಿಲ್‌‌ನಲ್ಲಿ ನಡೆದ ಚರ್ಚೆಯ ಸಂದರ್ಭ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸುವಂತೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA)ಯು ಟೈಮ್ಸ್ ನೌ ಸುದ್ದಿ ವಾಹಿನಿಗೆ ನಿರ್ದೇಶಿಸಿದೆ.

ಟೈಮ್ಸ್ ನೌ ವಾಹಿನಿಯೂ 2018 ರ ಏಪ್ರಿಲ್ 6 ರಂದು ಸಂಜುಕ್ತ ಬಗ್ಗೆ ಮಾನಹಾನಿಕರ ಕಾರ್ಯಕ್ರಮವನ್ನು ನಡೆಸಿತ್ತು. ಚಾನೆಲ್ ತನ್ನ ಕಾರ್ಯಕ್ರಮದಲ್ಲಿ ಅವರನ್ನು “ಹಿಂದೂ ದ್ವೇಷಿ”, “ದುಷ್ಟ ಟ್ರೋಲರ್‌” ಎಂದು ಉಲ್ಲೇಖಿಸಿತ್ತು. ಅಷ್ಟೇ ಅಲ್ಲದೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ “ಟ್ರೋಲ್ ಸೇನೆಯ”ಯ ಭಾಗವೆಂದು ಹೇಳಿಕೊಂಡಿತ್ತು. ಮಾತ್ರವಲ್ಲದೆ ವಾಹಿನಿಯು ಸಂಜುಕ್ತಾ ಅವರ ಹೇಳಿಕೆಯನ್ನು ಪಡೆದಿಲ್ಲ ಮತ್ತು ಸುದ್ದಿಯನ್ನು ಪ್ರಸಾರ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಲಿಲ್ಲ ಎಂದು NBSA ಯ ಆದೇಶ ಹೇಳಿದ್ದು, ಆ ಮೂಲಕ ಸಂಘದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಹೇಳಿದೆ.

ಇದನ್ನೂ ಓದಿ: ಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

NBSA ಆದೇಶದ ಪ್ರಕಾರ, ಟೈಮ್ಸ್ ನೌ ಅಕ್ಟೋಬರ್ 27, 2020 ರಂದು ರಾತ್ರಿ 9 ಗಂಟೆಗೆ ಕ್ಷಮೆಯಾಚನೆ ಪ್ರಸಾರ ಮಾಡಬೇಕಿದ್ದು ಅದು ಕೆಳಗಿನ ಪಠ್ಯವನ್ನು ಪೂರ್ಣ ಪರದೆಯಲ್ಲಿ ದೊಡ್ಡ ಫಾಂಟ್ ಗಾತ್ರದಲ್ಲಿ ಸ್ಪಷ್ಟವಾಗಿ ಕೇಳಬಲ್ಲ ಧ್ವನಿಯ (ನಿಧಾನಗತಿಯಲ್ಲಿ) ಮೂಲಕ ಬೇಷರತ್ತಾಗಿ ಕ್ಷಮೆಯಾಚಿಸಬೇಕಾಗಿದೆ.

“ನಾವು 6.4.2018 ರಂದು ಪ್ರಸಾರವಾದ ’ಇಂಡಿಯಾ ಅಪ್‌ಫ್ರಂಟ್ @pm 8’ ಮತ್ತು ‘ದಿ ನ್ಯೂಶೋರ್ ಡಿಬೇಟ್ @ 9’ ಕಾರ್ಯಕ್ರಮದಲ್ಲಿ ಸಂಜುಕ್ತ ಬಸು ಅವರ ಹೇಳಿಕೆಯನ್ನು ತೆಗೆದುಕೊಂಡಿಲ್ಲ, ಇದರಿಂದಾಗಿ ನಿಷ್ಪಕ್ಷಪಾತ, ವಸ್ತುನಿಷ್ಠತೆ, ವರದಿ ಮಾಡುವಲ್ಲಿ ತಟಸ್ಥತೆ ಮತ್ತು ನ್ಯಾಯಸಮ್ಮತತೆಯನ್ನು ಖಾತರಿಪಡಿಸುವುದು ಸೇರಿದಂತೆ ಸಂಬಂಧಿಸಿದ ತತ್ವಗಳನ್ನು ಉಲ್ಲಂಘಿಸಿದ್ದೇವೆ. ಶ್ರೀಮತಿ ಸಂಜುಕ್ತ ಬಸು ಅವರಿಗೆ ಅಪಖ್ಯಾತಿ ತರುವ ಉದ್ದೇಶವಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ”

ಅಷ್ಟೇ ಅಲ್ಲದೆ ತನ್ನ ವೆಬ್‌ಸೈಟ್, ಯೂಟ್ಯೂಬ್ ಅಥವಾ ಇನ್ನಾವುದೇ ಲಿಂಕ್‌ಗಳಿಂದ ಪ್ರಸಾರದ ವೀಡಿಯೊವನ್ನು ತೆಗೆದುಹಾಕಿ ಅದನ್ನು ಲಿಖಿತವಾಗಿ NBSA ಗೆ ಸಲ್ಲಿಸುವಂತೆ ಪ್ರಾಧಿಕಾರವು ಚಾನೆಲ್‌ಗೆ ಸೂಚಿಸಿದೆ.

ಈ ಆದೇಶದ ಅನುಸರಣೆಯ ಸಂಕೇತವಾಗಿ ಪ್ರಸಾರವಾದ ಒಂದು ವಾರದೊಳಗೆ ದಿನಾಂಕ ಮತ್ತು ಸಮಯದೊಂದಿಗೆ ಕ್ಷಮೆಯಾಚನೆ ಪ್ರಸಾರವನ್ನು ಒಳಗೊಂಡಿರುವ ಕಾಂಪ್ಯಾಕ್ಟ್ ಡಿಸ್ಕ್ ಅಥವಾ ಸಿಡಿಯನ್ನು ಸಲ್ಲಿಸಲು ಸುದ್ದಿ ವಾಹಿನಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

ಇದಲ್ಲದೆ, ಟೈಮ್ಸ್ ನೌ ಈ ಆದೇಶವನ್ನು ಮಾಧ್ಯಮಗಳು, ನ್ಯೂಸ್ ಬ್ರಾಡ್ಕಾಸ್ಟರ್ಸ್ ಅಸೋಸಿಯೇಶನ್ ಸದಸ್ಯರೊಂದಿಗೆ ಹಂಚಿಕೊಳ್ಳಬೇಕು ಮತ್ತು ಅದನ್ನು ತನ್ನ ವೆಬ್‌ಸೈಟ್‌ನಲ್ಲಿ ಇರಿಸಿ ಅದನ್ನು ತನ್ನ ವಾರ್ಷಿಕ ವರದಿಯಲ್ಲಿ ಸೇರಿಸಿಕೊಳ್ಳಬೇಕು ಎಂದೂ ಹೇಳಿದೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ಸಂಜುಕ್ತ ಬಸು ಟ್ವಿಟ್ಟರ್‌ನಲ್ಲಿ, “ಇಂದು ಟೈಮ್ಸ್ ನೌಗೆ ಸರಿಯಾದ ಶಿಕ್ಷೆಯಾಗಿದೆ. ನಾವು ಗೆದ್ದಿದ್ದೇವೆ” ಎಂದು ಬರೆದ್ದಾರೆ.

ಇದನ್ನೂ ಓದಿ: ಕಟ್ಟಬೇಕಿರುವುದು ಪರ್ಯಾಯ ಮಾಧ್ಯಮವನ್ನಲ್ಲ; ಹೊಸ ಮುಖ್ಯವಾಹಿನಿ ಮಾಧ್ಯಮವನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...