Homeಮುಖಪುಟಹೋರಾಟಗಾರ್ತಿ ಕುರಿತು ಆಕ್ಷೇಪಾರ್ಹ ಟೀಕೆ: ಬೇಷರತ್ ಕ್ಷಮೆ ಕೇಳುವಂತೆ ಟೈಮ್ಸ್‌‌ನೌಗೆ NBSA ಆದೇಶ

ಹೋರಾಟಗಾರ್ತಿ ಕುರಿತು ಆಕ್ಷೇಪಾರ್ಹ ಟೀಕೆ: ಬೇಷರತ್ ಕ್ಷಮೆ ಕೇಳುವಂತೆ ಟೈಮ್ಸ್‌‌ನೌಗೆ NBSA ಆದೇಶ

ಪೂರ್ಣ ಪರದೆಯಲ್ಲಿ ದೊಡ್ಡ ಫಾಂಟ್ ಗಾತ್ರದಲ್ಲಿ ಸ್ಪಷ್ಟವಾಗಿ ಕೇಳಬಲ್ಲ ಧ್ವನಿಯ (ನಿಧಾನಗತಿಯಲ್ಲಿ) ಮೂಲಕ ಬೇಷರತ್ತಾಗಿ NBSA ಆದೇಶದಲ್ಲಿರುವಂತೆ TIMES NOW ಕ್ಷಮೆಯಾಚಿಸಬೇಕಾಗಿದೆ.

- Advertisement -
- Advertisement -

ಲೇಖಕಿ ಮತ್ತು ಸಾಮಾಜಿಕ ಕಾರ್ಯಕರ್ತೆ ಸಂಜುಕ್ತ ಬಸು ಅವರ ಬಗ್ಗೆ 2018 ರ ಏಪ್ರಿಲ್‌‌ನಲ್ಲಿ ನಡೆದ ಚರ್ಚೆಯ ಸಂದರ್ಭ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸುವಂತೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA)ಯು ಟೈಮ್ಸ್ ನೌ ಸುದ್ದಿ ವಾಹಿನಿಗೆ ನಿರ್ದೇಶಿಸಿದೆ.

ಟೈಮ್ಸ್ ನೌ ವಾಹಿನಿಯೂ 2018 ರ ಏಪ್ರಿಲ್ 6 ರಂದು ಸಂಜುಕ್ತ ಬಗ್ಗೆ ಮಾನಹಾನಿಕರ ಕಾರ್ಯಕ್ರಮವನ್ನು ನಡೆಸಿತ್ತು. ಚಾನೆಲ್ ತನ್ನ ಕಾರ್ಯಕ್ರಮದಲ್ಲಿ ಅವರನ್ನು “ಹಿಂದೂ ದ್ವೇಷಿ”, “ದುಷ್ಟ ಟ್ರೋಲರ್‌” ಎಂದು ಉಲ್ಲೇಖಿಸಿತ್ತು. ಅಷ್ಟೇ ಅಲ್ಲದೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ “ಟ್ರೋಲ್ ಸೇನೆಯ”ಯ ಭಾಗವೆಂದು ಹೇಳಿಕೊಂಡಿತ್ತು. ಮಾತ್ರವಲ್ಲದೆ ವಾಹಿನಿಯು ಸಂಜುಕ್ತಾ ಅವರ ಹೇಳಿಕೆಯನ್ನು ಪಡೆದಿಲ್ಲ ಮತ್ತು ಸುದ್ದಿಯನ್ನು ಪ್ರಸಾರ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಲಿಲ್ಲ ಎಂದು NBSA ಯ ಆದೇಶ ಹೇಳಿದ್ದು, ಆ ಮೂಲಕ ಸಂಘದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಹೇಳಿದೆ.

ಇದನ್ನೂ ಓದಿ: ಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

NBSA ಆದೇಶದ ಪ್ರಕಾರ, ಟೈಮ್ಸ್ ನೌ ಅಕ್ಟೋಬರ್ 27, 2020 ರಂದು ರಾತ್ರಿ 9 ಗಂಟೆಗೆ ಕ್ಷಮೆಯಾಚನೆ ಪ್ರಸಾರ ಮಾಡಬೇಕಿದ್ದು ಅದು ಕೆಳಗಿನ ಪಠ್ಯವನ್ನು ಪೂರ್ಣ ಪರದೆಯಲ್ಲಿ ದೊಡ್ಡ ಫಾಂಟ್ ಗಾತ್ರದಲ್ಲಿ ಸ್ಪಷ್ಟವಾಗಿ ಕೇಳಬಲ್ಲ ಧ್ವನಿಯ (ನಿಧಾನಗತಿಯಲ್ಲಿ) ಮೂಲಕ ಬೇಷರತ್ತಾಗಿ ಕ್ಷಮೆಯಾಚಿಸಬೇಕಾಗಿದೆ.

“ನಾವು 6.4.2018 ರಂದು ಪ್ರಸಾರವಾದ ’ಇಂಡಿಯಾ ಅಪ್‌ಫ್ರಂಟ್ @pm 8’ ಮತ್ತು ‘ದಿ ನ್ಯೂಶೋರ್ ಡಿಬೇಟ್ @ 9’ ಕಾರ್ಯಕ್ರಮದಲ್ಲಿ ಸಂಜುಕ್ತ ಬಸು ಅವರ ಹೇಳಿಕೆಯನ್ನು ತೆಗೆದುಕೊಂಡಿಲ್ಲ, ಇದರಿಂದಾಗಿ ನಿಷ್ಪಕ್ಷಪಾತ, ವಸ್ತುನಿಷ್ಠತೆ, ವರದಿ ಮಾಡುವಲ್ಲಿ ತಟಸ್ಥತೆ ಮತ್ತು ನ್ಯಾಯಸಮ್ಮತತೆಯನ್ನು ಖಾತರಿಪಡಿಸುವುದು ಸೇರಿದಂತೆ ಸಂಬಂಧಿಸಿದ ತತ್ವಗಳನ್ನು ಉಲ್ಲಂಘಿಸಿದ್ದೇವೆ. ಶ್ರೀಮತಿ ಸಂಜುಕ್ತ ಬಸು ಅವರಿಗೆ ಅಪಖ್ಯಾತಿ ತರುವ ಉದ್ದೇಶವಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ”

ಅಷ್ಟೇ ಅಲ್ಲದೆ ತನ್ನ ವೆಬ್‌ಸೈಟ್, ಯೂಟ್ಯೂಬ್ ಅಥವಾ ಇನ್ನಾವುದೇ ಲಿಂಕ್‌ಗಳಿಂದ ಪ್ರಸಾರದ ವೀಡಿಯೊವನ್ನು ತೆಗೆದುಹಾಕಿ ಅದನ್ನು ಲಿಖಿತವಾಗಿ NBSA ಗೆ ಸಲ್ಲಿಸುವಂತೆ ಪ್ರಾಧಿಕಾರವು ಚಾನೆಲ್‌ಗೆ ಸೂಚಿಸಿದೆ.

ಈ ಆದೇಶದ ಅನುಸರಣೆಯ ಸಂಕೇತವಾಗಿ ಪ್ರಸಾರವಾದ ಒಂದು ವಾರದೊಳಗೆ ದಿನಾಂಕ ಮತ್ತು ಸಮಯದೊಂದಿಗೆ ಕ್ಷಮೆಯಾಚನೆ ಪ್ರಸಾರವನ್ನು ಒಳಗೊಂಡಿರುವ ಕಾಂಪ್ಯಾಕ್ಟ್ ಡಿಸ್ಕ್ ಅಥವಾ ಸಿಡಿಯನ್ನು ಸಲ್ಲಿಸಲು ಸುದ್ದಿ ವಾಹಿನಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

ಇದಲ್ಲದೆ, ಟೈಮ್ಸ್ ನೌ ಈ ಆದೇಶವನ್ನು ಮಾಧ್ಯಮಗಳು, ನ್ಯೂಸ್ ಬ್ರಾಡ್ಕಾಸ್ಟರ್ಸ್ ಅಸೋಸಿಯೇಶನ್ ಸದಸ್ಯರೊಂದಿಗೆ ಹಂಚಿಕೊಳ್ಳಬೇಕು ಮತ್ತು ಅದನ್ನು ತನ್ನ ವೆಬ್‌ಸೈಟ್‌ನಲ್ಲಿ ಇರಿಸಿ ಅದನ್ನು ತನ್ನ ವಾರ್ಷಿಕ ವರದಿಯಲ್ಲಿ ಸೇರಿಸಿಕೊಳ್ಳಬೇಕು ಎಂದೂ ಹೇಳಿದೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ಸಂಜುಕ್ತ ಬಸು ಟ್ವಿಟ್ಟರ್‌ನಲ್ಲಿ, “ಇಂದು ಟೈಮ್ಸ್ ನೌಗೆ ಸರಿಯಾದ ಶಿಕ್ಷೆಯಾಗಿದೆ. ನಾವು ಗೆದ್ದಿದ್ದೇವೆ” ಎಂದು ಬರೆದ್ದಾರೆ.

ಇದನ್ನೂ ಓದಿ: ಕಟ್ಟಬೇಕಿರುವುದು ಪರ್ಯಾಯ ಮಾಧ್ಯಮವನ್ನಲ್ಲ; ಹೊಸ ಮುಖ್ಯವಾಹಿನಿ ಮಾಧ್ಯಮವನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...