Homeಮುಖಪುಟಹೋರಾಟಗಾರ್ತಿ ಕುರಿತು ಆಕ್ಷೇಪಾರ್ಹ ಟೀಕೆ: ಬೇಷರತ್ ಕ್ಷಮೆ ಕೇಳುವಂತೆ ಟೈಮ್ಸ್‌‌ನೌಗೆ NBSA ಆದೇಶ

ಹೋರಾಟಗಾರ್ತಿ ಕುರಿತು ಆಕ್ಷೇಪಾರ್ಹ ಟೀಕೆ: ಬೇಷರತ್ ಕ್ಷಮೆ ಕೇಳುವಂತೆ ಟೈಮ್ಸ್‌‌ನೌಗೆ NBSA ಆದೇಶ

ಪೂರ್ಣ ಪರದೆಯಲ್ಲಿ ದೊಡ್ಡ ಫಾಂಟ್ ಗಾತ್ರದಲ್ಲಿ ಸ್ಪಷ್ಟವಾಗಿ ಕೇಳಬಲ್ಲ ಧ್ವನಿಯ (ನಿಧಾನಗತಿಯಲ್ಲಿ) ಮೂಲಕ ಬೇಷರತ್ತಾಗಿ NBSA ಆದೇಶದಲ್ಲಿರುವಂತೆ TIMES NOW ಕ್ಷಮೆಯಾಚಿಸಬೇಕಾಗಿದೆ.

- Advertisement -
- Advertisement -

ಲೇಖಕಿ ಮತ್ತು ಸಾಮಾಜಿಕ ಕಾರ್ಯಕರ್ತೆ ಸಂಜುಕ್ತ ಬಸು ಅವರ ಬಗ್ಗೆ 2018 ರ ಏಪ್ರಿಲ್‌‌ನಲ್ಲಿ ನಡೆದ ಚರ್ಚೆಯ ಸಂದರ್ಭ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸುವಂತೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA)ಯು ಟೈಮ್ಸ್ ನೌ ಸುದ್ದಿ ವಾಹಿನಿಗೆ ನಿರ್ದೇಶಿಸಿದೆ.

ಟೈಮ್ಸ್ ನೌ ವಾಹಿನಿಯೂ 2018 ರ ಏಪ್ರಿಲ್ 6 ರಂದು ಸಂಜುಕ್ತ ಬಗ್ಗೆ ಮಾನಹಾನಿಕರ ಕಾರ್ಯಕ್ರಮವನ್ನು ನಡೆಸಿತ್ತು. ಚಾನೆಲ್ ತನ್ನ ಕಾರ್ಯಕ್ರಮದಲ್ಲಿ ಅವರನ್ನು “ಹಿಂದೂ ದ್ವೇಷಿ”, “ದುಷ್ಟ ಟ್ರೋಲರ್‌” ಎಂದು ಉಲ್ಲೇಖಿಸಿತ್ತು. ಅಷ್ಟೇ ಅಲ್ಲದೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ “ಟ್ರೋಲ್ ಸೇನೆಯ”ಯ ಭಾಗವೆಂದು ಹೇಳಿಕೊಂಡಿತ್ತು. ಮಾತ್ರವಲ್ಲದೆ ವಾಹಿನಿಯು ಸಂಜುಕ್ತಾ ಅವರ ಹೇಳಿಕೆಯನ್ನು ಪಡೆದಿಲ್ಲ ಮತ್ತು ಸುದ್ದಿಯನ್ನು ಪ್ರಸಾರ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಲಿಲ್ಲ ಎಂದು NBSA ಯ ಆದೇಶ ಹೇಳಿದ್ದು, ಆ ಮೂಲಕ ಸಂಘದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಹೇಳಿದೆ.

ಇದನ್ನೂ ಓದಿ: ಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

NBSA ಆದೇಶದ ಪ್ರಕಾರ, ಟೈಮ್ಸ್ ನೌ ಅಕ್ಟೋಬರ್ 27, 2020 ರಂದು ರಾತ್ರಿ 9 ಗಂಟೆಗೆ ಕ್ಷಮೆಯಾಚನೆ ಪ್ರಸಾರ ಮಾಡಬೇಕಿದ್ದು ಅದು ಕೆಳಗಿನ ಪಠ್ಯವನ್ನು ಪೂರ್ಣ ಪರದೆಯಲ್ಲಿ ದೊಡ್ಡ ಫಾಂಟ್ ಗಾತ್ರದಲ್ಲಿ ಸ್ಪಷ್ಟವಾಗಿ ಕೇಳಬಲ್ಲ ಧ್ವನಿಯ (ನಿಧಾನಗತಿಯಲ್ಲಿ) ಮೂಲಕ ಬೇಷರತ್ತಾಗಿ ಕ್ಷಮೆಯಾಚಿಸಬೇಕಾಗಿದೆ.

“ನಾವು 6.4.2018 ರಂದು ಪ್ರಸಾರವಾದ ’ಇಂಡಿಯಾ ಅಪ್‌ಫ್ರಂಟ್ @pm 8’ ಮತ್ತು ‘ದಿ ನ್ಯೂಶೋರ್ ಡಿಬೇಟ್ @ 9’ ಕಾರ್ಯಕ್ರಮದಲ್ಲಿ ಸಂಜುಕ್ತ ಬಸು ಅವರ ಹೇಳಿಕೆಯನ್ನು ತೆಗೆದುಕೊಂಡಿಲ್ಲ, ಇದರಿಂದಾಗಿ ನಿಷ್ಪಕ್ಷಪಾತ, ವಸ್ತುನಿಷ್ಠತೆ, ವರದಿ ಮಾಡುವಲ್ಲಿ ತಟಸ್ಥತೆ ಮತ್ತು ನ್ಯಾಯಸಮ್ಮತತೆಯನ್ನು ಖಾತರಿಪಡಿಸುವುದು ಸೇರಿದಂತೆ ಸಂಬಂಧಿಸಿದ ತತ್ವಗಳನ್ನು ಉಲ್ಲಂಘಿಸಿದ್ದೇವೆ. ಶ್ರೀಮತಿ ಸಂಜುಕ್ತ ಬಸು ಅವರಿಗೆ ಅಪಖ್ಯಾತಿ ತರುವ ಉದ್ದೇಶವಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ”

ಅಷ್ಟೇ ಅಲ್ಲದೆ ತನ್ನ ವೆಬ್‌ಸೈಟ್, ಯೂಟ್ಯೂಬ್ ಅಥವಾ ಇನ್ನಾವುದೇ ಲಿಂಕ್‌ಗಳಿಂದ ಪ್ರಸಾರದ ವೀಡಿಯೊವನ್ನು ತೆಗೆದುಹಾಕಿ ಅದನ್ನು ಲಿಖಿತವಾಗಿ NBSA ಗೆ ಸಲ್ಲಿಸುವಂತೆ ಪ್ರಾಧಿಕಾರವು ಚಾನೆಲ್‌ಗೆ ಸೂಚಿಸಿದೆ.

ಈ ಆದೇಶದ ಅನುಸರಣೆಯ ಸಂಕೇತವಾಗಿ ಪ್ರಸಾರವಾದ ಒಂದು ವಾರದೊಳಗೆ ದಿನಾಂಕ ಮತ್ತು ಸಮಯದೊಂದಿಗೆ ಕ್ಷಮೆಯಾಚನೆ ಪ್ರಸಾರವನ್ನು ಒಳಗೊಂಡಿರುವ ಕಾಂಪ್ಯಾಕ್ಟ್ ಡಿಸ್ಕ್ ಅಥವಾ ಸಿಡಿಯನ್ನು ಸಲ್ಲಿಸಲು ಸುದ್ದಿ ವಾಹಿನಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

ಇದಲ್ಲದೆ, ಟೈಮ್ಸ್ ನೌ ಈ ಆದೇಶವನ್ನು ಮಾಧ್ಯಮಗಳು, ನ್ಯೂಸ್ ಬ್ರಾಡ್ಕಾಸ್ಟರ್ಸ್ ಅಸೋಸಿಯೇಶನ್ ಸದಸ್ಯರೊಂದಿಗೆ ಹಂಚಿಕೊಳ್ಳಬೇಕು ಮತ್ತು ಅದನ್ನು ತನ್ನ ವೆಬ್‌ಸೈಟ್‌ನಲ್ಲಿ ಇರಿಸಿ ಅದನ್ನು ತನ್ನ ವಾರ್ಷಿಕ ವರದಿಯಲ್ಲಿ ಸೇರಿಸಿಕೊಳ್ಳಬೇಕು ಎಂದೂ ಹೇಳಿದೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ಸಂಜುಕ್ತ ಬಸು ಟ್ವಿಟ್ಟರ್‌ನಲ್ಲಿ, “ಇಂದು ಟೈಮ್ಸ್ ನೌಗೆ ಸರಿಯಾದ ಶಿಕ್ಷೆಯಾಗಿದೆ. ನಾವು ಗೆದ್ದಿದ್ದೇವೆ” ಎಂದು ಬರೆದ್ದಾರೆ.

ಇದನ್ನೂ ಓದಿ: ಕಟ್ಟಬೇಕಿರುವುದು ಪರ್ಯಾಯ ಮಾಧ್ಯಮವನ್ನಲ್ಲ; ಹೊಸ ಮುಖ್ಯವಾಹಿನಿ ಮಾಧ್ಯಮವನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...