Homeಮುಖಪುಟಕಾರ್ಗಿಲ್‌: 370 ವಿಧಿ ರದ್ದತಿ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ 'ಎನ್‌ಸಿ-ಕಾಂಗ್ರೆಸ್' ಮೈತ್ರಿಗೆ ಅಭೂತಪೂರ್ವ ಗೆಲುವು

ಕಾರ್ಗಿಲ್‌: 370 ವಿಧಿ ರದ್ದತಿ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ‘ಎನ್‌ಸಿ-ಕಾಂಗ್ರೆಸ್’ ಮೈತ್ರಿಗೆ ಅಭೂತಪೂರ್ವ ಗೆಲುವು

- Advertisement -
- Advertisement -

ಆರ್ಟಿಕಲ್ 370 ರದ್ಧತಿ ನಂತರ ಕಾರ್ಗಿಲ್‌ನಲ್ಲಿ ನಡೆದ ಮೊದಲ ಚುನಾವಣೆಯಲ್ಲಿ, INDIA ಮೈತ್ರಿ ಒಕ್ಕೂಟದ ಘಟಕಗಳಾದ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಕಾರ್ಗಿಲ್‌ ಹಿಲ್ ಕೌನ್ಸಿಲ್ ಚುನಾವಣೆಯಲ್ಲಿ 26ರಲ್ಲಿ 22 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಚಂಡ ಗೆಲುವು ದಾಖಲಿಸಿದೆ.

2019ರಿಂದ ಲೆಫ್ಟಿನೆಂಟ್ ಗವರ್ನರ್ ಮೂಲಕ ನವದೆಹಲಿಯಿಂದ ನೇರವಾಗಿ ಆಳ್ವಿಕೆಗೆ ಒಳಪಟ್ಟಿದ್ದ ಈ ಪ್ರದೇಶದಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಜಮ್ಮು-ಕಾಶ್ಮೀರದ ಹಳೆಯ ಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್ ಹೊರಹೊಮ್ಮಿದ್ದು, ಮುಸ್ಲಿಂ ಬಹುಸಂಖ್ಯಾತ ಜಿಲ್ಲೆ ಕಾರ್ಗಿಲ್ ರಾಜಕೀಯವಾಗಿ ಬೇರ್ಪಡಿಸಲಾಗದು ಎಂಬುದನ್ನು ತೋರಿಸಿದೆ.

ಚುನಾವಣಾ ಫಲಿತಾಂಶವು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಗಸ್ಟ್ 5, 2019ರ ನಿರ್ಧಾರ ಮತ್ತು ಆ ಬಳಿಕದ ನೀತಿಗಳನ್ನು ಜನರು ತಿರಸ್ಕರಿಸಿರುವುದನ್ನು ಸ್ಪಷ್ಟಪಡಿಸಿದೆ ಎಂದು INDIA ಮೈತ್ರಿ ಒಕ್ಕೂಟದ ಪಕ್ಷಗಳು ಅಭಿಪ್ರಾಯ ಪಟ್ಟಿದೆ.

ಲಡಾಖ್‌ನಲ್ಲಿ ನಡೆದ ಚನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ 12 ಸ್ಥಾನವನ್ನು ಗೆದ್ದುಕೊಂಡರೆ ಅದರ ಮಿತ್ರಪಕ್ಷ ಕಾಂಗ್ರೆಸ್ 10 ಸ್ಥಾನಗಳಲ್ಲಿ ವಿಜಯಶಾಲಿಯಾಗಿದೆ. ಬಿಜೆಪಿ ಮತ್ತು ಸ್ವತಂತ್ರ ಅಭ್ಯರ್ಥಿಗಳು ತಲಾ ಎರಡು ಸ್ಥಾನಗಳಿಗೆ ತೃಪ್ತಿಪಟ್ಟಿಕೊಂಡಿದ್ದಾರೆ.

INDIA ಒಕ್ಕೂಟದ ಭಾಗವಾಗಿರುವ ಎನ್‌ಸಿ ಮತ್ತು ಕಾಂಗ್ರೆಸ್ ಎರಡೂ ಬಿಜೆಪಿಯನ್ನು ದೂರವಿಡಲು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದವು. ಅಧಿಕಾರ ಹಂಚಿಕೆ ಒಪ್ಪಂದದ ಪ್ರಕಾರ ಹಿಲ್ ಕೌನ್ಸಿಲ್‌ನ ಕಾರ್ಯಕಾರಿ ಮಂಡಳಿಯಲ್ಲಿ ಎರಡೂ ಪಕ್ಷಗಳು ಸಮಾನ ಪಾಲು ಪಡೆಯಲಿದೆ.

ಎರಡೂ ಪಕ್ಷಗಳು ಚುನಾವಣೆಯ ಫಲಿತಾಂಶವನ್ನು ಬಿಜೆಪಿ ಮತ್ತು ಅದರ ಆಗಸ್ಟ್ 5, 2019ರ ನಿರ್ಧಾರಗಳ ವಿರುದ್ಧದ ಜನರ ತೀರ್ಪು ಎಂದು ಬಣ್ಣಿಸಿದೆ.

ಎಕ್ಸ್‌ನಲ್ಲಿ ಎನ್‌ಸಿ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಈ ಕುರಿತು ಪೋಸ್ಟ್‌ ಮಾಡಿದ್ದು, ಈ ಫಲಿತಾಂಶವು ಬಿಜೆಪಿ ಮತ್ತು ಅದರ ನೀತಿಗಳ ವಿರುದ್ಧ ಪ್ರತಿಧ್ವನಿಸಿದ ತೀರ್ಪು ಮತ್ತು ಆ.5, 2019ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ಏನು ಮಾಡಿದೆ ಎಂಬುದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ಕಾರ್ಗಿಲ್ ಜನರು ತಿರಸ್ಕರಿಸಿದ್ದಾರೆ ಎಂದು ಲಡಾಖ್‌ನ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಜಿ ಅಸ್ಗರ್ ಅಲಿ ಕರ್ಬಾಲಿ ಹೇಳಿದ್ದಾರೆ. ಬಿಜೆಪಿ ಮತ್ತು ಅದರ ನೀತಿಗಳು ಇಲ್ಲಿನ ಜನರಿಗೆ ಸ್ವೀಕಾರಾರ್ಹವಲ್ಲ ಎಂಬ ಸಂದೇಶವು ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಆರ್ಟಿಕಲ್ 370ನ್ನು ರದ್ದುಪಡಿಸಿದ ನಂತರ ಮತ್ತು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರೂಪಿಸಿದ ನಂತರ ಕಾರ್ಗಿಲ್‌ನಲ್ಲಿ ನಡೆದ ಮೊದಲ ಚುನಾವಣೆ ಇದಾಗಿದೆ.

ಬಿಜೆಪಿಯು 2018ರಲ್ಲಿ ಪಡೆದಿದ್ದ ಒಂದು ಸ್ಥಾನದಿಂದ ಈ ಬಾರಿ ಎರಡು ಸ್ಥಾನಗಳಿಗೆ ತನ್ನ ಸಂಖ್ಯೆಯನ್ನು ಸುಧಾರಿಸಿಕೊಂಡಿದ್ದರೂ, ಬೌದ್ಧರು ಬಹುಸಂಖ್ಯಾತವಾಗಿರುವ ಲೇಹ್ ಜಿಲ್ಲೆಯಲ್ಲಿ ಬಿಜೆಪಿಯ ಜನಪ್ರಿಯತೆ ಕುಗ್ಗಿದ ಕಾರಣ 2024ರ ಲೋಕಸಭಾ ಚುನಾವಣೆಗೆ ಮೊದಲು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ ಎನ್ನಲಾಗಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ಯಾತ್ರೆಯ ಗೆಲುವು ಎಂದು ಹೇಳಿದ್ದು ಫಲಿತಾಂಶಗಳು ಲಡಾಖ್ ಮತ್ತು ಕಾರ್ಗಿಲ್‌ನಲ್ಲಿ ಹೊಸ ಪ್ರಜಾಸತ್ತಾತ್ಮಕ ಉದಯಕ್ಕೆ ನಾಂದಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಸಂವಿಧಾನದ ಬದಲಾವಣೆಗೆ ಪ್ರಯತ್ನಿಸುತ್ತಿದೆ: ಅಖಿಲೇಶ್ ಯಾದವ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...