Homeಮುಖಪುಟಕಾರ್ಗಿಲ್‌: 370 ವಿಧಿ ರದ್ದತಿ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ 'ಎನ್‌ಸಿ-ಕಾಂಗ್ರೆಸ್' ಮೈತ್ರಿಗೆ ಅಭೂತಪೂರ್ವ ಗೆಲುವು

ಕಾರ್ಗಿಲ್‌: 370 ವಿಧಿ ರದ್ದತಿ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ‘ಎನ್‌ಸಿ-ಕಾಂಗ್ರೆಸ್’ ಮೈತ್ರಿಗೆ ಅಭೂತಪೂರ್ವ ಗೆಲುವು

- Advertisement -
- Advertisement -

ಆರ್ಟಿಕಲ್ 370 ರದ್ಧತಿ ನಂತರ ಕಾರ್ಗಿಲ್‌ನಲ್ಲಿ ನಡೆದ ಮೊದಲ ಚುನಾವಣೆಯಲ್ಲಿ, INDIA ಮೈತ್ರಿ ಒಕ್ಕೂಟದ ಘಟಕಗಳಾದ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಕಾರ್ಗಿಲ್‌ ಹಿಲ್ ಕೌನ್ಸಿಲ್ ಚುನಾವಣೆಯಲ್ಲಿ 26ರಲ್ಲಿ 22 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಚಂಡ ಗೆಲುವು ದಾಖಲಿಸಿದೆ.

2019ರಿಂದ ಲೆಫ್ಟಿನೆಂಟ್ ಗವರ್ನರ್ ಮೂಲಕ ನವದೆಹಲಿಯಿಂದ ನೇರವಾಗಿ ಆಳ್ವಿಕೆಗೆ ಒಳಪಟ್ಟಿದ್ದ ಈ ಪ್ರದೇಶದಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಜಮ್ಮು-ಕಾಶ್ಮೀರದ ಹಳೆಯ ಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್ ಹೊರಹೊಮ್ಮಿದ್ದು, ಮುಸ್ಲಿಂ ಬಹುಸಂಖ್ಯಾತ ಜಿಲ್ಲೆ ಕಾರ್ಗಿಲ್ ರಾಜಕೀಯವಾಗಿ ಬೇರ್ಪಡಿಸಲಾಗದು ಎಂಬುದನ್ನು ತೋರಿಸಿದೆ.

ಚುನಾವಣಾ ಫಲಿತಾಂಶವು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಗಸ್ಟ್ 5, 2019ರ ನಿರ್ಧಾರ ಮತ್ತು ಆ ಬಳಿಕದ ನೀತಿಗಳನ್ನು ಜನರು ತಿರಸ್ಕರಿಸಿರುವುದನ್ನು ಸ್ಪಷ್ಟಪಡಿಸಿದೆ ಎಂದು INDIA ಮೈತ್ರಿ ಒಕ್ಕೂಟದ ಪಕ್ಷಗಳು ಅಭಿಪ್ರಾಯ ಪಟ್ಟಿದೆ.

ಲಡಾಖ್‌ನಲ್ಲಿ ನಡೆದ ಚನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ 12 ಸ್ಥಾನವನ್ನು ಗೆದ್ದುಕೊಂಡರೆ ಅದರ ಮಿತ್ರಪಕ್ಷ ಕಾಂಗ್ರೆಸ್ 10 ಸ್ಥಾನಗಳಲ್ಲಿ ವಿಜಯಶಾಲಿಯಾಗಿದೆ. ಬಿಜೆಪಿ ಮತ್ತು ಸ್ವತಂತ್ರ ಅಭ್ಯರ್ಥಿಗಳು ತಲಾ ಎರಡು ಸ್ಥಾನಗಳಿಗೆ ತೃಪ್ತಿಪಟ್ಟಿಕೊಂಡಿದ್ದಾರೆ.

INDIA ಒಕ್ಕೂಟದ ಭಾಗವಾಗಿರುವ ಎನ್‌ಸಿ ಮತ್ತು ಕಾಂಗ್ರೆಸ್ ಎರಡೂ ಬಿಜೆಪಿಯನ್ನು ದೂರವಿಡಲು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದವು. ಅಧಿಕಾರ ಹಂಚಿಕೆ ಒಪ್ಪಂದದ ಪ್ರಕಾರ ಹಿಲ್ ಕೌನ್ಸಿಲ್‌ನ ಕಾರ್ಯಕಾರಿ ಮಂಡಳಿಯಲ್ಲಿ ಎರಡೂ ಪಕ್ಷಗಳು ಸಮಾನ ಪಾಲು ಪಡೆಯಲಿದೆ.

ಎರಡೂ ಪಕ್ಷಗಳು ಚುನಾವಣೆಯ ಫಲಿತಾಂಶವನ್ನು ಬಿಜೆಪಿ ಮತ್ತು ಅದರ ಆಗಸ್ಟ್ 5, 2019ರ ನಿರ್ಧಾರಗಳ ವಿರುದ್ಧದ ಜನರ ತೀರ್ಪು ಎಂದು ಬಣ್ಣಿಸಿದೆ.

ಎಕ್ಸ್‌ನಲ್ಲಿ ಎನ್‌ಸಿ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಈ ಕುರಿತು ಪೋಸ್ಟ್‌ ಮಾಡಿದ್ದು, ಈ ಫಲಿತಾಂಶವು ಬಿಜೆಪಿ ಮತ್ತು ಅದರ ನೀತಿಗಳ ವಿರುದ್ಧ ಪ್ರತಿಧ್ವನಿಸಿದ ತೀರ್ಪು ಮತ್ತು ಆ.5, 2019ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ಏನು ಮಾಡಿದೆ ಎಂಬುದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ಕಾರ್ಗಿಲ್ ಜನರು ತಿರಸ್ಕರಿಸಿದ್ದಾರೆ ಎಂದು ಲಡಾಖ್‌ನ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಜಿ ಅಸ್ಗರ್ ಅಲಿ ಕರ್ಬಾಲಿ ಹೇಳಿದ್ದಾರೆ. ಬಿಜೆಪಿ ಮತ್ತು ಅದರ ನೀತಿಗಳು ಇಲ್ಲಿನ ಜನರಿಗೆ ಸ್ವೀಕಾರಾರ್ಹವಲ್ಲ ಎಂಬ ಸಂದೇಶವು ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಆರ್ಟಿಕಲ್ 370ನ್ನು ರದ್ದುಪಡಿಸಿದ ನಂತರ ಮತ್ತು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರೂಪಿಸಿದ ನಂತರ ಕಾರ್ಗಿಲ್‌ನಲ್ಲಿ ನಡೆದ ಮೊದಲ ಚುನಾವಣೆ ಇದಾಗಿದೆ.

ಬಿಜೆಪಿಯು 2018ರಲ್ಲಿ ಪಡೆದಿದ್ದ ಒಂದು ಸ್ಥಾನದಿಂದ ಈ ಬಾರಿ ಎರಡು ಸ್ಥಾನಗಳಿಗೆ ತನ್ನ ಸಂಖ್ಯೆಯನ್ನು ಸುಧಾರಿಸಿಕೊಂಡಿದ್ದರೂ, ಬೌದ್ಧರು ಬಹುಸಂಖ್ಯಾತವಾಗಿರುವ ಲೇಹ್ ಜಿಲ್ಲೆಯಲ್ಲಿ ಬಿಜೆಪಿಯ ಜನಪ್ರಿಯತೆ ಕುಗ್ಗಿದ ಕಾರಣ 2024ರ ಲೋಕಸಭಾ ಚುನಾವಣೆಗೆ ಮೊದಲು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ ಎನ್ನಲಾಗಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ಯಾತ್ರೆಯ ಗೆಲುವು ಎಂದು ಹೇಳಿದ್ದು ಫಲಿತಾಂಶಗಳು ಲಡಾಖ್ ಮತ್ತು ಕಾರ್ಗಿಲ್‌ನಲ್ಲಿ ಹೊಸ ಪ್ರಜಾಸತ್ತಾತ್ಮಕ ಉದಯಕ್ಕೆ ನಾಂದಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಸಂವಿಧಾನದ ಬದಲಾವಣೆಗೆ ಪ್ರಯತ್ನಿಸುತ್ತಿದೆ: ಅಖಿಲೇಶ್ ಯಾದವ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...