Homeಮುಖಪುಟಆರ್ಯನ್ ಖಾನ್ ಪ್ರಕರಣದಲ್ಲಿ ಲಂಚಕ್ಕೆ ಬೇಡಿಕೆ: ಆರೋಪ ನಿರಾಕರಿಸಿದ ಎನ್‌ಸಿಬಿ

ಆರ್ಯನ್ ಖಾನ್ ಪ್ರಕರಣದಲ್ಲಿ ಲಂಚಕ್ಕೆ ಬೇಡಿಕೆ: ಆರೋಪ ನಿರಾಕರಿಸಿದ ಎನ್‌ಸಿಬಿ

- Advertisement -
- Advertisement -

ಮುಂಬೈನ ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಸಾಕ್ಷಿಯಾಗಿರುವ ಪ್ರಭಾಕರ್ ಸೈಲ್, ಏಜೆನ್ಸಿ ಮೇಲೆ ಲಂಚದ ಆರೋಪ ಮಾಡಿದ್ದರು. ಆರ್ಯನ್ ಖಾನ್ ಬಿಡುಗಡೆಗೆ 18 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆಯಿಡಲಾಗಿತ್ತು ಎಂದು ಆರೋಪಿಸಿದ್ದರು.

ಈ ಆರೋಪಗಳನ್ನು ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ನಿರಾಕರಿಸಿದ್ದಾರೆ. ನನ್ನನ್ನು ಲಂಚದ ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ ಎಂದು ವಾಂಖೆಡೆ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ.

ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಖಾಸಗಿ ತನಿಖಾಧಿಕಾರಿ ಕೆ.ಪಿ ಗೋಸಾವಿಯ ವೈಯಕ್ತಿಕ ಅಂಗರಕ್ಷಕ ಎಂದು ಹೇಳಿಕೊಳ್ಳುವ ಪ್ರಭಾಕರ್ ಸೈಲ್, ಅಕ್ಟೋಬರ್ 3 ರಂದು ಸ್ಯಾಮ್ ಡಿಸೋಜಾ ಮತ್ತು ಕೆ.ಪಿ ಗೋಸಾವಿ ನಡುವೆ 18 ಕೋಟಿ ರೂಪಾಯಿ ಒಪ್ಪಂದದ ಬಗ್ಗೆ ನಡೆದ ಸಂಭಾಷಣೆಯನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ. ಇದರಲ್ಲಿ 8 ಕೋಟಿ ರೂಪಾಯಿಗಳನ್ನು ಎನ್‌ಸಿಬಿ ಅಧಿಕಾರಿ  ಸಮೀರ್ ವಾಂಖೆಡೆಗೆ ನೀಡಬೇಕಾಗುತ್ತದೆ ಎಂದು ಹೇಳಿದ್ದರು ಎಂದ ಆರೋಪಿಸಿದ್ದಾರೆ.

ಅಕ್ಟೋಬರ್ 3 ರ ಸಂಜೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ, ಕೆ.ಪಿ ಗೋಸಾವಿ ಮತ್ತು ಇನ್ನೊಬ್ಬ ವ್ಯಕ್ತಿ ಸ್ಯಾಮ್ ಡಿಸೋಜಾ ಅವರು ಕಾರಿನೊಳಗೆ 15 ನಿಮಿಷಗಳ ಸಭೆ ನಡೆಸಿದರು ಎಂದಿದ್ದಾರೆ. ಈ  ಪ್ರಕರಣದಲ್ಲಿ ಎನ್‌ಸಿಬಿ ಹೆಸರಿಸಿರುವ ಒಂಬತ್ತು ಸಾಕ್ಷಿಗಳಲ್ಲಿ ಪ್ರಭಾಕರ್ ಸೈಲ್ ಕೂಡ ಒಬ್ಬರು.

ಇದನ್ನೂ ಓದಿ: ಆರ್ಯನ್‌ ಖಾನ್‌ಗೆ ಡ್ರಗ್ಸ್ ಪೂರೈಕೆ ಆರೋಪ ನಿರಾಕರಿಸಿದ ನಟಿ ಅನನ್ಯ ಪಾಂಡೆ: ವರದಿ

ಪ್ರಭಾಕರ ಸೈಲ್ ಅವರು ಕೆ.ಪಿ.ಗೋಸಾವಿ ಅವರ ಸೂಚನೆಯಂತೆ ಎರಡು ಚೀಲ ಹಣವನ್ನು ಸ್ಯಾಮ್ ಡಿಸೋಜಾ ಅವರಿಗೆ ನೀಡಿದರು. ಈ ಚೀಲಗಳಲ್ಲಿ 38 ಲಕ್ಷ ರೂಪಾಯಿಯಿತ್ತು ಎಂದು  ಹೇಳಿದ್ದಾರೆ. ಜೊತೆಗೆ ಎನ್‌ಸಿಬಿ ದಾಳಿ ನಡೆಸಿದ ರಾತ್ರಿ ತಾನು ಗೋಸಾವಿಯ ಜೊತೆಗಿದ್ದೆ. ಅಧಿಕಾರಿಗಳು ಪಂಚನಾಮವಾಗಿ ಖಾಲಿ ಕಾಗದಗಳಿಗೆ ಸಹಿ ಹಾಕುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಕ್ಟೋಬರ್ 2 ರಂದು ಕ್ರೂಸ್ ಹಡಗಿನ ಮೇಲೆ ದಾಳಿಯ ನಂತರ ಕೆಪಿ ಗೋಸಾವಿ, ಆರ್ಯನ್ ಖಾನ್ ಅವರನ್ನು ಅಪಹರಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿರುವ ವಕೀಲ ಜಯಂತ್ ವಶಿಷ್ಠ್, ಎಫ್‌ಐಆರ್‌ ದಾಖಲಿಸುವಂತೆ ಮುಂಬೈ ಪೊಲೀಸರಿಗೆ ಇಂದು (ಸೋಮವಾರ) ಮನವಿ ಮಾಡಿದ್ದಾರೆ.

ಇತ್ತ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮುಂಬೈ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದು, ತನ್ನನ್ನು ಈ ಲಂಚ ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ದೂರಿದ್ದಾರೆ.

ಎನ್‌ಸಿಬಿ ಮೂಲಗಳು ಪ್ರಭಾಕರ್ ಸೈಲ್ ಅವರ ಆರೋಪಗಳನ್ನು ನಿರಾಕರಿಸಿ, “ಕೇವಲ ಏಜೆನ್ಸಿ ಇಮೇಜ್‌ಗೆ ಹಾನಿ ಮಾಡಲು ಈ ರೀತಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್ 2 ರಂದು ಮುಂಬೈನ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತಿದ್ದ ವೇಳೆ ದಾಳಿ ನಡೆಸಿದ್ದ ಎನ್‌ಸಿಬಿ ಆರ್ಯನ್ ಖಾನ್‌ರನ್ನು ಅ.3 ರಂದು ಬಂಧಿಸಿತ್ತು. ಆರ್ಯನ್ ಖಾನ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ. ಆರ್ಯನ್ ಖಾನ್ ಮತ್ತು ಇತರರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8 (ಸಿ), 20 (ಬಿ), 27, 28, 29 ಮತ್ತು 35 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಡ್ರಗ್ಸ್ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ.


ಇದನ್ನೂ ಓದಿ: ಆರ್ಯನ್ ಖಾನ್ ಬಂಧನದಲ್ಲಿರುವ ಹೊಸ ವಿಡಿಯೋ ಟ್ವೀಟ್ ಮಾಡಿದ ಶಿವಸೇನೆ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...