HomeಮುಖಪುಟNCB ಅಧಿಕಾರಿ ಸಮೀರ್ ವಾಂಖೆಡೆ ಚಿತ್ರೋದ್ಯಮವನ್ನು ಸುಲಿಗೆ ಮಾಡುತ್ತಿದ್ದಾರೆ: ನವಾಬ್ ಮಲಿಕ್

NCB ಅಧಿಕಾರಿ ಸಮೀರ್ ವಾಂಖೆಡೆ ಚಿತ್ರೋದ್ಯಮವನ್ನು ಸುಲಿಗೆ ಮಾಡುತ್ತಿದ್ದಾರೆ: ನವಾಬ್ ಮಲಿಕ್

- Advertisement -
- Advertisement -

ಬಾಲಿವುಡ್ ನಟ-ನಟಿಯರ ಮೇಲೆ ಸತತವಾಗಿ ಎನ್‌ಸಿಬಿ ದಾಳಿ ನಡೆಸುತ್ತಿರುವುದಕ್ಕೆ ಕಿಡಿ ಕಾರಿರುವ ಮಹಾರಾಷ್ಟ್ರ ಸಚಿವ ಮತ್ತು ಎನ್‌ಸಿಪಿ ನಾಯಕ ನವಾಬ್ ಮಲಿಕ್, NCB ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಗಂಭೀರ ಸುಲಿಗೆ ಆರೋಪ ಮಾಡಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಕಳೆದ ವರ್ಷ ಅಸಹಜ ಸಾವಿಗೆ ತುತ್ತಾದ ಬಳಿಕ ಕೇಂದ್ರ ಸರ್ಕಾರ ಎನ್‌ಸಿಬಿಗೆ ಸಮೀರ್ ವಾಂಖೆಡೆ ಅವರನ್ನು ಕರೆ ತಂದಿದೆ ಎಂದು ಆರೋಪಿಸಿದ್ದಾರೆ. ಸುಶಾಂತ ಸಿಂಗ್ ಸಾವಿನ ಬಳಿಕ ಕೇಳಿ ಬಂದ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ, ನಟಿಯರನ್ನು ಎನ್‌ಸಿಬಿ ಗುರಿ ಮಾಡಿತ್ತು.

ಮೃತ ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿ ರಿಯಾ ಚಕ್ರವರ್ತಿ ಅವರನ್ನು ಎನ್‌ಸಿಬಿ ನಕಲಿ ಪ್ರಕರಣದಲ್ಲಿ ಸೇರಿಸಿದ್ದಾರೆ ಎಂದು ನವಾಬ್ ಮಲ್ಲಿಕ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

“ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ನಂತರ, ವಿಶೇಷ ಅಧಿಕಾರಿಯನ್ನು ಎನ್‌ಸಿಬಿಗೆ ಕರೆತರಲಾಯಿತು. ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಯಿತು. ಅವರದ್ದು ಆತ್ಮಹತ್ಯೆ ಅಥವಾ ಕೊಲೆ ಎಂಬ ಬಗೆಗಿನ ರಹಸ್ಯವು ಬಗೆಹರಿದಿಲ್ಲ. ಆದರೆ, ಅದರ ನಂತರ ಎನ್‌ಸಿಬಿ ಚಿತ್ರೋದ್ಯಮದೊಂದಿಗೆ ಆಟವಾಡಲು ಆರಂಭಿಸಿತು” ಎಂದು ಮಲಿಕ್ ಹೇಳಿಕೊಂಡಿದ್ದಾರೆ.

“ಕೆಲವರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಪ್ರಯತ್ನಿಸಲಾಯಿತು. ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಇಡೀ ಚಿತ್ರೋದ್ಯಮ ಮಾಲ್ಡೀವ್ಸ್‌ನಲ್ಲಿತ್ತು. ಈ ವೇಳೆ ಮಾಲ್ಡೀವ್ಸ್ ಮತ್ತು ದುಬೈನಲ್ಲಿ ಅಧಿಕಾರಿ ಮತ್ತು ಅವರ ಕುಟುಂಬ ಏನು ಮಾಡುತ್ತಿತ್ತು? ಇದನ್ನು ಸಮೀರ್ ವಾಂಖೆಡೆ ಸ್ಪಷ್ಟಪಡಿಸಬೇಕು” ಎಂದು ನವಾಬ್ ಮಲಿಕ್ ಒತ್ತಾಯಿಸಿದ್ದಾರೆ.

“ನಾವು ತುಂಬಾ ಸ್ಪಷ್ಟವಾಗಿದ್ದೇವೆ. ಈ ಎಲ್ಲಾ ಸುಲಿಗೆ ಮಾಲ್ಡೀವ್ಸ್ ಮತ್ತು ದುಬೈನಲ್ಲಿ ನಡೆದಿದೆ. ನಾನು ಆ ಫೋಟೋಗಳನ್ನು ಬಿಡುಗಡೆ ಮಾಡುತ್ತೇನೆ” ಎಂದು ಹೇಳಿ ಸಮೀರ್ ವಾಂಖೆಡೆ ಅವರ ಕುಟುಂಬದವರು ಮಾಲ್ಡೀವ್ಸ್‌ನಲ್ಲಿರುವ ಪೋಟೋಗಳನ್ನು ಮಲಿಕ್ ಹಂಚಿಕೊಂಡಿದ್ದರು.

ಈ ತಿಂಗಳ ಆರಂಭದಲ್ಲಿ ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನ ಮೇಲೆ ಎನ್‌ಸಿಬಿ ದಾಳಿ ನಡೆಸಿತ್ತು. ದಾಳಿ ಬಳಿಕ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಮತ್ತು ಇತರ ಕೆಲವರನ್ನು ಎನ್‌ಸಿಬಿ ಬಂಧಿಸಿದೆ.

ಈ ಪ್ರಕರಣ ನಕಲಿ ಎಂದೇ ನವಾಬ್ ಮಲಿಕ್ ವಾದಿಸುತ್ತಿದ್ದಾರೆ. ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ಎಲ್ಲರನ್ನೂ ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಎನ್‌ಸಿಬಿ ಗುರುವಾರ ಬಾಲಿವುಡ್ ನಟಿ ಅನನ್ಯ ಪಾಂಡೆ ಮನೆ ಮೇಲೆ ದಾಳಿ ನಡೆಸಿದ್ದು, ನಟಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಈ ಹಿಂದೆಯೂ ಡ್ರಗ್ಸ್ ಪ್ರಕರಣದಲ್ಲಿ ಒಕ್ಕೂಟ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಒಕ್ಕೂಟ ಸರ್ಕಾರವು ಎನ್‌ಸಿಬಿ, ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯನ್ನು ವಿರೋಧ ಪಕ್ಷಗಳ ವಿರುದ್ಧ ಬಳಸುತ್ತಿದೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...