Homeಮುಖಪುಟಆರ್ಯನ್ ಖಾನ್ ಡ್ರಗ್ಸ್ ಪ್ರಕರಣ: ಪೇಪರ್‌ವರ್ಕ್‌ಗಾಗಿ ನಟ ಶಾರುಖ್ ಖಾನ್ ಮನೆಗೆ ಎನ್‌ಸಿಬಿ

ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ: ಪೇಪರ್‌ವರ್ಕ್‌ಗಾಗಿ ನಟ ಶಾರುಖ್ ಖಾನ್ ಮನೆಗೆ ಎನ್‌ಸಿಬಿ

- Advertisement -
- Advertisement -

ಡ್ರಗ್ಸ್ ಪ್ರಕರಣದ ಆರೋಪಿಯಾಗಿರುವ ಆರ್ಯನ್ ಖಾನ್‌ರನ್ನು ಭೇಟಿಯಾದ ಕೆಲವೇ ಗಂಟೆಗಳಲ್ಲಿ ಎನ್‌ಸಿಬಿ ಅಧಿಕಾರಿಗಳು ಬಾಲಿವುಡ್ ನಟ ಶಾರುಖ್ ಖಾನ್ ಮನೆಗೆ ಭೇಟಿ ನೀಡಿ ಕೆಲ ಹೊತ್ತು ಚರ್ಚೆ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಈ ಬಗ್ಗೆ ಮಾಧ್ಯಮಗಳಲ್ಲಿ ಶಾರುಖ್ ಖಾನ್ ಮನೆ ಮೇಲೆ ಎನ್‌ಸಿಬಿ ದಾಳಿ ಎಂದು ವರದಿಯಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಂಸ್ಥೆ, “ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗುತ್ತಿರುವಂತೆ ಇದು ದಾಳಿಯಲ್ಲ, ಕೇವಲ ಕಾಗದ ಪತ್ರದ ಕೆಲಸ” ಎಂದು ಹೇಳಿದೆ.

“ನಟ ಶಾರುಖ್ ಖಾನ್ ಅವರಿಗೆ ನೋಟಿಸ್ ನೀಡಿದ ನಂತರ ತಂಡವು ಪ್ರಕರಣದ ತನಿಖೆಗೆ ಸಂಬಂಧಿಸಿದ ಕೆಲವು ವಿವರಗಳಿಗಾಗಿ ಅವರ ಮನೆಗೆ ಭೇಟಿ ನೀಡಿತ್ತು. ಪೇಪರ್‌ವರ್ಕ್ ಪೂರ್ಣಗೊಳಿಸುವುದಕ್ಕಾಗಿ ಭೇಟಿ ನೀಡಿತ್ತು. ಯಾವುದೇ ಪರಿಶೀಲನೆಗಾಗಿ ಅಲ್ಲ” ಎಂದು ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಹೇಳಿಕೆಯಲ್ಲಿ ತಿಳಿಸಿದ್ದಾರೆ .

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಮಗ ಆರ್ಯನ್ ಖಾನ್‌ರನ್ನು ಭೇಟಿಯಾದ ನಟ ಶಾರುಖ್ ಖಾನ್‌

ಇಂದು ಬೆಳಗ್ಗೆ ಶಾರುಖ್ , ಮುಂಬೈನ ಆರ್ಥರ್ ರೋಡ್ ಜೈಲಿಗೆ ಭೇಟಿ ನೀಡಿ ತಮ್ಮ ಮಗನನ್ನು ಭೇಟಿಯಾಗಿ ಬಂದಿದ್ದರು. ಅಕ್ಟೋಬರ್ 2 ರಂದು ಮುಂಬೈನ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತಿದ್ದ ವೇಳೆ ದಾಳಿ ನಡೆಸಿದ್ದ ಎನ್‌ಸಿಬಿ ಆರ್ಯನ್ ಖಾನ್‌ರನ್ನು ಬಂಧಿಸಿತ್ತು.

14 ದಿನಗಳಿಂದ ಜೈಲಿನಲ್ಲಿರುವ ಅವರಿಗೆ ಜಾಮೀನು ನೀಡಲು ನಿನ್ನೆ ಮುಂಬೈನ ವಿಶೇಷ ನ್ಯಾಯಾಲಯವು ನಿರಾಕರಿಸಿದೆ. ಹೀಗಾಗಿ, ಅವರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದು, ಮಂಗಳವಾರ ವಿಚಾರಣೆ ನಡೆಯಲಿದೆ.

ಆರ್ಯನ್‌ಖಾನ್ ಮತ್ತು ಅರ್ಬಾಜ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದು, ಮುನ್ಮುನ್ ಅವರನ್ನು ಮುಂಬೈನ ಬೈಕುಲ್ಲಾ ಮಹಿಳಾ ಜೈಲಿನಲ್ಲಿ ಇರಿಸಲಾಗಿದೆ. ಈ ಪ್ರಕರಣದ ಆರೋಪಿ ಆರ್ಯನ್ ಖಾನ್ ಮತ್ತು ಇತರರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8 (ಸಿ), 20 (ಬಿ), 27, 28, 29 ಮತ್ತು 35 ರ ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಆರ್ಯನ್ ಖಾನ್‌ರ ಮೂಲಭೂತ ಹಕ್ಕುಗಳನ್ನು ಉಳಿಸಿ: ಸುಪ್ರೀಂಗೆ ಶಿವಸೇನಾ ಸಚಿವನ ಅರ್ಜಿ

ಇನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿತ ಆರೋಪಿಯ ವಾಟ್ಸಾಪ್ ಚಾಟ್‌ಗಳಲ್ಲಿ ಹೆಸರು ಕಾಣಿಸಿಕೊಂಡಿದೆ ಎಂದು 22 ವರ್ಷದ ಬಾಲಿವುಡ್ ನಟಿ ಅನನ್ಯ ಪಾಂಡೆಯವರ ಮುಂಬೈ ಮನೆ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ನಡೆಸಿದೆ. ವಿಚಾರಣೆಗೆ ನೋಟಿಸ್ ನೀಡಿದೆ.

Ananya Pandey to debut in Telugu with Vijay Deverakonda's next- The New Indian Express
ಅನನ್ಯ ಪಾಂಡೆ

ಅನನ್ಯ ಪಾಂಡೆ ಮತ್ತು ಆರ್ಯನ್ ಖಾನ್  ಕಾಮನ್ ಫ್ರೆಂಡ್ಸ್ ಸರ್ಕಲ್‌ ಹೊಂದಿದ್ದಾರೆ. ಅನನ್ಯ ಮತ್ತು ಆರ್ಯನ್ ಸಹೋದರಿ ಸುಹಾನಾ ಉತ್ತಮ ಸ್ನೇಹಿತರಾಗಿದ್ದಾರೆ. ಅನನ್ಯ ಪಾಂಡೆ 2019 ರಲ್ಲಿ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದಾರೆ. ಈಕೆ  ಬಾಲಿವುಡ್ ನಟ ಚುಂಕಿ ಪಾಂಡೆ ಮತ್ತು ಭಾವನಾ ಪಾಂಡೆ ಅವರ ಪುತ್ರಿ.

ಅನನ್ಯ ಪಾಂಡೆ 2019ರಲ್ಲಿ ತೆರೆಕಂಡ ‘ಸ್ಟೂಡೆಂಟ್​ ಆಫ್​ ದಿ ಇಯರ್​ 2’ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟವರಿಗೆ ಮೊದಲ ಸಿನಿಮಾದಲ್ಲೇ ಫಿಲ್ಮ್​ ಫೇರ್​ ಪ್ರಶಸ್ತಿ ದಕ್ಕಿತ್ತು. ನಂತರ ಕಾರ್ತಿಕ್ ಆರ್ಯನ್, ಭೂಮಿ ಪಡ್ನೇಕರ್‌ ಜೊತೆಗೆ ‘ಪತಿ ಪತ್ನಿ ಔರ್​ ವೋ’ ಚಿತ್ರದಲ್ಲಿ ನಟಿಸಿದ್ದರು. ‘ಖಾಲಿ ಪೀಲಿ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...