HomeಮುಖಪುಟNCERT ಪಠ್ಯ ಕಡಿತಗೊಳಿಸಿ, ಸುಳ್ಳು ಇತಿಹಾಸ ಹರಡಲು ದಾರಿ ಮಾಡಿಕೊಟ್ಟಿದೆ: ಇತಿಹಾಸಕಾರರ ಕಳವಳ

NCERT ಪಠ್ಯ ಕಡಿತಗೊಳಿಸಿ, ಸುಳ್ಳು ಇತಿಹಾಸ ಹರಡಲು ದಾರಿ ಮಾಡಿಕೊಟ್ಟಿದೆ: ಇತಿಹಾಸಕಾರರ ಕಳವಳ

- Advertisement -
- Advertisement -

ಸಿಬಿಎಸ್‌ಇ ವಿದ್ಯಾರ್ಥಿಗಳ ಇತಿಹಾಸ ಪುಸ್ತಕಗಳಿಂದ ಕೆಲವು ವಿಷಯಗಳನ್ನು ಕೈಬಿಡಲು ಎನ್‌ಸಿಇಆರ್‌ಟಿ ನಿರ್ಧರಿಸಿದೆ. ಈ ಕ್ರಮದ ಬಗ್ಗೆ ಇತಿಹಾಸಕಾರರು ಕಳವಳ ವ್ಯಕ್ತಪಡಿಸಿದೆ.

ಶುಕ್ರವಾರ ಇತಿಹಾಸಕಾರರ ಗುಂಪು ತಮ್ಮ ಹೇಳಿಕೆಯಲ್ಲಿ, ಎನ್‌ಸಿಇಆರ್‌ಟಿಯವರು ವಿಶೇಷವಾಗಿ 12 ನೇ ತರಗತಿಯ ಪಠ್ಯದಲ್ಲಿನ ಕೆಲವು ವಿಷಯಗಳನ್ನು ಕೈಬಿಡುತ್ತಿರುವ ನಿರ್ಧಾರದ ಬಗ್ಗೆ ನಾವು ಆತಂಕ ಎನಿಸಿದೆ. ಈ ಬಗ್ಗೆ ಅವರು ಕಾಳಜಿವಹಿಸಬೇಕು ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ರೋಮಿಲಾ ಥಾಪರ್, ಜಯತಿ ಗೋಷ್, ಮೃದುಲಾ ಮುಖರ್ಜಿ, ಅಪೂರ್ವನಾದ, ಇರ್ಫಾನ್ ಹಬೀಬ್ ಮತ್ತು ಉಪಿಂದರ್ ಸಿಂಗ್ ಸೇರಿ ಹಲವರು ಸಹಿ ಹಾಕಿದ್ದಾರೆ.

”ಸಾಂಕ್ರಾಮಿಕ ಕೋವಿಡ್‌ನಿಂದ ಹೇರಲಾಗಿದ್ದ ಲಾಕ್‌ಡೌನ್‌ ನೆಪ ಹೇಳಿ ಪಠ್ಯಕ್ರಮದ ಹೊರೆಯನ್ನು ಕಡಿಮೆ ಮಾಡುವ ಅವಶ್ಯಕತೆಯಿದೆ ಎಂದು ಎನ್‌ಸಿಇಆರ್‌ಟಿ ವಾದಿಸಿತ್ತು. ಮೊಘಲ್ ಸಾಮ್ರಾಜ್ಯದ ಇತಿಹಾಸ, ಗುಜರಾತ್‌ನಲ್ಲಿ ನಡೆದ 2002ರ ಕೋಮು ಗಲಭೆಗಳಂತಹ ವಿಷಯಗಳನ್ನು ಕೈಬಿಡುವ ವಿವಾದಾತ್ಮಕ ಪ್ರಕ್ರಿಯೆಯನ್ನು ಪ್ರಾರಂಭಿಸಿತು. 6 ರಿಂದ 12 ನೇ ತರಗತಿಯ ಸಮಾಜ ವಿಜ್ಞಾನ, ಇತಿಹಾಸ ಮತ್ತು ರಾಜ್ಯಶಾಸ್ತ್ರ ಪಠ್ಯಪುಸ್ತಕಗಳಿಂದ ಕೆಲವು ಪ್ರಮುಖ ಪಾಠಗಳನ್ನು ಕೈಬಿಡಲಾಗುತ್ತಿದೆ” ಎಂದು ಇತಿಹಾಸಕಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

”ಕೋವಿಡ್‌ ಮುಗಿದ ಬಳಿಕ ಈಗ ಶಾಲೆಗಳು ಆರಂಭವಾದ ಬಳಿಕವೂ ಇತಿಹಾಸದ ಪಠ್ಯವನ್ನು ಕೈಬಿಟ್ಟಿರುವುನ್ನು ಮುಂದುವರೆಸಿವೆ. ಈಗ ಪುನಃ ಮೊದಲಿನಿಂತೆ ಸಂಪೂರ್ಣ ವಿಷಯಗಳನ್ನು ಪಠ್ಯದಲ್ಲಿ ಸೇರಿಸಲಾಗಿಲ್ಲ” ಎಂದು ಅವರು ಹೇಳಿದರು.

”ಇತಿಹಾಸದ ಪಾಠಗಳನ್ನು ಕೈ ಬಿಡುವ ಮೂಲಕ, ಹುಸಿ ಇತಿಹಾಸಗಳಿಗೆ, ವಿಶೇಷವಾಗಿ ಕೋಮು ಮತ್ತು ಜಾತಿಯ ವೈವಿಧ್ಯತೆಯ ಹಿಡಿತವನ್ನು ಪ್ರಚಾರಪಡಿಸಲು ಸಿದ್ದವಾಗಿದೆ. ಪಠ್ಯದಲ್ಲಿ ನೈಜ ಇತಿಹಾಸ ಕೈಬಿಟ್ಟಿರುವುದರಿಂದ ಇಂದು ವಾಟ್ಸಾಪ್ ಮತ್ತು ಇತರ ಮೂಲಗಳಿಂದ ಸುಳ್ಳು ಇತಿಹಾಸಗಳು ವ್ಯಾಪಕವಾಗಿ ಹರಡಲಾಗುತ್ತಿದೆ. ಶಿಕ್ಷಣದಲ್ಲಿ ರಾಜಕೀಯ ಬೆರಸಬಾರದು” ಎಂದು ಇತಿಹಾಸಕಾರರು ಹೇಳಿದ್ದಾರೆ.

ಈ ಬಗ್ಗೆ ಎನ್‌ಸಿಇಆರ್‌ಟಿ ಪ್ರತಿಕ್ರಿಯಿಸಿದ್ದು, ”ಐತಿಹಾಸಿಕ ಸತ್ಯಗಳನ್ನು ಹತ್ತಿಕ್ಕುವ ಪ್ರಕ್ರಿಯೆ ಆಗಿಲ್ಲ. ಇದು ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಪಠ್ಯ ಕೈಬಿಡಲಾಗಿದೆ ಮತ್ತು ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ” ಎಂದು ಹೇಳಿದೆ.

”ಕಳೆದ ವರ್ಷವೂ ನಾವು ವಿವರಿಸಿದಂತೆ, ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಕಲಿಕೆಯ ವಿಚಾರದಲ್ಲಿ ಸಾಕಷ್ಟು ನಷ್ಟ ಉಂಟಾಗಿದೆ. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಒತ್ತಡಕ್ಕೆ ಒಳಗಾಗಿದ್ದಾರೆ.ಆ ವಿದ್ಯಾರ್ಥಿಗಳಿಗೆ ಸಹಾಯವಾಗುವುಂತೆ ಮಾಡುವುದು ನಮ್ಮ ಜವಾಬ್ದಾರಿ ಎಂದು ಭಾವಿಸಲಾಗಿದೆ. ಪಠ್ಯಪುಸ್ತಕಗಳಲ್ಲಿನ ವಿಷಯದ ಹೊರೆ ಕಡಿಮೆ ಮಾಡಬೇಕು” ಎಂದು ಎನ್‌ಸಿಇಆರ್‌ಟಿಯ ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ ಮಂಗಳವಾರ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ನಿರ್ದಿಷ್ಟ ಸಿದ್ಧಾಂತಕ್ಕೆ ಅನುಗುಣವಾಗಿ ಬದಲಾವಣೆಗಳನ್ನು ಮಾಡಲಾಗಿದೆ ಎಂಬ ಇತಿಹಾಸಕಾರರ ಆರೋಪಗಳನ್ನು ದಿನೇಶ್ ಪ್ರಸಾದ್ ಸಕ್ಲಾನಿ ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...