HomeಮುಖಪುಟNCERT ಪಠ್ಯ ಕಡಿತಗೊಳಿಸಿ, ಸುಳ್ಳು ಇತಿಹಾಸ ಹರಡಲು ದಾರಿ ಮಾಡಿಕೊಟ್ಟಿದೆ: ಇತಿಹಾಸಕಾರರ ಕಳವಳ

NCERT ಪಠ್ಯ ಕಡಿತಗೊಳಿಸಿ, ಸುಳ್ಳು ಇತಿಹಾಸ ಹರಡಲು ದಾರಿ ಮಾಡಿಕೊಟ್ಟಿದೆ: ಇತಿಹಾಸಕಾರರ ಕಳವಳ

- Advertisement -
- Advertisement -

ಸಿಬಿಎಸ್‌ಇ ವಿದ್ಯಾರ್ಥಿಗಳ ಇತಿಹಾಸ ಪುಸ್ತಕಗಳಿಂದ ಕೆಲವು ವಿಷಯಗಳನ್ನು ಕೈಬಿಡಲು ಎನ್‌ಸಿಇಆರ್‌ಟಿ ನಿರ್ಧರಿಸಿದೆ. ಈ ಕ್ರಮದ ಬಗ್ಗೆ ಇತಿಹಾಸಕಾರರು ಕಳವಳ ವ್ಯಕ್ತಪಡಿಸಿದೆ.

ಶುಕ್ರವಾರ ಇತಿಹಾಸಕಾರರ ಗುಂಪು ತಮ್ಮ ಹೇಳಿಕೆಯಲ್ಲಿ, ಎನ್‌ಸಿಇಆರ್‌ಟಿಯವರು ವಿಶೇಷವಾಗಿ 12 ನೇ ತರಗತಿಯ ಪಠ್ಯದಲ್ಲಿನ ಕೆಲವು ವಿಷಯಗಳನ್ನು ಕೈಬಿಡುತ್ತಿರುವ ನಿರ್ಧಾರದ ಬಗ್ಗೆ ನಾವು ಆತಂಕ ಎನಿಸಿದೆ. ಈ ಬಗ್ಗೆ ಅವರು ಕಾಳಜಿವಹಿಸಬೇಕು ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ರೋಮಿಲಾ ಥಾಪರ್, ಜಯತಿ ಗೋಷ್, ಮೃದುಲಾ ಮುಖರ್ಜಿ, ಅಪೂರ್ವನಾದ, ಇರ್ಫಾನ್ ಹಬೀಬ್ ಮತ್ತು ಉಪಿಂದರ್ ಸಿಂಗ್ ಸೇರಿ ಹಲವರು ಸಹಿ ಹಾಕಿದ್ದಾರೆ.

”ಸಾಂಕ್ರಾಮಿಕ ಕೋವಿಡ್‌ನಿಂದ ಹೇರಲಾಗಿದ್ದ ಲಾಕ್‌ಡೌನ್‌ ನೆಪ ಹೇಳಿ ಪಠ್ಯಕ್ರಮದ ಹೊರೆಯನ್ನು ಕಡಿಮೆ ಮಾಡುವ ಅವಶ್ಯಕತೆಯಿದೆ ಎಂದು ಎನ್‌ಸಿಇಆರ್‌ಟಿ ವಾದಿಸಿತ್ತು. ಮೊಘಲ್ ಸಾಮ್ರಾಜ್ಯದ ಇತಿಹಾಸ, ಗುಜರಾತ್‌ನಲ್ಲಿ ನಡೆದ 2002ರ ಕೋಮು ಗಲಭೆಗಳಂತಹ ವಿಷಯಗಳನ್ನು ಕೈಬಿಡುವ ವಿವಾದಾತ್ಮಕ ಪ್ರಕ್ರಿಯೆಯನ್ನು ಪ್ರಾರಂಭಿಸಿತು. 6 ರಿಂದ 12 ನೇ ತರಗತಿಯ ಸಮಾಜ ವಿಜ್ಞಾನ, ಇತಿಹಾಸ ಮತ್ತು ರಾಜ್ಯಶಾಸ್ತ್ರ ಪಠ್ಯಪುಸ್ತಕಗಳಿಂದ ಕೆಲವು ಪ್ರಮುಖ ಪಾಠಗಳನ್ನು ಕೈಬಿಡಲಾಗುತ್ತಿದೆ” ಎಂದು ಇತಿಹಾಸಕಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

”ಕೋವಿಡ್‌ ಮುಗಿದ ಬಳಿಕ ಈಗ ಶಾಲೆಗಳು ಆರಂಭವಾದ ಬಳಿಕವೂ ಇತಿಹಾಸದ ಪಠ್ಯವನ್ನು ಕೈಬಿಟ್ಟಿರುವುನ್ನು ಮುಂದುವರೆಸಿವೆ. ಈಗ ಪುನಃ ಮೊದಲಿನಿಂತೆ ಸಂಪೂರ್ಣ ವಿಷಯಗಳನ್ನು ಪಠ್ಯದಲ್ಲಿ ಸೇರಿಸಲಾಗಿಲ್ಲ” ಎಂದು ಅವರು ಹೇಳಿದರು.

”ಇತಿಹಾಸದ ಪಾಠಗಳನ್ನು ಕೈ ಬಿಡುವ ಮೂಲಕ, ಹುಸಿ ಇತಿಹಾಸಗಳಿಗೆ, ವಿಶೇಷವಾಗಿ ಕೋಮು ಮತ್ತು ಜಾತಿಯ ವೈವಿಧ್ಯತೆಯ ಹಿಡಿತವನ್ನು ಪ್ರಚಾರಪಡಿಸಲು ಸಿದ್ದವಾಗಿದೆ. ಪಠ್ಯದಲ್ಲಿ ನೈಜ ಇತಿಹಾಸ ಕೈಬಿಟ್ಟಿರುವುದರಿಂದ ಇಂದು ವಾಟ್ಸಾಪ್ ಮತ್ತು ಇತರ ಮೂಲಗಳಿಂದ ಸುಳ್ಳು ಇತಿಹಾಸಗಳು ವ್ಯಾಪಕವಾಗಿ ಹರಡಲಾಗುತ್ತಿದೆ. ಶಿಕ್ಷಣದಲ್ಲಿ ರಾಜಕೀಯ ಬೆರಸಬಾರದು” ಎಂದು ಇತಿಹಾಸಕಾರರು ಹೇಳಿದ್ದಾರೆ.

ಈ ಬಗ್ಗೆ ಎನ್‌ಸಿಇಆರ್‌ಟಿ ಪ್ರತಿಕ್ರಿಯಿಸಿದ್ದು, ”ಐತಿಹಾಸಿಕ ಸತ್ಯಗಳನ್ನು ಹತ್ತಿಕ್ಕುವ ಪ್ರಕ್ರಿಯೆ ಆಗಿಲ್ಲ. ಇದು ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಪಠ್ಯ ಕೈಬಿಡಲಾಗಿದೆ ಮತ್ತು ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ” ಎಂದು ಹೇಳಿದೆ.

”ಕಳೆದ ವರ್ಷವೂ ನಾವು ವಿವರಿಸಿದಂತೆ, ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಕಲಿಕೆಯ ವಿಚಾರದಲ್ಲಿ ಸಾಕಷ್ಟು ನಷ್ಟ ಉಂಟಾಗಿದೆ. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಒತ್ತಡಕ್ಕೆ ಒಳಗಾಗಿದ್ದಾರೆ.ಆ ವಿದ್ಯಾರ್ಥಿಗಳಿಗೆ ಸಹಾಯವಾಗುವುಂತೆ ಮಾಡುವುದು ನಮ್ಮ ಜವಾಬ್ದಾರಿ ಎಂದು ಭಾವಿಸಲಾಗಿದೆ. ಪಠ್ಯಪುಸ್ತಕಗಳಲ್ಲಿನ ವಿಷಯದ ಹೊರೆ ಕಡಿಮೆ ಮಾಡಬೇಕು” ಎಂದು ಎನ್‌ಸಿಇಆರ್‌ಟಿಯ ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ ಮಂಗಳವಾರ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ನಿರ್ದಿಷ್ಟ ಸಿದ್ಧಾಂತಕ್ಕೆ ಅನುಗುಣವಾಗಿ ಬದಲಾವಣೆಗಳನ್ನು ಮಾಡಲಾಗಿದೆ ಎಂಬ ಇತಿಹಾಸಕಾರರ ಆರೋಪಗಳನ್ನು ದಿನೇಶ್ ಪ್ರಸಾದ್ ಸಕ್ಲಾನಿ ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...