Homeಮುಖಪುಟ11ನೇ ತರಗತಿಯ ಪಠ್ಯಪುಸ್ತಕದಿಂದ ಮೌಲಾನಾ ಆಜಾದ್ ಉಲ್ಲೇಖ ಕೈಬಿಟ್ಟ NCERT

11ನೇ ತರಗತಿಯ ಪಠ್ಯಪುಸ್ತಕದಿಂದ ಮೌಲಾನಾ ಆಜಾದ್ ಉಲ್ಲೇಖ ಕೈಬಿಟ್ಟ NCERT

- Advertisement -
- Advertisement -

NCERT ಪ್ರಕಟಿಸಿರುವ 11ನೇ ತರಗತಿಯ ಪರಿಷ್ಕೃತ ರಾಜ್ಯಶಾಸ್ತ್ರ ಪಠ್ಯಪುಸ್ತಕದಲ್ಲಿ ‘ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್’ ಅವರ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ದಿ ಹಿಂದೂ ಬುಧವಾರ ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರವು ಸ್ವಾಯತ್ತವಾಗಿ ಉಳಿಯುತ್ತದೆ ಎಂಬ ಷರತ್ತಿನ ಮೇಲೆ ಭಾರತಕ್ಕೆ ವಿಲೀನವಾಗಿತ್ತು ಎಂಬ ಪ್ಯಾರಾಗ್ರಾಫ್‌ನ್ನು ಸಹ ಅಳಿಸಲಾಗಿದೆ ಎಂದು ಪತ್ರಿಕೆ ತಿಳಿಸಿದೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಮಾಡಿದ ಹಲವಾರು ಬದಲಾವಣೆಗಳು ಸಾಕಷ್ಟು ವಿವಾದ ಹುಟ್ಟುಹಾಕಿದೆ. ಈ ಎಲ್ಲ ಲೋಪಗಳು ಸರ್ಕಾರಿ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಶಾಲೆಗಳಲ್ಲಿ ಪಠ್ಯಕ್ರಮದ ಭಾಗವಾಗಿದೆ.

ಜೂನ್‌ನಲ್ಲಿ ಎನ್‌ಸಿಇಆರ್‌ಟಿ ಪರೀಷ್ಕರಿಸುವ ವಿಷಯಗಳ ಕುರಿತು ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಆ ಪಟ್ಟಿಯಲ್ಲಿ ‘ಆಜಾದ್’ ಮತ್ತು ‘ಕಾಶ್ಮೀರ’ದ ಮೇಲಿನ ಪ್ಯಾರಾಗಳನ್ನು ತಗೆದು ಹಾಕುವ ನಿರ್ಧಾರದ ಬಗ್ಗೆ ಪ್ರಸ್ತಾಪಿಸಿರಲಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಕಳೆದ ವಾರವೂ ಇದೇ ರೀತಿ ಗಾಂಧಿ ಹತ್ಯೆಯ ವಿಷಯದಲ್ಲಿ ಮಾಡಿತ್ತು. ”ಮೋಹನ್‌ದಾಸ್ ಕರಮಚಂದ್ ಗಾಂಧಿ ಅವರನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳು ನಡೆಸಿದ ಪ್ರಯತ್ನಗಳು ಮತ್ತು ಅವರ ಹತ್ಯೆಯ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾದ ನಿಷೇಧ”ದ ಪ್ಯಾರಾಗಳನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: NCERT ಪಠ್ಯ ಕಡಿತಗೊಳಿಸಿ, ಸುಳ್ಳು ಇತಿಹಾಸ ಹರಡಲು ದಾರಿ ಮಾಡಿಕೊಟ್ಟಿದೆ: ಇತಿಹಾಸಕಾರರ ಕಳವಳ

ಕಳೆದ ವರ್ಷ NCERT ಕೆಲವು ವಿಷಯಗಳನ್ನು ತಗೆದುಹಾಕುವ ಬಗ್ಗೆ ಹೇಳಿತ್ತು. 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ ಮತ್ತು 1975ರಲ್ಲಿ ಹೇರಲಾದ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ವಿಷಯಗಳನ್ನು ಕೈಬಿಡುವುದಾಗಿ ಹೇಳಿತ್ತು. ಈಗ ಯಾವುದೇ NCERT ಪಠ್ಯಪುಸ್ತಕದಲ್ಲೂ ಗುಜರಾತ್ ಗಲಭೆಗಳ ಬಗ್ಗೆ ಯಾವುದೇ ಉಲ್ಲೇಖಗಳು ಕಾಣಸಿಗುವುದಿಲ್ಲ.

”ಸಂವಿಧಾನ – ಏಕೆ ಮತ್ತು ಹೇಗೆ?” ಎಂಬ ಶೀರ್ಷಿಕೆಯ 11ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದ ಮೊದಲ ಅಧ್ಯಾಯದಲ್ಲಿ ಆಜಾದ್ ಅವರ ಪ್ಯಾರಾವನ್ನು ಕೈಬಿಡಲಾಗಿದೆ.

ಈ ಪಠ್ಯಪುಸ್ತಕದ ಹಿಂದಿನ ಆವೃತ್ತಿಗಳಲ್ಲಿ, ”ವಿಧಾನ ಸಭೆಯು ವಿವಿಧ ವಿಷಯಗಳ ಮೇಲೆ ಎಂಟು ಪ್ರಮುಖ ಸಮಿತಿಗಳನ್ನು ಹೊಂದಿತ್ತು. ಸಾಮಾನ್ಯವಾಗಿ ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್, ಮೌಲಾನಾ ಆಜಾದ್ ಅಥವಾ ಅಂಬೇಡ್ಕರ್ ಈ ಸಮಿತಿಗಳ ಅಧ್ಯಕ್ಷರಾಗಿದ್ದರು” ಎಂದು ಇದೆ.

ಆದರೆ ಪಠ್ಯಪುಸ್ತಕದ ಹೊಸ ಆವೃತ್ತಿಯು ಪ್ಯಾರಾಗ್ರಾಫ್‌ನ ಎರಡನೇ ಸಾಲನ್ನು ಹೀಗೆ ಪರಿಷ್ಕರಿಸಿದೆ- ”ಸಾಮಾನ್ಯವಾಗಿ, ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್ ಅಥವಾ ಬಿಆರ್ ಅಂಬೇಡ್ಕರ್ ಈ ಸಮಿತಿಗಳ ಅಧ್ಯಕ್ಷರಾಗಿದ್ದರು” ಎಂದು ಬರೆಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಅದೇ ಪಠ್ಯಪುಸ್ತಕದ ”ಸಂವಿಧಾನದ ತತ್ವಶಾಸ್ತ್ರ” ಎಂಬ ಇನ್ನೊಂದು ಅಧ್ಯಾಯದಲ್ಲಿ, ಜಮ್ಮು ಮತ್ತು ಕಾಶ್ಮೀರವು ಸ್ವಾಯತ್ತತೆಯ ಷರತ್ತಿನ ಮೇಲೆ ಭಾರತಕ್ಕೆ ಸೇರಿಕೊಂಡಿದೆ ಎಂಬ ಅಂಶದ ಉಲ್ಲೇಖವನ್ನು ತೆಗೆದುಹಾಕಲಾಗಿದೆ.

ಈ ಪಠ್ಯಪುಸ್ತಕದ ಹಿಂದಿನ ಆವೃತ್ತಿಗಳಲ್ಲಿ, ”ಉದಾಹರಣೆಗೆ, ಜಮ್ಮು ಮತ್ತು ಕಾಶ್ಮೀರವನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸುವುದು ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಅದರ ಸ್ವಾಯತ್ತತೆಯನ್ನು ಕಾಪಾಡುವ ಬದ್ಧತೆಯ ಮೇಲೆ ಆಧಾರಿತವಾಗಿದೆ” ಎಂದು ಇದೆ.

ಆದರೆ ಪಠ್ಯಪುಸ್ತಕದ ಹೊಸ ಆವೃತ್ತಿಯಲ್ಲಿ, ಅದನ್ನು ಕೈ ಬಿಟ್ಟು, ”ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರವು ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370 ರ ಅಡಿಯಲ್ಲಿ ರಾಜ್ಯತ್ವ ಮತ್ತು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು. ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು.”

”ಜಮ್ಮು ಮತ್ತು ಕಾಶ್ಮೀರದ “ಶಾಶ್ವತ ನಿವಾಸಿಗಳು” ಎಂದು ವ್ಯಾಖ್ಯಾನಿಸಲಾದ ಜನರಿಗೆ ವಿಶೇಷ ಹಕ್ಕುಗಳು ಮತ್ತು ಸವಲತ್ತುಗಳನ್ನು ಖಾತ್ರಿಪಡಿಸುವ ಆರ್ಟಿಕಲ್ 35A ಅನ್ನು ಕೇಂದ್ರವು ರದ್ದುಗೊಳಿಸಿದೆ. ಅಂದಿನಿಂದ, ಈ ಪ್ರದೇಶವು ಕೇಂದ್ರ ಆಡಳಿತದಲ್ಲಿದೆ” ಎಂದು ಸೇರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...