Homeಮುಖಪುಟ11ನೇ ತರಗತಿಯ ಪಠ್ಯಪುಸ್ತಕದಿಂದ ಮೌಲಾನಾ ಆಜಾದ್ ಉಲ್ಲೇಖ ಕೈಬಿಟ್ಟ NCERT

11ನೇ ತರಗತಿಯ ಪಠ್ಯಪುಸ್ತಕದಿಂದ ಮೌಲಾನಾ ಆಜಾದ್ ಉಲ್ಲೇಖ ಕೈಬಿಟ್ಟ NCERT

- Advertisement -
- Advertisement -

NCERT ಪ್ರಕಟಿಸಿರುವ 11ನೇ ತರಗತಿಯ ಪರಿಷ್ಕೃತ ರಾಜ್ಯಶಾಸ್ತ್ರ ಪಠ್ಯಪುಸ್ತಕದಲ್ಲಿ ‘ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್’ ಅವರ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ದಿ ಹಿಂದೂ ಬುಧವಾರ ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರವು ಸ್ವಾಯತ್ತವಾಗಿ ಉಳಿಯುತ್ತದೆ ಎಂಬ ಷರತ್ತಿನ ಮೇಲೆ ಭಾರತಕ್ಕೆ ವಿಲೀನವಾಗಿತ್ತು ಎಂಬ ಪ್ಯಾರಾಗ್ರಾಫ್‌ನ್ನು ಸಹ ಅಳಿಸಲಾಗಿದೆ ಎಂದು ಪತ್ರಿಕೆ ತಿಳಿಸಿದೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಮಾಡಿದ ಹಲವಾರು ಬದಲಾವಣೆಗಳು ಸಾಕಷ್ಟು ವಿವಾದ ಹುಟ್ಟುಹಾಕಿದೆ. ಈ ಎಲ್ಲ ಲೋಪಗಳು ಸರ್ಕಾರಿ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಶಾಲೆಗಳಲ್ಲಿ ಪಠ್ಯಕ್ರಮದ ಭಾಗವಾಗಿದೆ.

ಜೂನ್‌ನಲ್ಲಿ ಎನ್‌ಸಿಇಆರ್‌ಟಿ ಪರೀಷ್ಕರಿಸುವ ವಿಷಯಗಳ ಕುರಿತು ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಆ ಪಟ್ಟಿಯಲ್ಲಿ ‘ಆಜಾದ್’ ಮತ್ತು ‘ಕಾಶ್ಮೀರ’ದ ಮೇಲಿನ ಪ್ಯಾರಾಗಳನ್ನು ತಗೆದು ಹಾಕುವ ನಿರ್ಧಾರದ ಬಗ್ಗೆ ಪ್ರಸ್ತಾಪಿಸಿರಲಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಕಳೆದ ವಾರವೂ ಇದೇ ರೀತಿ ಗಾಂಧಿ ಹತ್ಯೆಯ ವಿಷಯದಲ್ಲಿ ಮಾಡಿತ್ತು. ”ಮೋಹನ್‌ದಾಸ್ ಕರಮಚಂದ್ ಗಾಂಧಿ ಅವರನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳು ನಡೆಸಿದ ಪ್ರಯತ್ನಗಳು ಮತ್ತು ಅವರ ಹತ್ಯೆಯ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾದ ನಿಷೇಧ”ದ ಪ್ಯಾರಾಗಳನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: NCERT ಪಠ್ಯ ಕಡಿತಗೊಳಿಸಿ, ಸುಳ್ಳು ಇತಿಹಾಸ ಹರಡಲು ದಾರಿ ಮಾಡಿಕೊಟ್ಟಿದೆ: ಇತಿಹಾಸಕಾರರ ಕಳವಳ

ಕಳೆದ ವರ್ಷ NCERT ಕೆಲವು ವಿಷಯಗಳನ್ನು ತಗೆದುಹಾಕುವ ಬಗ್ಗೆ ಹೇಳಿತ್ತು. 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ ಮತ್ತು 1975ರಲ್ಲಿ ಹೇರಲಾದ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ವಿಷಯಗಳನ್ನು ಕೈಬಿಡುವುದಾಗಿ ಹೇಳಿತ್ತು. ಈಗ ಯಾವುದೇ NCERT ಪಠ್ಯಪುಸ್ತಕದಲ್ಲೂ ಗುಜರಾತ್ ಗಲಭೆಗಳ ಬಗ್ಗೆ ಯಾವುದೇ ಉಲ್ಲೇಖಗಳು ಕಾಣಸಿಗುವುದಿಲ್ಲ.

”ಸಂವಿಧಾನ – ಏಕೆ ಮತ್ತು ಹೇಗೆ?” ಎಂಬ ಶೀರ್ಷಿಕೆಯ 11ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದ ಮೊದಲ ಅಧ್ಯಾಯದಲ್ಲಿ ಆಜಾದ್ ಅವರ ಪ್ಯಾರಾವನ್ನು ಕೈಬಿಡಲಾಗಿದೆ.

ಈ ಪಠ್ಯಪುಸ್ತಕದ ಹಿಂದಿನ ಆವೃತ್ತಿಗಳಲ್ಲಿ, ”ವಿಧಾನ ಸಭೆಯು ವಿವಿಧ ವಿಷಯಗಳ ಮೇಲೆ ಎಂಟು ಪ್ರಮುಖ ಸಮಿತಿಗಳನ್ನು ಹೊಂದಿತ್ತು. ಸಾಮಾನ್ಯವಾಗಿ ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್, ಮೌಲಾನಾ ಆಜಾದ್ ಅಥವಾ ಅಂಬೇಡ್ಕರ್ ಈ ಸಮಿತಿಗಳ ಅಧ್ಯಕ್ಷರಾಗಿದ್ದರು” ಎಂದು ಇದೆ.

ಆದರೆ ಪಠ್ಯಪುಸ್ತಕದ ಹೊಸ ಆವೃತ್ತಿಯು ಪ್ಯಾರಾಗ್ರಾಫ್‌ನ ಎರಡನೇ ಸಾಲನ್ನು ಹೀಗೆ ಪರಿಷ್ಕರಿಸಿದೆ- ”ಸಾಮಾನ್ಯವಾಗಿ, ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್ ಅಥವಾ ಬಿಆರ್ ಅಂಬೇಡ್ಕರ್ ಈ ಸಮಿತಿಗಳ ಅಧ್ಯಕ್ಷರಾಗಿದ್ದರು” ಎಂದು ಬರೆಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಅದೇ ಪಠ್ಯಪುಸ್ತಕದ ”ಸಂವಿಧಾನದ ತತ್ವಶಾಸ್ತ್ರ” ಎಂಬ ಇನ್ನೊಂದು ಅಧ್ಯಾಯದಲ್ಲಿ, ಜಮ್ಮು ಮತ್ತು ಕಾಶ್ಮೀರವು ಸ್ವಾಯತ್ತತೆಯ ಷರತ್ತಿನ ಮೇಲೆ ಭಾರತಕ್ಕೆ ಸೇರಿಕೊಂಡಿದೆ ಎಂಬ ಅಂಶದ ಉಲ್ಲೇಖವನ್ನು ತೆಗೆದುಹಾಕಲಾಗಿದೆ.

ಈ ಪಠ್ಯಪುಸ್ತಕದ ಹಿಂದಿನ ಆವೃತ್ತಿಗಳಲ್ಲಿ, ”ಉದಾಹರಣೆಗೆ, ಜಮ್ಮು ಮತ್ತು ಕಾಶ್ಮೀರವನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸುವುದು ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಅದರ ಸ್ವಾಯತ್ತತೆಯನ್ನು ಕಾಪಾಡುವ ಬದ್ಧತೆಯ ಮೇಲೆ ಆಧಾರಿತವಾಗಿದೆ” ಎಂದು ಇದೆ.

ಆದರೆ ಪಠ್ಯಪುಸ್ತಕದ ಹೊಸ ಆವೃತ್ತಿಯಲ್ಲಿ, ಅದನ್ನು ಕೈ ಬಿಟ್ಟು, ”ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರವು ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370 ರ ಅಡಿಯಲ್ಲಿ ರಾಜ್ಯತ್ವ ಮತ್ತು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು. ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು.”

”ಜಮ್ಮು ಮತ್ತು ಕಾಶ್ಮೀರದ “ಶಾಶ್ವತ ನಿವಾಸಿಗಳು” ಎಂದು ವ್ಯಾಖ್ಯಾನಿಸಲಾದ ಜನರಿಗೆ ವಿಶೇಷ ಹಕ್ಕುಗಳು ಮತ್ತು ಸವಲತ್ತುಗಳನ್ನು ಖಾತ್ರಿಪಡಿಸುವ ಆರ್ಟಿಕಲ್ 35A ಅನ್ನು ಕೇಂದ್ರವು ರದ್ದುಗೊಳಿಸಿದೆ. ಅಂದಿನಿಂದ, ಈ ಪ್ರದೇಶವು ಕೇಂದ್ರ ಆಡಳಿತದಲ್ಲಿದೆ” ಎಂದು ಸೇರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...