Homeಮುಖಪುಟ11ನೇ ತರಗತಿಯ ಪಠ್ಯಪುಸ್ತಕದಿಂದ ಮೌಲಾನಾ ಆಜಾದ್ ಉಲ್ಲೇಖ ಕೈಬಿಟ್ಟ NCERT

11ನೇ ತರಗತಿಯ ಪಠ್ಯಪುಸ್ತಕದಿಂದ ಮೌಲಾನಾ ಆಜಾದ್ ಉಲ್ಲೇಖ ಕೈಬಿಟ್ಟ NCERT

- Advertisement -
- Advertisement -

NCERT ಪ್ರಕಟಿಸಿರುವ 11ನೇ ತರಗತಿಯ ಪರಿಷ್ಕೃತ ರಾಜ್ಯಶಾಸ್ತ್ರ ಪಠ್ಯಪುಸ್ತಕದಲ್ಲಿ ‘ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್’ ಅವರ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ದಿ ಹಿಂದೂ ಬುಧವಾರ ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರವು ಸ್ವಾಯತ್ತವಾಗಿ ಉಳಿಯುತ್ತದೆ ಎಂಬ ಷರತ್ತಿನ ಮೇಲೆ ಭಾರತಕ್ಕೆ ವಿಲೀನವಾಗಿತ್ತು ಎಂಬ ಪ್ಯಾರಾಗ್ರಾಫ್‌ನ್ನು ಸಹ ಅಳಿಸಲಾಗಿದೆ ಎಂದು ಪತ್ರಿಕೆ ತಿಳಿಸಿದೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಮಾಡಿದ ಹಲವಾರು ಬದಲಾವಣೆಗಳು ಸಾಕಷ್ಟು ವಿವಾದ ಹುಟ್ಟುಹಾಕಿದೆ. ಈ ಎಲ್ಲ ಲೋಪಗಳು ಸರ್ಕಾರಿ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಶಾಲೆಗಳಲ್ಲಿ ಪಠ್ಯಕ್ರಮದ ಭಾಗವಾಗಿದೆ.

ಜೂನ್‌ನಲ್ಲಿ ಎನ್‌ಸಿಇಆರ್‌ಟಿ ಪರೀಷ್ಕರಿಸುವ ವಿಷಯಗಳ ಕುರಿತು ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಆ ಪಟ್ಟಿಯಲ್ಲಿ ‘ಆಜಾದ್’ ಮತ್ತು ‘ಕಾಶ್ಮೀರ’ದ ಮೇಲಿನ ಪ್ಯಾರಾಗಳನ್ನು ತಗೆದು ಹಾಕುವ ನಿರ್ಧಾರದ ಬಗ್ಗೆ ಪ್ರಸ್ತಾಪಿಸಿರಲಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಕಳೆದ ವಾರವೂ ಇದೇ ರೀತಿ ಗಾಂಧಿ ಹತ್ಯೆಯ ವಿಷಯದಲ್ಲಿ ಮಾಡಿತ್ತು. ”ಮೋಹನ್‌ದಾಸ್ ಕರಮಚಂದ್ ಗಾಂಧಿ ಅವರನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳು ನಡೆಸಿದ ಪ್ರಯತ್ನಗಳು ಮತ್ತು ಅವರ ಹತ್ಯೆಯ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾದ ನಿಷೇಧ”ದ ಪ್ಯಾರಾಗಳನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: NCERT ಪಠ್ಯ ಕಡಿತಗೊಳಿಸಿ, ಸುಳ್ಳು ಇತಿಹಾಸ ಹರಡಲು ದಾರಿ ಮಾಡಿಕೊಟ್ಟಿದೆ: ಇತಿಹಾಸಕಾರರ ಕಳವಳ

ಕಳೆದ ವರ್ಷ NCERT ಕೆಲವು ವಿಷಯಗಳನ್ನು ತಗೆದುಹಾಕುವ ಬಗ್ಗೆ ಹೇಳಿತ್ತು. 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ ಮತ್ತು 1975ರಲ್ಲಿ ಹೇರಲಾದ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ವಿಷಯಗಳನ್ನು ಕೈಬಿಡುವುದಾಗಿ ಹೇಳಿತ್ತು. ಈಗ ಯಾವುದೇ NCERT ಪಠ್ಯಪುಸ್ತಕದಲ್ಲೂ ಗುಜರಾತ್ ಗಲಭೆಗಳ ಬಗ್ಗೆ ಯಾವುದೇ ಉಲ್ಲೇಖಗಳು ಕಾಣಸಿಗುವುದಿಲ್ಲ.

”ಸಂವಿಧಾನ – ಏಕೆ ಮತ್ತು ಹೇಗೆ?” ಎಂಬ ಶೀರ್ಷಿಕೆಯ 11ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದ ಮೊದಲ ಅಧ್ಯಾಯದಲ್ಲಿ ಆಜಾದ್ ಅವರ ಪ್ಯಾರಾವನ್ನು ಕೈಬಿಡಲಾಗಿದೆ.

ಈ ಪಠ್ಯಪುಸ್ತಕದ ಹಿಂದಿನ ಆವೃತ್ತಿಗಳಲ್ಲಿ, ”ವಿಧಾನ ಸಭೆಯು ವಿವಿಧ ವಿಷಯಗಳ ಮೇಲೆ ಎಂಟು ಪ್ರಮುಖ ಸಮಿತಿಗಳನ್ನು ಹೊಂದಿತ್ತು. ಸಾಮಾನ್ಯವಾಗಿ ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್, ಮೌಲಾನಾ ಆಜಾದ್ ಅಥವಾ ಅಂಬೇಡ್ಕರ್ ಈ ಸಮಿತಿಗಳ ಅಧ್ಯಕ್ಷರಾಗಿದ್ದರು” ಎಂದು ಇದೆ.

ಆದರೆ ಪಠ್ಯಪುಸ್ತಕದ ಹೊಸ ಆವೃತ್ತಿಯು ಪ್ಯಾರಾಗ್ರಾಫ್‌ನ ಎರಡನೇ ಸಾಲನ್ನು ಹೀಗೆ ಪರಿಷ್ಕರಿಸಿದೆ- ”ಸಾಮಾನ್ಯವಾಗಿ, ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್ ಅಥವಾ ಬಿಆರ್ ಅಂಬೇಡ್ಕರ್ ಈ ಸಮಿತಿಗಳ ಅಧ್ಯಕ್ಷರಾಗಿದ್ದರು” ಎಂದು ಬರೆಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಅದೇ ಪಠ್ಯಪುಸ್ತಕದ ”ಸಂವಿಧಾನದ ತತ್ವಶಾಸ್ತ್ರ” ಎಂಬ ಇನ್ನೊಂದು ಅಧ್ಯಾಯದಲ್ಲಿ, ಜಮ್ಮು ಮತ್ತು ಕಾಶ್ಮೀರವು ಸ್ವಾಯತ್ತತೆಯ ಷರತ್ತಿನ ಮೇಲೆ ಭಾರತಕ್ಕೆ ಸೇರಿಕೊಂಡಿದೆ ಎಂಬ ಅಂಶದ ಉಲ್ಲೇಖವನ್ನು ತೆಗೆದುಹಾಕಲಾಗಿದೆ.

ಈ ಪಠ್ಯಪುಸ್ತಕದ ಹಿಂದಿನ ಆವೃತ್ತಿಗಳಲ್ಲಿ, ”ಉದಾಹರಣೆಗೆ, ಜಮ್ಮು ಮತ್ತು ಕಾಶ್ಮೀರವನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸುವುದು ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಅದರ ಸ್ವಾಯತ್ತತೆಯನ್ನು ಕಾಪಾಡುವ ಬದ್ಧತೆಯ ಮೇಲೆ ಆಧಾರಿತವಾಗಿದೆ” ಎಂದು ಇದೆ.

ಆದರೆ ಪಠ್ಯಪುಸ್ತಕದ ಹೊಸ ಆವೃತ್ತಿಯಲ್ಲಿ, ಅದನ್ನು ಕೈ ಬಿಟ್ಟು, ”ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರವು ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370 ರ ಅಡಿಯಲ್ಲಿ ರಾಜ್ಯತ್ವ ಮತ್ತು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು. ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು.”

”ಜಮ್ಮು ಮತ್ತು ಕಾಶ್ಮೀರದ “ಶಾಶ್ವತ ನಿವಾಸಿಗಳು” ಎಂದು ವ್ಯಾಖ್ಯಾನಿಸಲಾದ ಜನರಿಗೆ ವಿಶೇಷ ಹಕ್ಕುಗಳು ಮತ್ತು ಸವಲತ್ತುಗಳನ್ನು ಖಾತ್ರಿಪಡಿಸುವ ಆರ್ಟಿಕಲ್ 35A ಅನ್ನು ಕೇಂದ್ರವು ರದ್ದುಗೊಳಿಸಿದೆ. ಅಂದಿನಿಂದ, ಈ ಪ್ರದೇಶವು ಕೇಂದ್ರ ಆಡಳಿತದಲ್ಲಿದೆ” ಎಂದು ಸೇರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...