Homeಮುಖಪುಟ11ನೇ ತರಗತಿಯ ಪಠ್ಯಪುಸ್ತಕದಿಂದ ಮೌಲಾನಾ ಆಜಾದ್ ಉಲ್ಲೇಖ ಕೈಬಿಟ್ಟ NCERT

11ನೇ ತರಗತಿಯ ಪಠ್ಯಪುಸ್ತಕದಿಂದ ಮೌಲಾನಾ ಆಜಾದ್ ಉಲ್ಲೇಖ ಕೈಬಿಟ್ಟ NCERT

- Advertisement -
- Advertisement -

NCERT ಪ್ರಕಟಿಸಿರುವ 11ನೇ ತರಗತಿಯ ಪರಿಷ್ಕೃತ ರಾಜ್ಯಶಾಸ್ತ್ರ ಪಠ್ಯಪುಸ್ತಕದಲ್ಲಿ ‘ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್’ ಅವರ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ದಿ ಹಿಂದೂ ಬುಧವಾರ ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರವು ಸ್ವಾಯತ್ತವಾಗಿ ಉಳಿಯುತ್ತದೆ ಎಂಬ ಷರತ್ತಿನ ಮೇಲೆ ಭಾರತಕ್ಕೆ ವಿಲೀನವಾಗಿತ್ತು ಎಂಬ ಪ್ಯಾರಾಗ್ರಾಫ್‌ನ್ನು ಸಹ ಅಳಿಸಲಾಗಿದೆ ಎಂದು ಪತ್ರಿಕೆ ತಿಳಿಸಿದೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಮಾಡಿದ ಹಲವಾರು ಬದಲಾವಣೆಗಳು ಸಾಕಷ್ಟು ವಿವಾದ ಹುಟ್ಟುಹಾಕಿದೆ. ಈ ಎಲ್ಲ ಲೋಪಗಳು ಸರ್ಕಾರಿ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಶಾಲೆಗಳಲ್ಲಿ ಪಠ್ಯಕ್ರಮದ ಭಾಗವಾಗಿದೆ.

ಜೂನ್‌ನಲ್ಲಿ ಎನ್‌ಸಿಇಆರ್‌ಟಿ ಪರೀಷ್ಕರಿಸುವ ವಿಷಯಗಳ ಕುರಿತು ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಆ ಪಟ್ಟಿಯಲ್ಲಿ ‘ಆಜಾದ್’ ಮತ್ತು ‘ಕಾಶ್ಮೀರ’ದ ಮೇಲಿನ ಪ್ಯಾರಾಗಳನ್ನು ತಗೆದು ಹಾಕುವ ನಿರ್ಧಾರದ ಬಗ್ಗೆ ಪ್ರಸ್ತಾಪಿಸಿರಲಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಕಳೆದ ವಾರವೂ ಇದೇ ರೀತಿ ಗಾಂಧಿ ಹತ್ಯೆಯ ವಿಷಯದಲ್ಲಿ ಮಾಡಿತ್ತು. ”ಮೋಹನ್‌ದಾಸ್ ಕರಮಚಂದ್ ಗಾಂಧಿ ಅವರನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳು ನಡೆಸಿದ ಪ್ರಯತ್ನಗಳು ಮತ್ತು ಅವರ ಹತ್ಯೆಯ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾದ ನಿಷೇಧ”ದ ಪ್ಯಾರಾಗಳನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: NCERT ಪಠ್ಯ ಕಡಿತಗೊಳಿಸಿ, ಸುಳ್ಳು ಇತಿಹಾಸ ಹರಡಲು ದಾರಿ ಮಾಡಿಕೊಟ್ಟಿದೆ: ಇತಿಹಾಸಕಾರರ ಕಳವಳ

ಕಳೆದ ವರ್ಷ NCERT ಕೆಲವು ವಿಷಯಗಳನ್ನು ತಗೆದುಹಾಕುವ ಬಗ್ಗೆ ಹೇಳಿತ್ತು. 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ ಮತ್ತು 1975ರಲ್ಲಿ ಹೇರಲಾದ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ವಿಷಯಗಳನ್ನು ಕೈಬಿಡುವುದಾಗಿ ಹೇಳಿತ್ತು. ಈಗ ಯಾವುದೇ NCERT ಪಠ್ಯಪುಸ್ತಕದಲ್ಲೂ ಗುಜರಾತ್ ಗಲಭೆಗಳ ಬಗ್ಗೆ ಯಾವುದೇ ಉಲ್ಲೇಖಗಳು ಕಾಣಸಿಗುವುದಿಲ್ಲ.

”ಸಂವಿಧಾನ – ಏಕೆ ಮತ್ತು ಹೇಗೆ?” ಎಂಬ ಶೀರ್ಷಿಕೆಯ 11ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದ ಮೊದಲ ಅಧ್ಯಾಯದಲ್ಲಿ ಆಜಾದ್ ಅವರ ಪ್ಯಾರಾವನ್ನು ಕೈಬಿಡಲಾಗಿದೆ.

ಈ ಪಠ್ಯಪುಸ್ತಕದ ಹಿಂದಿನ ಆವೃತ್ತಿಗಳಲ್ಲಿ, ”ವಿಧಾನ ಸಭೆಯು ವಿವಿಧ ವಿಷಯಗಳ ಮೇಲೆ ಎಂಟು ಪ್ರಮುಖ ಸಮಿತಿಗಳನ್ನು ಹೊಂದಿತ್ತು. ಸಾಮಾನ್ಯವಾಗಿ ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್, ಮೌಲಾನಾ ಆಜಾದ್ ಅಥವಾ ಅಂಬೇಡ್ಕರ್ ಈ ಸಮಿತಿಗಳ ಅಧ್ಯಕ್ಷರಾಗಿದ್ದರು” ಎಂದು ಇದೆ.

ಆದರೆ ಪಠ್ಯಪುಸ್ತಕದ ಹೊಸ ಆವೃತ್ತಿಯು ಪ್ಯಾರಾಗ್ರಾಫ್‌ನ ಎರಡನೇ ಸಾಲನ್ನು ಹೀಗೆ ಪರಿಷ್ಕರಿಸಿದೆ- ”ಸಾಮಾನ್ಯವಾಗಿ, ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್ ಅಥವಾ ಬಿಆರ್ ಅಂಬೇಡ್ಕರ್ ಈ ಸಮಿತಿಗಳ ಅಧ್ಯಕ್ಷರಾಗಿದ್ದರು” ಎಂದು ಬರೆಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಅದೇ ಪಠ್ಯಪುಸ್ತಕದ ”ಸಂವಿಧಾನದ ತತ್ವಶಾಸ್ತ್ರ” ಎಂಬ ಇನ್ನೊಂದು ಅಧ್ಯಾಯದಲ್ಲಿ, ಜಮ್ಮು ಮತ್ತು ಕಾಶ್ಮೀರವು ಸ್ವಾಯತ್ತತೆಯ ಷರತ್ತಿನ ಮೇಲೆ ಭಾರತಕ್ಕೆ ಸೇರಿಕೊಂಡಿದೆ ಎಂಬ ಅಂಶದ ಉಲ್ಲೇಖವನ್ನು ತೆಗೆದುಹಾಕಲಾಗಿದೆ.

ಈ ಪಠ್ಯಪುಸ್ತಕದ ಹಿಂದಿನ ಆವೃತ್ತಿಗಳಲ್ಲಿ, ”ಉದಾಹರಣೆಗೆ, ಜಮ್ಮು ಮತ್ತು ಕಾಶ್ಮೀರವನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸುವುದು ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಅದರ ಸ್ವಾಯತ್ತತೆಯನ್ನು ಕಾಪಾಡುವ ಬದ್ಧತೆಯ ಮೇಲೆ ಆಧಾರಿತವಾಗಿದೆ” ಎಂದು ಇದೆ.

ಆದರೆ ಪಠ್ಯಪುಸ್ತಕದ ಹೊಸ ಆವೃತ್ತಿಯಲ್ಲಿ, ಅದನ್ನು ಕೈ ಬಿಟ್ಟು, ”ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರವು ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370 ರ ಅಡಿಯಲ್ಲಿ ರಾಜ್ಯತ್ವ ಮತ್ತು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು. ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು.”

”ಜಮ್ಮು ಮತ್ತು ಕಾಶ್ಮೀರದ “ಶಾಶ್ವತ ನಿವಾಸಿಗಳು” ಎಂದು ವ್ಯಾಖ್ಯಾನಿಸಲಾದ ಜನರಿಗೆ ವಿಶೇಷ ಹಕ್ಕುಗಳು ಮತ್ತು ಸವಲತ್ತುಗಳನ್ನು ಖಾತ್ರಿಪಡಿಸುವ ಆರ್ಟಿಕಲ್ 35A ಅನ್ನು ಕೇಂದ್ರವು ರದ್ದುಗೊಳಿಸಿದೆ. ಅಂದಿನಿಂದ, ಈ ಪ್ರದೇಶವು ಕೇಂದ್ರ ಆಡಳಿತದಲ್ಲಿದೆ” ಎಂದು ಸೇರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...