Homeಮುಖಪುಟಎನ್‌ಸಿಪಿ ನಾಯಕ ಶರದ್ ಪವಾರ್‌ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿಲ್ಲ: ವರದಿ

ಎನ್‌ಸಿಪಿ ನಾಯಕ ಶರದ್ ಪವಾರ್‌ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿಲ್ಲ: ವರದಿ

- Advertisement -
- Advertisement -

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಎನ್‌ಸಿಪಿ ನಾಯಕ ಶರದ್ ಪವಾರ್ ಸ್ಪರ್ಧಿಸುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ಹಲವು ವಿರೋಧ ಪಕ್ಷಗಳ ಬೆಂಬಲದ ನಡುವೆಯೂ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ತಿರಸ್ಕರಿಸುವ ಸಾಧ್ಯತೆಯಿದೆ.

ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ತಮ್ಮ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಭೆಯಲ್ಲಿ 81 ವರ್ಷದ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರು “ನಾನು ರೇಸ್‌ನಲ್ಲಿ ಇಲ್ಲ, ನಾನು ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗುವುದಿಲ್ಲ” ಎಂದಿದ್ದಾರೆ ಎಂದು ವರದಿಯಾಗಿದೆ. ಆದರೆ, ಅಧಿಕೃತವಾಗಿ ಕಾಂಗ್ರೆಸ್‌ಗೆ ತಮ್ಮ ನಿಲುವನ್ನು ತಿಳಿಸಿಲ್ಲ.

“ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆಂದು ನನಗೆ ಅನಿಸುತ್ತಿಲ್ಲ. ಸಾಹೇಬ್ (ಶರದ್ ಪವಾರ್) ಜನರನ್ನು ಭೇಟಿಯಾಗಲು ಇಷ್ಟಪಡುವ ವ್ಯಕ್ತಿ. ಅವರು ರಾಷ್ಟ್ರಪತಿ ಭವನಕ್ಕೆ ತಮ್ಮನ್ನು ತಾವು ಸೀಮಿತಗೊಳಿಸಿಕೊಳ್ಳುವುದಿಲ್ಲ” ಎಂದು ಮಹಾರಾಷ್ಟ್ರ ಸರ್ಕಾರದ ಎನ್‌ಸಿಪಿ ನಾಯಕರೊಬ್ಬರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ

ರಾಷ್ಟ್ರಪತಿ ಹುದ್ದೆಗೆ ಶರದ್ ಪವಾರ್ ಅವರಿಗೆ ಕಾಂಗ್ರೆಸ್ ತನ್ನ ಬೆಂಬಲವನ್ನು ನೀಡಿದೆ ಎಂದು ವರದಿಯಾಗಿದೆ. ಕಳೆದ ಗುರುವಾರ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ಸಂದೇಶದೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಅವರನ್ನು ಮುಂಬೈನಲ್ಲಿ ಭೇಟಿಯಾಗಿದ್ದರು. ಈ ಸಲಹೆಗೆ ಎನ್‌ಸಿಪಿ ನಾಯಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರಪತಿ ಚುನಾವಣೆ ಜುಲೈ 18 ರಂದು ನಡೆಯಲಿದೆ. ಇದಾಗಿ ಮೂರು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಶರದ್‌ ಪವಾರ್ ಅವರು ಅನೇಕ ಮೈತ್ರಿಗಳು ಮತ್ತು ಸಮ್ಮಿಶ್ರ ಸರ್ಕಾರಗಳನ್ನು ಮಾಡಿದ ಮತ್ತು ಮುರಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಬಿಜೆಪಿಯನ್ನು ವಿಫಲಗೊಳಿಸಲು ಸೈದ್ಧಾಂತಿಕ ವಿರೋಧ ಪಕ್ಷಗಳಾದ ಶಿವಸೇನೆ ಮತ್ತು ಕಾಂಗ್ರೆಸ್‌ಗಳನ್ನು ಒಟ್ಟುಗೂಡಿಸಿ ಮಹಾರಾಷ್ಟ್ರದಲ್ಲಿ ಮೈತ್ರಿ ಆಡಳಿತ ಒಕ್ಕೂಟವನ್ನು ರಚಿಸಿದ್ದಾರೆ.


ಇದನ್ನೂ ಓದಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...