Homeಮುಖಪುಟಸಿಎಂ ಹುದ್ದೆ ಹಂಚಿಕೆ ಮೇಲೆ ಎನ್‌ಸಿಪಿ, ಸ್ಪೀಕರ್‌ ಸ್ಥಾನದ ಮೇಲೆ ಕಾಂಗ್ರೆಸ್‌ ಕಣ್ಣು: ಶಿವಸೇನೆಯ ಮುಂದಿನ...

ಸಿಎಂ ಹುದ್ದೆ ಹಂಚಿಕೆ ಮೇಲೆ ಎನ್‌ಸಿಪಿ, ಸ್ಪೀಕರ್‌ ಸ್ಥಾನದ ಮೇಲೆ ಕಾಂಗ್ರೆಸ್‌ ಕಣ್ಣು: ಶಿವಸೇನೆಯ ಮುಂದಿನ ನಡೆ ಏನು..?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಈಗಾಗಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಶಿವಸೇನೆ ಜತೆಗೆ ಮೈತ್ರಿಗೂ ಮುನ್ನ ಕೆಲವು ಷರತ್ತು ಹಾಗೂ ಜನಸ್ನೇಹಿ ನಿಯಮಗಳನ್ನು ರೂಪಿಸಲಾಗಿದ್ದು, ಆದಷ್ಟು ಬೇಗ ಅಂತಿಮಗೊಳಿಸಲಾಗುವುದು ಎಂದು ಎನ್‌ಸಿಪಿ ಮತ್ತು ಕಾಂಗ್ರೆಸ್‌ ತಿಳಿಸಿವೆ.

ಶಿವಸೇನೆ ಜತೆ ಮೈತ್ರಿ ಮಾಡಿಕೊಳ್ಳುವ ಮೊದಲು ಕೆಲ ಸೂತ್ರಗಳೊಂದಿಗೆ ಷರತ್ತು ವಿಧಿಸಲಾಗುವುದು. ಐದು ವರ್ಷದ ಆಡಳಿತಾವಧಿಯಲ್ಲಿ ಎರಡೂವರೆ ವರ್ಷದವರೆಗೆ ಎನ್‌ಸಿಪಿ ಅಭ್ಯರ್ಥಿಗೆ ಸಿಎಂ ಹುದ್ದೆ ಬಿಟ್ಟು ಕೊಡುವಂತೆ ಮತ್ತು ಕಾಂಗ್ರೆಸ್‌ಗೆ ಸ್ಪೀಕರ್‌ ಸ್ಥಾನ ನಿಡುವಂತೆ ಷರತ್ತು ಮುಂದಿರಿಸುವ ಸಾಧ್ಯತೆ ದಟ್ಟವಾಗಿದೆ. ಮೂರು ಪಕ್ಷಗಳ ಮಧ್ಯೆ ಅಧಿಕಾರ ಹಂಚಿಕೆಯ ಸೂತ್ರ ರೂಪಿಸಲಾಗಿದೆ.

ಶಿವಸೇನೆಗೆ ಬೆಂಬಲ ನೀಡುವಂತೆ ಉದ್ಧವ್‌ ಠಾಕ್ರೆ ಅವರ ಮನವಿಯನ್ನು ಕಾಂಗ್ರೆಸ್‌ ಒಪ್ಪಿಕೊಳ್ಳಲಿಲ್ಲ. ನಂತರ ಮುಂಬೈನಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್‌ ನಾಯಕರು ಸಭೆ ನಡೆಸಿ, ಅಧಿಕಾರ ಮತ್ತು ಸ್ಥಾನ ಹಂಚಿಕೆ ಬಗ್ಗೆ ನಿಯಮ ರೂಪಿಸಿದರು. ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ್‌, ಮಲ್ಲಿಕಾರ್ಜುನ್‌ ಖರ್ಗೆ, ಅಹಮದ್‌ ಪಟೇಲ್‌, ಮಹಾರಾಷ್ಟ್ರ ಕಾಂಗ್ರೆಸ್‌ ನಾಯಕರು ಇಂದು ಸಂಜೆ ಮುಂಬೈನಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ಅನರ್ಹ ಶಾಸಕರ ಸುಪ್ರೀಂ ತೀರ್ಪು ಕುರಿತು ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪನವರು ಹೇಳಿದ್ದೇನು?

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ವೈ.ಬಿ.ಚವ್ಹಾಣ್‌ ಸೇರಿದಂತೆ ಅನೇಕರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಭಾಗವಹಿಸಿದರು. ಸೇನಾ ಜತೆ ಮೈತ್ರಿಗೂ ಮುನ್ನ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಮತ್ತು ಇತರ ವಿಷಯಗಳ ಕುರಿತು ಕಾಂಗ್ರೆಸ್ ಮತ್ತು ಎನ್‌ಸಿಪಿ ಚರ್ಚೆ ನಡೆಸಲಿವೆ. ರಚನೆಯಾಗಲಿರುವ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮಗಳ ಕುರಿತು ಒಪ್ಪಂದಕ್ಕೆ ಬಂದ ನಂತರ ಸರ್ಕಾರ ರಚಿಸಲು ಸೇನಾಗೆ ಬೆಂಬಲಿಸುವ ನಿರ್ಧಾರ ತೆಗೆದುಕೊಳ್ಳುವುದಾಗಿ ಪಟೇಲ್‌ ಹೇಳಿದ್ದಾರೆ.

ಈಗ ಎನ್‌ಸಿಪಿ ಮತ್ತು ಕಾಂಗ್ರೆಸ್‌ ವಿಧಿಸುವ ನಿಯಮ ಮತ್ತು ಷರತ್ತುಗಳನ್ನು ಶಿವಸೇನೆ ಒಪ್ಪಿಕೊಳ್ಳುತ್ತದಾ..? ಭಿನ್ನ ಸೈದ್ಧಾಂತಿಕ ನಿಲುವು ಹೊಂದಿರುವ ಪಕ್ಷಗಳು ಮೈತ್ರಿ ಮೂಲಕ ಒಂದಾಗುತ್ತವಾ..? ಎಂಬುದೇ ಸದ್ಯದ ಕುತೂಹಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....