”ಬಿಜೆಪಿ ಯಾರನ್ನೆಲ್ಲಾ ಜೈಲಿಗೆ ಕಳಿಸುತ್ತಿತ್ತೋ ಅವರೆಲ್ಲರೂ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ” ಎಂದು ಮಹಾರಾಷ್ಟ್ರ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆ ಬಗ್ಗೆ ಉದ್ಧವ್ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಕಿಡಿಕಾರಿದ್ದಾರೆ.
ಎನ್ಸಿಪಿಯಿಂದ ಬಂಡಾಯವೆದ್ದು ಅಜಿತ್ ಪವಾರ್ ನೇತೃತ್ವದಲ್ಲಿ ಹಲವರು ಏಕನಾಥ್ ಶಿಂದೆ ಸರ್ಕಾರವನ್ನು ಸೇರಿದ್ದಾರೆ. ಹಾಗೆಯೇ ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿವಾಗಿ ಪ್ರಮಾಣವಚನವನ್ನೂ ಸ್ವೀಕರಿಸಿದ್ದಾರೆ. ಇನ್ನುಳಿದವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಜಯ್ ರಾವತ್, ”ಜನರು ಈ ಆಟವನ್ನು ಹೆಚ್ಚು ದಿನ ಸಹಿಸುವುದಿಲ್ಲ, ಶರದ್ ಪವಾರ್ ಅವರೊಂದಿಗೆ ಮಾತನಾಡಿದ್ದೇನೆ, ಅವರು ಬಲಿಷ್ಠರಿದ್ದಾರೆ. ಜನರ ಬೆಂಬಲವೂ ಅವರ ಮೇಲಿದೆ. ಉದ್ಧವ್ ಠಾಕ್ರೆ ಅವರೊಂದಿಗೆ ಮತ್ತೆ ಎಲ್ಲವನ್ನೂ ಪುನರ್ ನಿರ್ಮಿಸುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ.
महाराष्ट्राच्या राजकारणाचे साफ मातेरे करण्याचां विडा काही लोकांनी उचलला आहे.त्यांना त्यांच्या मार्गाने जाऊ द्या.
माझे आताच श्री.शरद पवार यांच्याशी बोलणे झाले.ते म्हणाले" मी खंबीर आहे.लोकांचा पाठिंबा आपल्याला आहे. उद्धव ठाकरें सह पुन्हा सर्व नव्याने उभे करू.". होय,जनता हे खेळ फार… pic.twitter.com/fsBbIZGoFE— Sanjay Raut (@rautsanjay61) July 2, 2023
”ಬಿಜೆಪಿ ಯಾರನ್ನೆಲ್ಲಾ ಜೈಲಿಗೆ ಕಳಿಸುತ್ತಿತ್ತೋ ಅವರೆಲ್ಲರೂ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ” ಎಂದು ಹೇಳಿದ್ದಾರೆ.
भाजपा ज्यांना तुरुंगात पाठवायला निघाले होते.
त्यांनाच मंत्री पदाची शपथ देत आहे.. https://t.co/L42b0t0Nyh— Sanjay Raut (@rautsanjay61) July 2, 2023
”ಬ್ರೇಕಿಂಗ್ : ಮಹಾರಾಷ್ಟ್ರ ಸಂಪುಟದಲ್ಲಿ 9 ಎನ್ ಸಿಪಿ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಾಮಾನ್ಯ ಅಂಶ? ಬಹುತೇಕ ಎಲ್ಲರ ವಿರುದ್ಧವೂ ಗಂಭೀರವಾದ ಜಾರಿ ವಿಚಾರಣೆಗಳು ಬಾಕಿ ಇವೆ!” ಎಂದು ರಾವತ್ ಟ್ವೀಟ್ ಮಾಡಿದ್ದಾರೆ.
Breaking : 9 NCP ministers being sworn in the Maharashtra cabinet. Common factor? Almost all of them have serious enforcement inquiries pending against them! 🙏
— Rajdeep Sardesai (@sardesairajdeep) July 2, 2023
ಎನ್ಸಿಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ಶಿವಸೇನಾ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ಪ್ರತಿಕ್ರಿಯಿಸಿದ್ದು, ”ಮಹಾರಾಷ್ಟ್ರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಶಾಸಕರಲ್ಲಿ ಭ್ರಷ್ಟರೂ ಇದ್ದಾರೆ” ಎಂದು ತಿವಿದಿದ್ದಾರೆ.
ಅಜಿತ್ ಪವಾರ್ ಅವರು ಏಕನಾಥ್ ಶಿಂದೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿಯಾಗಿ ಸೇರ್ಪಡೆಗೊಂಡರು. ಅವರು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಅಧಿಕಾರ ಹಂಚಿಕೊಂಡಿದ್ದಾರೆ.