Homeಮುಖಪುಟಪವಾರ್ ಸೇರಿ 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಿದ ಎನ್‌ಸಿಪಿ

ಪವಾರ್ ಸೇರಿ 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಿದ ಎನ್‌ಸಿಪಿ

- Advertisement -
- Advertisement -

ಭಾನುವಾರದಂದು ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆದಿದ್ದು, ಎನ್‌ಸಿಪಿ ನಾಯಕ ಅಜಿತ್ ಪವಾರ್ ಮತ್ತು ಇತರ ಎಂಟು ಶಾಸಕರು ಬಿಜೆಪಿ-ಶಿವಸೇನೆ ಸರ್ಕಾಕ್ಕೆ ಬೆಂಬಲ ಘೋಷಿಸಿ, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೀಗ ಈ ಎಲ್ಲ ನಾಯಕರ ಅನರ್ಹತೆ ಅರ್ಜಿ ಸಲ್ಲಿಸಲಾಗಿದೆ ಎಂದು ಎನ್‌ಸಿಪಿ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಜಯಂತ್ ಪಾಟೀಲ್ ರವಿವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಭಾನುವಾರ ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಟೀಲ್, ”ಅನರ್ಹತೆ ಅರ್ಜಿಯನ್ನು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

”ಶಾಸಕರ ಸಂಖ್ಯೆ ಮುಖ್ಯವಲ್ಲ, ಪಕ್ಷದ ಅಧಿಕೃತ ವಿಪ್ ಪರಿಗಣಿಸಲಾಗುವುದು ಮತ್ತು ಇದು ಎಲ್ಲಾ ಶಾಸಕರಿಗೂ ಅನ್ವಯಿಸುತ್ತದೆ. ಪಕ್ಷವು ನೇಮಿಸಿದ ವಿಪ್ ಅನ್ನು ಅಧಿಕೃತವೆಂದು ಪರಿಗಣಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪು ಸ್ಪಷ್ಟವಾಗಿ ಹೇಳುತ್ತದೆ” ಎಂದು ಅವರು ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಏಕನಾಥ್ ಶಿಂಧೆ ಅವರು ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚಿಸಲು ಶಾಸಕರ ಗುಂಪಿನೊಂದಿಗೆ ಪಕ್ಷದಿಂದ ಹೊರನಡೆದ ನಂತರ ಶಿವಸೇನೆಯಲ್ಲಿನ ಒಡಕಿನ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ಪಾಟೀಲ್ ಉಲ್ಲೇಖಿಸಿದ್ದಾರೆ.

ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇದೆ ಎಂದು ತಿಳಿಸಲು ಪಕ್ಷವು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ ಎಂದು ಪಾಟೀಲ್ ಹೇಳಿದರು. ಹೆಚ್ಚಿನ ಶಾಸಕರು ಎನ್‌ಸಿಪಿಗೆ ಮರಳುತ್ತಾರೆ ಎಂದು ನಾವು ನಂಬುತ್ತೇವೆ ಮತ್ತು ನಾವು ಅವರನ್ನು ಮತ್ತೆ ಒಪ್ಪಿಕೊಳ್ಳುತ್ತೇವೆ” ಎಂದು ಅವರು ಹೇಳಿದರು, ಎಎನ್‌ಐ ವರದಿ ಮಾಡಿದೆ.

ಈ ಮಧ್ಯೆ ಎನ್‌ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೊ ಅವರು, ”ಅಜಿತ್ ಪವಾರ್ ಅವರು ಪ್ರತಿಪಾದಿಸುತ್ತಿರುವ 36 ಶಾಸಕರ ಬೆಂಬಲವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳುವುದನ್ನು ತಪ್ಪಿಸಲು ಅಜಿತ್ ಪವಾರ್ ಅವರಿಗೆ 36 ಶಾಸಕರ ಬೆಂಬಲ ಬೇಕಾಗಿದೆ. ಪಾಟೀಲ್ ಮತ್ತು ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಎಲ್ಲಾ 53 ಶಾಸಕರೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಕ್ರಾಸ್ಟೊ ತಿಳಿಸಿದ್ದಾರೆ.

ಅಜಿತ್ ಪವಾರ್ 2019ರಲ್ಲೂ ಬಿಜೆಪಿಯೊಂದಿಗೆ ಕೈಜೋಡಿಸಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದಾಗ್ಯೂ, ಮೈತ್ರಿ ಮೂರು ದಿನಗಳಿಗಿಂತ ಹೆಚ್ಚು ಕಾಲ ಉಳಿಯಲಿಲ್ಲ ಮತ್ತು ಮಹಾ ವಿಕಾಸ್ ಅಘಾಡಿ ಸಮ್ಮಿಶ್ರ ಸರ್ಕಾರ ರಚನೆಯಾಗುತ್ತಿದ್ದಂತೆ ಎನ್‌ಸಿಪಿಗೆ ಮರಳಿದರು. ಮಹಾ ವಿಕಾಸ್ ಅಘಾಡಿ ಸಮ್ಮಿಶ್ರ ಸರ್ಕಾರದಲ್ಲಿ ಅವರು ಮತ್ತೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಎಂಟು ಎನ್‌ಸಿಪಿ ಶಾಸಕರಾದ ಧರ್ಮೋಬಾಬಾ ಅತ್ರಮ್, ಛಗನ್ ಭುಜಬಲ್, ದಿಲೀಪ್ ವಾಲ್ಸೆ ಪಾಟೀಲ್, ಹಸನ್ ಮುಶ್ರೀಫ್, ಧನಂಜಯ್ ಮುಂಡೆ, ಅದಿತಿ ತತ್ಕರೆ, ಅನಿಲ್ ಪಾಟೀಲ್, ಸಂಜಯ್ ಭನ್ಸೋಡೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ತಮ್ಮ ಪ್ರಮಾಣ ವಚನದ ನಂತರ ಮಾತನಾಡಿದ ಅಜಿತ್ ಪವಾರ್ ಅವರು, ನಾವು ಪಕ್ಷವನ್ನು ಒಡೆದಿಲ್ಲ, ನಮಗೆ ಎಲ್ಲಾ ಶಾಸಕರ ಬೆಂಬಲವಿದೆ. ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಎನ್‌ಸಿಪಿಯೇ ಬೆಂಬಲ ನೀಡಿದೆ ಎಂದು ಹೇಳಿದ್ದಾರೆ.

ಬಿಜೆಪಿ ಶಾಸಕರ ಖರೀದಿ ದಂಧೆ: ವಿರೋಧ ಪಕ್ಷಗಳ ಟೀಕೆ

ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಅವರು ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಬೆಂಬಲವನ್ನು ನೀಡಿದ ನಂತರ ವಿರೋಧ ಪಕ್ಷಗಳು ಭಾನುವಾರ ಬಿಜೆಪಿಯನ್ನು ಟೀಕಿಸಿದವು. ಕೇಸರಿ ಪಕ್ಷವು “ಎಂಎಲ್‌ಎ ಖರೀದಿಯ ಭರಾಟೆ”ಯಲ್ಲಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

”ಮಹಾರಾಷ್ಟ್ರದ ಜನಾದೇಶವನ್ನು ಬಿಜೆಪಿ ಪದೇ ಪದೇ ದುರ್ಬಲಗೊಳಿಸುತ್ತಿರುವ ವಿಧಾನವನ್ನು ಖಂಡಿಸಲು ಯಾವುದೇ ಪದಗಳು ಸಾಕಾಗುವುದಿಲ್ಲ. ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳುವುದು ಮಾತ್ರವಲ್ಲದೆ ಅವರು ಅಂತಹ ಅವಮಾನಕರ ಕೃತ್ಯಗಳಿಗೆ ರಕ್ಷಣೆ ನೀಡಲು ರಾಷ್ಟ್ರಗೀತೆಯನ್ನು ಬಳಸುತ್ತಿದ್ದಾರೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

”ಬಿಜೆಪಿಯು ತನ್ನ ‘ವಾಷಿಂಗ್ ಮೆಷಿನ್ ಕಾರ್ಯಾಚರಣೆ’ಯನ್ನು ಪುನರಾರಂಭಿಸಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

”ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಯಾದವರು ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಅಧಿಕಾರಿಗಳಿಂದ ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈಗ ಅವರೆಲ್ಲರಿಗೂ ಕ್ಲೀನ್ ಚಿಟ್ ಸಿಕ್ಕಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಜಿತ್ ಪವಾರ್, ಭುಜಬಲ್ ಮತ್ತು ಮುಶ್ರಿಫ್ ಅವರು ಜಾರಿ ನಿರ್ದೇಶನಾಲಯದ ತನಿಖೆಯನ್ನು ಎದುರಿಸುತ್ತಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಇಬ್ಬಾಗವಾದ ಎನ್‌ಸಿಪಿ; ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿ, ಡಿಸಿಎಂ ಆದ ಅಜಿತ್ ಪವಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...